ದಿನದ ಸುದ್ದಿ
ಗಾಂಧೀಜಿ 150 ನೇ ಜನ್ಮ ವರ್ಷಾಚರಣೆ; ಶಾಂತಿ ಮಾರ್ಗ ಸ್ತಬ್ದಚಿತ್ರಕ್ಕೆ ಸ್ವಾಗತ

ಸುದ್ದಿದಿನ ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮ ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆ ಅಂಗವಾಗಿ ಸತ್ಯ ಮಾರ್ಗ ಹಾಗೂ ಶಾಂತಿ ಮಾರ್ಗ ಎಂಬ ಎರಡು ಸ್ತಬ್ದಚಿತ್ರವನ್ನು ಆಯೋಜಿಸಲಾಗಿದ್ದು ಶಾಂತಿ ಮಾರ್ಗ ಸ್ತಬ್ದಚಿತ್ರವು ಅಕ್ಟೋಬರ್ 8 ರಂದು ಜವನಗೊಂಡನಹಳ್ಳಿ ಮೂಲಕ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿತು.
ಸ್ತಬ್ದಚಿತ್ರದಲ್ಲಿ ಬಾಲಕ ಗಾಂಧಿ, ಬ್ಯಾರಿಸ್ಟರ್ ಗಾಂಧಿ, ಭಾರತೀಯ ಸೈನ್ಯ ಶುಶ್ರೂಷಾ ಪಥದಲ್ಲಿ ಗಾಂಧಿ, ದೇಶಿ ಉಡುಪಿನಲ್ಲಿ ಗಾಂಧಿ, ಸಮಾಜ ಪರಿಶೋಧಕ ಗಾಂಧಿ, ಮಗುವಿನ ಜೊತೆ ಗಾಂಧಿ, ಬರವಣಿಗೆಯಲ್ಲಿ ನಿರತ ಗಾಂಧಿ ಹಾಗೂ ಅನಂತದೆಡೆಗೆ ಗಾಂಧಿ ಕುರಿತ ಭಾವಚಿತ್ರಗಳು ಇದರಲ್ಲಿವೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಚಿತ್ರಣವನ್ನು ನಿರ್ಮಿಸಲಾಗಿದ್ದು ಗಾಂಧಿಯೊಂದಿಗೆ ಹೋರಾಟದಲ್ಲಿ ಭಾಗವಹಿಸಿದ ಜನರ ಗುಂಪಿನ ಚಿತ್ರಣವು ಇದರಲ್ಲಿ ನಿಜರೂಪದಂತಿರುವುದು ವಿಶೇಷವಾಗಿದೆ.
ಗಾಂಧಿ ಹೇಳಿದಂತಹ ಅನೇಕ ಘೋಷ ವಾಕ್ಯಗಳ ಎಲ್ಇಡಿ ಪ್ರದರ್ಶನವು ಇದರಲ್ಲಿ ಲಭ್ಯವಿದೆ. ಗಾಂಧಿ ಹೇಳಿದ ಘೋಷಣ ವಾಕ್ಯಗಳು ಇಂದಿಗೂ ಸತ್ಯವೆನಿಸಿದ್ದು ಸಾವಿರಾರು ಮಾತುಗಳಿಗಿಂತ ಒಂದು ಚಿಕ್ಕ ಕೆಲಸವೇ ಮೇಲು, ಅಹಿಂಸೆ ಪರಮಶ್ರೇಷ್ಠವಾದದು, ನನ್ನ ಜೀವನವೇ ನನ್ನ ಸಂದೇಶ, ಅಹಿಂಸೆ ಧೈರ್ಯದ ಶಿಖರ, ಮನುಕುಲದ ದೊಡ್ಡ ಆಯುಧ ಶಾಂತಿ, ಸರಳತೆ ಎಂಬುದು ಜಾಗತಿಕ ಚಿಂತನೆಯ ಧಾತು ಎಂಬ ಘೋಷ ವಾಕ್ಯಗಳನ್ನು ಬಿತ್ತರಿಸಲಾಗುತ್ತದೆ.
ವಾಹರರ ಮೂಲಕ ಕೆಟ್ಟದ್ದನ್ನು ನೋಡಬಾರದು, ಕೆಟ್ಟದ್ದನ್ನು ಕೇಳಬಾರದು, ಕೆಟ್ಟದ್ದನ್ನು ಮಾತನಾಡಬಾರದು ಎಂಬ ಘೋಷಣೆಗಳು ಗಾಂಧೀಜಿಯವರು ಅನುಸರಿಸಿಕೊಂಡು ಬಂದಂತಹ ಮಾರ್ಗವಾಗಿದ್ದು ಇದರ ಉಲ್ಲೇಖವನ್ನು ಇಲ್ಲಿ ಕಾಣಬಹುದಾಗಿದೆ.
ಸ್ತಬ್ದಚಿತ್ರವು ಬೆಳಗ್ಗೆ 9 ಗಂಟೆಗೆ ಶಿರಾದಿಂದ ಜವನಗೊಂಡನಹಳ್ಳಿಗೆ ಆಗಮಿಸಿತು. ಬೆ.10 ಗಂಟೆಗೆ ಹಿರಿಯೂರು ಪಟ್ಟಣದಲ್ಲಿ ಸ್ವಾಗತಿಸಿ ಮೆರವಣಿಗೆ ಮೆರವಣಿಗೆ ನಡೆಸಲಾಯಿತು. ಹಿರಿಯೂರು ಪಟ್ಟಣದಲ್ಲಿ ನಗರಸಭೆ ಅಧ್ಯಕ್ಷೆ ಮಂಜುಳಮ್ಮ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾದ ರಾಜೇಶ್ವರಿಯವರು, ಸದಸ್ಯರಾದ ಚಂದ್ರಶೇಖರ್, ತಿಪ್ಪಮ್ಮ, ವನಿತ, ಮುಖಂಡರಾದ ದ್ಯಾಮೇಗೌಡರು, ಹಾಲಪ್ಪ, ಕೇಶವಮೂರ್ತಿ, ವಿಶ್ವನಾಥ, ನಿಜಲಿಂಗಪ್ಪ ಹಾಗೂ ಇನ್ನಿತರರು ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಯಲ್ಲಿ ಭಾಗವಹಿಸಿದರು.
ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಿದಾಗ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿಯವರು ಗಾಂಧೀಜಿವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಈ ವೇಳೆ ನಗರಸಭೆ ಆಯುಕ್ತರಾದ ಚಂದ್ರಪ್ಪ, ವಾರ್ತಾಧಿಕಾರಿ ಧನಂಜಯರವರು ಉಪಸ್ಥಿತರಿದ್ದರು.
ಸ್ತಬ್ದಚಿತ್ರವು ಮುಖ್ಯರಸ್ತೆಯಲ್ಲಿ ಸಾಗಿ ಮದಕರಿ ವೃತ್ತ, ಡಾ; ಬಿ.ಆರ್.ಅಂಬೇಡ್ಕರ್ ವೃತ್ತ, ಎಸ್.ಬಿ.ಐ. ವೃತ್ತ, ಗಾಂಧಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕನಕ ವೃತ್ತದವರೆಗೆ ಸಾಗಿ ಮಾಳಪ್ಪನಹಳ್ಳಿ ರಸ್ತೆ ಮಾರ್ಗವಾಗಿ ಮುರುಘಾ ಮಠದ ಮುಂಭಾಗದ ಮೂಲಕ ಎನ್.ಹೆಚ್.4 ಬೈಪಾಸ್ ಮೂಲಕ ಸಾಗಿ ಜೆ.ಸಿ.ಆರ್. ಮುಖ್ಯ ರಸ್ತೆ, ಗಾಯಿತ್ರಿ ವೃತ್ತದ ಮೂಲಕ ಒನಕೆ ಓಬವ್ವ ವೃತ್ತದವರೆಗೆ ಸಾಗಿತು.
ನಾಸಿಕ್ ಡೋಲ್ ವಿಜಾಪುರ ಗೊಲ್ಲರಹಟ್ಟಿ ಗಂಗಾಧರಪ್ಪ ಮತ್ತು ತಂಡದವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಅ.9 ರಂದು ಬೆಳಗ್ಗೆ 10 ಗಂಟೆಗೆ ಚಳ್ಳಕೆರೆ ತಲುಪಲಿದ್ದು ಮೆರವಣಿಗೆ ನಡೆಯಲಿದೆ. ನಂತರ ಮಧ್ಯಾಹ್ನ 12 ಗಂಟೆಗೆ ನಾಯಕನಹಟ್ಟಿ ಮೂಲಕ ಜಗಳೂರಿಗೆ ಸಂಚರಿಸಲಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ.

ದಿನದ ಸುದ್ದಿ
ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದಾರೆ. ಎರಡು ವಿಮಾನಗಳಲ್ಲಿ 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದು, ನಂತರ ರಾಜ್ಯ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ತಮ್ಮ ಊರಿಗೆ ತೆರಳಿದ್ದಾರೆ.
18 ಜನ ಮೈಸೂರಿಗೆ ಉಳಿದವರು ಹಾಸನ, ಚಿಕ್ಕಮಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಒಡಿಶಾ ರೈಲು ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗಿದೆ. ಬಾಲಸೋರ್ ಸರ್ಕಾರಿ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಅಲ್ಲಿನ ವೈದ್ಯಾಧಿಕಾರಿಗಳಿಂದ ರಾಜ್ಯದ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ಕನ್ನಡಿಗರ ಸುರಕ್ಷತೆ ಸಂಬಂಧ ಅಲ್ಲಿನ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೂ ಸಚಿವರು ಸಮಾಲೋಚನೆ ನಡೆಸಿದ್ದಾರೆ.
ಒರಿಸ್ಸಾದ ಪುರಿಯಲ್ಲಿ ನಡೆದ ಜಾನಪದ ಜಾತ್ರೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ 17 ಜನರ ಕಲಾವಿದರ ತಂಡ ರೈಲು ದುರಂತದ ಹಿನ್ನೆಲೆಯಲ್ಲಿ ಹಿಂದಿರುಗಿ ಬರಲಾಗದೆ ಅತಂತ್ರ ಸ್ಥಿತಿಯಲ್ಲಿದ್ದರು.
ಈ ಕಲಾತಂಡವನ್ನು ಕ್ಷೇಮವಾಗಿ ಕರೆತರಲು ನಮ್ಮ ಸರ್ಕಾರ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಿದೆ.
ಕನ್ನಡಿಗರ ಹಿತ ಕಾಯಲು ಕಾಂಗ್ರೆಸ್ ಸದಾ ಬದ್ದ.… pic.twitter.com/b5PK9akslN
— Karnataka Congress (@INCKarnataka) June 4, 2023
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್ ದರ ಕಡಿತ ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಹಾಲು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದೊಂದಿಗೆ ಚರ್ಚಿಸಬೇಕು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.
ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಎಲ್ಲರೂ ಆಗಮಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೋಲ್ಕತಾದಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ.
ಮುಂಜಾನೆ ಹೊರಡಲಿರುವ ಇಂಡಿಗೊ ವಿಮಾನ ಬೆಂಗಳೂರಿಗೆ ಬರಲಿದೆ. ಕೋಲ್ಕತಾದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರರೂ ಈ ರೈಲುಗಳಲ್ಲಿ ವಾಪಸಾಗುವ ವೇಳೆ ಈ ದುರಂತ ಸಂಭವಿಸಿದ್ದು, ತರಬೇತುದಾರರು ಸೇರಿ 32 ಜನರನ್ನು ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈಲು ದುರಂತದಲ್ಲಿ 280ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ಘೋರ, ದುರದೃಷ್ಟಕರ ಘಟನೆ. ಅಪಘಾತ ಸುದ್ದಿಯಿಂದ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಅಪಘಾತದಲ್ಲಿ ಕನ್ನಡಿಗರ ಸಾವು – ನೋವಿನ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಾಥಮಿಕ ಮಾಹಿತಿ ಪಡೆದು ಕನ್ನಡಿಗರ ರಕ್ಷಣೆಗೆ ಹಾಗೂ ಅಗತ್ಯ ನೆರವು ಒದಗಿಸಲು ಘಟನಾ ಸ್ಥಳಕ್ಕೆ ಸಚಿವ ಸಂತೋಷ್ ಲಾಡ್ ತೆರಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದುರಂತದಲ್ಲಿ ಸಿಲುಕಿದ್ದ ಕನ್ನಡಿಗರೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಅಗತ್ಯ ನೆರವು ಒದಗಿಸಿ, ಸುರಕ್ಷಿತವಾಗಿ ವಾಪಸ್ ಕರೆ ತರಲಾಗುವುದು ಎಂದು ಧೈರ್ಯ ತುಂಬಿದರು. ರಾಜ್ಯ ಸರ್ಕಾರದ ತುರ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 1070ಅಥವಾ
080-22253707 ಅಥವಾ 080 – 22340676 ಅನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆ ಘೋಷಣೆ
-
ದಿನದ ಸುದ್ದಿ3 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ5 days ago
ಹೋಟೆಲ್ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ದಿನದ ಸುದ್ದಿ5 days ago
ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ2 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ