ದಿನದ ಸುದ್ದಿ
ಗಾಂಧೀಜಿ 150 ನೇ ಜನ್ಮ ವರ್ಷಾಚರಣೆ; ಶಾಂತಿ ಮಾರ್ಗ ಸ್ತಬ್ದಚಿತ್ರಕ್ಕೆ ಸ್ವಾಗತ
![](https://suddidina.com/wp-content/uploads/2018/10/Gandhis-150th-anniversary.jpg)
ಸುದ್ದಿದಿನ ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮ ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆ ಅಂಗವಾಗಿ ಸತ್ಯ ಮಾರ್ಗ ಹಾಗೂ ಶಾಂತಿ ಮಾರ್ಗ ಎಂಬ ಎರಡು ಸ್ತಬ್ದಚಿತ್ರವನ್ನು ಆಯೋಜಿಸಲಾಗಿದ್ದು ಶಾಂತಿ ಮಾರ್ಗ ಸ್ತಬ್ದಚಿತ್ರವು ಅಕ್ಟೋಬರ್ 8 ರಂದು ಜವನಗೊಂಡನಹಳ್ಳಿ ಮೂಲಕ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿತು.
ಸ್ತಬ್ದಚಿತ್ರದಲ್ಲಿ ಬಾಲಕ ಗಾಂಧಿ, ಬ್ಯಾರಿಸ್ಟರ್ ಗಾಂಧಿ, ಭಾರತೀಯ ಸೈನ್ಯ ಶುಶ್ರೂಷಾ ಪಥದಲ್ಲಿ ಗಾಂಧಿ, ದೇಶಿ ಉಡುಪಿನಲ್ಲಿ ಗಾಂಧಿ, ಸಮಾಜ ಪರಿಶೋಧಕ ಗಾಂಧಿ, ಮಗುವಿನ ಜೊತೆ ಗಾಂಧಿ, ಬರವಣಿಗೆಯಲ್ಲಿ ನಿರತ ಗಾಂಧಿ ಹಾಗೂ ಅನಂತದೆಡೆಗೆ ಗಾಂಧಿ ಕುರಿತ ಭಾವಚಿತ್ರಗಳು ಇದರಲ್ಲಿವೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಚಿತ್ರಣವನ್ನು ನಿರ್ಮಿಸಲಾಗಿದ್ದು ಗಾಂಧಿಯೊಂದಿಗೆ ಹೋರಾಟದಲ್ಲಿ ಭಾಗವಹಿಸಿದ ಜನರ ಗುಂಪಿನ ಚಿತ್ರಣವು ಇದರಲ್ಲಿ ನಿಜರೂಪದಂತಿರುವುದು ವಿಶೇಷವಾಗಿದೆ.
ಗಾಂಧಿ ಹೇಳಿದಂತಹ ಅನೇಕ ಘೋಷ ವಾಕ್ಯಗಳ ಎಲ್ಇಡಿ ಪ್ರದರ್ಶನವು ಇದರಲ್ಲಿ ಲಭ್ಯವಿದೆ. ಗಾಂಧಿ ಹೇಳಿದ ಘೋಷಣ ವಾಕ್ಯಗಳು ಇಂದಿಗೂ ಸತ್ಯವೆನಿಸಿದ್ದು ಸಾವಿರಾರು ಮಾತುಗಳಿಗಿಂತ ಒಂದು ಚಿಕ್ಕ ಕೆಲಸವೇ ಮೇಲು, ಅಹಿಂಸೆ ಪರಮಶ್ರೇಷ್ಠವಾದದು, ನನ್ನ ಜೀವನವೇ ನನ್ನ ಸಂದೇಶ, ಅಹಿಂಸೆ ಧೈರ್ಯದ ಶಿಖರ, ಮನುಕುಲದ ದೊಡ್ಡ ಆಯುಧ ಶಾಂತಿ, ಸರಳತೆ ಎಂಬುದು ಜಾಗತಿಕ ಚಿಂತನೆಯ ಧಾತು ಎಂಬ ಘೋಷ ವಾಕ್ಯಗಳನ್ನು ಬಿತ್ತರಿಸಲಾಗುತ್ತದೆ.
ವಾಹರರ ಮೂಲಕ ಕೆಟ್ಟದ್ದನ್ನು ನೋಡಬಾರದು, ಕೆಟ್ಟದ್ದನ್ನು ಕೇಳಬಾರದು, ಕೆಟ್ಟದ್ದನ್ನು ಮಾತನಾಡಬಾರದು ಎಂಬ ಘೋಷಣೆಗಳು ಗಾಂಧೀಜಿಯವರು ಅನುಸರಿಸಿಕೊಂಡು ಬಂದಂತಹ ಮಾರ್ಗವಾಗಿದ್ದು ಇದರ ಉಲ್ಲೇಖವನ್ನು ಇಲ್ಲಿ ಕಾಣಬಹುದಾಗಿದೆ.
ಸ್ತಬ್ದಚಿತ್ರವು ಬೆಳಗ್ಗೆ 9 ಗಂಟೆಗೆ ಶಿರಾದಿಂದ ಜವನಗೊಂಡನಹಳ್ಳಿಗೆ ಆಗಮಿಸಿತು. ಬೆ.10 ಗಂಟೆಗೆ ಹಿರಿಯೂರು ಪಟ್ಟಣದಲ್ಲಿ ಸ್ವಾಗತಿಸಿ ಮೆರವಣಿಗೆ ಮೆರವಣಿಗೆ ನಡೆಸಲಾಯಿತು. ಹಿರಿಯೂರು ಪಟ್ಟಣದಲ್ಲಿ ನಗರಸಭೆ ಅಧ್ಯಕ್ಷೆ ಮಂಜುಳಮ್ಮ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾದ ರಾಜೇಶ್ವರಿಯವರು, ಸದಸ್ಯರಾದ ಚಂದ್ರಶೇಖರ್, ತಿಪ್ಪಮ್ಮ, ವನಿತ, ಮುಖಂಡರಾದ ದ್ಯಾಮೇಗೌಡರು, ಹಾಲಪ್ಪ, ಕೇಶವಮೂರ್ತಿ, ವಿಶ್ವನಾಥ, ನಿಜಲಿಂಗಪ್ಪ ಹಾಗೂ ಇನ್ನಿತರರು ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಯಲ್ಲಿ ಭಾಗವಹಿಸಿದರು.
ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಿದಾಗ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿಯವರು ಗಾಂಧೀಜಿವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಈ ವೇಳೆ ನಗರಸಭೆ ಆಯುಕ್ತರಾದ ಚಂದ್ರಪ್ಪ, ವಾರ್ತಾಧಿಕಾರಿ ಧನಂಜಯರವರು ಉಪಸ್ಥಿತರಿದ್ದರು.
ಸ್ತಬ್ದಚಿತ್ರವು ಮುಖ್ಯರಸ್ತೆಯಲ್ಲಿ ಸಾಗಿ ಮದಕರಿ ವೃತ್ತ, ಡಾ; ಬಿ.ಆರ್.ಅಂಬೇಡ್ಕರ್ ವೃತ್ತ, ಎಸ್.ಬಿ.ಐ. ವೃತ್ತ, ಗಾಂಧಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕನಕ ವೃತ್ತದವರೆಗೆ ಸಾಗಿ ಮಾಳಪ್ಪನಹಳ್ಳಿ ರಸ್ತೆ ಮಾರ್ಗವಾಗಿ ಮುರುಘಾ ಮಠದ ಮುಂಭಾಗದ ಮೂಲಕ ಎನ್.ಹೆಚ್.4 ಬೈಪಾಸ್ ಮೂಲಕ ಸಾಗಿ ಜೆ.ಸಿ.ಆರ್. ಮುಖ್ಯ ರಸ್ತೆ, ಗಾಯಿತ್ರಿ ವೃತ್ತದ ಮೂಲಕ ಒನಕೆ ಓಬವ್ವ ವೃತ್ತದವರೆಗೆ ಸಾಗಿತು.
ನಾಸಿಕ್ ಡೋಲ್ ವಿಜಾಪುರ ಗೊಲ್ಲರಹಟ್ಟಿ ಗಂಗಾಧರಪ್ಪ ಮತ್ತು ತಂಡದವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಅ.9 ರಂದು ಬೆಳಗ್ಗೆ 10 ಗಂಟೆಗೆ ಚಳ್ಳಕೆರೆ ತಲುಪಲಿದ್ದು ಮೆರವಣಿಗೆ ನಡೆಯಲಿದೆ. ನಂತರ ಮಧ್ಯಾಹ್ನ 12 ಗಂಟೆಗೆ ನಾಯಕನಹಟ್ಟಿ ಮೂಲಕ ಜಗಳೂರಿಗೆ ಸಂಚರಿಸಲಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ.
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ3 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!