Connect with us

ಲೈಫ್ ಸ್ಟೈಲ್

ಕೊರೋನ ರೋಗವನ್ನೆದುರಿಸಲು ಆಹಾರ ನಿಯಂತ್ರಣ

Published

on

  • ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಎಂಡಿ, ತಜ್ಞ ವೈದ್ಯರು, ಡಾ. ಬಾಲಸರಸ್ವತಿ, ಡಿಎನ್‌ಬಿ, ಚರ್ಮ ತಜ್ಞರು

ಕೊರೋನ ರೋಗವು ಆಧುನಿಕ ಆಹಾರ ಮತ್ತು ಆಧುನಿಕ ಜೀವನಶೈಲಿಗಳೊಂದಿಗೆ ಮತ್ತು ಅವುಗಳಿಂದುಂಟಾಗುವ ಆಧುನಿಕ ರೋಗಗಳೊಂದಿಗೆ ಬಹು ನಿಕಟವಾಗಿ ಬೆಸೆದುಕೊಂಡಿದೆ – ಈ ರೋಗಗಳು ಕೊರೋನ ರೋಗವನ್ನು ಬಿಗಡಾಯಿಸುತ್ತವೆ, ಕೊರೋನ ರೋಗವು ಈ ಆಧುನಿಕ ರೋಗಗಳನ್ನು ಬಿಗಡಾಯಿಸುತ್ತದೆ. ನಮ್ಮ ಆಹಾರ ಮತ್ತು ಜೀವನಶೈಲಿಗಳನ್ನು ಬದಲಿಸಿಕೊಳ್ಳುವ ಮೂಲಕ ನಮ್ಮ ದೇಹದ ಉಪಾಪಚಯವನ್ನು ಸುಸ್ಥಿತಿಯಲ್ಲಿಟ್ಟರೆ ಕೊರೋನವನ್ನು ಸುಲಭವಾಗಿ ಸೋಲಿಸಬಹುದು.

ಆರೋಗ್ಯಕರ ಆಹಾರ ತಿನ್ನಿ – ನಿಯತ ವ್ಯಾಯಾಮ ಮಾಡಿ – ಬೇಕಷ್ಟು ನಿದ್ದೆ ಮಾಡಿ!

  • ಕೊರೋನ ರೋಗದಿಂದ ಬೇಗನೆ ಚೇತರಿಸಿಕೊಳ್ಳಲು ಒಳ್ಳೆಯ ಆಹಾರ

ದಿನಕ್ಕೆ 2-3 ಮೊಟ್ಟೆ (ಬೇಯಿಸಿ/ಆಮ್ಲೆಟ್/ಪಲ್ಯ/ಬುರ್ಜಿ), ಬಿಸಿಯಾದ, ಸೌಮ್ಯ ಮಸಾಲೆಗಳುಳ್ಳ ಕೋಳಿ ಸೂಪ್ ಅಥವಾ ಬೇಳೆ ಸೂಪ್, ಹೆಚ್ಚಿನ ಪ್ರಮಾಣದಲ್ಲಿ ಗೋಡಂಬಿ ಮತ್ತು ವಾಲ್ನಟ್, ಜೊತೆಗೆ ಮೀನು, ಮಾಂಸ ಮತ್ತು ಯಥೇಷ್ಟವಾಗಿ ತರಕಾರಿಗಳು.ಇವಿಷ್ಟನ್ಣೇ ಸೇವಿಸುವುದರಿಂದ ಕೊರೋನ ರೋಗದಿಂದ ಬೇಗನೇ ಚೇತರಿಸಿಕೊಳ್ಳಬಹುದು, ತೀವ್ರ ಸಮಸ್ಯೆಗಳನ್ನು ತಡೆಯಲೂಬಹುದು.

  • ಕಡ್ಡಾಯವಾಗಿ ತ್ಯಜಿಸಿ

ಹಣ್ಣುಗಳು (ತಾಜಾ ಅಥವಾ ಒಣಗಿದ್ದು), ಸಕ್ಕರೆ, ಎಲ್ಲಾ ಸಿಹಿ ತಿನಿಸುಗಳು, ಜೇನು ಮತ್ತು ಬೆಲ್ಲ. ಹಾಲಿನ ಉತ್ಪನ್ನಗಳನ್ನು ಮಿತಿಗೊಳಿಸಿ. ಸಿದ್ಧ ತಿನಿಸುಗಳು, ಬೇಕರಿ ಉತ್ಪನ್ನಗಳು, ಸಂಸ್ಕರಿತ ತಿನಿಸುಗಳನ್ನು ಸಂಪೂರ್ಣವಾಗಿ ತ್ಯಜಿಸಿ.

ಸೈಟೋಕೈನ್ ಬಿರುದಾಳಿಯನ್ನು ತಡೆಯುವುದಕ್ಕೆ ಸಕ್ಕರೆ ಮತ್ತು ಸಂಸ್ಕರಿತ ಆಹಾರವನ್ನು ಮಿತಿಗೊಳಿಸುವುದೇ ಅತ್ಯುತ್ತಮ ಉಪಾಯವಾಗಿದೆ. ಹಣ್ಣುಗಳಲ್ಲಿರುವ ಫ್ರಕ್ಟೋಸ್ ಸಕ್ಕರೆಯು ಉತ್ಕರ್ಷಣದ ಒತ್ತಡಗಳನ್ನು ಹೆಚ್ಚಿಸಿ ಉರಿಯೂತವನ್ನು ಹೆಚ್ಚಿಸುವುದರಿಂದ ಹಣ್ಣುಗಳಿಂದ ಅದೇನೇ ಲಾಭಗಳಿದ್ದರೂ ನಷ್ಟವೇ ಹೆಚ್ಚಾಗುತ್ತದೆ!

  • ಆಹಾರಕ್ರಮದ ಉದಾಹರಣೆ

ಬೆಳಗ್ಗಿನ ಉಪಾಹಾರ :8 ಗಂಟೆಗೆ: 2-3 ಬೇಯಿಸಿದ ಮೊಟ್ಟೆ/ 2-3 ಇಡ್ಲಿ ಅಥವಾ 1-2 ರಾಗಿ ದೋಸೆ, ಜೊತೆಗೆ ತೆಂಗಿನಕಾಯಿ ಚಟ್ನಿ ಅಥವಾ ಬೇಳೆ ಸಾರು, ಜೊತೆಗೆ ಕಾಫಿ/ಚಹಾ (ಹಾಲುು ಬೇಡ ಯಾ ಅತ್ಯಲ್ಪ, ಸಕ್ಕರೆ/ಬೆಲ್ಲ ಬೇಡ)

ಪೂ 11ಗಂಟೆ: ಬಿಸಿನೀರಲ್ಲಿ ಉಪ್ಪು ಬೆರೆಸಿ ನಿಂಬೆ ಹಣ್ಣಿನ ರಸ, ಜೊತೆಗೆ ಗೋಡಂಬಿ, ಬಾದಾಮಿ, ವಾಲ್ನಟ್ ಅಥವಾ ಪಿಸ್ತಾ (ನೆಲಕಡಲೆ ಬೇಡ)

ಅಪರಾಹ್ನ ಊಟ : 2 ಗಂಟೆ: ಕುಚ್ಚಲಕ್ಕಿ ಅನ್ನ (ಒಂದು ಕಪ್), ಯಥೇಷ್ಟ ತರಕಾರಿಗಳು, ಬೇಳೆ ಅಥವಾ ತೆಂಗಿನಕಾಯಿ ಬೆರೆಸಿದ ಪದಾರ್ಥಗಳು/ ಕೋಳಿ ಅಥವಾ ಮೀನಿನ ಪದಾರ್ಥ; ಹಬೆಯಲ್ಲಿ ಅಥವಾ ನವಿರಾಗಿ ಕಾಯಿಸಿದ ತರಕಾರಿ ಖಾದ್ಯ (ಬಟಾಟೆ, ಬೀಟ್‌ರೂಟ್, ಕ್ಯಾರೆಟ್, ಸುವರ್ಣಗೆಡ್ಡೆ, ಸಿಹಿಕುಂಬಳಕಾಯಿ ಬೇಡ)

ಸಂಜೆ 5 ಗಂಟೆ: ಬೀಜಗಳು, ಜೊತೆಗೆ ಕಾಫಿ/ಚಹಾ (ಕಪ್ಪು/ಹಸಿರು), ಅದರಲ್ಲಿ ನಿಂಬೆ/ಶುಂಠಿ ಬೆರೆಸಬಹುದು, ಸಕ್ಕರೆ ಅಥವಾ ಬೆಲ್ಲ ಕೂಡದು

ರಾತ್ರಿಯ ಊಟ : 8 ಗಂಟೆ: ಬಿಸಿಯಾದ ಕೋಳಿ ಅಥವಾ ತರಕಾರಿ ಸೂಪ್ (ಜೋಳದ ಪುಡಿ ಬೆರೆಸಬಾರದು); ಸ್ವಲ್ಪ ಅನ್ನ, ಸಾರು ಅಥವಾ ಚಪಾತಿ ಪಲ್ಯ/ ಕೋಳಿ, ಮೀನು, ಜೊತೆಗೆ ತರಕಾರಿಗಳು

ತಂಪಾಗಿಸದ ನೀರನ್ನು ಒಂದೆರಡು ಗಂಟೆಗೊಮ್ಮೆಯಂತೆ ದಿನಕ್ಕೆ ಒಟ್ಟು ಮೂರು ಲೀಟರ್ ಆದರೂ ಕುಡಿಯಿರಿ.
ಮಾಂಸವನ್ನು ಎರಡು ದಿನಕ್ಕೊಮ್ಮೆಯಾದರೂ ತಿನ್ನಬಹುದು!
ಅಡುಗೆಗೆ ತೆಂಗಿನೆಣ್ಣೆ ಅಥವಾ ತುಪ್ಪವನ್ನು ಬಳಸಿ.
ಈ ಆಹಾರಕ್ರಮವನ್ನು 4-6 ವಾರಗಳವರೆಗಾದರೂ, ಕೊರೋನ ರೋಗವಿರುವಾಗ ಮತ್ತು ಚೇತರಿಸಿಕೊಂಡ ಬಳಿಕವೂ, ಸೇವಿಸಿ. ಸಕ್ಕರೆ ಕಾಯಿಲೆ, ಬೊಜ್ಜು ಮತ್ತಿತರ ಸಮಸ್ಯೆಗಳುಳ್ಳವರು ಇನ್ನಷ್ಟು ಕಠಿಣವಾಗಿ ಆಹಾರಕ್ರಮವನ್ನು ಪಾಲಿಸಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.

54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

Published

on

ಸುದ್ದಿದಿನ,ಬೆಂಗಳೂರು:ಆರ್‌ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್‌ ರೆಸ್ಟೋರೆಂಟ್‌ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.

ಬೆಂಗಳೂರಿನ #NativeCooks ಫುಡ್‌ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್‌ಸಿಬಿ ಅಭಿಮಾನಿಗಳ ಮನ ಗೆದ್ದಿದೆ.

ಹೌದು, ಹೆಬ್ಬಾಳ, ಆರ್‌ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್‌ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್‌ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್‌ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್‌ಬಾಕ್ಸ್‌ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.

ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್‌ ಕುಕ್ಸ್‌ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್‌ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್.‌ ವೆಜ್‌ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್‌ವೆಜ್‌ ಊಟವನ್ನು 135 ರೂಪಾಯಿಗೆ ಹಾಗೂ ಎಕ್‌ ಮೀಲ್‌ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.

ಸದ್ಯಕ್ಕೆ ಹೆಬ್ಬಾಳ, ಆರ್‌ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending