ರಾಜಕೀಯ
ನವಪೀಳಿಗೆಗೆ ಗಾಂಧಿಯ ಸತ್ಯ, ಅಹಿಂಸೆ, ಸಂದೇಶ ಸಾರಲು “ಗಾಂಧಿ ಸಂದೇಶ ಯಾತ್ರೆ” ಆರಂಭ : ಬಿ ಕೆ ಹರಿಪ್ರಸಾದ್
ಸುದ್ದಿದಿನ, ಬಿಹಾರ : ಬಿಹಾರದಲ್ಲಿ ಗಾಂಧೀಜಿಯವರು ಸ್ವಾತಂತ್ರ್ಯ ಚಳುವಳಿ ಪ್ರಾರಂಭಿಸಿದ “ಚಂಪಾರಣ್” ಸ್ಥಳದಿಂದ ಪ್ರಾರಂಭವಾಗಲಿರುವ “ಗಾಂಧಿ ಸಂದೇಶ ಯಾತ್ರೆಯ” ಪೂರ್ವಭಾವಿ ಕಾರ್ಯಕಾರಿಣಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಂಗಳವಾರ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಮಾತನಾಡಿದರು.
ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಗತಿಸಿವೆ. ಈ ಹಿನ್ನಲೆಯಲ್ಲಿ ಪಕ್ಷ ದೇಶದಲ್ಲಿ ಸ್ವಾತಂತ್ರ್ಯ ಮಹೋತ್ಸವವನ್ನ ನಡೆಸಲು ಕಾಂಗ್ರೆಸ್ ಎಐಸಿಸಿ ನಿರ್ಧರಿಸಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ನಾನು ಹಾಗೂ ಹಿರಿಯರಾದ ಮುಕುಲ್ ವಾಸ್ನಿಕ್ ಅವರು ಸಹ ಸಂಚಾಲಕರಾಗಿದ್ದೇವೆ ಎಂದರು.
ಮಹಾತ್ಮ ಗಾಂಧಿಜೀಯವರು ಬ್ರಿಟಿಷರ ವಿರುದ್ಧ ರೈತ ಚಳುವಳಿಯನ್ನ ನಡೆಸಿದ ಪಶ್ಚಿಮ ಬಿಹಾರದ “ಚಂಪಾರಣ್” ಸ್ಥಳದಿಂದ “ಗಾಂಧಿ ಸಂದೇಶ ಯಾತ್ರೆ” ಯನ್ನ ಪ್ರಾರಂಭಿಸಲಿದ್ದೇವೆ. ಭಾರತ ಸ್ವಾತಂತ್ರ್ಯ ಚಳುವಳಿ ಹಾಗೂ ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಬಗ್ಗೆ ಇಡೀ ಜಗತ್ತಿಗೆ ಪ್ರೇರಣೆಯಾಗಿದೆ. ಆದ್ದರಿಂದಲೇ ಜಗತ್ತಿನ 125ಕ್ಕೂ ಹೆಚ್ಚು ದೇಶಗಳಲ್ಲಿ ಇಂದಿಗೂ ಗಾಂಧೀಜಿ ಅವರ ಜನ್ಮದಿನವನ್ನ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತಿದೆ.
ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದ 2014ರ ವರೆಗೆ ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟ ಹಾಗೂ ಅಹಿಂಸಾತ್ಮಕ ಚಳುವಳಿಯ ಬಗ್ಗೆ ಇಡೀ ಜಗತ್ತಿನ ಮೂಲೆ ಮೂಲೆಯಲ್ಲಿ ಅವರ ವಿಚಾರಧಾರೆಗಳ ಬಗ್ಗೆ ವರ್ಣನೆ ಮಾಡಲಾಗುತ್ತಿತ್ತು. ಆದರೆ ಇಂದು ಭಾರತವನ್ನ ಇಡೀ ಜಗತ್ತು ಸೂಕ್ಷ್ಮವಾಗಿ ಗಮನಿಸುತ್ತಿದೆ. ನೋಡುವಂತಹ ದೃಷ್ಟಿಕೋನ ಬದಲಾಗಿದೆ ಎಂದು ಹೇಳಿದರು.
ಭಾರತ ಇಂದು ಕವಲುದಾರಿಯಲ್ಲಿ ನಿಂತಿದೆ. ಮಹಾತ್ಮ ಗಾಂಧಿಯವರ ಸತ್ಯ, ಅಹಿಂಸೆಯ ಮಾರ್ಗದಲ್ಲಿ ನಡೆಯಬೇಕೋ ಅಥವಾ ಗೋಡ್ಸೆಯ ಸುಳ್ಳು, ಹಿಂಸೆಯ ಮಾರ್ಗದಲ್ಲಿ ನಡೆಯಬೇಕೆಂಬ ವಿಚಾರಧಾರೆಗಳ ಮಧ್ಯೆ ನಿಂತಿದೆ. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದ 2014ರವರೆಗೂ ಜಗತ್ತಿನಲ್ಲಿ ಹಾಗೂ ದೇಶದಲ್ಲಿ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸಾತ್ಮಕ ಹೋರಾಟದ ಬಗ್ಗೆ ಹೆಮ್ಮೆ ಪಟ್ಟಿದೆ.
ಆದರೆ ಇಂದು ಗಾಂಧೀಜಿಯವರನ್ನ ಕೊಂದ “ನಾಥುರಾಮ್ ಗೋಡ್ಸೆ ಒಬ್ಬ ದೇಶಭಕ್ತ” ಎಂದು ಭೋಪಾಲ್ ನ ಲೋಕಸಭಾ ಸಂಸದರು ಹೇಳಿಕೆ ಕೊಡುತ್ತಿದ್ದಾರೆ. ಗೋಡ್ಸೆಯ ದೇವಸ್ಥಾನ ಕಟ್ಟಿಸಲು ಮುಂದಾಗುತ್ತಿದ್ದಾರೆ. ಪ್ರಧಾನಮಂತ್ರಿಗಳಿಂದ ಹಿಡಿದು ಬಿಜೆಪಿಯ ಎಲ್ಲಾ ಮಂತ್ರಿಗಳವರೆಗೆ ಸುಳ್ಳು ಹೇಳುವ ಮೂಲಕ, ಗಾಂಧೀಜಿಯವರನ್ನ ಅಪಮಾನ ಮಾಡುವುದರಲ್ಲಿ ಯಾರೂ ಹಿಂದೆ ಬಿದ್ದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಭಾರತದ ನವ ಪೀಳಿಗೆ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸಾ ಚಳುವಳಿ, ಸ್ವಾತಂತ್ರ್ಯ ಹೋರಾಟ, ವಿಚಾರ ಧಾರೆಗಳ ಬಗ್ಗೆ ಅರ್ಥೈಸಿಕೊಳ್ಳಬೇಕಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಮಹೋತ್ಸವದ ಹೆಸರಿನಲ್ಲಿ ಗಾಂಧೀ ಸಂದೇಶ ಯಾತ್ರೆಯನ್ನ ನಡೆಸಲು ಯುವ ಕಾಂಗ್ರೆಸ್ ನೇತೃತ್ವವಹಿಸಿದೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 1942ರಲ್ಲಿ ಬ್ರಿಟಿಷ್ ಕ್ವಿಟ್ ಇಂಡಿಯಾ ಚಳುವಳಿ ನಡೆಯುತ್ತಿದ್ದರೆ ಅಟಲ್ ಬಿಹಾರಿ ವಾಜಪೇಯಿ, ವೀರ ಸಾವರ್ಕರ್ ಸೇರಿದಂತೆ ಬಿಜೆಪಿಯ ಮುಖಂಡರುಗಳು ಸ್ವಾತಂತ್ರ್ಯ ಚಳುವಳಿಯ ವಿರುದ್ಧ ಇದ್ದವರು.
ಆಗ ಗಾಂಧೀಜಿಯವರು, ಪಂಡಿತ್ ನೆಹರೂ, ಸೇರಿದಂತೆ ಯಾರೂ ಕೂಡ ಅವರನ್ನ ದೇಶದ್ರೋಹಿ ಎಂದು ಕರೆಯಲಿಲ್ಲ. ಆದರೆ ಈಗ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರವನ್ನ ಪ್ರಶ್ನಿಸಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ, ಪಾಕಿಸ್ತಾನಕ್ಕೆ ಹೋಗಿ ಎಂದು ಕರೆ ನೀಡುತ್ತಿದ್ದಾರೆ. ಪತ್ರಕರ್ತರು ಪ್ರಶ್ನೆ ಮಾಡಿದರೆ ಜೈಲಿಗೆ ಹಾಕಲಾಗುತ್ತಿದೆ. ಪ್ರಧಾನಿಯನ್ನ ಪ್ರಶ್ನೆ ಮಾಡಿದರೆ ಹೇಗೆ ದೇಶದ್ರೋಹಿಯಾಗುತ್ತೇವೆ? ಇಂತಹ ಹೊಸ ಪರಂಪರೆಯನ್ನ ನಾವು ಎಂದೂ ಆಲೋಚಿಸಿರಲಿಲ್ಲ ಎಂದು ಕಿಡಿಕಾರಿದರು.
ಧರ್ಮ-ಧರ್ಮಗಳ ಮಧ್ಯೆ ವಿಷಬೀಜ ಬಿತ್ತಲಾಗುತ್ತಿದೆ. ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಲಾಗುತ್ತಿದೆ, ಸಂವಿಧಾನದ ವಿರುದ್ಧ ಘೋಷಣೆಗಳನ್ನ ಕೂಗಲಾಗುತ್ತಿದೆ. 2015ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಎಸ್ ಎಸ್ ನ ಮುಖ್ಯಸ್ಥ ಮೋಹನ್ ಭಾಗವತ್ ಸ್ವಯಂ ಹೇಳಿಕೆ ನೀಡಿದ್ದರು” ಸಂವಿಧಾನ ಬದಲಾವಣೆ ಮಾಡುತ್ತೇವೆ” ಎಂದು.
ಕರ್ನಾಟಕದ ಒಬ್ಬ ಸಂಸದ ಕೇಂದ್ರ ಸಚಿವರಾಗಿದ್ದಾಗ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ “ನಾವು ಬಂದಿದ್ದೇ ಸಂವಿಧಾನವನ್ನ ಬದಲಾವಣೆ ಮಾಡಲು”. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿಯವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನ ಮಾಡುತ್ತಿದ್ದೇವೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಲಕ್ಷಾಂತರ ಜನರ ತ್ಯಾಗ, ಬಲಿದಾನವನ್ನ ದೇಶದ ಜನರಿಗೆ ಮನವರಿಕೆ ಮಾಡುವ ಅಗತ್ಯತೆ, ಅನಿವಾರ್ಯತೆ ಹೆಚ್ಚಿದೆ.
ಪತ್ರಿಕಾಗೋಷ್ಠಿಯಲ್ಲಿ ಬಿಹಾರ ಎಐಸಿಸಿ ಉಸ್ತುವಾರಿ ಶ್ರೀ ಭಕ್ತ್ ಚರಣ್ ದಾಸ್, ಬಿಹಾರ ಪ್ರದೇಶ ಸಮಿತಿ ಅಧ್ಯಕ್ಷ ಡಾ ಮದನ್ ಮೋಹನ್ ಝಾ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಸೇರಿದಂತೆ ಪ್ರಮುಖ ಮುಖಂಡರು ಭಾಗಿಯಾಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಲ್ಲದೆ, ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಜಮೀನು ಮಂಜೂರು ಆಗಿ ಪೋಡಿ ಆಗದೇ ಪ್ರತ್ಯೇಕ ಪಹಣಿ ಬರದೇ ಇರುವುದರಿಂದ ಅಂತಹವುಗಳನ್ನು ಗೈರು ವಿಲೇ ಕಡತವನ್ನು ಮಾಡಲಾಗಿದ್ದು, ಸುಮಾರು 4000 ಜನರಿಗೆ ಈ ಗೈರು ವಿಲೇ ಕಡತವನ್ನು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯೂ 3ನೇ ಸ್ಥಾನವನ್ನು ಹೊಂದಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


