Connect with us

ದಿನದ ಸುದ್ದಿ

ಗಾಣಗಾಪೂರ ದತ್ತಾತ್ರೇಯ ದೇವರಿಗೆ ಅರ್ಚಕರಿಂದ ವಂಚನೆ: ಹೇಗೆ ಗೊತ್ತಾ..?

Published

on

ಸುದ್ದಿದಿನ,ಕಲಬುರಗಿ: ದೇವರು ಅಂದ್ರೆ ಭಯಭಕ್ತಿ ಹೆಚ್ಚು, ಆದ್ರೆ ಇಲ್ಲಿ ಕೇಲ ವಂಚಕರು ಭಯಭಕ್ತಿ ಎಲ್ಲವನ್ನು ಬಿಟ್ಟು ದೇವರ ಹೆಸರಿನಲ್ಲಿಯೇ ಭಕ್ತರಿಗೆ ಪಂಗನಾಮ ಹಾಕಿದ್ದಾರೆ. ದೇವರ ಹೆಸರಿನಲ್ಲಿ ಭಕ್ತರಿಗೆ ವಂಚಿಸಿರೋದು ಸ್ವತಾ ಅರ್ಚಕರು ಅನ್ನೋದು ಇಲ್ಲಿ ಗಮನಾರ್ಹ ವಿಷಯ.

ಕಲಬುರಗಿ ಜಿಲ್ಲೆ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ದೇಶದ ಮೂಲೆಮೂಲೆಗಳಲ್ಲಿ ಭಕ್ತರಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಗಾಣಗಾಪುರದ ಕೇಲ ಅರ್ಚಕರು ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ದೇವರ ಜೊತೆಗೆ ಭಕ್ತರಿಗೆ ಪಂಗನಾಮ ಹಾಕಿದ್ದಾರೆ. ದತ್ತಾತ್ರೇಯ ದೇವಸ್ಥಾನಕ್ಕೆ ಕಲಬುರಗಿ ಡಿಸಿ ಯಶವಂತ ಗುರುಕರ್ ಭೇಟಿ ನೀಡಿದ್ದಾಗ ಈ ವಂಚನೆ ಪ್ರಕರಣ ಬಯಲಿಗೆ ಬಂದಿದೆ.

ದೇವಸ್ಥಾನದ ಅಧಿಕೃತ ವೆಬ್‌ಸೈಟ್ www.devalgangapur.com (Shri dattatreya temple.ghanagapur) ಎಂದಿದೆ. ಆದ್ರೆ ಅಧಿಕೃತ ವೆಬ್ ಸೈಟ್ ಹೊರತುಪಡಿಸಿ ಅರ್ಚಕರೇ ಏಳೆಂಟು ನಕಲಿ ವೆಬ್ ಸೈಟ್ ಗಳನ್ನು ಕ್ರಿಯೇಟ್ ಮಾಡಿದ್ದಾರೆ. ದರ್ಶನ, ವಿಶೇಷ ಪೂಜೆ, ಅರ್ಚನೆ ಸೇರಿ ದೂರದ ಊರಿನಲ್ಲಿಯೇ ಕುಳಿತು ಆನ್‌ಲೈನ್ ಬುಕ್ ಮಾಡಿವ ವ್ಯವಸ್ಥೆಯನ್ನು ದುರುಪಯೋಗ ಪಡರಸಿಕೊಂಡಿದ್ದಾರೆ. ದೇವಸ್ಥಾನಕ್ಕೆ ಸಲ್ಲಿಸುವ ಧಾನವನ್ನು ಕೂಡಾ ವಂಚಕರು ತಮ್ಮ ಖಾತೆಗಳಿಗೆ ಹಾಕಿಸಿಕೊಂಡು ಸರ್ಕಾರ ಬೊಕ್ಕಸಕ್ಕೆ ಕೋಟಿ ಕೋಟಿ ವಂಚಿಸಿದ್ದಾರೆ. ದೇವಸ್ಥಾನದ ಹುಂಡಿ ಎಣಿಕೆ ವೇಳೆಯೂ ಮೋಸ ಮಾಡಿರುವಂತೆ ಕಂಡುಬಂದಿದೆ.. ಎಣಿಕೆ ವೇಳೆ ಸಿಸಿ ಕ್ಯಾಮಾರಾ ಕಣ್ಣುಗಳನ್ನು ಮುಚ್ಚಿ ಮೋಸ ಮಾಡಿರುವ ಶಂಕೆ ವ್ಯಕ್ತವಾಗಿದೆ.

ದೇವಸ್ಥಾನ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರ ಸೂಚನೆ ಮೇರೆಗೆ ದೇವಲಗಾಣಗಾಪುರ ಠಾಣೆಯಲ್ಲಿ ಏಳುಜನ ವಂಚಕರ ಮೇಲೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕೇವಲ ಅರ್ಧ ಗಂಟೆಯಲ್ಲಿ ನಕಲಿ ವೆಬ್ಸೈಟ್ಗಳು ಡಿಲೀಟ್ ಆಗಿವೆ. ಆದ್ರೆ ಸುಮಾರು ಮೂರ್ನಾಲು ವರ್ಷಗಳಿಂದ ವಂಚನೆ ನಡೆದಿದ್ದು, ದೇವಸ್ಥಾನದಿಂದ ಮುಜರಾಯಿ ಇಲಾಖೆಗೆ ಬರಬೇಕಾದ ಕೋಟ್ಯಾಂತರ ರೂಪಾಯಿ ಆದಾಯ ಖದೀಮರು ನುಂಗಿಹಾಕಿದ್ದಾರೆ. ನಷ್ಟದ ಹಣವನ್ನು ಇವರಿಂದಲೇ ವಸೂಲಿ ಮಾಡುವ ಸಾಧ್ಯತೆ ಕೂಡಾ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending