Connect with us

ದಿನದ ಸುದ್ದಿ

ಗಣೇಶ ಚತುರ್ಥಿ; ಗಣೇಶ ಪ್ರತಿಷ್ಠಾಪನೆಗೆ ಸಿದ್ಧವಾಯ್ತು ಭವ್ಯವಾದ ಮಂಟಪ

Published

on

ಸುದ್ದಿದಿನ ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ವಿವಿಧ ತರಹ ಗಣಪ ಮೂರ್ತಿಗಳ ಪ್ರತಿಷ್ಠಾಪನೆಗೊಂಡಿದ್ದು, ನಾಗರಿಕರ ಆಕರ್ಷಣೀಯ ಕೇಂದ್ರ ಬಿಂದುಗಳಾಗಿ ಗಮನ ಸೆಳೆದಿವೆ. ದಾವಣಗೆರೆಯ ವಿವಿಧ ಬಡಾವಣೆ, ನಗರ, ಕಾಲೊನಿಗಳಲ್ಲಿ ತರಾವರಿ ಗಣಪನ ಮೂರ್ತಿಗಳು ಪ್ರತಿಷ್ಠಾಪನೆಗೊಂಡಿವೆ. ಅವುಗಳಲ್ಲಿ ಹಿಂದು ಮಹಾಸಭಾದ ಗಣಪ ವಿಶಿಷ್ಟ, ಆಕರ್ಷಣೀಯ ಕೇಂದ್ರವಾಗಿದೆ.

ಪ್ರತಿ ವರ್ಷ ರಾಂ ಆಂಡ್ ಕೋ ವೃತ್ತದಲ್ಲಿ ಪ್ರಯಿಷ್ಠಾಪನೆಗೊಳ್ಳುತ್ತಿದ್ದ ಈ ಬಾರಿ ಸ್ಥಳಾಂತರ ಗೊಂಡಿದ್ದು, ವಿಶಾಲವಾದ ಹೈಸ್ಕೂಲ್ ಮೈದಾನಕ್ಕೆ ಬಂದಿದ್ದಾನೆ. ಹಿಂದು ಮಹಾಸಭಾ ಈ ಬಾರಿ ಹೈಸ್ಕೂಲ್ ಮೈದಾನದಲ್ಲಿ ಭವ್ಯವಾದ ಮಂಟಪ ನಿರ್ಮಾಣ ಮಾಡಲಾಗಿದೆ.

60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಯ್ತು ಭವ್ಯವಾದ ಮಂಟಪ:
ಅಂದಾಜು 60 ಲಕ್ಷ ರೂ. ವೆಚ್ಚದಲ್ಲಿ 35×30 ಅಡಿ ಸುತ್ತಳತೆಯ ವೇದಿಕೆ ಹಾಗೂ 50×100 ಅಡಿ ಸುತ್ತಳತೆಯ ಭವ್ಯ ಸಭಾಂಗಣದಲ್ಲಿ ಒಡಿಶಾದ ಕೃಷ್ಣ ದೇವಾಲಯದ ಮಾದರಿಯ ಮಂಟಪ ನಿರ್ಮಾಣವಾಗಿದೆ. ಇದನ್ನು ನೋಡುವುದೇ ಕಣ್ಣುಗಳಿಗೆ ಒಂದು ಹಬ್ಬ. ಈ ಭವ್ಯವಾದ ಮಂಟಪವನ್ನು ಪಶ್ಚಿಮ ಬಂಗಾಳದ ಬರ್ದ್ವಾನ್ ಜಿಲ್ಲೆಯ ಕಟ್ವಾದ ಸತ್ಯನಾರಾಯಣದತ್ತ‌ ಮತ್ತವರ ನಿರ್ಮಾಣ ಮಾಡಿದೆ. ಅಂದಾಜು 60 ಅಡಿ ಎತ್ತರದ ಮಂಟಪ ನಿರ್ಮಾಣಕ್ಕೆ ನಾಲ್ಕು ಸಾವಿರ ಪೋಲ್ಸುಗಳನ್ನು ಬಳಸಲಾಗಿದೆ. ಇಲ್ಲಿ 13 ಅಡಿ ಎತ್ತರದ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ಮೂಕಾಸುರನ ಸಂಹಾರ ರೂಪಕ ಪ್ರದರ್ಶನ:
ಪ್ರತಿ ವರ್ಷವೂ ಒಂದಿಲ್ಲೊಂದು ಕಥಾರೂಪಕ ಪ್ರದರ್ಶನ ಮಾಡುವ ಹಿಂದು ಮಹಾಸಭಾ, ಈ ಬಾರಿ ಮೂಕಾಸುರ ಸಂಹಾರ ರೂಪಕ ಪ್ರದರ್ಶನ ಏರ್ಪಡಿಸಿದೆ. ಮೂಕಾಸುರನ ಸಂಹಾರದ ಕಥೆ ಆರಾಧಾರಿತ ರೂಪಕ ಪ್ರತಿದಿನ ಸಂಜೆ 10 ನಿಮಿಷ ಪ್ರದರ್ಶನಗೊಳ್ಳಲಿದೆ. ಕಳೆದ ಬಾರಿ ರೇಣುಕಾ ಎಲ್ಲಮ್ಮ ಚರಿತ್ರೆ ಪ್ರದರ್ಶನವಾಗಿತ್ತು. ಮಂಟಪದ ಮುಂಭಾಗ ಮಕ್ಕಳಿಗೆ ಮನರಂಜನೆಗಾಗಿ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending