ದಿನದ ಸುದ್ದಿ
ಗಾಣಗಾಪೂರ ದತ್ತಾತ್ರೇಯ ದೇವರಿಗೆ ಅರ್ಚಕರಿಂದ ವಂಚನೆ: ಹೇಗೆ ಗೊತ್ತಾ..?
ಸುದ್ದಿದಿನ,ಕಲಬುರಗಿ: ದೇವರು ಅಂದ್ರೆ ಭಯಭಕ್ತಿ ಹೆಚ್ಚು, ಆದ್ರೆ ಇಲ್ಲಿ ಕೇಲ ವಂಚಕರು ಭಯಭಕ್ತಿ ಎಲ್ಲವನ್ನು ಬಿಟ್ಟು ದೇವರ ಹೆಸರಿನಲ್ಲಿಯೇ ಭಕ್ತರಿಗೆ ಪಂಗನಾಮ ಹಾಕಿದ್ದಾರೆ. ದೇವರ ಹೆಸರಿನಲ್ಲಿ ಭಕ್ತರಿಗೆ ವಂಚಿಸಿರೋದು ಸ್ವತಾ ಅರ್ಚಕರು ಅನ್ನೋದು ಇಲ್ಲಿ ಗಮನಾರ್ಹ ವಿಷಯ.
ಕಲಬುರಗಿ ಜಿಲ್ಲೆ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ದೇಶದ ಮೂಲೆಮೂಲೆಗಳಲ್ಲಿ ಭಕ್ತರಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಗಾಣಗಾಪುರದ ಕೇಲ ಅರ್ಚಕರು ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ದೇವರ ಜೊತೆಗೆ ಭಕ್ತರಿಗೆ ಪಂಗನಾಮ ಹಾಕಿದ್ದಾರೆ. ದತ್ತಾತ್ರೇಯ ದೇವಸ್ಥಾನಕ್ಕೆ ಕಲಬುರಗಿ ಡಿಸಿ ಯಶವಂತ ಗುರುಕರ್ ಭೇಟಿ ನೀಡಿದ್ದಾಗ ಈ ವಂಚನೆ ಪ್ರಕರಣ ಬಯಲಿಗೆ ಬಂದಿದೆ.
ದೇವಸ್ಥಾನದ ಅಧಿಕೃತ ವೆಬ್ಸೈಟ್ www.devalgangapur.com (Shri dattatreya temple.ghanagapur) ಎಂದಿದೆ. ಆದ್ರೆ ಅಧಿಕೃತ ವೆಬ್ ಸೈಟ್ ಹೊರತುಪಡಿಸಿ ಅರ್ಚಕರೇ ಏಳೆಂಟು ನಕಲಿ ವೆಬ್ ಸೈಟ್ ಗಳನ್ನು ಕ್ರಿಯೇಟ್ ಮಾಡಿದ್ದಾರೆ. ದರ್ಶನ, ವಿಶೇಷ ಪೂಜೆ, ಅರ್ಚನೆ ಸೇರಿ ದೂರದ ಊರಿನಲ್ಲಿಯೇ ಕುಳಿತು ಆನ್ಲೈನ್ ಬುಕ್ ಮಾಡಿವ ವ್ಯವಸ್ಥೆಯನ್ನು ದುರುಪಯೋಗ ಪಡರಸಿಕೊಂಡಿದ್ದಾರೆ. ದೇವಸ್ಥಾನಕ್ಕೆ ಸಲ್ಲಿಸುವ ಧಾನವನ್ನು ಕೂಡಾ ವಂಚಕರು ತಮ್ಮ ಖಾತೆಗಳಿಗೆ ಹಾಕಿಸಿಕೊಂಡು ಸರ್ಕಾರ ಬೊಕ್ಕಸಕ್ಕೆ ಕೋಟಿ ಕೋಟಿ ವಂಚಿಸಿದ್ದಾರೆ. ದೇವಸ್ಥಾನದ ಹುಂಡಿ ಎಣಿಕೆ ವೇಳೆಯೂ ಮೋಸ ಮಾಡಿರುವಂತೆ ಕಂಡುಬಂದಿದೆ.. ಎಣಿಕೆ ವೇಳೆ ಸಿಸಿ ಕ್ಯಾಮಾರಾ ಕಣ್ಣುಗಳನ್ನು ಮುಚ್ಚಿ ಮೋಸ ಮಾಡಿರುವ ಶಂಕೆ ವ್ಯಕ್ತವಾಗಿದೆ.
ದೇವಸ್ಥಾನ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರ ಸೂಚನೆ ಮೇರೆಗೆ ದೇವಲಗಾಣಗಾಪುರ ಠಾಣೆಯಲ್ಲಿ ಏಳುಜನ ವಂಚಕರ ಮೇಲೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕೇವಲ ಅರ್ಧ ಗಂಟೆಯಲ್ಲಿ ನಕಲಿ ವೆಬ್ಸೈಟ್ಗಳು ಡಿಲೀಟ್ ಆಗಿವೆ. ಆದ್ರೆ ಸುಮಾರು ಮೂರ್ನಾಲು ವರ್ಷಗಳಿಂದ ವಂಚನೆ ನಡೆದಿದ್ದು, ದೇವಸ್ಥಾನದಿಂದ ಮುಜರಾಯಿ ಇಲಾಖೆಗೆ ಬರಬೇಕಾದ ಕೋಟ್ಯಾಂತರ ರೂಪಾಯಿ ಆದಾಯ ಖದೀಮರು ನುಂಗಿಹಾಕಿದ್ದಾರೆ. ನಷ್ಟದ ಹಣವನ್ನು ಇವರಿಂದಲೇ ವಸೂಲಿ ಮಾಡುವ ಸಾಧ್ಯತೆ ಕೂಡಾ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243