ದಿನದ ಸುದ್ದಿ
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಗಾಂಧಿ ಭಾರತ’ ಕಾರ್ಯಕ್ರಮ

ಸುದ್ದಿದಿನ,ಚನ್ನಗಿರಿ:ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ವೇದಿಕೆ ಮತ್ತು ಐ ಕ್ಯು ಎ ಸಿ ವತಿಯಿಂದ ಗುರುವಾರ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.’
ಗಾಂಧಿಭಾರತ’ ಕಾರ್ಯಕ್ರಮ ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿಯವರು 1924ರಲ್ಲಿ ಡಿಸೆಂಬರ್ 26,27ರಂದು ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಏಕೈಕ ಸಮ್ಮೇಳನವಾಗಿದ್ದು, ಭಾರತದ ಸ್ವಾತಂತ್ರ್ಯದ ಚಳುವಳಿಯಲ್ಲಿ ಅತೀ ಪ್ರಮುಖವಾದ ಪಾತ್ರವನ್ನು ವಹಿಸಿತ್ತು. ಆ ಕಾರ್ಯಕ್ರಮದವು ನೂರು ವರ್ಷತುಂಬಿದ ನೆನಪಿನ ಭಾಗವಾಗಿ ಮಹಾತ್ಮ ಗಾಂಧೀಜಿಯವರ ಧ್ಯಾನಸ್ಥ ಸ್ಥಿತಿಯ ಭಾವಚಿತ್ರವನ್ನು ಹಾಗೂ ಸಾಮಾಜಿಕ ಸಪ್ತ ಪಾತಕಗಳ ಭಾವಚಿತ್ರವನ್ನು ಅನಾವರಣ ಮಾಡುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಅಮೃತೇಶ್ವರ ಬಿ ಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕ
ಷಣ್ಮುಖಪ್ಪ ಕೆ ಎಚ್ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಜಾಗತಿಕವಾಗಿ ಹಿಂಸೆಯು ವಿಜೃಂಬಿಸುತ್ತಿರುವ ದಿನಮಾನಗಳಲ್ಲಿ ಮಹಾತ್ಮ ಗಾಂಧಿಯವರು ಹೆಚ್ಚು ಹೆಚ್ಚು ನೆನಪಾಗುತ್ತಿದ್ದಾರೆ. ಅವರು ಭಾರತದ ರಾಷ್ಟçಪಿತ ಮತ್ತು ಮಹಾತ್ಮ ಎಂದು ಕರೆಸಿಕೊಳ್ಳುವಲ್ಲಿ ಅವರು ಮಾಡಿದ ತ್ಯಾಗ, ದೇಶ ಸೇವೆ ಮತ್ತು ದೇಶಭಕ್ತಿ ಅದು ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಆಗಿತ್ತು ಎಂದರು.
ಪ್ರಪಂಚದ ಎಲ್ಲಾ ರಾಷ್ಟ್ರಗಳಿಗೂ ಕೂಡ ಮಾದರಿಂಯೇ ಆಗಿದೆ ಪ್ರಸ್ತುತ ಈ ದಿನದ ಕಾರ್ಯಕ್ರಮ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನ ವಹಿಸಿಕೊಂಡ ಕಾರಣಕ್ಕೆ ಅದು ನೂರು ವರ್ಷ ತಲುಪಿದ ಸವಿ ನೆನಪನ್ನು ಸ್ಮರಣೀಯವಾಗಿಸುವಲ್ಲಿ ಈ ದಿನದ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯಕುಮಾರ್ ಐಕ್ಯುಎಸಿ ಸಂಚಾಲಕರು ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತಾ ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಬದುಕಿನ ಆದರ್ಶಗಳು ಇವತ್ತಿನ ಜಾಗತಿಕ ಮಟ್ಟದ ಯುವ ಸಮೂಹಕ್ಕೆ ಮಾದರಿಯಾಗುವ ಅವಶ್ಯಕತೆ ಇದೆ ಎಂದು ಹೇಳಿದರು.
ಸಹ ಪ್ರಾಧ್ಯಾಪಕಿ ಡಾ. ಮಂಜುಳ ಅವರು ಗಾಂಧಿ ಭಾರತದ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಗಾಂಧಿಯವರು ಸ್ವಚ್ಚತೆಗೆ ಹೆಚ್ಚು ಮಹತ್ವಕೊಟ್ಟಿದ್ದು ವಿದ್ಯಾರ್ಥಿಗಳಾದವರು ನಾವು ಬದುಕುವ ಪ್ರದೇಶವನ್ನು ಹಾಗೂ ದೇಶವನ್ನು ಸ್ವಚ್ಚವಾಗಿ ಇಟ್ಟುಕೊಳ್ಳುವುದರ ಕುರಿತು ಗಮನ ನೀಡಬೇಕು ಎಂದು ತಿಳಿಸಿದರು.
ಡಾ. ರವಿ ಸಹಾಯಕ ಪ್ರಾಧ್ಯಾಪಕರು ಗಾಂಧೀಜಿಯವರ ಪುಸ್ತಕಗಳನ್ನು ಓದುವುದರ ಜೊತೆಗೆ ಬದುಕಿನಲ್ಲಿ ಅವರ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರೊ ಅಮೃತೇಶ್ವರ ಬಿ ಜಿ ಅವರು ಅಧ್ಯಕ್ಷೀಯ ನುಡಿಯನ್ನು ನುಡಿಯುತ್ತಾ “ಮಹಾತ್ಮ ಗಾಂಧಿಯವರು ಭಾರತ ದೇಶಕ್ಕೆ ಸ್ವಾತಂತ್ರ ತರುವಲ್ಲಿ ಇಡೀ ದೇಶದ ನಾಯಕತ್ವವನ್ನು ವಹಿಸುತ್ತಾ ಇಡೀ ಪ್ರಪಂಚಕ್ಕೆ ಜನಪರ ಹೋರಾಟ, ಜನ ಚಳುವಳಿ ಮತ್ತು ಜನಸೇವೆ ಹೀಗಿರಬೇಕು ಎಂಬುದಕ್ಕೆ ಮಹಾತ್ಮ ಗಾಂಧಿ ಆದರ್ಶವಾಗಿದ್ದಾರೆ ಎಂದರು.
ಧೀಮಂತ ವ್ಯಕ್ತಿತ್ವದ ಗಾಂಧಿಯ ಸವಿನೆನಪು ಕರ್ನಾಟಕದ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಅದಕ್ಕೆ ತುಂಬಿದ ನೂರು ವರ್ಷವನ್ನು ಮತ್ತೊಮ್ಮೆ ನಾವು ಸಂಭ್ರಮಿಸುತ್ತ ಇರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಪ್ರತಿಪಾದಿಸಿದರು ಅದರ ಜೊತೆಗೆ ವಿದ್ಯಾರ್ಥಿಗಳಿಗೆ ಗಾಂಧಿಯ ಬದುಕಿನ ಮೌಲ್ಯಗಳನ್ನು ಮೆಲುಕು ಹಾಕಿದರು.
ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಮಹಾತ್ಮ ಗಾಂಧೀಜಿ ಕುರಿತ ರಸಪ್ರಶ್ನೆ ಸ್ಪರ್ಧೆ ಹಾಗೂ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.
ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ದರ್ಶನ ಮತ್ತು ಸಹನ ದ್ವಿತೀಯ ಬಿ ಕಾಂ, ಅಣ್ಣಯ್ಯ ಮತ್ತು ರಮೇಶ್ ನಾಯ್ಕ ಎಂ ಎ ಮತ್ತು ಬಿ ಎ,ಆಕಾಶ್ ಮತ್ತು ಗಿರೀಶ್ ದ್ವಿತೀಯ ಬಿ ಕಾಂ ಇವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
ಭಾರತದ ಸುಸ್ಥಿರ ಅಭಿವೃದ್ಧಿಗೆ ಮಹಾತ್ಮ ಗಾಂಧೀಜಿ ವಿಚಾರಧಾರೆಯ ಅವಶ್ಯವೇ? ಎಂಬ ವಿಷಯ ಕುರಿತು ವಿದ್ಯಾರ್ಥಿಗಳಾದ ತೇಜಸ್ವಿನಿ ದ್ವಿತೀಯ ಬಿ ಎ, ದರ್ಶನ್ ದ್ವಿತೀಯ ಬಿ ಕಾಂ, ಕಾವ್ಯ ದ್ವಿತೀಯ ಬಿ ಎ ಮಾತನಾಡಿದರು.
ಸೇವಂತಿ ಸ್ವಾಗತಿಸಿದರು. ಕಾವ್ಯ ನಿರೂಪಿಸಿದರು. ಪುಷ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ1 day ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ1 day ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ1 day ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ1 day ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ