ರಾಜಕೀಯ
ಶತದಿನ ಪೂರೈಸಿದ ರಾಜ್ಯ ಸರ್ಕಾರ: ಗಾಲಿ ಜನಾರ್ದನ ರೆಡ್ಡಿ ಹೇಳಿದ್ದೇನು ಗೊತ್ತಾ ?
ಸುದ್ದಿದಿನ, ಹುಬ್ಬಳ್ಳಿ: ಜಿಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ರಾಜ್ಯ ಸಮ್ಮೀಶ್ರ ಸರ್ಕಾರ ಶತದಿನ ಪೂರೈಸಿರುವ ಕುರಿತು ಗಾಲಿ ಜನಾರ್ದನ ರೆಡ್ಡಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸಿ.ಎಂ. ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ನೂರು ದಿನ ಪೂರೈಸಿದೆ. ರಾಜ್ಯದ ಜನ ಅವರ ಅಧಿಕಾರದ ಶೈಲಿಯನ್ನು ನೋಡಿದ್ದಾರೆ. ಇನ್ನು ಸ್ವಲ್ಪ ದಿನಗಳ ಕಾಲ ಅವಕಾಶ ಕೊಟ್ಟು ನೋಡೋಣ. ಇದೇ ಸ್ಥಿತಿ ಮುಂದುವರಿದರೆ ಅವರಿಗೆ ತಕ್ಕ ಉತ್ತರ ಸಿಗಲಿದೆ ಎಂದರು.
ಕಳೆದ ಚುನಾವಣೆಯಲ್ಲಿಯೇ ಕಾರಣಾಂತರಗಳಿಂದ ಬಜೆಪಿಗೆ ಅಧಿಕಾರ ಕೈ ತಪ್ಪಿದೆ. ಮುಂದೆ ಕಾಲವೇ ಇದಕ್ಕೆ ಉತ್ತರ ನೀಡಲಿದೆ ಎಂದು ಗಾಲಿ ಜನಾರ್ದನ ರೆಡ್ಡಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ
ಹೇಳಿಕೆ ನೀಡಿದ್ದಾರೆ.
ನಮ್ಮದು ಜನ ಸ್ನೇಹಿ ಸರ್ಕಾರ : ಡಿ.ಕೆ.ಶಿ
ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿಯ ಅಸಮಾಧಾನ
ರಾಜ್ಯ ಸಮ್ಮಿಶ್ರ ಸರ್ಕಾರ ರಚನೆಯಾದ ಆರಂಭದಿಂದಲೂ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕುತ್ತಾ ಬಂದಿದ್ದಾರೆ. ಈಗ ರಾಜ್ಯ ಸಮ್ಮಿಶ್ರ ಸರ್ಕಾರ ನೂರು ದಿನ ಪೂರೈಸಿದ್ದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಆಪಾದಿಸುತ್ತಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ಒಳಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿವೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಎಂದು ದೂರುತ್ತಿದ್ದಾರೆ.
ಲೋಕಾಸಭೆ ಚುನಾವಣೆ : ಟಿಕೆಟ್ ಗಾಗಿ ಗದ್ದಲ ಮಾಡ್ಕೊಬೇಡಿ : ಡಿಕೆಶಿ ಸೂಚನೆ