Connect with us

ಲೈಫ್ ಸ್ಟೈಲ್

ಸ್ನೇಹದ ನೆನಪಿನಂಗಳದಲ್ಲಿನ ಸವಿನೆನಪುಗಳು..!

Published

on

  • ಹುಸೇನಸಾಬ ವಣಗೇರ,ಉಪನ್ಯಾಸಕರು

ಜೀವನದಲ್ಲಿ ಕಷ್ಟ ಸುಖ, ನೋವುನಲಿವುಗಳ ಮದ್ಯೆ, ಸದಾ ನಮ್ಮ ಏಳಿಗೆಯನ್ನು ಬಯಸುವುದು ಸ್ನೇಹ. ರಕ್ತ ಸಂಬಂದಕ್ಕಿಂತಲೂ ಮಿಗಿಲಾದ ಸಂಬಂದವಿದೆ ಎನ್ನುವುದಾದರೆ ಅದುವೇ ಈ ಸಂಬಂಧ. ಯಾವುದೇ ಜಾತಿ, ಧರ್ಮದ ಭೇದಭಾವವಿರದ ನಿಶ್ವಾರ್ಥ ಪವಿತ್ರವಾದ ಅನುಬಂಧವಿದ್ದಾಗ ಕೈಹಿಡಿದು ಗೆದ್ದಾಗ ಬೆನ್ನುತಟ್ಟಿ ಮುನ್ನಡೆಸುವ ಈ ಸೇಹವೇ ನನ್ನ ಪಾಲಿನ ಆಸ್ತಿ ಸದಾ ಕಾಳಜಿ, ಪ್ರೀತಿ, ವಾತ್ಸಲ್ಯ, ವಿಶ್ವಾಸದ ಈ ಸ್ನೇಹದ ಮುಂದೆಉಪಯೋಗಕ್ಕೆ ಬಾರದ ಆಸ್ತಿ, ಅಂತಸ್ತುಎಲ್ಲವೂ ಶೂನ್ಯ.

ನನಗೂ ಒಬ್ಬಆತ್ಮೀಯ ಸ್ನೇಹಿತನಿದ್ದಾನೆ, ಬಾಲ್ಯದಿಂದಲೂ ನನಗೆ ಜೊತೆಗಾರನಾಗಿ ಶಾಲೆಯಲ್ಲಿಸಹಪಾಠಿಯಾಗಿ ಸೋಲು ಗೆಲುವುಗಳಿಗೆಆಸರೆಯಾಗಿ ಸದಾತನ್ನ ಹಾಸ್ಯ ಮಾತುಗಾರಿಕೆಯಿಂದಜೀವನದಜಂಜಾಟದಲ್ಲಿನ ನೋವುಗಳನ್ನು ದೂರಮಾಡಿ ನೋವಿನಲ್ಲೂ ನಲಿಯುವಂತೆ ಮಾಡುವ ಮನುಜ.ಲೋಕ ಜ್ಞಾನವನ್ನು ಅರಿಯದ ಬಾಲ್ಯದ ಆ ದಿನಗಳಲ್ಲಿ ಪರಿಚಯ ಸ್ನೇಹವಾಗಿ ಬೆಳೆಯಿತು ಅದುವೇ ನಮ್ಮ ಸ್ನೇಹಕ್ಕೆ ಬದ್ರಬುನಾದಿಯನ್ನು ಹಾಕಿ, ಕೇವಲ ಆಟದಲ್ಲಿಜೊತೆಗಾರನಾಗಿರದೇಇಂದು ಸ್ನೇಹದಲ್ಲಿಉತ್ತುಂಗ ಸ್ಥಾನಕ್ಕೇರಿ ಸದಾ ನನ್ನೊಡನೆ ನಡೆಯುತ್ತಿದಾನೆ.

ಬಾಲ್ಯದಿಂದಲೇಜೊತೆಗಾರರಾದ ನಾವು ಪ್ರಾಥಮಿಕ ಶಿಕ್ಷಣ, ಪ್ರೌಡಶಿಕ್ಷಣ,ಪದವಿಪೂರ್ವ, ಪದವಿಶಿಕ್ಷಣವನ್ನು ಜೊತೆಯಲ್ಲೆ ಕಲಿತೆವು ಅಷ್ಟೆ ಅಲ್ಲದೆ ಒಬ್ಬರಿಗೊಬ್ಬರು ಬಿಟ್ಟಿರಲು ಅಸಾದ್ಯವೆಂಬುವುದನ್ನು ಅರಿತು ಸ್ನಾತಕೋತ್ತರ ಪದವಿಯನ್ನು ಇಬ್ಬರೂ ಒಂದೇ ವಿಷಯದಲ್ಲಿ ಒಂದೇಡೆಗೆಕಲಿತಿರುವುದು ಹೆಮ್ಮೆಯ ವಿಷಯ.ಜೀವನದ ಏಳು ಬಿಳುಗಳಲ್ಲಿ ಆಸರೆಯಾಗಿ ಮಾತಿಗೆ ಬಾರದ ಭಾವನೆಗಳನ್ನು ಅರ್ಥೈಸಿಕೊಂಡು ಅಳುವಾಗ ಅತ್ತು ನಗುವಾಗ ನಕ್ಕುನಲಿಯುವ ಈ ಸ್ನೇಹ ನನ್ನಜೀವನದಲ್ಲಿ ಹಾಸು ಹೊಕ್ಕಾಗಿದೆ.ಬಡತನದ ಬವಣಿಯಲಿ ಬೆಂದುಕಲಿಕೆಯ ಈ ಜೀವನದಲ್ಲಿಜೀವನದ ಪರಿಪಾಠವನ್ನು ತಿಳಿಯಲು ಸಾಧ್ಯವಾಗಿದೆ.

ದಿನ ಕಳೆದಂತೆ ಸ್ನೇಹಿತರ ಸಂಖ್ಯೆ ಹೆಚ್ಚಿದಂತೆಲ್ಲಾಆತ್ಮವಿಸ್ವಾದಜೋತೆಗೆ ಸರಿ ತಪ್ಪುಗಳನು ತಿಳಿಸಿ ತಿದ್ದಿಬುದ್ದಿ ಹೇಳಿ ಹಸಿದಾಗ ಊಟ ಕೊಡಿಸಿ ನೊಂದಾಗಕರುಣೆತೋರಿ ಪ್ರೀತಿ ವಾತ್ಸಲ್ಯತೋರಿದ ನನ್ನೆಲ್ಲಾ ಸ್ನೇಹಿತರಿಗೂ ನಾ ಚಿರಋಣಿಯಾಗಿರುವೆ
ನಿತ್ಯಜೀವನದ ನೋವು ನಲಿವುಗಳಲ್ಲಿ ನನ್ನೆಲ್ಲಾ ಸ್ನೇಹಿತರ ನೆನಪುಗಳು ಕಾಡುತ್ತಿವೆ. ನನ್ನ ನೋವುಗಳಿಗೆ ಸ್ನೇಹಿತರ ನೆನಪುಗಳೆ ಮದ್ದು ಹಿಂದಿನ ಆ ದಿನಗಳನ್ನು ನೆನಸಿಕೊಂಡರೆ ನೋವಿನಲ್ಲಿ ನಲಿಯುವಂತೆ ಮಾಡುವ ಆ ನೆನಪಿನಂಗಳದ ಸವಿನೆನಪುಗಳು ಪುನಃ ಬರಬಾರದೇ ಎಂಬ ಹಗಲುಗನಸಿನಲ್ಲೆ ಜೀವನ ಸಾಗುತ್ತಿದೆ.

ಖುಷಿ ಸಂತೋಷದಿಂದ ಕಳೆದ ದಿನಗಳನ್ನು ಮರೆಯಲು ಸಾಧ್ಯವೇಯಿಲ್ಲ ನನ್ನೆಲ್ಲಾ ಗೆಳೆಯರು ವಿದ್ಯಾಭ್ಯಾಸ ಮುಗಿಸಿ ವೃತ್ತಿಜೀವನಕ್ಕೆ‌ ಕಾಲಿಟ್ಟಾಯಿತು. ಇನ್ನು ಕೆಲವರುಉನ್ನತ ಹುದ್ದೆಯ ಕನಸು ಕಟ್ಟಿ ಹಗಲು ರಾತ್ರಿಎನ್ನದೇ ಓದಿನಲ್ಲಿತೊಡಗಿಕೊಂಡು ಶ್ರಮಿಸುತ್ತಿದ್ದಾರೆ. ಸದ್ದಿಲ್ಲದೇ ಸಾಗುವ ಅವರ ಪರಿಶ್ರಮ ಅವರನ್ನು ಉನ್ನತಸ್ಥಾನಕ್ಕೆ‌ ಕೊಂಡೊಯುತ್ತದೆ. ಎನ್ನುವ ಬರವಸೆಯ ಬೆಳಕು ಮೂಡಿರುವುದು ಅವರಲ್ಲಿನ‌ ಆತ್ಮವಿಶ್ವಾಸದಿಂದ ಕಂಡುಕೊಂಡಿದ್ದು. ನನ್ನೆಲ್ಲಾ ಸ್ನೇಹಿತರುಉನ್ನತ ಹುದ್ದೆಪಡೆದು ಕಷ್ಟದಲ್ಲಿರುವವರಿಗೆ ಸಹಾಯ ಹಸ್ತನೀಡಿ ಸಮಾಜಸುಧಾರಣೆಯಲಿ ಸಣ್ಣದೊಂದು ಪ್ರಯತ್ನಮಾಡುವ ನಮ್ಮಕನಸೊಂದು ನನಸಾಗುವ ದಿನ ಹತ್ತಿರವಾಗುತ್ತಿದೆ.

ಆತ್ಮೀಯ ಮಿತ್ರರೆಅದೆಕೋ ನಾ ಕಾಣೆ ನಿಮ್ಮೆಲ್ಲರ ನೆನಪುಗಳು ನನ್ನನ್ನುಕಾಡುತ್ತಿದೆಆಟ ಪಾಠಗಳ ಜೋತೆಗೆ ಮಾಡಿದ ಕೀಟಲೆಗಳು ಕಣ್ಣಮುಂದೆ ಸುಳಿದಾಡುತ್ತಿವೆ. ಸದ್ಯದ ಸಮಯದಲ್ಲಿ ನಾವೆಲ್ಲರು ದೂರವಿರಬಹುದು ಆದರೆಅದು ಮನಸ್ಸಿನಿಂದಲ್ಲ ಎಂಬ ನಂಬಿಕೆಯೊಂದರಿಂದ ನಿತ್ಯಜೀವನದ ಬದುಕಿನ ಬಂಡಿ ಸಾಗುತ್ತಿದೆ. ನೆನಪಿನಂಗಳದ ಸವಿನೆನಪುಗಳನ್ನು ಮೆಲುಕು ಹಾಕುತ್ತಾ ಬರಿದಾದ ಬದುಕಿನಲಿ ಭರವಸೆಯಛಾಯೆ ಮೂಡಿದೆ.ಕರೆಗೂ ನಿಲುಕದನಿಮ್ಮೆಲ್ಲರ ನೆನಪುಗಳು ಬಾಳಬುತ್ತಿಯಲಿ ಸಿಹಿಯಾಗಿರಲಿ ನಿಮ್ಮಜೀವನದಲ್ಲಿಯಶಸ್ಸು ಫಲಿಸಲಿ ಎಂದು ಬಯಸುವ ನಿಮ್ಮ ಪ್ರೀತಿಯ ಸ್ನೇಹಿತ.

(ಹುಸೇನಸಾಬ ವಣಗೇರ
ಉಪನ್ಯಾಸಕರು
ಸಮಾಜ ಕಾರ್ಯ ಸ್ನಾತಕೋತ್ತರ ಅಧ್ಯಯನ ಕೇಂದ್ರ
ಮಹಿಳಾ ವಿದ್ಯಾಪೀಠ
ಹುಬ್ಬಳ್ಳಿ
ಮೊಬೈಲ್ : 7829606194)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

Published

on

ಜಾತಿಯ ಗೋಡೆ ಒಡೆದು ಮದುವೆಯಾದ ಜೋಡಿಗೆ ಹೊಸ ಸಂಕಷ್ಟ: ಪ್ರೋತ್ಸಾಹಧನಕ್ಕೆ ಅರ್ಜಿ ಹಾಕಿದರೂ ಹಣ ಮಾತ್ರ ಮರೀಚಿಕೆ!

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.

ಹೈಲೈಟ್ಸ್: 
  • SC/ST ಪುರುಷ–ಬೇರೆ ಜಾತಿಯ ಮಹಿಳೆ ವಿವಾಹಕ್ಕೆ ₹2.50 ಲಕ್ಷ ನೆರವು
  • SC/ST ಮಹಿಳೆ–ಬೇರೆ ಜಾತಿಯ ಪುರುಷ ವಿವಾಹಕ್ಕೆ ₹3 ಲಕ್ಷ ಪ್ರೋತ್ಸಾಹಧನ
  • 2025-26ರಲ್ಲಿ 5,612 ಅರ್ಜಿಗಳ ಪೈಕಿ 3,997 ಅರ್ಜಿಗಳು ಬಾಕಿ
  • 2026-27ರಲ್ಲಿ 2,194 ಅರ್ಜಿಗಳು; 61ಕ್ಕೆ ಅನುಮೋದನೆ, ಆದರೆ ಹಣ ಪಾವತಿ ಶೂನ್ಯ
  • ಅನುದಾನ ಕೊರತೆ ಮತ್ತು ಅಪೂರ್ಣ ದಾಖಲೆಗಳಿಂದ ಯೋಜನೆ ಅನುಷ್ಠಾನಕ್ಕೆ ವಿಳಂಬ

http://Visit : www.suddidina.com

ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?

ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.

ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.

ಹೊಸ ಸಾಲಿನಲ್ಲೂ ಅದೇ ಕಥೆ

2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.

ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ

ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.

2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.

2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ

  • 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
  • ಮೊದಲ ಕಂತಿಗೆ ಅನುಮೋದನೆ: 61
  • ಪ್ರೋತ್ಸಾಹ ಧನ ಪಾವತಿ: 00
  • ಅಪೂರ್ಣ ಅರ್ಜಿಗಳು: 392
  • ತಿರಸ್ಕಾರಗೊಂಡ ಅರ್ಜಿಗಳು: 02

ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ

ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.

ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

Continue Reading

ದಿನದ ಸುದ್ದಿ

ಅಪೌಷ್ಟಿಕತೆ ನಿವಾರಣೆಗೆ ಹೊಸ ಹೆಜ್ಜೆ; ಶಾಲೆ ಮುಗಿಯುವ ಮುನ್ನ ಮಕ್ಕಳಿಗೆ ಪೌಷ್ಟಿಕ ತಿನಿಸು

Published

on

ಗಣಿ ಬಾಧಿತ ಜಿಲ್ಲೆಗಳ ಮಕ್ಕಳಿಗೆ ‘ಸಂಜೆ ಸ್ನ್ಯಾಕ್ಸ್’ ಭಾಗ್ಯ: 24 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ

ಸುದ್ದಿದಿನ,ಹೂವಿನಹಡಗಲಿ: ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಸುಧಾರಣೆಗೆ ಕರ್ನಾಟಕ ಗಣಿ ಮತ್ತು ಪರಿಸರ ಪುನಸ್ಥಾಪನೆ ನಿಗಮ (ಕೆಎಂಆರ್‌ಸಿಇ) ಹೊಸ ಹೆಜ್ಜೆ ಇಟ್ಟಿದೆ. ವಿಜಯನಗರ, ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಶೀಘ್ರದಲ್ಲೇ ಸಂಜೆ ಸ್ನ್ಯಾಕ್ಸ್ ವಿತರಿಸುವ ಯೋಜನೆ ರೂಪಿಸಲಾಗಿದೆ.

ಈ ಸಂಬಂಧ ನಾಲ್ಕು ಜಿಲ್ಲೆಗಳ ಜಿಲ್ಲಾ ಪಂಚಾಯಿತಿಗಳ ಮೂಲಕ ಸಂಬಂಧಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ರವಾನೆಯಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸಲು ಸಿದ್ಧತೆ ಆರಂಭಿಸಲಾಗಿದೆ. ಹೂವಿನಹಡಗಲಿ ತಾಲೂಕಿನಲ್ಲಿ ಈಗಾಗಲೇ ಮುಖ್ಯಗುರುಗಳ ಸಭೆ ನಡೆಸಿ ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಗಿದೆ.

http://Visit : www.suddidina.com

ಅಪೌಷ್ಟಿಕತೆ ತಡೆಗೆ ಪೌಷ್ಟಿಕ ಆಹಾರ

ಗಣಿ ಬಾಧಿತ ಪ್ರದೇಶಗಳಲ್ಲಿ ಮಕ್ಕಳಿಗೆ ಹೆಚ್ಚುವರಿ ಪೌಷ್ಟಿಕ ಆಹಾರ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಸಂಜೆ ಸಮಯದಲ್ಲಿ ಮಕ್ಕಳಿಗೆ ನೆನೆಸಿದ ಶೇಂಗಾ, ಮೊಳಕೆಯೊಡೆದ ಹೆಸರುಕಾಳು, ಚಕ್ಕಿ ಸೇರಿದಂತೆ ವಿವಿಧ ಪೌಷ್ಟಿಕ ಆಹಾರಗಳನ್ನು ನೀಡಲು ಉದ್ದೇಶಿಸಲಾಗಿದೆ. ಕೆಲವು ದಿನಗಳಲ್ಲಿ ಮೂಸಂಬಿ, ಕಿತ್ತಳೆ, ಸಪೋಟ ಮತ್ತಿತರ ಹಣ್ಣುಗಳನ್ನೂ ವಿತರಿಸುವ ವ್ಯವಸ್ಥೆ ಇರಲಿದೆ.

ಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಟಿಕತೆ ಹಾಗೂ ಪೌಷ್ಟಿಕಾಂಶದ ಕೊರತೆ ನಿವಾರಣೆಗೆ ಪೂರಕವಾಗುವಂತೆ ಈ ಯೋಜನೆ ರೂಪಿಸಲಾಗಿದೆ. ಶಾಲೆಯಲ್ಲಿ ಶಿಕ್ಷಣದ ಜತೆಗೆ ಮಕ್ಕಳ ಆರೋಗ್ಯಕ್ಕೂ ಆದ್ಯತೆ ನೀಡುವ ಪ್ರಯತ್ನ ಇದಾಗಿದೆ.

24,352 ಮಕ್ಕಳಿಗೆ ಪ್ರಯೋಜನ

ಹೂವಿನಹಡಗಲಿ ತಾಲೂಕಿನಲ್ಲಿ 138 ಸರ್ಕಾರಿ ಪ್ರಾಥಮಿಕ ಹಾಗೂ 27 ಪ್ರೌಢಶಾಲೆಗಳ ಒಟ್ಟು 24,352 ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಯೋಜನೆಗಾಗಿ ಕೆಎಂಆರ್‌ಸಿಇ ವತಿಯಿಂದ ₹10.64 ಕೋಟಿಗೂ ಹೆಚ್ಚು ಮೊತ್ತದ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಮೂರು ವರ್ಷಗಳ ಅವಧಿಗೆ ಒಟ್ಟು ಸುಮಾರು ₹33 ಕೋಟಿ ಆಡಳಿತಾತ್ಮಕ ಮಂಜೂರಾತಿ ದೊರೆತಿದ್ದು, ಅಡುಗೆದಾರರು ಮತ್ತು ಸಹಾಯಕಿಯರ ವೆಚ್ಚಕ್ಕೂ ಪ್ರತ್ಯೇಕ ಅನುದಾನ ಮೀಸಲಿಡಲಾಗಿದೆ. ಇದರಿಂದ ಯೋಜನೆ ಕೇವಲ ತಾತ್ಕಾಲಿಕ ಕ್ರಮವಾಗದೆ ನಿರಂತರವಾಗಿ ನಡೆಯುವ ನಿರೀಕ್ಷೆ ಮೂಡಿದೆ.

SATS ಮಾಹಿತಿ ಅಪ್‌ಡೇಟ್‌ ಸವಾಲು

ಆದರೆ ಯೋಜನೆ ಅನುಷ್ಠಾನಕ್ಕೆ ವಿದ್ಯಾರ್ಥಿಗಳ ನಿಖರ ಸಂಖ್ಯೆಯೇ ಪ್ರಮುಖ ಆಧಾರವಾಗಿದ್ದು, SATS ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಮಾಹಿತಿ ಅಪ್‌ಡೇಟ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೊಸ ಪ್ರವೇಶ, ಶಾಲೆ ಬದಲಾವಣೆ ಸೇರಿದಂತೆ ಹಲವು ಕಾರಣಗಳಿಂದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಬದಲಾವಣೆಯಾಗಿರುವುದರಿಂದ ಅಂತಿಮ ಪಟ್ಟಿ ಸಿದ್ಧಪಡಿಸುವುದು ಸವಾಲಾಗಿದೆ.

ಸೆಪ್ಟೆಂಬರ್ 5ರೊಳಗೆ ಮಾಹಿತಿ ನವೀಕರಣ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ನಂತರ ಸಂಜೆ ಸ್ನ್ಯಾಕ್ಸ್ ವಿತರಣೆಗೆ ವೇಗ ಸಿಗುವ ಸಾಧ್ಯತೆಯಿದೆ.

ಶಿಕ್ಷಕರಿಗೆ ಹೆಚ್ಚುವರಿ ಹೊರೆ?

ಯೋಜನೆಯ ಉದ್ದೇಶ ಉತ್ತಮವಾಗಿದ್ದರೂ, ಅನುಷ್ಠಾನದ ಹೊಣೆಗಾರಿಕೆ ಶಿಕ್ಷಕರ ಮೇಲೆಯೇ ಹೆಚ್ಚಾಗುವ ಆತಂಕವೂ ವ್ಯಕ್ತವಾಗಿದೆ. ಈಗಾಗಲೇ ಎಐ ಹಾಜರಾತಿ, ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು ಹಾಗೂ ವಿವಿಧ ಡಿಜಿಟಲ್ ದಾಖಲೆಗಳ ನಿರ್ವಹಣೆಯಲ್ಲಿ ಶಿಕ್ಷಕರು ನಿರತರಾಗಿದ್ದಾರೆ. ನೆಟ್‌ವರ್ಕ್ ಸಮಸ್ಯೆಯೂ ಕೆಲವೊಮ್ಮೆ ತೊಂದರೆ ನೀಡುತ್ತಿದೆ.

ಶಾಲೆ ಮುಗಿಯುವ ವೇಳೆಯಲ್ಲಿ ಸ್ನ್ಯಾಕ್ಸ್ ವಿತರಣೆ, ದಾಖಲಾತಿ ಮತ್ತು ಮೇಲ್ವಿಚಾರಣೆ ಮತ್ತೊಂದು ಜವಾಬ್ದಾರಿಯಾಗಬಹುದು ಎಂಬುದು ಶಿಕ್ಷಕರ ಅಭಿಪ್ರಾಯ. ಹೀಗಾಗಿ ಮಕ್ಕಳಿಗೆ ಪೌಷ್ಟಿಕ ಆಹಾರ ತಲುಪಿಸುವ ಯೋಜನೆಯ ಜತೆಗೆ ಶಿಕ್ಷಕರ ಮೇಲಿನ ಆಡಳಿತಾತ್ಮಕ ಒತ್ತಡ ಕಡಿಮೆ ಮಾಡುವ ವ್ಯವಸ್ಥೆಯೂ ಅಗತ್ಯವಾಗಿದೆ.

ವಾರದ ಆರು ದಿನಗಳಲ್ಲಿ ವಿವಿಧ ಪೌಷ್ಟಿಕ ತಿನಿಸುಗಳು ಹಾಗೂ ಶನಿವಾರ ಹಣ್ಣು ವಿತರಿಸುವ ಉದ್ದೇಶವಿದ್ದು, ಸರಕಾರದ ಅಂತಿಮ ಸೂಚನೆ ಬಂದ ಬಳಿಕ ಯೋಜನೆಗೆ ಚಾಲನೆ ಸಿಗಲಿದೆ.

Continue Reading

ಕ್ರೀಡೆ

ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ

Published

on

ಬರಿಗಾಲಿನ ಓಟದಲ್ಲಿ ಗೆದ್ದ ತಾಯಿ: ಮಕ್ಕಳ ಭವಿಷ್ಯಕ್ಕಾಗಿ ನೋವನ್ನೇ ಮರೆತ ರಮಾಬಾಯಿಯ ಸ್ಫೂರ್ತಿಗಾಥೆ

ಸುದ್ದಿದಿನ,ಮುಂಬಯಿ: ಬದುಕಿನಲ್ಲಿ ಎದುರಾಗುವ ಸಂಕಷ್ಟಗಳು ಕೆಲವೊಮ್ಮೆ ಮನುಷ್ಯನನ್ನು ಕುಗ್ಗಿಸುತ್ತವೆ. ಆದರೆ ತಾಯಿಯೊಬ್ಬಳಿಗೆ ಮಕ್ಕಳ ಭವಿಷ್ಯದ ಕನಸು ದೊಡ್ಡದಾಗಿದ್ದರೆ, ಆಕೆಯ ಮುಂದೆ ನೋವು, ಬಡತನ, ಅಡೆತಡೆ ಯಾವುದೂ ನಿಲ್ಲುವುದಿಲ್ಲ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಾಜೋಗೈನ 47 ವರ್ಷದ ರಮಾಬಾಯಿ ರಣವೀರ್ ಅವರ ಕಥೆ ಇದಕ್ಕೆ ಜೀವಂತ ಸಾಕ್ಷಿಯಾಗಿದೆ. ಪತಿಯ ಅಕಾಲಿಕ ಅಗಲಿಕೆಯ ಬಳಿಕ ಇಬ್ಬರು ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಹೋರಾಟ ನಡೆಸುತ್ತಿರುವ ರಮಾಬಾಯಿ, ಬರಿಗಾಲಿನಲ್ಲಿ ಮ್ಯಾರಥಾನ್ ಓಡಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

http://Visit : www.suddidina.com

ಕೂಲಿ ಕೆಲಸದಿಂದ ಅಡುಗೆ ಕೆಲಸದವರೆಗೆ

ಮುಂಬಯಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡ ಬಳಿಕ ರಮಾಬಾಯಿ ಕುಟುಂಬದ ಜವಾಬ್ದಾರಿಯನ್ನು ಸಂಪೂರ್ಣವಾಗಿ ತಮ್ಮ ಹೆಗಲ ಮೇಲೆ ಹೊತ್ತರು. ಗದ್ದೆಗಳಲ್ಲಿ ಕೂಲಿ ಕೆಲಸ ಮಾಡುತ್ತಾ ಮಕ್ಕಳನ್ನು ಬೆಳೆಸಿದ ಅವರು, ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಅಂಬಾಜೋಗೈನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವೊಂದರಲ್ಲಿ ಅಡುಗೆ ಕೆಲಸಕ್ಕೂ ಸೇರಿದರು.

ದಿನವಿಡೀ ಅಡುಗೆ ಮಾಡುವುದು, ಪಾತ್ರೆ ತೊಳೆಯುವುದು ಸೇರಿದಂತೆ ದುಡಿಮೆಯ ನಡುವೆಯೂ ಅವರ ಮನಸ್ಸಿನಲ್ಲಿದ್ದದ್ದು ಒಂದೇ ಕನಸು—ತಮ್ಮ ಇಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಸ್ವಾವಲಂಬಿಗಳನ್ನಾಗಿ ಮಾಡುವುದು.

₹3 ಸಾವಿರಕ್ಕಾಗಿ ಆರಂಭವಾದ ಓಟ

ಮಕ್ಕಳ ವಿದ್ಯಾಭ್ಯಾಸದ ಅಗತ್ಯಕ್ಕೆ ಪುಸ್ತಕಗಳನ್ನು ಖರೀದಿಸಲು ಹಣ ಬೇಕಾಗಿತ್ತು. ಇದೇ ಸಂದರ್ಭದಲ್ಲಿ ‘ಅಮೃತ್ ದೌಡ್’ ಮ್ಯಾರಥಾನ್ ಕುರಿತು ಅವರಿಗೆ ಮಾಹಿತಿ ದೊರೆಯಿತು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ₹3 ಸಾವಿರ ನೀಡಲಾಗುತ್ತದೆ ಎಂಬುದು ತಿಳಿದ ತಕ್ಷಣ ರಮಾಬಾಯಿ ಓಟದಲ್ಲಿ ಭಾಗವಹಿಸಲು ನಿರ್ಧರಿಸಿದರು.

ಯುವಕರು ಟ್ರ್ಯಾಕ್‌ಸೂಟ್ ಮತ್ತು ಶೂ ಧರಿಸಿ ಓಟಕ್ಕೆ ಸಜ್ಜಾಗಿದ್ದರೆ, ರಮಾಬಾಯಿ ಮಾತ್ರ ಸಾಮಾನ್ಯ ಸೀರೆಯಲ್ಲೇ ಸ್ಪರ್ಧೆಯ ಕಣಕ್ಕಿಳಿದರು. ಆರಂಭದಲ್ಲಿ ಕಾಲಿಗೆ ಚಪ್ಪಲಿ ಇದ್ದರೂ ಓಟದ ವೇಗ ಹೆಚ್ಚಾದಂತೆ ಅದು ಜಾರಲಾರಂಭಿಸಿತು.

ಚಪ್ಪಲಿ ಬಿಟ್ಟು ಬರಿಗಾಲಿನಲ್ಲಿ ಓಟ

ಗುರಿ ಮುಟ್ಟಬೇಕೆಂಬ ಛಲದ ಮುಂದೆ ಚಪ್ಪಲಿ ಅಡ್ಡಿಯಾಗಬಾರದು ಎಂದು ನಿರ್ಧರಿಸಿದ ರಮಾಬಾಯಿ, ಚಪ್ಪಲಿಯನ್ನು ಕೈಗೆತ್ತಿಕೊಂಡು ಬರಿಗಾಲಿನಲ್ಲೇ ಓಡತೊಡಗಿದರು. ರಸ್ತೆಯ ಕಲ್ಲು-ಮುಳ್ಳುಗಳು ಕಾಲಿಗೆ ಚುಚ್ಚಿದರೂ ಅವರು ಓಟ ನಿಲ್ಲಿಸಲಿಲ್ಲ.

ಸೀರೆಯ ಅಂಚನ್ನು ಸರಿಪಡಿಸಿಕೊಳ್ಳುತ್ತಾ, ನೋವನ್ನು ಮರೆತು ಗುರಿಯತ್ತ ಮುನ್ನುಗ್ಗಿದ ಅವರು ಎಲ್ಲ ಸ್ಪರ್ಧಿಗಳನ್ನು ಹಿಂದಿಕ್ಕಿ ಮೊದಲಿಗರಾಗಿ ಫಿನಿಶ್ ಲೈನ್ ತಲುಪಿದರು. ಈ ಗೆಲುವಿನ ಹಿಂದೆ ಬಹುಮಾನದ ಹಣಕ್ಕಿಂತಲೂ ದೊಡ್ಡದಾದ ಒಂದು ಕನಸು—ಮಕ್ಕಳ ಭವಿಷ್ಯ—ಇತ್ತು.

ತಾಯಿಯ ಹಾದಿಯಲ್ಲೇ ಮಗಳ ಗೆಲುವು

ಈ ಮ್ಯಾರಥಾನ್‌ನಲ್ಲಿ ರಮಾಬಾಯಿಯ ಮಗಳು ಪೂಜಾ ಕೂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುವುದು ವಿಶೇಷ. ತಾಯಿಯ ಪರಿಶ್ರಮದಿಂದ ಪ್ರೇರಣೆ ಪಡೆದ ಪೂಜಾ, ಭವಿಷ್ಯದಲ್ಲಿ ಪೊಲೀಸ್ ಅಧಿಕಾರಿಯಾಗುವ ಸಂಕಲ್ಪ ಮಾಡಿದ್ದಾರೆ. ಮತ್ತೊಬ್ಬ ಮಗಳು ಬ್ಯಾಂಕಿಂಗ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ಪೂಜಾಳ ಪರಿಶ್ರಮ ಮತ್ತು ರಮಾಬಾಯಿಯ ತ್ಯಾಗವನ್ನು ಗಮನಿಸಿದ ತರಬೇತಿ ಅಕಾಡೆಮಿಯ ನಿರ್ದೇಶಕರು ಪೂಜಾಳ ಶಿಕ್ಷಣ ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡಿದ್ದಾರೆ. ಹೀಗಾಗಿ ಒಂದು ಮ್ಯಾರಥಾನ್ ಗೆಲುವು ಕೇವಲ ₹3 ಸಾವಿರದ ಬಹುಮಾನಕ್ಕೆ ಸೀಮಿತವಾಗದೆ, ಕುಟುಂಬದ ಭವಿಷ್ಯಕ್ಕೆ ಹೊಸ ಆಶಾಕಿರಣವನ್ನೇ ಮೂಡಿಸಿದೆ.

Continue Reading

Trending