ಲೈಫ್ ಸ್ಟೈಲ್
ಸಿಕ್ಕಾಪಟ್ಟೆ ಟ್ರೆಂಡಿಂಗ್ Friendship Day ನೈಲ್ ಆರ್ಟ್..!

“ಸ್ನೇಹ“ಅನ್ನೋ ಎರಡಕ್ಷರದ ಪದದಲ್ಲಿ ಇಡೀ ಭೂಮಂಡಲದಷ್ಟು ಪ್ರೀತಿ-ವಿಶ್ವಾಸ-ಆನಂದ ಅಡಗಿದೆ. ನೋವು-ನಲಿವು-ಸಿಹಿ-ಕಹಿಗಳ ಸಮಾಗಮ ಸ್ನೇಹ. ಇಂತಹ ಸ್ನೇಹ ಸಂಬಂಧದ ಪ್ರತೀಕವಾಗಿ ಆಗಸ್ಟ್ ತಿಂಗಳ ಮೊದಲ ಭಾನುವಾರ ಸ್ನೇಹಿತರ ದಿನಾಚರಣೆ ಆಚರಿಸಲಾಗುತ್ತದೆ.
ಸ್ನೇಹಿತ ರ ದಿನಾಚರಣೆ ಗೆ ಕೆಲವೇ ದಿನಗಳು ಉಳಿದಿದ್ದು, ಈ ದಿನದಂದು ತಮ್ಮ ಪ್ರಾಣ ಸ್ನೇಹಿತರಿಗೆ ವಿಶೇಷ ವಾಗಿ ವಿಶ್ ಮಾಡುವ ಕಾತುರದಲ್ಲಿರುವ ಸಮಸ್ತ ಹೆಂಗಳೆಯರಿಗೆ, ಇದೋ ಇಲ್ಲಿದೆ ನೋಡಿ ವಿಶಿಷ್ಟ ಬಗೆಯ “ಫ್ರೆಂಡ್ ಷಿಪ್ ಡೇ ನೈಲ್ ಆರ್ಟ್” .
ನಿಮ್ಮ ಪ್ರಾಣ ಸ್ನೇಹಿತರಿಗೆ ವಿಶೇಷ ವಾಗಿ ವಿಶ್ ಮಾಡುವ ಪ್ಲಾನ್ ಇದ್ದಲ್ಲಿ.. ಗ್ರೀಟಿಂಗ್ ಕಾರ್ಡ್,ರೋಜಾ, ಟೆಡ್ಡಿ ಬೇರ್ ಕೊಟ್ಟು ಬೋರ್ ಆಗಿದ್ದಲ್ಲಿ..ಈ ಫ್ರಂಶಿಪ್ ಡೇ ನಿಮ್ಮ ಕೈ ಉಗುರುಗಳ ಮೇಲೆ ನಿಮ್ಮ ಬೆಸ್ಟ್ ಫ್ರೆಂಡ್ ಗೆ ಸ್ನೇಹಿತರ ದಿನಾಚರಣೆ ಯ ಶುಭಾಶಯ ಗಳನ್ನು ಕೋರಿ ಸರ್ಪ್ರೈಸ್ ನೀಡಿ.
ಫ್ರೆಂಡ್ ಷಿಪ್ ನೈಲ್ ಆರ್ಟ್
ಕೈ ಉಗುರಿನ ಮೇಲೆ ನೈಲ್ ಪಾಲಿಷ್ ಬಳಸಿ ಸ್ನೇಹ ಸಂಬಂಧ ಸಾಯುವ ಚಿತ್ರ, ವಾಕ್ಯ ಗಳನ್ನು ಕಲಾತ್ಮಕವಾಗಿ ಚಲಿಸುವ ಕಲೆಯ ಫ್ರಂಶಿಪ್ ಡೇ ನೈಲ್ ಆರ್ಟ್. ಸದಾ ಡಿಫರೆಂಟ್ ಆಗಿರಲು ಬಯಸುವ ಹೆಣ್ಣುಮಕ್ಕಳು ಈ ಬಾರಿಯ ಫ್ರೆಂಷಿಪ್ ಡೇ ನಿಮ್ಮ ಗೆಳೆಯರ ಹೆಸರನ್ನು ಉಗುರುಗಳ ಮೇಲೆ ಬಿಡಿಸಿ ನಿಮ್ಮ ಸ್ನೇಹ ಸೇತುವೆಯ ಗಟ್ಟಿಗೊಳಿಸಬಹು.
ಟಾಮ್-ಜೆರಿ ನೈಲ್ ಆರ್ಟ್, ಬೆಸ್ಟ್ ಫ್ರೆಂಡ್ ನೈಲ್ ಆರ್ಟ್, ಫೋಟೋ ನೈಲ್ ಆರ್ಟ್, ಹೀಗೆ ಹಲವಾರು ವೆರೈಟಿಗಳಲ್ಲಿ ಫ್ರೆಂಡ್ಸ್ ಡೇ ನೈಲ್ ಆರ್ಟ್ ಸಿದ್ಧ ಗೊಂಡಿದೆ. ನೀವೂ ಒಮ್ಮೆ ಟ್ರೈ ಮಾಡಿ ನಿಮ್ಮ ಸ್ನೇಹಿತ ರನ್ನು ಸರ್ಪೈಸ್ ಮಾಡಿ.

ದಿನದ ಸುದ್ದಿ
Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025
ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ
-
ದಿನದ ಸುದ್ದಿ6 days ago
ದಾವಣಗೆರೆ | ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು : ನೀಲಾನಹಳ್ಳಿಯಲ್ಲಿ ಎನ್.ಎಸ್.ಎಸ್ ಶಿಬಿರ
-
ದಿನದ ಸುದ್ದಿ6 days ago
ಮುಂದಿನ 5 ದಿನ ಗುಡುಗು ಸಹಿತ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ
-
ಅಂಕಣ6 days ago
ಕವಿತೆ | ಇಷ್ಟಂತೂ ಹೇಳಬಲ್ಲೆ..!
-
ದಿನದ ಸುದ್ದಿ7 days ago
ದಾವಣಗೆರೆ | ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು
-
ದಿನದ ಸುದ್ದಿ6 days ago
ಜಾನಪದ ಆಚರಣೆಗಳಲ್ಲಿ ವೈಜ್ಞಾನಿಕತೆ ಅಡಗಿದೆ : ಪ್ರೊ. ಮೋನಿಕಾ ರಂಜನ್
-
ದಿನದ ಸುದ್ದಿ6 days ago
ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ನೈತಿಕತೆ ಇಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ತುಂಗಭದ್ರಾ ಬೋರ್ಡ್ ಅಧಿಕಾರಿಗಳ ಕಳ್ಳಾಟ : ಕಬ್ಬಿಣ ಕಳ್ಳತನ ಆರೋಪದಲ್ಲಿ ಕಣ್ಣಮುಚ್ಚಾಲೆ ಆಟ ; ಶಾಸಕರ ಹೆಸರು ಪ್ರಸ್ತಾಪ