Connect with us

ದಿನದ ಸುದ್ದಿ

ಶ್ರೀ ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ ; ಕನಸು ನನಸಾದ ಸಂಭ್ರಮಕ್ಕೆ ಕಾರಣವಾದ ಸರಕಾರಕ್ಕೆ ಅಭಿನಂದನೆ : ಎಂ.ಜಿ.ಶಶಿಕಲಾಮೂರ್ತಿ

Published

on

ಶ್ರೀ ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ ಕುರಿತು ಅಧಿಕೃತ ಆದೇಶ ಹೊರಡಿಸಿದ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ ಬೊಮ್ಮಾಯಿಯವರಿಗೆ ಗಾನಯೋಗಿ ಸಂಗೀತ ಪರಿಷತ್ ಗದಗ ಡಾ. ಪಂ.ಪುಟ್ಟರಾಜ ಸೇವಾ ಸಮಿತಿ ಗದಗ ಮತ್ತು ಕಲಾ ವಿಕಾಸ ಪರಿಷತ್ ಗದಗ ಹಾಗೂ ಸರ್ವ ಪದಾಧಿಕಾರಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು.

ಮಾನ್ಯ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಗಳಾಗಿದ್ದಾಗ 14-03-2000ನೇ ಇಸ್ವಿಯಲ್ಲಿ ಕಲಾ ವಿಕಾಸ ಪರಿಷತ್ ನ ಕಾರ್ಯಾಧ್ಯಕ್ಷನಾಗಿ ಮನವಿ ಸಲ್ಲಿಸಿದ್ದೇವು ನೆನೆಗುದಿಗೆ ಬಿದ್ದ ನಮ್ಮ ಬೇಡಿಕೆಗೆ ನಾವು ಖುದ್ದಾಗಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ದಿನವೇ 20ವರ್ಷದ ಬೇಡಿಕೆಗೆ ಕೇವಲ 20 ನಿಮಿಷದಲ್ಲಿ ಪ್ರಶಸ್ತಿ ಸ್ಥಾಪನೆಗೆ ಚಾಲನೆ ನೀಡಿದ್ದಕ್ಕೆ ಮತ್ತು ಈ ಪ್ರಶಸ್ತಿ ಅಸ್ತಿತ್ವಕ್ಕೆ ಕ್ರಮ ಕೈಗೊಳ್ಳಲು ಮತ್ತು ಪ್ರಾಸ್ತಾವನೆ ಮಂಡಿಸಲು ಸೂಚಿಸಿ ಪ್ರಶಸ್ತಿ ಸ್ಥಾಪನೆಗೆ ಮುನ್ನುಡಿ ಬರೆದ ಅಂದಿನ ಮುಖ್ಯಮಂತ್ರಿ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪನವರಿಗೆ ಮೊಟ್ಟಮೊದಲು ಅಭಿನಂದಿಸಲೇಬೇಕು.

ನಮ್ಮ ಆಶಯದಂತೆ 10 ಲಕ್ಷ ನಗದು ಸ್ಮರಣಿಕೆ ನೀಡಿ ರಾಷ್ಟ್ರೀಯ ಮಟ್ಟದ ಉತ್ತರಾಧಿ ಮತ್ತು ದಕ್ಷಿಣಾದಿ ಗಾಯಕರಿಗೆ ಈ ಪ್ರಶಸ್ತಿ ನೀಡಲು ಕೇಳಿಕೊಳ್ಳಲಾಗಿತ್ತು. ಗಾನಯೋಗಿ ಪಂಚಾಕ್ಷರಿ ಗವಾಯಿಗಳು ಉಭಯ ಗಾಯನದ ಮೇಲೆ ಸಮಾನ ಪ್ರಭುತ್ವ ಹೊಂದಿದ್ದರು ಈ ಕಾರಣಕ್ಕೆ ಒಂದು ಬಾರಿ ಉತ್ತರಾದಿ ಸಂಗೀತ ಕಲಾವಿದರಿಗೆ ಒಂದು ಬಾರಿ ದಕ್ಷಿಣಾದಿ ಸಂಗೀತ ಕಲಾವಿದರಿಗೆ ನೀಡಲು ಮನವಿ ಮಾಡಿಕೊಳ್ಳಲಾಗಿತ್ತು. ಮರೆತು ಹೋದ ವಿಷಯಕ್ಕೆ 31-12-2020 ರಂದು ಮನವಿ ಪತ್ರ ಅಂಚೆಯ ಮೂಲಕ ಮುಖ್ಯ ಮಣತ್ರಿಯವರಿಗೆ ಕಳಿಸಿಕೊಟ್ಟು ಅಂದಿನ ಗೃಹ ಸಚಿವರಾಗಿದ್ದ ಮಾನ್ಯ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಪತ್ರದ ಪ್ರತಿ ನೀಡಿ ಮುಖ್ಯ ಮಂತ್ರಿ ಯಡಿಯೂರಪ್ಪನವರಿಗೆ ಮನ ಒಲಿಸಲು ವಿನಂತಿಸಿಕೊಂಡು ಹೋರಾಟಕ್ಕೆ ಚಾಲನೆ ನೀಡಲಾಯಿತು.

ನಮ್ಮ ಜೊತೆ ಗುರು ಬಂಧು ಕಲಾವಿದ ಸದಾಶಿವ ಪಾಟೀಲ ಕೊಪ್ಪಳ, ಪ್ರೊ. ಚಂದ್ರಶೇಖರ ವಸ್ತ್ರದ, ಮೊದಲಾದವರೊಂದಿಗೆ ಈ ಹೋರಾಟಕ್ಕೆ ನಿರಂತರವಾಗಿ ಬೆಂಬಲಕ್ಕೆ ನಿಂತವರು ಬಹುಜನರಾಗಿದ್ದರೂ ಕೂಡಾ, ಆತ್ಮೀಯರಾದ ಸಹೋದರ ಹೇಮರಾಜ ಶಾಸ್ತ್ರಿ ಹೇಡಿಗ್ಗೊಂಡ ಹುಬ್ಬಳ್ಳಿ, ಕೆಂಭಾವಿ ಶ್ರೀಗಳು, ಎಂ. ಜಿ. ಶಶಿಕಲಾ ಮೂರ್ತಿ ದಾವಣಗೆರೆ, ಮಂಜುಶ್ರೀ ಹಾವಣ್ಣವರ ಬೆಳಗಾವಿ ಇವರೆಲ್ಲರೂ ತಮ್ಮದೇ ಯಾದ ಸೇವೆ ಸಲ್ಲಿಸಿದ್ದಾರೆ. ನಮ್ಮ ಹೋರಾಟಕ್ಕೆ ಆಶೀರ್ವದಿಸಿ ಪೂಜ್ಯ ಕಲ್ಲಯ್ಯ ಅಜ್ಜನವರಿಗೆ, ಸಾಣೇಹಳ್ಳಿ ಶ್ರೀಗಳಾದಿಯಾಗಿ ಅನೇಕ ಸ್ವಾಮಿಜೀಗಳು ಅನೇಕ ಸಂದರ್ಭದಲ್ಲಿ ನಮ್ಮ ಬೇಡಿಕೆಗಳಿಗೆ ಬೆಂಬಲಿಸಿ ಸರಕಾರಕ್ಕೆ ಒತ್ತಾಯಿಸಿದ್ದಾರೆ ಅವರಿಗೂ ನಾವು ಪ್ರಣಾಮಗಳು ಸಲ್ಲಿಸುತ್ತಿದ್ದೇವೆ.

ಈ ಪ್ರಶಸ್ತಿಗೆ ಮೊದಲು ಮನವಿಸಲ್ಲಿಸಿದ್ದ ಕಲಾವಿಕಾಸ ಪರಿಷತ್ ಗದಗ, ಗಾನಯೋಗಿ ಸಂಗೀತ ಪರಿಷತ್ ಗದಗ ಮತ್ತು ಪುಟ್ಟರಾಜ ಸೇವಾ ಸಮಿತಿ ಗದಗನ ತಾಲೂಕಾ ಜಿಲ್ಲಾ ಘಟಕಗಳ ಪದಾಧಿಕಾರಿಗಳಿಗೆ ಮತ್ತು ಪರೋಕ್ಷವಾಗಿ ಅಪರೋಕ್ಷವಾಗಿ ಬೆಂಬಲಿಸಿದ ಸಂಘ ಸಂಸ್ಥೆಗಳಿಗೆ ಮತ್ತು ವೀರೇಶ್ವರ ಪುಣ್ಯಾಶ್ರಮದ ಗುರು ಬಂಧುಗಳಿಗೆ ಧನ್ಯವಾದಗಳು. ನಾವು ಸಲ್ಲಿಸಿದ ಮನವಿಗಳ ಕುರಿತು ಸಾರ್ವಜನಿಕರಿಗೆ ತಲುಪಿಸಿದ ರಾಜ್ಯದ ಎಲ್ಲಾ ಪತ್ರಿಕೆಗಳಿಗೆ ಧನ್ಯವಾದ ಹೇಳುತ್ತೇವೆ.

ಇದೆ ಮನವಿಯೊಂದಿಗೆ ಶಿವಯೋಗಿ ಪುಟ್ಟರಾಜ ಗುರುಗಳ ಹುಟ್ಟು ಹಬ್ಬವನ್ನು ಸರಕಾರವೇ ಆಚರಿಸ ಬೇಕು ಮತ್ತು ಗುರು ಕುಮಾರ ಪಂಚಾಕ್ಷರಿ ಟ್ರಸ್ಟ್ ಸ್ಥಾಪನೆ ಕುರಿತು ಕೂಡಾ ಮನವಿ ಮಾಡಲಾಗಿತ್ತು. ಆದರೆ ಅವುಗಳ ಕುರಿತು ಮಾಹಿತಿ ಇಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ದಿನಾಂಕ 10-08-2021ರಂದು (ಪತ್ರ ಸಂಖ್ಯೆ ಡಿಕೆಸಿ-11031/7/2021) ರಚಿಸಿ ಸರಕಾರಕ್ಕೆ ಸಲ್ಲಿಸಿದ ಮಾರ್ಗ ಸೂಚಿಯಲ್ಲಿ ಶಿವಯೋಗಿ ಪುಟ್ಟರಾಜರ ಜಯಂತಿ ಕುರಿತು ಪ್ರಸ್ತಾಪಿಸಲಾಗಿದೆ ಆದರೆ ಅಧಿಕೃತ ಘೋಷಣೆ ಮಾಡಿರುವುದಿಲ್ಲ ಇದಕ್ಕಾಗಿ ನಮ್ಮ ಹೋರಾಟ ಮುಂದುವರೆಯುತ್ತದೆ.

| ಎಂ.ಜಿ. ಶಶಿಕಲಾಮೂರ್ತಿ ನಲ್ಕುದುರೆ: 9740207007

ರಾಜ್ಯ ಸಂಚಾಲಕಿ
ಗಾನಯೋಗಿ ಸಂಗೀತ ಪರಿಷತ್ ಗದಗ
ಡಾ.ಪಂ.ಪುಟ್ಟರಾಜ ಸೇವಾ ಸಮಿತಿ ಗದಗ ಮತ್ತು ಕಲಾ ವಿಕಾಸ ಪರಿಷತ್ ಗದಗ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending