ದಿನದ ಸುದ್ದಿ

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಗಾಂಧಿ ಭಾರತ’ ಕಾರ್ಯಕ್ರಮ

Published

on

ಸುದ್ದಿದಿನ,ಚನ್ನಗಿರಿ:ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ವೇದಿಕೆ ಮತ್ತು ಐ ಕ್ಯು ಎ ಸಿ ವತಿಯಿಂದ ಗುರುವಾರ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.’

ಗಾಂಧಿಭಾರತ’ ಕಾರ್ಯಕ್ರಮ ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿಯವರು 1924ರಲ್ಲಿ ಡಿಸೆಂಬರ್ 26,27ರಂದು ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಏಕೈಕ ಸಮ್ಮೇಳನವಾಗಿದ್ದು, ಭಾರತದ ಸ್ವಾತಂತ್ರ್ಯದ ಚಳುವಳಿಯಲ್ಲಿ ಅತೀ ಪ್ರಮುಖವಾದ ಪಾತ್ರವನ್ನು ವಹಿಸಿತ್ತು. ಆ ಕಾರ್ಯಕ್ರಮದವು ನೂರು ವರ್ಷತುಂಬಿದ ನೆನಪಿನ ಭಾಗವಾಗಿ ಮಹಾತ್ಮ ಗಾಂಧೀಜಿಯವರ ಧ್ಯಾನಸ್ಥ ಸ್ಥಿತಿಯ ಭಾವಚಿತ್ರವನ್ನು ಹಾಗೂ ಸಾಮಾಜಿಕ ಸಪ್ತ ಪಾತಕಗಳ ಭಾವಚಿತ್ರವನ್ನು ಅನಾವರಣ ಮಾಡುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಅಮೃತೇಶ್ವರ ಬಿ ಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕ
ಷಣ್ಮುಖಪ್ಪ ಕೆ ಎಚ್ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಜಾಗತಿಕವಾಗಿ ಹಿಂಸೆಯು ವಿಜೃಂಬಿಸುತ್ತಿರುವ ದಿನಮಾನಗಳಲ್ಲಿ ಮಹಾತ್ಮ ಗಾಂಧಿಯವರು ಹೆಚ್ಚು ಹೆಚ್ಚು ನೆನಪಾಗುತ್ತಿದ್ದಾರೆ. ಅವರು ಭಾರತದ ರಾಷ್ಟçಪಿತ ಮತ್ತು ಮಹಾತ್ಮ ಎಂದು ಕರೆಸಿಕೊಳ್ಳುವಲ್ಲಿ ಅವರು ಮಾಡಿದ ತ್ಯಾಗ, ದೇಶ ಸೇವೆ ಮತ್ತು ದೇಶಭಕ್ತಿ ಅದು ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಆಗಿತ್ತು ಎಂದರು.

ಪ್ರಪಂಚದ ಎಲ್ಲಾ ರಾಷ್ಟ್ರಗಳಿಗೂ ಕೂಡ ಮಾದರಿಂಯೇ ಆಗಿದೆ ಪ್ರಸ್ತುತ ಈ ದಿನದ ಕಾರ್ಯಕ್ರಮ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನ ವಹಿಸಿಕೊಂಡ ಕಾರಣಕ್ಕೆ ಅದು ನೂರು ವರ್ಷ ತಲುಪಿದ ಸವಿ ನೆನಪನ್ನು ಸ್ಮರಣೀಯವಾಗಿಸುವಲ್ಲಿ ಈ ದಿನದ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯಕುಮಾರ್ ಐಕ್ಯುಎಸಿ ಸಂಚಾಲಕರು ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತಾ ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಬದುಕಿನ ಆದರ್ಶಗಳು ಇವತ್ತಿನ ಜಾಗತಿಕ ಮಟ್ಟದ ಯುವ ಸಮೂಹಕ್ಕೆ ಮಾದರಿಯಾಗುವ ಅವಶ್ಯಕತೆ ಇದೆ ಎಂದು ಹೇಳಿದರು.

ಸಹ ಪ್ರಾಧ್ಯಾಪಕಿ ಡಾ. ಮಂಜುಳ ಅವರು ಗಾಂಧಿ ಭಾರತದ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಗಾಂಧಿಯವರು ಸ್ವಚ್ಚತೆಗೆ ಹೆಚ್ಚು ಮಹತ್ವಕೊಟ್ಟಿದ್ದು ವಿದ್ಯಾರ್ಥಿಗಳಾದವರು ನಾವು ಬದುಕುವ ಪ್ರದೇಶವನ್ನು ಹಾಗೂ ದೇಶವನ್ನು ಸ್ವಚ್ಚವಾಗಿ ಇಟ್ಟುಕೊಳ್ಳುವುದರ ಕುರಿತು ಗಮನ ನೀಡಬೇಕು ಎಂದು ತಿಳಿಸಿದರು.

ಡಾ. ರವಿ ಸಹಾಯಕ ಪ್ರಾಧ್ಯಾಪಕರು ಗಾಂಧೀಜಿಯವರ ಪುಸ್ತಕಗಳನ್ನು ಓದುವುದರ ಜೊತೆಗೆ ಬದುಕಿನಲ್ಲಿ ಅವರ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರೊ ಅಮೃತೇಶ್ವರ ಬಿ ಜಿ ಅವರು ಅಧ್ಯಕ್ಷೀಯ ನುಡಿಯನ್ನು ನುಡಿಯುತ್ತಾ “ಮಹಾತ್ಮ ಗಾಂಧಿಯವರು ಭಾರತ ದೇಶಕ್ಕೆ ಸ್ವಾತಂತ್ರ ತರುವಲ್ಲಿ ಇಡೀ ದೇಶದ ನಾಯಕತ್ವವನ್ನು ವಹಿಸುತ್ತಾ ಇಡೀ ಪ್ರಪಂಚಕ್ಕೆ ಜನಪರ ಹೋರಾಟ, ಜನ ಚಳುವಳಿ ಮತ್ತು ಜನಸೇವೆ ಹೀಗಿರಬೇಕು ಎಂಬುದಕ್ಕೆ ಮಹಾತ್ಮ ಗಾಂಧಿ ಆದರ್ಶವಾಗಿದ್ದಾರೆ ಎಂದರು.

ಧೀಮಂತ ವ್ಯಕ್ತಿತ್ವದ ಗಾಂಧಿಯ ಸವಿನೆನಪು ಕರ್ನಾಟಕದ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಅದಕ್ಕೆ ತುಂಬಿದ ನೂರು ವರ್ಷವನ್ನು ಮತ್ತೊಮ್ಮೆ ನಾವು ಸಂಭ್ರಮಿಸುತ್ತ ಇರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಪ್ರತಿಪಾದಿಸಿದರು ಅದರ ಜೊತೆಗೆ ವಿದ್ಯಾರ್ಥಿಗಳಿಗೆ ಗಾಂಧಿಯ ಬದುಕಿನ ಮೌಲ್ಯಗಳನ್ನು ಮೆಲುಕು ಹಾಕಿದರು.

ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಮಹಾತ್ಮ ಗಾಂಧೀಜಿ ಕುರಿತ ರಸಪ್ರಶ್ನೆ ಸ್ಪರ್ಧೆ ಹಾಗೂ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.

ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ದರ್ಶನ ಮತ್ತು ಸಹನ ದ್ವಿತೀಯ ಬಿ ಕಾಂ, ಅಣ್ಣಯ್ಯ ಮತ್ತು ರಮೇಶ್ ನಾಯ್ಕ ಎಂ ಎ ಮತ್ತು ಬಿ ಎ,ಆಕಾಶ್ ಮತ್ತು ಗಿರೀಶ್ ದ್ವಿತೀಯ ಬಿ ಕಾಂ ಇವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.

ಭಾರತದ ಸುಸ್ಥಿರ ಅಭಿವೃದ್ಧಿಗೆ ಮಹಾತ್ಮ ಗಾಂಧೀಜಿ ವಿಚಾರಧಾರೆಯ ಅವಶ್ಯವೇ? ಎಂಬ ವಿಷಯ ಕುರಿತು ವಿದ್ಯಾರ್ಥಿಗಳಾದ ತೇಜಸ್ವಿನಿ ದ್ವಿತೀಯ ಬಿ ಎ, ದರ್ಶನ್ ದ್ವಿತೀಯ ಬಿ ಕಾಂ, ಕಾವ್ಯ ದ್ವಿತೀಯ ಬಿ ಎ ಮಾತನಾಡಿದರು.

ಸೇವಂತಿ ಸ್ವಾಗತಿಸಿದರು. ಕಾವ್ಯ ನಿರೂಪಿಸಿದರು. ಪುಷ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version