ದಿನದ ಸುದ್ದಿ
ಒಬ್ಬರು ಈ ದೇಶದ ಮಹಾತ್ಮ ಇನ್ನೊಬ್ಬರು ಈ ದೇಶದ ಪುಣ್ಯಾತ್ಮ..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/10/gandhi_lal-bahadddur-Shasthri_suddidina.jpg&description=ಒಬ್ಬರು ಈ ದೇಶದ ಮಹಾತ್ಮ ಇನ್ನೊಬ್ಬರು ಈ ದೇಶದ ಪುಣ್ಯಾತ್ಮ..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/10/gandhi_lal-bahadddur-Shasthri_suddidina.jpg&description=ಒಬ್ಬರು ಈ ದೇಶದ ಮಹಾತ್ಮ ಇನ್ನೊಬ್ಬರು ಈ ದೇಶದ ಪುಣ್ಯಾತ್ಮ..!', 'pinterestShare', 'width=750,height=350'); return false;" title="Pin This Post">
- ಕೆ.ಶ್ರೀಧರ್ (ಕೆ.ಸಿರಿ)
ಅಕ್ಟೋಬರ್ ಎರಡು ಎಂದಾಕ್ಷಣ ನಮಗೆ ನೆನಪಾಗುವುದು ನಮಗೆ ಈ ದೇಶದ ಇಬ್ಬರು ವ್ಯಕ್ತಿಗಳು ನೆನಪಿಗೆ ಬರುತ್ತಾರೆ. ಒಬ್ಬರು ಈ ನಮ್ಮ ಭಾರತ ದೇಶವಷ್ಟೇ ಅಲ್ಲದೇ ಇಡೀ ವಿಶ್ವವನ್ನೇ ತನ್ನ ಅಹಿಂಸಾತ್ಮಕ ಮಾರ್ಗದ ಮೂಲಕ ಎದುರಿದ್ದವರ ಎದುರಾಳಿಗಳಲ್ಲಿ ನಡುಕ ಹುಟ್ಟಿಸಿದವರು ಮತ್ತು ತಮ್ಮ ಸಿದ್ದಾಂತಗಳ ಮೂಲಕ ತಮ್ಮತ್ತ ಸೆಳೆದವರು.
ಇನ್ನೂ ಲಾಲ್ ಬಹದ್ದೂರ್ ಶಾಸ್ತ್ರಿಯವರು ಇಡೀ ದೇಶಕ್ಕೆ ತಮ್ಮ ಪ್ರಾಮಾಣಿಕ ಮತ್ತು ಸರಳಾತ್ಮಕ ವ್ಯಕ್ತಿತ್ವದ ಮೂಲಕ ಸೆಳೆದವರು. ನಾಳೆ ಈ ಇಬ್ಬರು ಮಹಾನ್ ವ್ಯಕ್ತಿಗಳ ಜಯಂತಿ ಇಡೀ ಭಾರತವೇ ಈ ಮಹಾನ್ ಚೇತನಗಳ ಜಯಂತಿಯನ್ನು ತುಂಬಾ ಅರ್ಥಪೂರ್ಣವಾಗಿ ಆಚರಿಸುತ್ತದೆ.
ವಿಶೇಷವಾಗಿ ಇಂತಹ ಮಹಾನ್ ಚೇತನಗಳ ಜಯಂತಿಗಳು ಬಂದರೆ ಸಾಕು ನನಗೆ ನೆನಪಾಗುವುದು ನಮ್ಮ ಬಾಲ್ಯ ದಿನದ ಆ ಶಾಲಾ ದಿನಗಳು.ಶಾಲಾ ದಿನಗಳಲ್ಲಿ ಅದರಲ್ಲೂ ವಿಶೇಷವಾಗಿ ಪ್ರಾಥಮಿಕ ಶಾಲಾ ದಿನಗಳು ನೆನಪಾಗುತ್ತವೆ. ನಮ್ಮ ಶಾಲಾ ಶಿಕ್ಷಕರು ಜಯಂತಿಯ ವಿಶೇಷವಾಗಿ ಆಶುಭಾಷಣ ಸ್ಪರ್ಧೆಯನ್ನು ಏರ್ಪಡಿಸುತ್ತಿದ್ದರು ಈ ಮೂಲಕ ಇಂತಹ ಮಹಾನ್ ಚೇತನಗಳ ಅಭೂತಪೂರ್ವ ವ್ಯಕ್ತಿತ್ವದ ಪರಿಚಯ ನಮಗಾಗುತ್ತಿತ್ತು.
ಜಯಂತಿಗಳು ಆರಂಭವಾಗುವ ವಾರಕ್ಕೂ ಮೊದಲೆ ವಿಶೇಷ ಚಟುವಟಿಕೆಗಳ ತಯಾರಿ ಬಲು ಜೋರಿರುತ್ತಿತ್ತು. ನಮಗಂತೂ ಕುತೂಹಲವೋ ಕುತೂಹಲ ದಿನ ಸಂಜೆ ಸ್ಕೂಲಿಂದ ಮನೆಗೆ ಹೋಗಿ ಅಪ್ಪ ಅಮ್ಮಂದಿರ ಬಳಿ ಹೊಸ ಬಟ್ಟೆ ಹಾಗೂ ಚಾಕಲೇಟು,ನಿಂಬೆಹುಳಿ ಪೆಪ್ಪರಮೆಂಟು,ಶುಂಠಿ ಪೆಪ್ಪರರ್ಮೆಂಟು, ಈಗೇ ಇತ್ಯಾದಿಗಳನ್ನು ಕೊಡಿಸಬೇಕೆಂದು ತಾಕೀತು ಮಾಡುತ್ತಿದ್ದೆವು.
ಆ ಅಸಾಹಯಕ ಹಾಗೂ ಬಡತನದ ಪರಿಸ್ಥಿತಿಯಲ್ಲಿ ಇರುತ್ತಿದ್ದ ನಮ್ಮ ತಂದೆ ತಾಯಿಗಳು ಮನದಲ್ಲಿಯೇ ಯೋಚನೆ ಮಾಡುತ್ತಾ ನಿಟ್ಟುಸಿರು ಬಿಟ್ಟು ಹೇಗಾದರೂ ಮಾಡಿ ಹೊಸ ಬಟ್ಟೆ ಹೊಲಿಸಿ ಅಥವಾ ಇದ್ದ ಬಟ್ಟೆಗಳನ್ನೇ ಶುಭ್ರವಾಗಿ ತೊಳೆದು ನಮಗೆ ವ್ಯವಸ್ಥೆ ಮಾಡುತ್ತಿದ್ದರು. ಅಕ್ಟೋಬರ್ ಒಂದರ ಸಂಜೆಯಿಂದಲೇ ನಾಳೆ ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಗೆ ಹೋಗುವ ತಯಾರಿ ಬಲು ಜೋರಿರುತ್ತಿತ್ತು.
ಬೆಳಗ್ಗೆ ಕುತೂಹಲದಿಂದ ಬೆಳುಗಾ ಮುಂಜಾನೆ ಎದ್ದು ತಣ್ಣೀರೋ ಬಿಸಿ ನೀರೋ ಮೈಗೆರೆದಕೊಂಡು ಆಗಾಗ ನಮ್ಮ ಬೇಡಿಕೆಗಳೂ ಈಡೇರಿಲ್ಲವೆಂದು ಮುನಿಸಿಕೊಂಡು ನಸು ಅಳುತ್ತಲೇ ಹಳೆಯ ಬಿಳಿ ಬಟ್ಟೆಗಳನ್ನು ಕೆಂಡ ತುಂಬಿದ ಚೊಂಬಿನಿಂದಲೋ ಅಥವಾ ಬಿಸಿ ನೀರು ತುಂಬಿದ ಚೊಂಬಿನಿಂದಲೋ ಇಸ್ತ್ರಿ ಮಾಡಿಕೊಂಡು ಭಾರತದ ಬಾವುಟವನ್ನು ಕೈಯಲ್ಲಿ ಹಿಡಿಯುತ್ತಿದ್ದೆವು.
ಮುನಿಸಿಕೊಂಡಾಗ ಅಮ್ಮ ಕೊಟ್ಟ ಪುಡಿಗಾಸು ಕೈಯಲ್ಲಿಡಿದು ಮೂಗಲ್ಲಿ ಶೀತಕ್ಕೆ ಸುರಿದ ಗೊಣ್ಣೆಯ ಅಂಗಿಗೆ ತಿಕ್ಕುತಾ ಮೇಷ್ಟ್ರು ಬರೆದುಕೊಟ್ಟ ಭಾಷಣವ ಶಾಲೆಗೆ ಹೋಗುವಾಗ ದಾರಿಯ ಉದ್ದಗಲಕ್ಕೂ ಜೋರಾಗಿ ಹೊದರುತ್ತಾ ಗೆಳೆಯರೊಂದಿಗೆ ಗುದ್ದಾಡುತ್ತಾ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳನ್ನು ಕೈಯಲ್ಲಿಡಿದು ಪಿ.ಟಿ ಮೇಷ್ಟ್ರು ಮಾರ್ಗದರ್ಶನದಲ್ಲಿ ಡಂಬಲ್ಸ್ ಬಾರಿಸುತ್ತಾ ಊರೆಲ್ಲಾ ಒಂದು ರೌಂಡ್ ಹೊಡೆಯುತ್ತಿದ್ದೆವು.
ಶಾಲೆಯ ಹತ್ತಿರ ಬಂದು ಕೂತುಕೊಂಡು ಪ್ರಾರ್ಥನಾ ಗೀತೆ, ಸ್ವಾಗತ ಭಾಷಣ, ಜ್ಯೋತಿ ಬೆಳಗಿಸುವ ಕಾರ್ಯಕ್ರಮ, ನಮ್ಮ ಭಾಷಣ, ಮುಖ್ಯ ಅತಿಥಿಗಳ ಭಾಷಣವನ್ನು ಕೇಳಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ತಿಳಿದುಕೊಳ್ಳುತ್ತಿದ್ದೆವೂ ಕೊನೆಗೆ ಅಧ್ಯಕ್ಷೀಯ ಭಾಷಣ ಮುಗಿದ ನಂತರ ಕಾರ್ಯಕ್ರಮಕ್ಕೆ ವಂದನಾರ್ಪಣೆ ಹೇಳಿ ಹೆಡ್ ಮೇಸ್ಟ್ರು ಕೊಟ್ಟ ಪೆಪ್ಪರ್ಮೆಂಟ್ಗಳ ಪಡೆದು ಖುಷಿಯಾಗಿ ತಂತಮ್ಮ ಸೂರುಗಳಿನ್ನು ಸೇರುತ್ತಿದ್ದೆವು. ಈ ನಿಟ್ಟಿನಲ್ಲಿ ನೋಡುವುದಾದರೆ ಸರ್ಕಾರಿ ಕನ್ನಡ ಮಾಧ್ಯಮದ ಶಾಲೆಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಂತಿಯ ಕಾರ್ಯಮಗಳ ಮೆರಗು ಹಾಗೂ ಸಾರ್ಥಕತೆಯೇ ಚೆಂದದ ಬಂಧ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು ಭಾರತೀಯ ಸ್ವಾತಂತ್ರ್ಯ ಹೋರಾಟದ ಶ್ರೇಷ್ಠ ನಾಯಕ ಹಾಗೂ ಧೀಮಂತ ನಾಯಕ ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. 2 ಅಕ್ಟೋಬರ್ 1869ರಲ್ಲಿ ಭಾರತದ ಇಂದಿನ ಗುಜರಾತ್ ರಾಜ್ಯದ ಕರಾವಳಿ ಪಟ್ಟಣ ಪೋರಬಂದರ್ನಲ್ಲಿ ಜನಿಸಿದರು.
ಅವರ ತಾಯಿ ಪುತಲೀಬಾಯಿಯವರು ತಂದೆ ಕರಮ್ಚಂದ್ ಭಾರತೀಯ ಮಹಾಕೃತಿಗಳಲ್ಲಿನ ಶ್ರವಣ ಮತ್ತು ಹರಿಶ್ಚಂದ್ರ ಮಹಾರಾಜರ ಕಥೆಗಳು ಬಾಲ್ಯಾವಸ್ಥೆಯಲ್ಲಿದ್ದ ಗಾಂಧಿಯವರ ಮೇಲೆ ಭಾರೀ ಪ್ರಭಾವ ಬೀರಿದ್ದವು.ಇಂಗ್ಲೆಂಡ್ನಲ್ಲಿರುವ ಲಂಡನ್ನ ಯೂನಿವರ್ಸಿಟಿ ಕಾಲೇಜ್ನಲ್ಲಿ ಕಾನೂನು ಅಧ್ಯಯನ ಮಾಡಿ ನ್ಯಾಯವಾದಿಯಾಗಿ ತರಬೇತಿ ಪಡೆಯಲು ಗಾಂಧಿಯವರು ಲಂಡನ್ಗೆಪ್ರಯಾಣಿಸಿದರು.
ಅಹಿಂಸೆ ಅಥವಾ ಸಂಪೂರ್ಣ ಅಹಿಂಸೆಯ ಮೇಲೆ ದೃಢವಾಗಿ ರೂಪಿಸಲ್ಪಟ್ಟ ಸಾಮೂಹಿಕ ಅವಿಧೇಯತೆಯ ಮೂಲಕ ದಬ್ಬಾಳಿಕೆಗೆ ಪ್ರತಿರೋಧವನ್ನು ಒಡ್ಡುವ ಸತ್ಯಾಗ್ರಹ ದ ಪರಿಕಲ್ಪನೆಗೆ ಅವರು ಪಥ (ದಾರಿ)ನಿರ್ಮಾಪಕರಾಗಿದ್ದು, ಅದು ಭಾರತವನ್ನು ಸ್ವಾತಂತ್ರ್ಯದತ್ತ ಒಯ್ದಿತು ಹಾಗೂ ವಿಶ್ವಾದ್ಯಂತದ ನಾಗರಿಕ ಹಕ್ಕುಗಳ ಮತ್ತು ಸ್ವಾತಂತ್ರ್ಯ ಆಂದೋಲನ ಗಳಿಗೆ ಸ್ಫೂರ್ತಿ ನೀಡಿತು.
ಬ್ರಿಟಿಷರ ವಿರುದ್ಧ ಹಲವಾರು ಕ್ವಿಟ್ ಇಂಡಿಯಾ ಚಳುವಳಿ, ಅಸಹಕಾರ ಚಳವಳಿ ಅಲ್ಲದೇ ದಕ್ಷಿಣ ಆಫ್ರಿಕಾದಲ್ಲಿಯೂ ಸಹ ಹೋರಾಟ ಮಾಡಿದಂತಹ ಧೀಮಂತ ವ್ಯಕ್ತಿ ಅಹಿಂಸಾವಾದಿಗಳು ದೇಶಕ್ಕಾಗಿ ಹೋರಾಡಿದ ಮಹಾನ್ ಚೇತನವಾದಿಗಳು.ತಮ್ಮ ಜೀವನದುದ್ದಕ್ಕೂ ಶಾಂತಿಯನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು, ಸ್ವಾತಂತ್ರ್ಯ ನಂತರ ರಾಮರಾಜ್ಯದ ಬಗ್ಗೆ ಕನಸು ಕಂಡಿದ್ದರು.
ಗಾಂಧೀಜಿಯವರ ಪ್ರಕಾರ ರಾಮರಾಜ್ಯ ಎಂದರೆ ಎಲ್ಲ ಧರ್ಮಗಳನ್ನು ಸಮಾನವಾಗಿ ಗೌರವಿಸುವ ಸಮಾನತೆಯನ್ನು ಸಾರುವ ಸಮಾಜವಾಗಿತ್ತು. ಇಲ್ಲಿ ರಾಜ ಮತ್ತು ಪ್ರಜೆಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ, ಒಬ್ಬ ಸಾಮಾನ್ಯ ನಾಗರಿಕನು ತನಗೆ ಸಿಗಬೇಕಾದ ನ್ಯಾಯವನ್ನು ತ್ವರಿತವಾಗಿ ದೊರಕಿಸಿಕೊಳ್ಳಬಹುದು.
ಮಹಾತ್ಮ ಗಾಂಧಿಜಿಯವರು ಭಾರದ ಭವಿಷ್ಯ ಹಳ್ಳಿಗಳಲ್ಲಿದೆ ಎಂದು ತಿಳಿಸಿದ್ದರು ಆದರೆ ವಿಪರ್ಯಾಸವೆಂದರೆ ಇತ್ತೀಚಿನ ದಿನಗಳಲ್ಲಿ ಈ ರಾಜಕೀಯ ದೊಂಬರಾಟದಿಂದ ಹಳ್ಳಿಗಳ ಅಭಿವೃದ್ಧಿಗೆ ಯೊರೊಬ್ಬರು ಕೂಡ ಒತ್ತು ನೀಡುತ್ತಿಲ್ಲ ಬರೀ ಗುದ್ದಲಿ ಪೂಜೆ ಪೋಟೋಕ್ಕೊಂದು ಪೋಜು ಆಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ.
ನಮ್ಮ ದೇಶ ನಿಜವಾಗಿಯೂ ಸ್ವಾತಂತ್ರವಾಗುವುದು ಒಂದು ಹೆಣ್ಣು ಮಧ್ಯ ರಾತ್ರಿ 12 ಗಂಟೆಗೆ ನಿರ್ಭಯವಾಗಿ ಓಡಾಡಲು ಸಾಧ್ಯವಾಗದ ಮಾತ್ರ ಎಂಬುದು ಗಾಂಧಿಜೀಯವರ ಕನಸ್ಸಾಗಿತ್ತು ಇತ್ತೀಚಿನ ದಿನಗಳಲ್ಲಿ ಹಾಡುಹಗಲಲ್ಲೇ ಮಹಿಳೆಯರು ಅತ್ಯಾಚಾರಕ್ಕೆ ತುತ್ತಾಗುತ್ತಿರುವುದು ದುರ್ದೈವ ಸಂಗತಿಯಾಗಿದೆ.
2015 ರಲ್ಲಿ34,651, 2016 ರಲ್ಲಿ 38,947, 2017 ರಲ್ಲಿ 32,559,. 2018 ರಲ್ಲಿ 33,356, 2019 ರಲ್ಲಿ 32,500 ಕ್ಕೂ ಹೆಚ್ಚು ಹಾಗೂ ನಿನ್ನೆ ಉತ್ತರ ಪ್ರದೇಶದ 19 ವರ್ಷದ ಮನೀಷಾ ವಾಲ್ಮೀಕಿ ರವರನ್ನ ಸಾಮೂಹಿಕ ಅತ್ಯಚಾರವೆಸಗಿ ನಾಲಿಗೆ ಕತ್ತರಿಸಿ ಕೈಕಾಲು ಮುರಿದು ಕೊಂದಿರುವ ಘಟನೆ ಮತ್ತು ಅದೇ ಉತ್ತರ ಪ್ರದೇಶದ ಬಲರಾಮಪುರ್ ದ 14 ನೇ ವರ್ಷದ ಹೆಣ್ಣಿನ ಮೇಲೆ ಸಾಮೂಹಿಕ ಅತ್ಯಾರವೆಸಗಿ ಕೊಲೆಗೈದಿದ್ರಾರೆ.
ನಿಜಕ್ಕೂ ಎತ್ತ ಸಾಗುತ್ತಿದೆ ನಮ್ಮ ಬದುಕು ಈಗಿರುವ ಅತ್ಯಾಚಾರದ ವಿರುದ್ಧದ ಕಾನೂನುಗಳು ಕಾಗದದ ಕುದುರೆಗಳಾಗಿವೆ ಹೀಗಾದರೆ ಹೇಗೆ ಗಾಂಧೀಜಿ ಕಂಡ ರಾಮರಾಜ್ಯದ ಕನಸು ನನಸ್ಸಾಗುವುದು??? ಇನ್ನಾದರೂ ರಾಜಕೀಯ ಪಕ್ಷಗಳು ರಾಜಕೀಯ ದೊಂಬರಾಟ ಬಿಟ್ಟು ಜ್ವಲಂತ ಸಮಸ್ಯೆಗಳತ್ತ ಗಮನಹರಿಸಬೇಕಾಗಿದೆ.
ಲಾಲ್ ಬಹಾದುರ್ ಶಾಸ್ತ್ರಿ
ಭಾರತದ ಎರಡನೆಯ ಪ್ರಧಾನಮಂತ್ರಿ.ಜನನ: ಅಕ್ಟೋಬರ್ 02- 1904, ಮರಣ: ಜನವರಿ 11, 1966,ಜನಿಸಿದ ಸ್ಥಳ:ಮೊಘಲ್ಸಾರಾಯ್, ಉತ್ತರ ಪ್ರದೇಶ.1921ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು.
9 ವರ್ಷಗಳ ಕಾಲ ಸ್ವಾತಂತ್ರ್ಯಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು ಸತ್ಯಾಗ್ರಹ ಚಳುವಳಿ ಪ್ರಾರಂಭವಾದ ನಂತರ 1946 ರವರೆಗೂ ಜೈಲು ಶಿಕ್ಷೆ ಅನುಭವಿಸಿದರು.ಇವರು ಬಹುಶಃ ಭಾರತ ಕಂಡ ಅತ್ಯಂತ ಪ್ರಾಮಾಣಿಕ, ದಕ್ಷ ಪ್ರಧಾನಿಯಾಗಿದ್ದಾರೆ. ಇವರ ಪ್ರಾಮಾಣಿಕತೆಗೆ ಹಲವರು ತಲೆದೂಗಿದ್ದುಂಟು. ಹಾಗೆಯೇ ಇವರ ಸ್ವಾಭಿಮಾನ, ದೇಶಾಭಿಮಾನ ಕೂಡ ತಲೆದೂಗುವಂಹತದ್ದು.
ಆ ಕಾಲದಲ್ಲಿಯೇ ಲಾಲ್ ಬಹದ್ದೂರ್ ಶಾಸ್ತ್ರಿಯವರು ಸರ್ಕಾರಕ್ಕೆ ನನಗೆ ನೀಡುವ ವೇತನ ಜಾಸ್ತಿಯಿದೆ ದಯವಿಟ್ಟು ವೇತನವನ್ನು ಕಡಿಮೆ ಮಾಡಿ ಎಂದು ಪತ್ರ ಬರೆದ ಮಹಾನ್ ಚೇತನವಾದಿ.ಪ್ರಧಾನಿಯಾದ ಸಂದರ್ಭದಲ್ಲಿ ದೇಶದಲ್ಲಿ ಬರಗಾಲ ಬಂದೊದಗಿತು. ಆಗ ಹೊರ ದೇಶದಿಂದ ಆಹಾರವನ್ನು ಆಮದು ಮಾಡಿಕೊಳ್ಳಬೇಕಾಯಿತು. ಸಾಲ ಭಾರ ಅಧಿಕವಾಯಿತು.
ಅದನ್ನರಿತ ಶಾಸ್ತ್ರಿ ವಾರದಲ್ಲಿ ಒಂದು ದಿನ ಊಟವನ್ನು ಬಿಟ್ಟರೆ ಎಷ್ಟು ಆಹಾರ ಸಂಗ್ರಹ ವಾಗುವುದೆಂದು ಲೆಕ್ಕಾಚಾರಹಾಕಿ, ಸೋಮವಾರ ರಾತ್ರಿ ಊಟವನ್ನು ಬಿಡಲು ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಾವೂ ಸಹ ಸೋಮವಾರದ ಊಟವನ್ನು ತ್ಯಜಿಸಿದರು. ಇನ್ನೂ ಸಹ ಶಾಸ್ತ್ರಿಯವರ ಸೋಮವಾರವು ಪ್ರಚಲಿತದಲ್ಲಿದೆ. ಈ ನಿರ್ಣಯವು ಅವರ ಸ್ವಾಭಿಮಾನ ಯಾತ್ರೆಗೆ ಮುಕುಟ ಪ್ರಾಯದಂತಿದೆ. ಇದು ‘ಶಾಸ್ತ್ರಿ ಸೋಮವಾರವೆಂದೇ’ ಪ್ರತೀತಿ ಇದೆ.. ಇವರ ಜನಪ್ರಿಯತೆ ಹೊಂದಿದೆ. ಇಂತಹ ಇಬ್ಬರು ಮಹಾನ್ ಚೇತನವಾದಿಗಳು ಒಬ್ಬರು ಮಹಾತ್ಮರಾದರೆ ಇನ್ನೊಬ್ಬರೂ ಭಾರತ ಕಂಡ ಪುಣ್ಯಾತ್ಮರು ಎಂಬುದು ನನ್ನ ಅಭಿಮತ.
–ಕೆ.ಶ್ರೀಧರ್ (ಕೆ.ಸಿರಿ)
ಮೊಬೈಲ್: 9741270125
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ7 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ15 hours agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ2 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ


