ದಿನದ ಸುದ್ದಿ
ಶ್ರೀ ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ ; ಕನಸು ನನಸಾದ ಸಂಭ್ರಮಕ್ಕೆ ಕಾರಣವಾದ ಸರಕಾರಕ್ಕೆ ಅಭಿನಂದನೆ : ಎಂ.ಜಿ.ಶಶಿಕಲಾಮೂರ್ತಿ
ಶ್ರೀ ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ ಕುರಿತು ಅಧಿಕೃತ ಆದೇಶ ಹೊರಡಿಸಿದ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ ಬೊಮ್ಮಾಯಿಯವರಿಗೆ ಗಾನಯೋಗಿ ಸಂಗೀತ ಪರಿಷತ್ ಗದಗ ಡಾ. ಪಂ.ಪುಟ್ಟರಾಜ ಸೇವಾ ಸಮಿತಿ ಗದಗ ಮತ್ತು ಕಲಾ ವಿಕಾಸ ಪರಿಷತ್ ಗದಗ ಹಾಗೂ ಸರ್ವ ಪದಾಧಿಕಾರಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು.
ಮಾನ್ಯ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಗಳಾಗಿದ್ದಾಗ 14-03-2000ನೇ ಇಸ್ವಿಯಲ್ಲಿ ಕಲಾ ವಿಕಾಸ ಪರಿಷತ್ ನ ಕಾರ್ಯಾಧ್ಯಕ್ಷನಾಗಿ ಮನವಿ ಸಲ್ಲಿಸಿದ್ದೇವು ನೆನೆಗುದಿಗೆ ಬಿದ್ದ ನಮ್ಮ ಬೇಡಿಕೆಗೆ ನಾವು ಖುದ್ದಾಗಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ದಿನವೇ 20ವರ್ಷದ ಬೇಡಿಕೆಗೆ ಕೇವಲ 20 ನಿಮಿಷದಲ್ಲಿ ಪ್ರಶಸ್ತಿ ಸ್ಥಾಪನೆಗೆ ಚಾಲನೆ ನೀಡಿದ್ದಕ್ಕೆ ಮತ್ತು ಈ ಪ್ರಶಸ್ತಿ ಅಸ್ತಿತ್ವಕ್ಕೆ ಕ್ರಮ ಕೈಗೊಳ್ಳಲು ಮತ್ತು ಪ್ರಾಸ್ತಾವನೆ ಮಂಡಿಸಲು ಸೂಚಿಸಿ ಪ್ರಶಸ್ತಿ ಸ್ಥಾಪನೆಗೆ ಮುನ್ನುಡಿ ಬರೆದ ಅಂದಿನ ಮುಖ್ಯಮಂತ್ರಿ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪನವರಿಗೆ ಮೊಟ್ಟಮೊದಲು ಅಭಿನಂದಿಸಲೇಬೇಕು.
ನಮ್ಮ ಆಶಯದಂತೆ 10 ಲಕ್ಷ ನಗದು ಸ್ಮರಣಿಕೆ ನೀಡಿ ರಾಷ್ಟ್ರೀಯ ಮಟ್ಟದ ಉತ್ತರಾಧಿ ಮತ್ತು ದಕ್ಷಿಣಾದಿ ಗಾಯಕರಿಗೆ ಈ ಪ್ರಶಸ್ತಿ ನೀಡಲು ಕೇಳಿಕೊಳ್ಳಲಾಗಿತ್ತು. ಗಾನಯೋಗಿ ಪಂಚಾಕ್ಷರಿ ಗವಾಯಿಗಳು ಉಭಯ ಗಾಯನದ ಮೇಲೆ ಸಮಾನ ಪ್ರಭುತ್ವ ಹೊಂದಿದ್ದರು ಈ ಕಾರಣಕ್ಕೆ ಒಂದು ಬಾರಿ ಉತ್ತರಾದಿ ಸಂಗೀತ ಕಲಾವಿದರಿಗೆ ಒಂದು ಬಾರಿ ದಕ್ಷಿಣಾದಿ ಸಂಗೀತ ಕಲಾವಿದರಿಗೆ ನೀಡಲು ಮನವಿ ಮಾಡಿಕೊಳ್ಳಲಾಗಿತ್ತು. ಮರೆತು ಹೋದ ವಿಷಯಕ್ಕೆ 31-12-2020 ರಂದು ಮನವಿ ಪತ್ರ ಅಂಚೆಯ ಮೂಲಕ ಮುಖ್ಯ ಮಣತ್ರಿಯವರಿಗೆ ಕಳಿಸಿಕೊಟ್ಟು ಅಂದಿನ ಗೃಹ ಸಚಿವರಾಗಿದ್ದ ಮಾನ್ಯ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಪತ್ರದ ಪ್ರತಿ ನೀಡಿ ಮುಖ್ಯ ಮಂತ್ರಿ ಯಡಿಯೂರಪ್ಪನವರಿಗೆ ಮನ ಒಲಿಸಲು ವಿನಂತಿಸಿಕೊಂಡು ಹೋರಾಟಕ್ಕೆ ಚಾಲನೆ ನೀಡಲಾಯಿತು.
ನಮ್ಮ ಜೊತೆ ಗುರು ಬಂಧು ಕಲಾವಿದ ಸದಾಶಿವ ಪಾಟೀಲ ಕೊಪ್ಪಳ, ಪ್ರೊ. ಚಂದ್ರಶೇಖರ ವಸ್ತ್ರದ, ಮೊದಲಾದವರೊಂದಿಗೆ ಈ ಹೋರಾಟಕ್ಕೆ ನಿರಂತರವಾಗಿ ಬೆಂಬಲಕ್ಕೆ ನಿಂತವರು ಬಹುಜನರಾಗಿದ್ದರೂ ಕೂಡಾ, ಆತ್ಮೀಯರಾದ ಸಹೋದರ ಹೇಮರಾಜ ಶಾಸ್ತ್ರಿ ಹೇಡಿಗ್ಗೊಂಡ ಹುಬ್ಬಳ್ಳಿ, ಕೆಂಭಾವಿ ಶ್ರೀಗಳು, ಎಂ. ಜಿ. ಶಶಿಕಲಾ ಮೂರ್ತಿ ದಾವಣಗೆರೆ, ಮಂಜುಶ್ರೀ ಹಾವಣ್ಣವರ ಬೆಳಗಾವಿ ಇವರೆಲ್ಲರೂ ತಮ್ಮದೇ ಯಾದ ಸೇವೆ ಸಲ್ಲಿಸಿದ್ದಾರೆ. ನಮ್ಮ ಹೋರಾಟಕ್ಕೆ ಆಶೀರ್ವದಿಸಿ ಪೂಜ್ಯ ಕಲ್ಲಯ್ಯ ಅಜ್ಜನವರಿಗೆ, ಸಾಣೇಹಳ್ಳಿ ಶ್ರೀಗಳಾದಿಯಾಗಿ ಅನೇಕ ಸ್ವಾಮಿಜೀಗಳು ಅನೇಕ ಸಂದರ್ಭದಲ್ಲಿ ನಮ್ಮ ಬೇಡಿಕೆಗಳಿಗೆ ಬೆಂಬಲಿಸಿ ಸರಕಾರಕ್ಕೆ ಒತ್ತಾಯಿಸಿದ್ದಾರೆ ಅವರಿಗೂ ನಾವು ಪ್ರಣಾಮಗಳು ಸಲ್ಲಿಸುತ್ತಿದ್ದೇವೆ.
ಈ ಪ್ರಶಸ್ತಿಗೆ ಮೊದಲು ಮನವಿಸಲ್ಲಿಸಿದ್ದ ಕಲಾವಿಕಾಸ ಪರಿಷತ್ ಗದಗ, ಗಾನಯೋಗಿ ಸಂಗೀತ ಪರಿಷತ್ ಗದಗ ಮತ್ತು ಪುಟ್ಟರಾಜ ಸೇವಾ ಸಮಿತಿ ಗದಗನ ತಾಲೂಕಾ ಜಿಲ್ಲಾ ಘಟಕಗಳ ಪದಾಧಿಕಾರಿಗಳಿಗೆ ಮತ್ತು ಪರೋಕ್ಷವಾಗಿ ಅಪರೋಕ್ಷವಾಗಿ ಬೆಂಬಲಿಸಿದ ಸಂಘ ಸಂಸ್ಥೆಗಳಿಗೆ ಮತ್ತು ವೀರೇಶ್ವರ ಪುಣ್ಯಾಶ್ರಮದ ಗುರು ಬಂಧುಗಳಿಗೆ ಧನ್ಯವಾದಗಳು. ನಾವು ಸಲ್ಲಿಸಿದ ಮನವಿಗಳ ಕುರಿತು ಸಾರ್ವಜನಿಕರಿಗೆ ತಲುಪಿಸಿದ ರಾಜ್ಯದ ಎಲ್ಲಾ ಪತ್ರಿಕೆಗಳಿಗೆ ಧನ್ಯವಾದ ಹೇಳುತ್ತೇವೆ.
ಇದೆ ಮನವಿಯೊಂದಿಗೆ ಶಿವಯೋಗಿ ಪುಟ್ಟರಾಜ ಗುರುಗಳ ಹುಟ್ಟು ಹಬ್ಬವನ್ನು ಸರಕಾರವೇ ಆಚರಿಸ ಬೇಕು ಮತ್ತು ಗುರು ಕುಮಾರ ಪಂಚಾಕ್ಷರಿ ಟ್ರಸ್ಟ್ ಸ್ಥಾಪನೆ ಕುರಿತು ಕೂಡಾ ಮನವಿ ಮಾಡಲಾಗಿತ್ತು. ಆದರೆ ಅವುಗಳ ಕುರಿತು ಮಾಹಿತಿ ಇಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ದಿನಾಂಕ 10-08-2021ರಂದು (ಪತ್ರ ಸಂಖ್ಯೆ ಡಿಕೆಸಿ-11031/7/2021) ರಚಿಸಿ ಸರಕಾರಕ್ಕೆ ಸಲ್ಲಿಸಿದ ಮಾರ್ಗ ಸೂಚಿಯಲ್ಲಿ ಶಿವಯೋಗಿ ಪುಟ್ಟರಾಜರ ಜಯಂತಿ ಕುರಿತು ಪ್ರಸ್ತಾಪಿಸಲಾಗಿದೆ ಆದರೆ ಅಧಿಕೃತ ಘೋಷಣೆ ಮಾಡಿರುವುದಿಲ್ಲ ಇದಕ್ಕಾಗಿ ನಮ್ಮ ಹೋರಾಟ ಮುಂದುವರೆಯುತ್ತದೆ.
| ಎಂ.ಜಿ. ಶಶಿಕಲಾಮೂರ್ತಿ ನಲ್ಕುದುರೆ: 9740207007
ರಾಜ್ಯ ಸಂಚಾಲಕಿ
ಗಾನಯೋಗಿ ಸಂಗೀತ ಪರಿಷತ್ ಗದಗ
ಡಾ.ಪಂ.ಪುಟ್ಟರಾಜ ಸೇವಾ ಸಮಿತಿ ಗದಗ ಮತ್ತು ಕಲಾ ವಿಕಾಸ ಪರಿಷತ್ ಗದಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ
ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.
ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.
ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.
ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.
ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.
ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ4 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
-
ದಿನದ ಸುದ್ದಿ5 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ5 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ

