ಲೈಫ್ ಸ್ಟೈಲ್
ಪಾದದ ಆರೈಕೆ ಹೇಗೆ !
ಚೆಂದದ ಮುಖ, ನುಣುಪು ತ್ವಚೆ, ನೀಳವಾದ ಬೆರಳು ಗಳು, ನೀಟಾಗಿ ಕತ್ತರಿಸಿ ಶೇಪ್ ಕೊಟ್ಟ ಉಗುರುಗಳು, ಅದಕ್ಕೆ ತಕ್ಕಂತಹ ಉಗುರು ಬಣ್ಣ. ಹೆಣ್ಣು ಸುಂದರಿಯಾಗಲು ಇಷ್ಟು ಸಾಕೆ?
ಸಾಲದು ಇದರ ಜೊತೆಗೆ ಅಂದದ ಪಾದ ಪಾದದ ಆರೈಕೆ. ಕಾಲಿನ ಉಗುರುಗಳ ಕಾಳಜಿಯೂ ಮುಖ್ಯ. ಇದಕ್ಕಾಗಿಯೇ ‘ಪೆಡಿಕ್ಯೂರ್’ (pedicure in kannada) ಕಾನ್ಸೆಪ್ಟ್ ಸೌಂದರ್ಯ ಜಗತ್ತಿನಲ್ಲಿ ಖಾಯಂ ಸ್ಥಾನ ಗಿಟ್ಟಿಸಿಕೊಂಡಿದೆ. ಕೈಗಳ, ಉಗುರುಗಳ ಆರೈಕೆಯೂ ಮುಖ್ಯ ಎನ್ನುವುದು ಸೌಂದರ್ಯ ಪ್ರಿಯರ ಅಭಿಮತ.
ಪಾದದ ಆರೈಕೆ ಅಥವಾ ಪೆಡಿಕ್ಯೂರ್ ಎಂಬುದು ಎರಡು ಲ್ಯಾಟಿನ್ ಪದಗಳಿಂದ ಬಂದ ಪದ. ‘ಪೆಡಿ’ (pedi) ಎಂದರೆ ಪಾದ ಮತ್ತು ‘ಕ್ಯೂರ್’ (cure) ಎಂದರೆ ಕೇಋ ಅಥವಾ ಕಾಳಜಿ. ಪೆಡಿಕ್ಯೂರ್ನಿಂದ ಕಾಳು, ಪಾದ ಮತ್ತು ಉಗುರುಗಳ ಅಮದದದ ಜತೆಗೆ ಇವುಗಳ ಆರೋಗ್ಯವನ್ನು ಕಾಪಾಡಿಕೊಳ್ಳ ಬಹುದು ಎನ್ನುತ್ತಾರೆ ಸೌಂದರ್ಯ ತಜ್ಞೆಯರು. ಪಾದದ ಆರೈಕೆ ಮಾಡುವಾಗ ಪಾರ್ಲರ್ಗಳಲ್ಲಿ ಸಾಮಾನ್ಯವಾಗಿ ಉಗುರು, ಪಾದದ ತಳಭಾಗದಲ್ಲಿರಿವ ನಿರ್ಜೀವ ಜೀವಕೋಶಗಳನ್ನು ತೆಗೆದು ಹಾಕಲಾಗುತ್ತದೆ. ಪಾದವನ್ನು ಬಿರುಕು, ಒರಟುತನದಿಂದ ಕಾಪಾಡಿ ಇದರ ಸೌಂದರ್ಯ ಕಾಪಾಡಲಾಗುತ್ತದೆ.
ಮೊಣಕಾಳಿನಿಂದ ಕೆಳಗಿನ ಭಾಗವನ್ನು ಮಸಾಜ್ ಮಾಡಿ ವ್ಯಾಕ್ಸಿಂಗ್ ಮೂಲಕ ನಯನಗೊಳಿಸಲಾಗುತ್ತದೆ. ಮಾಯಿಶ್ಚರ್ ಕ್ರೀಂ ಬಳಸಿ ತ್ವಚೆಯನ್ನು ಹೊಳಪುಗೊಳಿಸುವ ವಿದಾನವೂ ಪೆಡಿಕ್ಯೂರ್ನ ವಿಧಾನ. ಪಾದಗಳ ಮಸಾಜ್ನಿಂದ ಕಾಲು, ಪಾದಗಳಲ್ಲಿ ರಕ್ತ ಸಂಚಾರ ಸುಗಮವಾಗುತ್ತದೆ.
ಸೌದರ್ಯ ಜಗತ್ತಿನಲ್ಲಿ ಕೈಗಳ ಮತ್ತು ಕಲುಗಳ ಉಗುರುಗಳ ಆರೈಕೆ ಇಂದು ನಿನ್ನೆಯದಲ್ಲಿ. ಇದಕ್ಕೆ ಸುಮಾರು ನಾಲ್ಕು ಸಾವಿರ ವರ್ಷಗಳ ಇತಿಹಾಸವಿದೆ. ದಕ್ಷಿಣ ಬ್ಯಾಬಿಲೋನೊಯಾದಲ್ಲಿ ಮೊತ್ತ ಮೊದಲಿಗೆ ಮಹಿಳೆಯರು ಉಗುರುಗಳಿಗೆ ಶೇಪ್ ನೀಡಲು ಆರಂಭಿಸಿದರು. ನಂತರ ನೈಲ್ ಪಾಲಿಶ್ ಬಳಕೆ ಆರಂಭವಾಯಿತು. ಬಳಿಕ ಚೀನಾದಲ್ಲಿ ಉಗುರುಗಳಿಗೆ ಬಣ್ಣ ಹಚ್ಚುವುದನ್ನು ಆರಂಭಿಸಿದರು. ಪ್ರಾಚೀನ ಈಜಿಪ್ಟಿಯನ್ನರು ಸಹ ಪಾದಗಳ ಆರೈಕೆಗೆ ವಿಶೇಷ ಗಮನ ನೀಡುತ್ತಿದ್ದರು. ಉಗುರುಗಳನ್ನು ನೀಟಾಗಿ ಕತ್ತರಿಸಿ, ಶೇಪ್ ಕೊಟ್ಟು ಆಕರ್ಷಕ ಬಣ್ಣ ಹಚ್ಚಿಕೊಂಡು ಯುದ್ಧ ತಾಲೀಮಿಗೆ ಸಿದ್ಧರಾಗುತಿದ್ದರು ಎನ್ನುತ್ತದೆ ಇತಿಹಾಸ.
ಇದೀಗ ಪೆಡಿಕ್ಯೂರ್ ಎಂಬುದು ಸೌಂದರ್ಯ ಪ್ರಪಂಚದಲ್ಲಿ ಖಾಯಂ ಆಗಿ ನೆಲೆ ನಿಂತಿದೆ. ಪಾದದ ಆರೈಕೆಯನ್ನು ಮನೆಯಲ್ಲೂ ಮಾಡಿಕೊಳ್ಳಬಹುದು. ಚಳಿಗಲ್ಲಿಪಾದ ಅದರಲ್ಲೂ ಹಿಮ್ಮಡಿ ಬಿರುಕು ಬಿಟ್ಟಾಗ ಧೂಳು, ಕೊಳೆ ತುಂಬಿ ನೋವು ಉಂಟಾಗುತ್ತದೆ. ಇದನ್ನು ತಡೆಯಲು ಮನೆಯಲ್ಲಿ ಉಗುರು ಬೆಚ್ಚನೆಯ ನೀರಿಗೆ ಸ್ವಲ್ಪ ಉಪ್ಪು ಹಾಕಿ ಅರ್ಧ ಗಂಟೆ ಕಾಲ ನೆನಸಿಡಬೇಕು. ನಂತರ ತೆಳೂವಾದ ಹತ್ತಿ ಬಟ್ಟೆ ಅಥವಾ ಹ್ತಿ ಉಂಡೆಯಿಂದ, ಹಿಮ್ಮಡಿಯನ್ನು ಮೃದುವಾಗಿ ಒರೆಸಿಕೊಂಡರೆ. ಸ್ವಚ್ಛವಾಗುತ್ತದೆ. ನಂತರ ಕ್ರೀಂ ಅಥವಾ ವ್ಯಾಸಲೀನ್, ಬಯೋಲೀನ್ ಯಾವುದಾದರೂ ಹಚ್ಚಿಕೊಡರೆ ಪರಿಹಾರವಾಗುತ್ತದೆ.
ಪಾದವನ್ನು ಬೆಚ್ಚನೆಯ ನೀರಿನಲ್ಲಿ ನೆನೆಸಿ ತೆಗೆದು ಒರೆಸಿದ ನಂತರ ಸತ್ತ ಚರ್ಮವನ್ನು ತೆಗೆಯುವ ಸ್ಕ್ರಬ್ ಹಚ್ಚಿ ಚೆನ್ನಗಿ ಉಜ್ಜಿಕೊಳ್ಳಬೇಕು. ಹಿಮ್ಮಡಿ ಹಾಗೂ ಕಾಳಿನ ಕೆಳಗಿನ ಗಟ್ಟಿ ಪ್ರದೇಶವನ್ನು ನಿಯತವಾಗಿ ಉಜ್ಜಿಕೊಳ್ಳುತ್ತಿದ್ದರೆ ಹಿಮ್ಮಡಿ ಬಿರುಕು ಮೂಡುವುದಿಲ್ಲ. ಬಿರುಕು ತಡೆಯುವ ಅನೇಕ ಕ್ರೀಂಗಳು ಲಭ್ಯ. ಇದರ ಬಳಕೆ ಪಾದೋಪಚಾರಕ್ಕೆ. ಸೂಕ್ತ ಎನ್ನುತ್ತಾರೆ. ಬ್ಯೂಟಿಷಿಯನ್ಸ್.
ಪಾದಗಳಿಗಾಗಿಯೇ ಸಿಗುವ ಕ್ರೀಂ ಹಚ್ಚುತ್ತಿದ್ದರೆ. ಹಿಮ್ಮಡಿ ಬಿರುಕು ಮೂಡುವುದೂ ಇಲ್ಲ. ನಂತರ ಪಾದವನ್ನು ಲೋಷನ್ ಬಳಸಿ ಮಸಾಜ್ ಮಾಡಿಕೊಳ್ಳಬೇಕು. ಲೋಷನ್ ಇಲ್ಲದಿದ್ದರೆ ಮಾಯಿಶ್ಚರೈಸರ್ ಸಹ ಬಳಸಬಹುದು.ಹೆಬ್ಬೆರಳಿನಿಂದ ಹಿಮ್ಮಡಿಯವರೆಗೂ ಮಸಾಜ್ ಮಾಡಿಕೊಳ್ಳಬೇಕು. ಇದರಿಂದ ಪದ ಅಂದವಾಗಿ ಕಾಣುತ್ತದೆ. ಪದದಲ್ಲಿ ಸತ್ತ ಚರ್ಮಕೋಶಗಳನ್ನು ‘ಫ್ಯೂಮಿಕ್ ಸ್ಟೋನ್’ ಬಳಸಿ ತೆಗೆದುಹಾಕಬಹುದು. ಇದನ್ನು ಪಾರ್ಲರ್ಗಳಲ್ಲಿ ಬಳಸುತ್ತಾರೆ.
ಫಾನ್ಸಿಸ್ಟೋರ್ಗಳಲ್ಲೂ ಇದು ಸಿಗುತ್ತದೆ.
ಚಳಿಗಾಲದಲ್ಲಿ ಆದಷ್ಟೂ ಶೂ ಮತ್ತು ಸಾಕ್ಸ್ಗಳ ಬಳಕೆ ಒಳ್ಳೆಯದು. ಒಂದೇ ಸಾಕ್ಸ್ ಅನ್ನು ದಿನಾ ಬಳಸಬೇಡಿ. ಪಾದದ ಪೌಡರ್ ಬಳಕೆಯೂ ಒಳ್ಳೆಯದೇ. ಹೈಹೀಲ್ಡ್, ಬಿಗಿಯಾದ, ಚಪ್ಪಲಿ ಬಳಕೆ ಬೇಡ. ಗಾಳಿಯಾಡುವ ಅಥಾವಾ ಅರ್ಧ ತೆರೆದ ಶೂ, ಸಾಫ್ಟ್ ಆಗಿರುವ ಚಪ್ಪಲಿ ಬಳಕೆಂಯಿಂದ ಪಾದವನ್ನು ಕಾಪಾಡಿಕೊಳ್ಳಬಹುದು.
ಉಗುರು ಬಣ್ಣ ಬಳಸುವಾಗ ಕಳಪೆ ಗುಣಮಟ್ಟದ ನೈಲ್ಪಾಲಿರ್ಶ ಬಳಸದೇ ಉತ್ತಮ ಗುಣಮಟ್ಟದ ನೈಲ್ ಪಾಲಿಶ್ ಬಳಸಿದರೆ ಒಳ್ಳೆಯದು. ಬಣ್ಣಗಳ ಆಯ್ಕೆಯೂ ಕೂಡ ಬಹಳ ಮುಖ್ಯ. ಡ್ರೆಸ್, ಚಪ್ಪಲಿಗಳಿಗೆ ಮ್ಯಾಚ್ ಆಗುವಂತಹ ಉಗುರು ಬಣ್ಣ ಸಖತ್ ಲುಕ್ ಕೊಡುತ್ತದೆ.
ಪಾದದ ಕಾಳಜಿ, ರಕ್ಷಣೆ,ಕಾಳುಗಳ ಉಗುರುಗಳಿಗೆ ಶೇಪ್ ಕೊಟ್ಟು ನೀಟಾಗಿ ಇಟ್ಟುಕೊಳ್ಳುವುದು ಕೂಡ ಸೌಂದರ್ಯದ ಒಂದು ಭಾಗ.
English summary: foot care tips in Kannada. Most important thing is pedicure. Here we point out useful tips about pedicure in Kannada.

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243




