Connect with us

ದಿನದ ಸುದ್ದಿ

ನ್ಯೂಸ್ ಚಾನೆಲ್ ಬಗ್ಗೆ ಸ್ಪಷ್ಟನೆ ಕೊಡ್ತಾರಾ ಬಿ ವೈ ವಿಜಯೇಂದ್ರ, ರವಿಕುಮಾರ್ ?

Published

on

ಬಿ ವೈ ವಿಜಯೇಂದ್ರ ಮಾಲಕತ್ವದ ನ್ಯೂಸ್ ಫಸ್ಟ್ ಸುದ್ದಿ ವಾಹಿನಿ ಲೋಕಾರ್ಪಣೆಯಾಗುತ್ತಿದೆ ಎಂದು ನಮ್ಮ ವೆಬ್ ಮೀಡಿಯಾ ಬಹಿರಂಗಗೊಳಿಸಿತ್ತು. ಇದು ಮಿಡಿಯಾದಲ್ಲಿ ಪ್ರಸಾರವಾಗಿದ್ದು ಎಕ್ಸ್ ಕ್ಲೂಸಿವ್ ಆದರೂ ಕೂಡಾ ಪತ್ರಕರ್ತರ ಪಡಸಾಲೆಗೆ ಹೊಸಾ ಸುದ್ದಿಯೇನೂ ಅಲ್ಲ.

ಪತ್ರಕರ್ತರ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ಬಿ ವೈ ವಿಜಯೇಂದ್ರ ಮಾಲಕತ್ವದ ನ್ಯೂಸ್ ಫಸ್ಟ್ ಸುದ್ದಿ ಪ್ರಕಟಗೊಳ್ಳುತ್ತಿದ್ದಂತೆ ವ್ಯಾಪಕ ಪ್ರತಿಕ್ರಿಯೆಗಳು ಬರುತ್ತಿದೆ. ಒಂದು ಮಾಧ್ಯಮವಾಗಿ ಎಲ್ಲಾ ಪ್ರತಿಕ್ರಿಯೆಗಳನ್ನು ಸುದ್ದಿದಿನ.ಕಾಂ ಸಕಾರಾತ್ಮಕವಾಗಿ ಸ್ವೀಕರಿಸುತ್ತದೆ.

ಬಿ ವೈ ವಿಜಯೇಂದ್ರ ಕರ್ನಾಟಕದ ಮೊದಲ ಸಾಲಿನ ರಾಜಕಾರಣಿ. ಮುಖ್ಯಮಂತ್ರಿ ಪುತ್ರರಾಗಿರುವ ವಿಜಯೇಂದ್ರ ನ್ಯೂಸ್ ಚಾನೆಲ್ ವೊಂದಕ್ಕೆ ಹಣ ಹೂಡಿಕೆ ಮಾಡಿದ್ದಾರೆ ಎಂದರೆ ಅದೊಂದು ಸುದ್ದಿಯಾಗಿ ಮುಖ್ಯವಾಗುತ್ತದೆ. ಜನರ ಬಾಯಲ್ಲಿರುವ ಈ ಸುದ್ದಿಗೆ ಪ್ರತಿಕ್ರಿಯೆ ಕೊಡಬೇಕಿರೋದು ಬಿ ವೈ ವಿಜಯೇಂದ್ರರೇ ಹೊರತು ಇನ್ಯಾರೋ ಅಲ್ಲ. ಬಿ ವೈ ವಿಜಯೇಂದ್ರ ಹಣ ಹೂಡಿಕೆ ಮಾಡಿಲ್ಲ ಅಂತ ಯಾರು ಯಾರೋ ದೂರವಾಣಿ ಕರೆಗಳನ್ನು ಮಾಡುತ್ತಿದ್ದಾರೆ. ಅದನ್ನು ಹೇಳಬೇಕಿರೋದು ಬಿ ವೈ ವಿಜಯೇಂದ್ರ ಮತ್ತು ಬಿ ವೈ ವಿಜಯೇಂದ್ರ ಮಾತ್ರ.

ನ್ಯೂಸ್ ಫಸ್ಟ್ ಚಾನೆಲ್ ಹಲವು ವರ್ಷಗಳಿಂದ ಇಂದು ಬರುತ್ತೆ, ನಾಳೆ ಬರುತ್ತೆ ಎಂಬ ನಿರೀಕ್ಷೆಗಳನ್ನು ಹುಟ್ಟಿಸಿತ್ತು. ನ್ಯೂಸ್ ಫಸ್ಟ್ ಅನುಭವಿಸಿದ ತೊಂದರೆಗಳು, ಎದುರಿಸಿದ ಸವಾಲುಗಳೇ ಭವಿಷ್ಯದ ಪತ್ರಿಕೋಧ್ಯಮಿಗಳಿಗೆ ಪಾಠದಂತಿದೆ. ಈಗ ನ್ಯೂಸ್ ಫಸ್ಟ್ ಚಾನೆಲ್ ಲೋಕಾರ್ಪಣೆಗೊಳ್ಳುವ ಸಂಧರ್ಭದಲ್ಲಿ ಬಿ ವೈ ವಿಜಯೇಂದ್ರ ಹೂಡಿಕೆ ಸದ್ದು ಮಾಡ್ತಿದೆ.

ವಿಜಯೇಂದ್ರ ಹೂಡಿಕೆ ಮಾಡುವುದು ತಪ್ಪೇನಲ್ಲ. ನೇರ ಹೂಡಿಕೆಯೋ, ಪರೋಕ್ಷ ಹೂಡಿಕೆಯೋ ಎಂಬ ಪ್ರಶ್ನೆಗಳೂ ಬರುತ್ತದೆ. ಮಾಧ್ಯಮಗಳು ಜನರಿಗೆ ಉತ್ತರದಾಯಿಯಾಗಿರಬೇಕು ಎಂದು ನ್ಯೂಸ್ ಫಸ್ಟ್ ಸಂಸ್ಥಾಪಕ, ಹಿರಿಯ ಪತ್ರಕರ್ತ ರವಿಕುಮಾರ್ ಅಗಾಧವಾಗಿ ನಂಬಿದವರು. ಈಗ ರವಿಕುಮಾರ್ ಸರ್ ಈ ಬಗ್ಗೆ ಸ್ಪಷ್ಟನೆ ಕೊಡುತ್ತಾರೆ ಎಂದು ನಂಬಿದ್ದೇವೆ.

ಓದುಗರು ತಮ್ಮ ಅನಿಸಿಕೆಯನ್ನು ಪ್ರತಿಕ್ರಿಯೆ ವಿಭಾಗದಲ್ಲಿ ನಮೂದಿಸಬೇಕೇ ಹೊರತು ತಮ್ಮ ಅಭಿಪ್ರಾಯವನ್ನು ಸುದ್ದಿದಿನ.ಕಾಂ ಮೇಲೆ ಕರೆ ಮಾಡಿ ಹೇರಬಾರದು. ಪತ್ರಕರ್ತ ರವಿಕುಮಾರ್ ಸರ್ ಮತ್ತು ಬಿ ವೈ ವಿಜಯೇಂದ್ರ ಅವರ ಎಲ್ಲಾ ರೀತಿಯ ಸ್ಪಷ್ಟನೆಗಳನ್ನು ಪ್ರಕಟಿಸಲು ಸುದ್ದಿದಿನ.ಕಾಂ ಸಿದ್ದವಿದೆ ಎಂದು ತಿಳಿಸಲು ಬಯಸುತ್ತೇವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending