ದಿನದ ಸುದ್ದಿ
ಮಂಡ್ಯ : ‘ಗಾಂಧಿ ಗ್ರಾಮ ಪುರಸ್ಕಾರ’ ಸ್ವೀಕರಿಸಿದ ಮುತ್ತೇಗೆರೆ ಗ್ರಾಮ ಪಂಚಾಯತಿ
ಸುದ್ದಿದಿನ,ಮಂಡ್ಯ : ಜಿಲ್ಲೆಯ ಬಸರಾಳು ಹೋಬಳಿಯ ಮುತ್ತೇಗೆರೆ ಗ್ರಾಮ ಪಂಚಾಯಿತಿಯು 2017-18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು( ಅ.2ರಂದು)ನಿನ್ನೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮುತ್ತೇಗೆರೆ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಸರಕಾರಿ ಅನುದಾನಗಳ ಸಮರ್ಪಕ ಬಳಕೆ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನೈರ್ಮಲ್ಯಕ್ಕೆ ಮೊದಲ ಆದ್ಯತೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಾಧಿಸಿದ ಪ್ರಗತಿ ಜಲ ಮರುಪೂರಣಕ್ಕೆ ಆದ್ಯತೆ ಪರಿಗಣಿಸಿ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.
ಶೇಕಡ 90ರಷ್ಟು ತೆರಿಗೆ ವಸೂಲಾತಿ ನೀರಿನ ಬಿಲ್ ವಸೂಲಾತಿ ಹಂತ ಹಂತವಾಗಿ ಸಮರ್ಪಕವಾಗಿ ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆ ಹನ್ನೆರಡು ತಿಂಗಳು ನಿಯಮಾನುಸಾರ ಸಾಮಾನ್ಯ ಸಭೆಗಳನ್ನು ನಡೆಸಿ ಪಂಚತಂತ್ರಕ್ಕೆ ಅಳವಡಿಕೆ ಗ್ರಾಮ ಸಭೆ ಸ್ಥಾಯಿ ಸಮಿತಿ ಸಭೆ ಇತರೆ ಸಮಿತಿ ಸಭೆ ಶುಚಿತ್ವದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ಮಹಿಳಾ ಗ್ರಾಮ ಸಭೆ ಸಾರ್ವಜನಿಕ ರ್ಯಾಲಿಗಳನ್ನು ನಡೆಸುವ ಮೂಲಕ ಪರಿಣಾಮಕಾರಿಯಾಗಿ ಮಾಡಲಾಗಿದೆ ಪ್ರತಿ ತಿಂಗಳು ಗ್ರಾಮದ ವಿವಿಧ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ವಿನೂತನ ಕಾರ್ಯಕ್ರಮಗಳನ್ನು ಸಮಾಲೋಚನಾ ಸಭೆಗಳನ್ನು ನಡೆಸುತ್ತಿರುವುದು ಗ್ರಾಮದ ಅಂಗವಿಕಲರಿಗೆ ಮಾಹಿತಿ ಗ್ರಾಮ ಪಂಚಾಯಿತಿ ಅನುದಾನ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಂಗವಿಕಲರಿಗೆ ಪ್ರತಿ ವರ್ಷ ವಿತರಿಸುವ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗಿದೆ.
ವಿವಿಧ ಕೌಶಲ್ಯಗಳಾದ ಜೇನು ಕೃಷಿ ತೋಟಗಾರಿಕೆ ಬಯೋಗ್ಯಾಸ್ ಮಾಹಿತಿ ಕಾನೂನು ಅರಿವು ಶಿಬಿರ ಹೈನುಗಾರಿಕೆ ಮಾಹಿತಿ ನೀರು ಮತ್ತು ನೈರ್ಮಲ್ಯ ಮಾಹಿತಿ ಕಟ್ಟಡ ಕಾರ್ಮಿಕರಿಗೆ ಮಾಹಿತಿ ಮತ್ತು ನೋಂದಣಿ ಕಾರ್ಡ್ ಇತರೆ ಯೋಜನೆಗಳ ಮಾಹಿತಿ ಮತ್ತು ಗುರುತಿನ ಚೀಟಿ ವಿತರಣೆ ಬಾಪೂಜಿ ನೂರು ಸೇವೆಗಳ ಅಡಿಯಲ್ಲಿ ಸಾರ್ವಜನಿಕರಿಗೆ ವಿವಿಧ ಸೇವೆಗಳು ನಾಗರಿಕ ಸನ್ನದು ಸಮರ್ಪಕವಾಗಿ ಅನುಷ್ಠಾನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮಾಹಿತಿ ಮಳೆಗಾಲದ ಮೊದಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರಂಡಿಗಳ ದುರಸ್ತಿ ಪೈಪ್ ಕಾಂಪೋಸ್ಟ್ ಅಳವಡಿಕೆ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಜನೋಪಯೋಗಿ ಪಂಚಾಯಿತಿ ಆಗಿ ಮೂಡಿ ಬಂದ ಹಿನ್ನೆಲೆಯಲ್ಲಿ ತಜ್ಞರ ಆಯ್ಕೆ ಸಮಿತಿ ಮುತ್ತೇಗೆರೆ ಗ್ರಾಮ ಪಂಚಾಯಿತಿಯನ್ನು ಪ್ರಶಸ್ತಿಗೆ ಆಯ್ಕೆಗೊಳಿಸಿದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಜಲ ಮರುಪೂರಣ ನೈರ್ಮಲ್ಯದ ಕುರಿತು ವಿವಿಧ ಕಾಮಗಾರಿಗಳ ಅನುಷ್ಠಾನ ನರೇಗಾ ಯೋಜನೆಯಲ್ಲಿ ವಿವಿಧ ಕಾಮಗಾರಿಗಳ ಅಳವಡಿಕೆ ಮಾದರಿ ಸ್ಮಶಾನ ಅಭಿವೃದ್ಧಿ ಜೈವಿಕ ಇಂಧನ ನೆಡುತೋಪು ರಸ್ತೆ ಕುಡಿಯುವ ನೀರಿನ ವ್ಯವಸ್ಥೆ ವಸತಿ ಯೋಜನೆಗಳ ಸಮರ್ಪಕ ಅನುಷ್ಠಾನ ಯುವಕ ಯುವತಿಯರಿಗೆ ಸ್ವ ಉದ್ಯೋಗದ ಬಗ್ಗೆ ತರಬೇತಿ ಪ್ರೋತ್ಸಾಹ ಹದಿನಾಲ್ಕು ನೇ ಹಣಕಾಸು ಅನುದಾನದ ಸಂಪೂರ್ಣ ವಿನಿಯೋಗ ಮಾಡಿಕೊಳ್ಳಲಾಗಿದೆ ಎಂದರು.
ಗ್ರಾಮಸ್ಥರ ಸಹಕಾರ ಸಂಘ ಸಂಸ್ಥೆಗಳ ಉತ್ತಮ ಸಹಕಾರ ಹಾಗೂ ಬೆಂಬಲ ಆಡಳಿತ ಮಂಡಳಿಯ ಉತ್ತಮ ಕಾರ್ಯದಿಂದಾಗಿ ಈ ಪ್ರಶಸ್ತಿ ಲಭಿಸಲು ಸಹಕಾರಿಯಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಸ್.ರಾಮಕೃಷ್ಣ ರವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ3 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ4 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ7 days ago
ಮುಂದಿನ ನಾಯಕರಾಗಿ ತಯಾರಾಗಿ : ಪ್ರೊ ಇಗ್ನಿಸಿಯಸ್
-
ದಿನದ ಸುದ್ದಿ5 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ3 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ3 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ3 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ