ದಿನದ ಸುದ್ದಿ
ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್
ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.
ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243