ದಿನದ ಸುದ್ದಿ
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಗಾಂಧಿ ಭಾರತ’ ಕಾರ್ಯಕ್ರಮ
ಸುದ್ದಿದಿನ,ಚನ್ನಗಿರಿ:ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ವೇದಿಕೆ ಮತ್ತು ಐ ಕ್ಯು ಎ ಸಿ ವತಿಯಿಂದ ಗುರುವಾರ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.’
ಗಾಂಧಿಭಾರತ’ ಕಾರ್ಯಕ್ರಮ ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿಯವರು 1924ರಲ್ಲಿ ಡಿಸೆಂಬರ್ 26,27ರಂದು ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಏಕೈಕ ಸಮ್ಮೇಳನವಾಗಿದ್ದು, ಭಾರತದ ಸ್ವಾತಂತ್ರ್ಯದ ಚಳುವಳಿಯಲ್ಲಿ ಅತೀ ಪ್ರಮುಖವಾದ ಪಾತ್ರವನ್ನು ವಹಿಸಿತ್ತು. ಆ ಕಾರ್ಯಕ್ರಮದವು ನೂರು ವರ್ಷತುಂಬಿದ ನೆನಪಿನ ಭಾಗವಾಗಿ ಮಹಾತ್ಮ ಗಾಂಧೀಜಿಯವರ ಧ್ಯಾನಸ್ಥ ಸ್ಥಿತಿಯ ಭಾವಚಿತ್ರವನ್ನು ಹಾಗೂ ಸಾಮಾಜಿಕ ಸಪ್ತ ಪಾತಕಗಳ ಭಾವಚಿತ್ರವನ್ನು ಅನಾವರಣ ಮಾಡುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಅಮೃತೇಶ್ವರ ಬಿ ಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕ
ಷಣ್ಮುಖಪ್ಪ ಕೆ ಎಚ್ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಜಾಗತಿಕವಾಗಿ ಹಿಂಸೆಯು ವಿಜೃಂಬಿಸುತ್ತಿರುವ ದಿನಮಾನಗಳಲ್ಲಿ ಮಹಾತ್ಮ ಗಾಂಧಿಯವರು ಹೆಚ್ಚು ಹೆಚ್ಚು ನೆನಪಾಗುತ್ತಿದ್ದಾರೆ. ಅವರು ಭಾರತದ ರಾಷ್ಟçಪಿತ ಮತ್ತು ಮಹಾತ್ಮ ಎಂದು ಕರೆಸಿಕೊಳ್ಳುವಲ್ಲಿ ಅವರು ಮಾಡಿದ ತ್ಯಾಗ, ದೇಶ ಸೇವೆ ಮತ್ತು ದೇಶಭಕ್ತಿ ಅದು ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಆಗಿತ್ತು ಎಂದರು.
ಪ್ರಪಂಚದ ಎಲ್ಲಾ ರಾಷ್ಟ್ರಗಳಿಗೂ ಕೂಡ ಮಾದರಿಂಯೇ ಆಗಿದೆ ಪ್ರಸ್ತುತ ಈ ದಿನದ ಕಾರ್ಯಕ್ರಮ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನ ವಹಿಸಿಕೊಂಡ ಕಾರಣಕ್ಕೆ ಅದು ನೂರು ವರ್ಷ ತಲುಪಿದ ಸವಿ ನೆನಪನ್ನು ಸ್ಮರಣೀಯವಾಗಿಸುವಲ್ಲಿ ಈ ದಿನದ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯಕುಮಾರ್ ಐಕ್ಯುಎಸಿ ಸಂಚಾಲಕರು ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತಾ ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಬದುಕಿನ ಆದರ್ಶಗಳು ಇವತ್ತಿನ ಜಾಗತಿಕ ಮಟ್ಟದ ಯುವ ಸಮೂಹಕ್ಕೆ ಮಾದರಿಯಾಗುವ ಅವಶ್ಯಕತೆ ಇದೆ ಎಂದು ಹೇಳಿದರು.
ಸಹ ಪ್ರಾಧ್ಯಾಪಕಿ ಡಾ. ಮಂಜುಳ ಅವರು ಗಾಂಧಿ ಭಾರತದ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಗಾಂಧಿಯವರು ಸ್ವಚ್ಚತೆಗೆ ಹೆಚ್ಚು ಮಹತ್ವಕೊಟ್ಟಿದ್ದು ವಿದ್ಯಾರ್ಥಿಗಳಾದವರು ನಾವು ಬದುಕುವ ಪ್ರದೇಶವನ್ನು ಹಾಗೂ ದೇಶವನ್ನು ಸ್ವಚ್ಚವಾಗಿ ಇಟ್ಟುಕೊಳ್ಳುವುದರ ಕುರಿತು ಗಮನ ನೀಡಬೇಕು ಎಂದು ತಿಳಿಸಿದರು.
ಡಾ. ರವಿ ಸಹಾಯಕ ಪ್ರಾಧ್ಯಾಪಕರು ಗಾಂಧೀಜಿಯವರ ಪುಸ್ತಕಗಳನ್ನು ಓದುವುದರ ಜೊತೆಗೆ ಬದುಕಿನಲ್ಲಿ ಅವರ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರೊ ಅಮೃತೇಶ್ವರ ಬಿ ಜಿ ಅವರು ಅಧ್ಯಕ್ಷೀಯ ನುಡಿಯನ್ನು ನುಡಿಯುತ್ತಾ “ಮಹಾತ್ಮ ಗಾಂಧಿಯವರು ಭಾರತ ದೇಶಕ್ಕೆ ಸ್ವಾತಂತ್ರ ತರುವಲ್ಲಿ ಇಡೀ ದೇಶದ ನಾಯಕತ್ವವನ್ನು ವಹಿಸುತ್ತಾ ಇಡೀ ಪ್ರಪಂಚಕ್ಕೆ ಜನಪರ ಹೋರಾಟ, ಜನ ಚಳುವಳಿ ಮತ್ತು ಜನಸೇವೆ ಹೀಗಿರಬೇಕು ಎಂಬುದಕ್ಕೆ ಮಹಾತ್ಮ ಗಾಂಧಿ ಆದರ್ಶವಾಗಿದ್ದಾರೆ ಎಂದರು.
ಧೀಮಂತ ವ್ಯಕ್ತಿತ್ವದ ಗಾಂಧಿಯ ಸವಿನೆನಪು ಕರ್ನಾಟಕದ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಅದಕ್ಕೆ ತುಂಬಿದ ನೂರು ವರ್ಷವನ್ನು ಮತ್ತೊಮ್ಮೆ ನಾವು ಸಂಭ್ರಮಿಸುತ್ತ ಇರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಪ್ರತಿಪಾದಿಸಿದರು ಅದರ ಜೊತೆಗೆ ವಿದ್ಯಾರ್ಥಿಗಳಿಗೆ ಗಾಂಧಿಯ ಬದುಕಿನ ಮೌಲ್ಯಗಳನ್ನು ಮೆಲುಕು ಹಾಕಿದರು.
ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಮಹಾತ್ಮ ಗಾಂಧೀಜಿ ಕುರಿತ ರಸಪ್ರಶ್ನೆ ಸ್ಪರ್ಧೆ ಹಾಗೂ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.
ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ದರ್ಶನ ಮತ್ತು ಸಹನ ದ್ವಿತೀಯ ಬಿ ಕಾಂ, ಅಣ್ಣಯ್ಯ ಮತ್ತು ರಮೇಶ್ ನಾಯ್ಕ ಎಂ ಎ ಮತ್ತು ಬಿ ಎ,ಆಕಾಶ್ ಮತ್ತು ಗಿರೀಶ್ ದ್ವಿತೀಯ ಬಿ ಕಾಂ ಇವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
ಭಾರತದ ಸುಸ್ಥಿರ ಅಭಿವೃದ್ಧಿಗೆ ಮಹಾತ್ಮ ಗಾಂಧೀಜಿ ವಿಚಾರಧಾರೆಯ ಅವಶ್ಯವೇ? ಎಂಬ ವಿಷಯ ಕುರಿತು ವಿದ್ಯಾರ್ಥಿಗಳಾದ ತೇಜಸ್ವಿನಿ ದ್ವಿತೀಯ ಬಿ ಎ, ದರ್ಶನ್ ದ್ವಿತೀಯ ಬಿ ಕಾಂ, ಕಾವ್ಯ ದ್ವಿತೀಯ ಬಿ ಎ ಮಾತನಾಡಿದರು.
ಸೇವಂತಿ ಸ್ವಾಗತಿಸಿದರು. ಕಾವ್ಯ ನಿರೂಪಿಸಿದರು. ಪುಷ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗಿರೀಶ್ ಕುಮಾರ್.ಜಿ ಅವರಿಗೆ ಪಿಎಚ್.ಡಿ ಪದವಿ
ಬಳ್ಳಾರಿ/ ವಿಜಯನಗರ:ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೌಡ್ರು ದೊಡ್ಡ ಹನುಮಂತಪ್ಪ ಮತ್ತು ನಾಗರತ್ನ ದಂಪತಿಗಳು ಮಗನಾದ ಗಿರೀಶ್ ಕುಮಾರ್.ಜಿ ಅವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ ಹಂಪಿಯಿಂದ ಪಿಎಚ್.ಡಿ ಪದವಿಯನ್ನು ನೀಡಲಾಯಿತು.
ಇವರು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ತುಮಕೂರಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ನಾಗೇಂದ್ರ ಅವರು ಮಾರ್ಗದರ್ಶನದಲ್ಲಿ ‘ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ’ ( ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ) ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ನೀಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಕುಲಸಚಿವರಾದ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಈ ಸಮಯದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಯ ಹಿರಿಯ ಪತ್ರಕರ್ತರು, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ತಂದೆ ತಾಯಿ, ಕುಟುಂಬದ ಸದಸ್ಯರು, ಸ್ನೇಹಿತರು ಶುಭಕೋರಿದರು.
29 ರಂದು ಪಿ.ಎಚ್.ಡಿ ಮೌಖಿಕ ಪರೀಕ್ಷೆ
29 ಅಕ್ಟೋಬರ್ 2025 ರಂದು ಕನ್ನಡ ವಿಶ್ವವಿದ್ಯಾಲಯ ವಿದ್ಯಾರಣ್ಯ ಹಂಪಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮೌಖಿಕ ಪರೀಕ್ಷೆ ನಡೆಯಿತು. ಸಮಾಜ ವಿಜ್ಞಾನ ನಿಕಾಯದ ಡೀನ್ ಡಾ.ಪ್ರಶಾಂತ ಕುಮಾರ್, ಆಂತರಿಕ ವಿಶೇಷ ತಜ್ಞರಾದ ಡಾ.ಎ.ಎಸ್ ಪ್ರಭಾಕರ್, ಬಾಹ್ಯ ಮೌಲ್ಯಮಾಪಕರಾದ ಡಾ.ಪುಟ್ಟಸ್ವಾಮಿ, ಪ್ರಾಧ್ಯಾಪಕ,ಮೈಸೂರು ವಿಶ್ವವಿದ್ಯಾಲಯ, ಮಾರ್ಗದರ್ಶಕ ಸಹಾಯಕ ಪ್ರಾಧ್ಯಾಪಕ ಡಾ.ನಾಗೇಂದ್ರ, ವಿಭಾಗದ ಮುಖ್ಯಸ್ಥ ಡಾ. ಎಸ್.ವೈ ಸೋಮಶೇಖರ್, ವಿಭಾಗದ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.
ವೃತ್ತಿ
ಗಿರೀಶ್ ಕುಮಾರ್.ಜಿ ಅವರು 2017 ರಿಂದ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಈಟಿವಿ ಭಾರತ್, ಹೊಸಪೇಟೆ ಟೈಮ್ಸ್ ದಿನಪತ್ರಿಕೆ ವರದಿಗಾರಾಗಿ, ಆಕಾಶವಾಣಿ ತಾತ್ಕಾಲಿಕ ಉದ್ಘೋಷಕರಾಗಿ, ಶ್ರೀ ಶಂಕರ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀಮತಿ ಸರಳ ದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಪದವಿ ಕಾಲೇಜುಗಳಲ್ಲಿ ಮತ್ತು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಮುಖ್ಯ ಆವರಣ ಮತ್ತು ಕೊಪ್ಪಳ ಸ್ನಾತಕೋತ್ತರ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರಾಗಿ 9 ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ. ಪ್ರಸ್ತುತ ಹೊಸಪೇಟೆ ಟೈಮ್ಸ್ ದಿನಪತ್ರಿಕೆ ಬಳ್ಳಾರಿ ಜಿಲ್ಲೆಯ ವರದಿಗಾರರಾಗಿ ಮತ್ತು ಲೋಕಲ್ ಆಪ್ ನಲ್ಲಿ ಬಳ್ಳಾರಿ ಜಿಲ್ಲೆಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ.
ಪಿಎಚ್.ಡಿ ಸಾರಾಂಶ
ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ (ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ : ಬಳ್ಳಾರಿ ವಿಜಯನಗರ ಜಿಲ್ಲೆ) ಎಂಬ ವಿಷಯದ ಸಂಶೋಧನೆ ಕರ್ನಾಟಕ ರಾಜ್ಯದ ಕನ್ನಡದ ಮೊದಲ ಸಂಶೋಧನೆ ಮಹಾಪ್ರಬಂಧವಾಗಿದೆ.
ಈ ವಿಷಯದ ಕುರಿತು 2019 ರಿಂದ 2022 ಅವಧಿ ವರೆಗೆ ಅಧ್ಯಾಯ ಮಾಡಿ, ಸೈಬರ್ ಅಪರಾಧಗಳ ಬಳ್ಳಾರಿ ಜಿಲ್ಲಾ ಪಕ್ಷೀನೋಟ, ಸೈಬರ್ ಅಪರಾಧಗಳ ಹುಟ್ಟು, ಬೆಳವಣಿಗೆ, 4 ವರ್ಷಗಳ ಸೈಬರ್ ಅಪರಾಧಗಳ ಅಂಕಿ, ಸಂಖ್ಯೆಗಳು, ಪೈ ಮತ್ತು ಸ್ತಂಭ ನಕ್ಷೆಗಳು ಒಳಗೊಂಡಿದೆ. ಮುಖ್ಯವಾಗಿ ವಿಜಯ ಕರ್ನಾಟಕ ಮತ್ತು ವಿಜಯವಾಣಿ ದಿನಪತ್ರಿಕೆ ಹಾಗು ಮೈಸೂರಿನ ಪ್ರತಿನಿಧಿ ದಿನಪತ್ರಿಕೆಗಳಲ್ಲಿ ಬರಹ, ಲೇಖನ, ಅಂಕಣಗಳು ವಿಶೇಷ ವಿಶ್ಲೇಷಣೆ, ಸೈಬರ್ ಅಪರಾಧಗಳ ಬಗ್ಗೆ ಕರ್ನಾಟಕ ರಾಜ್ಯದ ಪೋಲಿಸ್ ಇಲಾಖೆಯ ಐ.ಪಿ.ಎಸ್, ಸಿ.ಪಿ.ಐ, ಪಿ.ಎಸ್.ಐ ಅಧಿಕಾರಿಗಳು, ಹಿರಿಯ ಪತ್ರಕರ್ತರು, ಸೈಬರ್ ತಜ್ಞರು, ವಂಚನೆ ಒಳಗಾದವರ ಸಂರ್ದಶನ ಮತ್ತು ವಿಶ್ಲೇಷಣೆ ಮತ್ತು ಅವರ ಮಾನಸಿಕ ಸ್ಥಿತಿಗತಿ ಬಗ್ಗೆ ಈ ಸಂಶೋಧನೆ ಒಳಗೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ ನಿರತರಾಗಿದ್ದ ಜಿಕ್ರಿಯಾ ಸಬಾದ್ ಬಿನ್ ನಿಯಾಸಾಬ್ ಸುಮಾರು ವಯಸ್ಸು 61, ಜಾಬ್ ಕಾರ್ಡ್ ಸಂಖ್ಯೆ ಕೆಎನ್ -12-005-037-004/396, ಹಠಾತ್ತನೆ ಕುಸಿದು ಬಿದ್ದು ಸ್ಥಳದಲ್ಲೇ ನಿಧನರಾಗಿರುವರು.
ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾಮಗಾರಿ ಸ್ಥಳಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮತ್ತು ಅವರಿಗೆ ಎಲ್ಲಾ ಸರ್ಕಾರಿ ಸವಲತ್ತುಗಳು ಮತ್ತು ಸಹಾಯವನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 hours agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ1 day agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ1 day agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ1 day agoದಾವಣಗೆರೆ | ತಾತ್ಕಲಿಕ ಉಪ ಪೊಲೀಸ್ ಠಾಣೆಗೆ ಎಸ್ ಪಿ ಉಮಾ ಪ್ರಶಾಂತ್ ಚಾಲನೆ
-
ದಿನದ ಸುದ್ದಿ1 day agoದಾವಣಗೆರೆಯಿಂದ ಶ್ರೀಶೈಲಂಗೆ ನೂತನ ಬಸ್ ಮಾರ್ಗಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ
-
ದಿನದ ಸುದ್ದಿ7 hours agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

