ಲೈಫ್ ಸ್ಟೈಲ್
ಪಿಓಪಿ ವಿಗ್ರಹ ತ್ಯಜಿಸೋಣ, ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸೋಣ
ಪ್ರತಿ ವರ್ಷದಂತೆ ಈ ವರ್ಷವೂ ಆನೆ ಸೊಂಡಿಲಿನ ಗಣಪನನ್ನು ಬರಮಾಡಿಕೊಳ್ಳಲು ಎಲ್ಲರೂ ಕಾತುರದಲ್ಲಿದ್ದಾರೆ. ಡೊಳ್ಳು ಹೊಟ್ಟೆ ಗಣಪ ಮಕ್ಕಳಿಗೆ ಹಾಗೂ ಯುವಕರಿಗೆ ಪ್ರಿಯವಾದವ. ಹಾಗಾಗಿ ಅವನ ಬರುವಿಕೆಗೆ ಈಗಾಗಲೇ ತಯಾರಿ ನಡೆದಿದೆ. ಆದರೆ ಈ ಬಾರಿ ಪರಿಸರಕ್ಕೆ ಅಪಾಯಕಾರಿಯಾದ ಪಿಓಪಿ ಗಣೇಶ ಮೂರ್ತಿ ತ್ಯಜಿಸಿ. ಪರಿಸರ ಸ್ನೇಹಿಯಾಗಿ ಮೂಷಕನನ್ನು ವಾಹನವನ್ನಾಗಿಸಿಕೊಂಡ ಗಣಪನನ್ನು ಸಂಭ್ರಮದಿಂದ ಬರ ಮಾಡಿಕೊಳ್ಳುವುದರೊಂದಿಗೆ, ಪರಿಸರ ಸಂರಕ್ಷಣೆಗೆ ಕೈಜೋಡಿಸುವ ಕಾರ್ಯವನ್ನು ಮಾಡಬೇಕಿದೆ.
ಪರಿಸರ ಮತ್ತು ಜಲಚರಗಳಿಗೆ ಅಪಾಯಕಾರಿಯಲ್ಲದ ಜೇಡಿ ಮಣ್ಣಿನಿಂದ ತಯಾರಿಸಿದ ಮತ್ತು ನೈಸರ್ಗಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಮನೆಗಳಲ್ಲಿ ಪ್ರತಿಷ್ಠಾಪಿಸಿ, ಮನೆಯ ಬಕೆಟ್ ನೀರಿನಲ್ಲಿಯೇ ವಿಸರ್ಜಿಸಿದರೆ ಪರಿಸರ ಸ್ನೇಹಿ ಹಬ್ಬ ಆಚರಿಸಿದಂತಾಗುತ್ತದೆ.
ಏನಿದು ಪಿಒಪಿ ಗಣೇಶ ಮೂರ್ತಿ..?
ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸುವ ಗಣೇಶ ಮೂರ್ತಿಗಳು ಹಾನಿಕಾರಕ ರಾಸಾಯನಿಕಗಳಿಂದ ಕೂಡಿರುತ್ತವೆ. ಹೀಗಾಗಿ ಪಿಒಪಿ ಮೂರ್ತಿಗಳನ್ನು ನೀರಿನಲ್ಲಿ ಮುಳುಗಿಸಿದಾಗ ಅದು ಕರಗದೆ ಜಲಮೂಲಗಳು ಕಲುಷಿತಗೊಂಡು ನೀರಿನಲ್ಲಿನ ಜಲಚರಗಳಿಗೂ ಮತ್ತು ಪರಿಸರಕ್ಕೂ ಹಾನಿಯುಂಟು ಮಾಡುತ್ತವೆ.
ಅಪಾಯಕಾರಿಯಾದ ಪಿಒಪಿ ಮೂರ್ತಿ
ಪಿಒಪಿ ಗಣೇಶ ಮೂರ್ತಿಗಳಲ್ಲಿ ಕ್ಯಾಲ್ಸಿಯಂ ಸಲ್ಫೇಟ್ ಅಂಶವಿರುತ್ತದೆ. ಅದಲ್ಲದೆ ವಿಗ್ರಹ ತಯಾರಿಸಲು ಬಳಸುವ ರಾಸಾಯನಿಕ ಬಣ್ಣಗಳು, ಪಾದರಸ, ಕ್ರೋಮಿಯಂ, ಸೀಸದಂಥ ಭಾರ ಲೋಹದ ಅಂಶಗಳು ಪಿಒಪಿ ಮೂರ್ತಿಗಳಲ್ಲಿ ಇರುತ್ತವೆ. ಈ ಅಂಶ ಹೊಂದಿರುವ ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಿದಾಗ ಕ್ಯಾಲ್ಸಿಯಂ ಸಲ್ಫೇಟ್ ಮತ್ತು ಭಾರದ ಲೋಹಗಳು ನೀರಿನ ತಳವನ್ನು ಸೇರುತ್ತವೆ. ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ವಿಸರ್ಜಿಸಿದ ನೀರಿನಲ್ಲಿ ಕಬ್ಬಿಣದ ಅಂಶ 10 ಪಟ್ಟು ಮತ್ತು ತಾಮ್ರದ ಅಂಶವೂ 20 ಪಟ್ಟು ಜಾಸ್ತಿಯಾಗುತ್ತದೆ ಹೀಗಾಗಿಯೇ ನೀರು ಕಲುಷಿತಗೊಂಡು ನೀರಿನಲ್ಲಿ ಇರುವ ಜಲಚರಗಳಿಗೆ ಅಪಾಯ ಉಂಟಾಗುತ್ತದೆ.
ಜನರಲ್ಲಿ ಜಾಗೃತಿ
ಪಿಒಪಿ ವಿಗ್ರಹಗಳಿಂದಾಗುವ ಹಾನಿಯ ಕುರಿತು ಜಿಲ್ಲಾಡಳಿತ, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಸಂಘ ಸಂಸ್ಥೆಗಳು, ಪರಿಸರವಾದಿಗಳು ನಿರಂತರವಾಗಿ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ. ಪಿಓಪಿ ವಿಗ್ರಹ ಬಿಟ್ಟು ಮಣ್ಣಿನಿಂದ ಮಾಡಿದ ನೈಸರ್ಗಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಪೂಜಿಸಿ ಹಬ್ಬ ಆಚರಿಸಿದರೆ ಸಂಭ್ರಮಕ್ಕೆ ಕೊರತೆಯುಂಟಾಗುವುದಿಲ್ಲ ಹಾಗೂ ಪರಿಸರಕ್ಕೂ ಧಕ್ಕೆ ಆಗುವುದಿಲ್ಲ. ಪ್ರಕೃತಿ ವಿರುದ್ಧವಾಗಿ ನಡೆದರೆ ಅದರಿಂದ ಅಪಾಯ ತಪ್ಪಿದ್ದಲ್ಲ ಎಂಬುದನ್ನು ಅರಿತು ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ಸನ್ನದ್ಧರಾಗೋಣ.
ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಅನೇಕ ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಉಂಟಾದ ನೋವು ಇನ್ನೂ ಮಾಸಿಲ್ಲ. ಪರಿಸರವನ್ನು ರಕ್ಷಿಸದೇ ನಾಶ ಮಾಡುತ್ತಿರುವುದರಿಂದ ಇಂತಹ ಪ್ರಕೃತಿ ವಿಕೋಪಗಳು ನಡೆಯುತ್ತವೆ. ಪ್ರಕೃತಿಗೆ ಮಾರಕವಾದದ್ದನ್ನೇ ಮನುಷ್ಯ ಮಾಡಲು ಹೊರಟಿದ್ದಾನೆ. ಹೀಗಾಗಿ ಪ್ರಕೃತಿಯೇ ಮನುಷ್ಯನಿಗೆ ಪಾಠ ಕಲಿಸುತ್ತಿದೆ ಎಂಬುದನ್ನು ಅರಿಯಬೇಕು. ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಪ್ರತಿಜ್ಞೆ ಮಾಡೋಣ.
ಪಿಓಪಿ ವಿಗ್ರಹಗಳು ಕಂಡುಬಂದರೆ ಹೀಗೆ ಮಾಡಿ
ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ಪಿಓಪಿ ವಿಗ್ರಹಗಳ ನಿಷೇಧಕ್ಕೆ ಈಗಾಗಲೇ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳ ಸಭೆ ನಡೆಸಿ ತಿಳುವಳಿಕೆ ನೀಡಿದೆ. ಹೊರ ಜಿಲ್ಲೆಗಳಿಂದ ಆಮದಾಗುವ ಪಿಓಪಿ ಗಣೇಶ ವಿಗ್ರಹಗಳನ್ನು ತಡೆಯಲು ಜಿಲ್ಲೆಯ ಗಡಿಭಾಗದಲ್ಲಿ ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್, ನಗರ ಸ್ಥಳೀಯ ಸಂಸ್ಥೆ, ವಾಣಿಜ್ಯ ತೆರಿಗೆ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನೊಳಗೊಂಡ ತಂಡಗಳನ್ನು ರಚಿಸಿ, ಜಿಲ್ಲೆಯಾದ್ಯಂತ ಗಣೇಶ ವಿಗ್ರಹಗಳ ತಯಾರಕರು ಮತ್ತು ಮಾರಾಟ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ತಂಡಗಳಿಗೆ ಪ್ರಜ್ಞಾವಂತ ಸಾರ್ವಜನಿಕರು ಸಹಕಾರ ನೀಡುವುದು ಅಗತ್ಯವಾಗಿದೆ, ಪಿಓಪಿ ವಿಗ್ರಹಗಳ ತಯಾರಿಕೆ ಮತ್ತು ಮಾರಾಟ ಕಂಡುಬಂದರೆ ಕೂಡಲೇ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ವಿಜಯಕುಮಾರ್ ಕಡಕ್ಬಾವಿ (9448141262) ಅಥವಾ ಉಪಪರಿಸರ ಅಧಿಕಾರಿ ಶೋಭಾ ಗಜಕೋಶ (9449060674) ದೂರವಾಣಿಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು.
– ಸ್ಮಿತಾ ಅಂಗಡಿ
ಅಪ್ರೆಂಟಿಸ್ ತರಬೇತಾರ್ಥಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ9 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


