Connect with us

ದಿನದ ಸುದ್ದಿ

ದಾವಣಗೆರೆ | ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬ;ಪಟ್ಟಣದಾದ್ಯಂತ್ಯ ಸಿಸಿ ಕ್ಯಾಮೆರಾ : ಡಿಸಿ ಜಿ.ಎಂ. ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ಶಾಂತಯುತ, ಸೌಹಾರ್ಧ ಹಾಗೂ ಸಂಭ್ರಮದಿಂದ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಜನರಲ್ಲಿ ಮನವಿ ಮಾಡಿದರು.

ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬುಧುವಾರ ತುಂಗಭದ್ರಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾಗರೀಕ ಸೌಹಾರ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಣೇಶ ಚತುರ್ಥಿಯನ್ನು ಪ್ರತಿ ವರ್ಷದ ಆಚರಣೆಯಂತೆ ಹಾಗೂ ಸಾಂಪ್ರದಾಯಿಕವಾಗಿ ಈ ವರ್ಷವೂ ಆಚರಿಸಬೇಕು.

ಸಾರ್ವಜನಿಕವಾಗಿ ಗಣೇಶನ ಮೂರ್ತಿ ಪ್ರತಿಷ್ಟಾಪಿಸುವ ಪ್ರತಿಯೊಬ್ಬರು ಸಂಬಂಧ ಪಟ್ಟ ಇಲಾಖೆಯಿಂದ ಅನುಮತಿ ಪಡೆದುಕೊಂಡು ಪರಿಸರಕ್ಕೆ ಮಾರಕವಾಗಿರುವ ಪಿಓಪಿ ಗಣೇಶ ಮೂರ್ತಿಗಳ ಬಳಕೆ ಮಾಡದೇ, ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಟಾಪಿಸಬೇಕು ಎಂದು ತಿಳಿಸಿದರು.

ಸರ್ಕಾರ ಈಗಾಗಲೇ ಹಬ್ಬದ ಆಚರಣೆಗೆ ನಿರ್ದೇಶನಗಳನ್ನು ನೀಡಿದ್ದು, ಗಜಾನನ ಉತ್ಸವ ಸಮಿತಿಯವರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಪೆಂಡಾಲ್ ನಿರ್ಮಿಸಬೇಕು, ಪೆಂಡಾಲಗಳಲ್ಲಿ ಅವಘಡ ಸಂಭವಿಸದಂತೆ ಎಚ್ಚರವಹಿಸಬೇಕು, ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಬಾರದು. ಮೂರ್ತಿ ಪ್ರತಿμÁ್ಠಪನೆಗೆ ಧ್ವನಿವರ್ಧಕಗಳ ಬಳಕೆಗೆ ಅಧಿಕೃತವಾಗಿ ಪರವಾನಗಿ ಪಡೆಯಬೇಕು. ಹಸಿರು ಪಟಾಕಿ ಬಳಸಿ. ಆಸ್ಪತ್ರೆ, ಶಾಲಾ, ಕಾಲೇಜು ಅಕ್ಕಪಕ್ಕದಲ್ಲಿ ಪಟಾಕಿ ಸಿಡಿಸುವಂತಿಲ್ಲ. ಮತ್ತು ಸುರಕ್ಷತೆ ದೃಷ್ಟಿಯಿಂದ ಪಟ್ಟಣದಾದ್ಯಂತ್ಯ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು. ಅಹಿತಕರ ಘಟನೆಗಳು ಜರುಗದಂತೆ ಎಚ್ಚರವಹಿಸಲಾಗುವುದು. ಗಣೇಶ ವಿಸರ್ಜನೆಗೆ ನಿಗಧಿ ಮಾಡುವ ರಸ್ತೆಯನ್ನು ಬದಲಿಸಬಾರದು. ನಿಗದಿತ ಸಮಯದಲ್ಲಿಯೇ ಗಣೇಶ ಮೂರ್ತಿ ವಿಸರ್ಜನೆ ಮಾಡಬೇಕು ಎಂದರು.

ಯಾವುದೇ ರೀತಿಯಾಗಿ ದಾರಿ ಮಧ್ಯದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿμÁ್ಠಪಿಸಿ ಜನರಿಗೆ ಓಡಾಡಲು ತೊಂದರೆಯಾಗುವಂತೆ ಮಾಡಬಾರದು ಪ್ರತಿಯೊಬ್ಬರು ಯಾವುದೇ ರೀತಿಯಾಗಿ ಅಹಿತಕರ ಘಟನೆಗಳು ಸಂಭವಿಸದಂತೆ ಗಣೇಶನ ಚತುರ್ಥಿ ಆಚರಣೆ ಮಾಡಿ ಎಂದು ತಿಳಿಸಿದರು.

ಸಮಾಜದ ಮುಖಂಡರು ಹಾಗೂ ಹಿರಿಯರು ಯುವಕರಿಗೆ ತಿಳಿವಳಿಕೆಯನ್ನು ನೀಡಿ ಈದ್ ಮಿಲಾದ್ ಹಾಗೂ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ವಾಟ್ಸ್‍ಪ್ ಮೂಲಕ ಬರುವ ಅನಗತ್ಯ ವಿಷಯಗಳನ್ನು ನಂಬಬಾರದು, ಒಂದು ವೇಳೆ ಅನಗತ್ಯ ಸಂದೇಶಗಳನ್ನು ಫಾರ್ವರ್ಡ್ ಮಾಡುವವರ ಬಗ್ಗೆ ತಿಳಿದುಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಮಾಜ, ಕಾನೂನು, ದೇಶ , ಹಾಗೂ ಸಂವಿಧಾನ ಬಿಟ್ಟು ನಾವ್ಯಾರೂ ದೊಡ್ಡವರಲ್ಲ, ಆದ್ದರಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಎಲ್ಲ ವರ್ಗದ ಜನರು ವ್ಯವಸ್ಥೆಗೆ ಸಹಕರಿಸಿ ಪರಸ್ಪರ ಗೌರವ ಕೊಟ್ಟು ತಾವೆಲ್ಲರೂ ಶಾಂತಯುತವಾಗಿ ಹಬ್ಬಗಳನ್ನು ಆಚರಣೆ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾತನಾಡಿ ಗಣೇಶ ಉತ್ಸವÀಗಳು ನಮ್ಮ ಸಂಸ್ಕøತಿ, ಸಂಪ್ರದಾಯಗಳನ್ನು ಬಿಂಬಿಸುವ ಉತ್ಸವಗಳಾಗಬೇಕು, ವಿನಾಕಾರಣ ಗೊಂದಲದ ವಾತಾವರಣ ಸೃಷ್ಟಿಯಾಗಬಾರದು. ಪೆÇಲೀಸ್ ಇಲಾಖೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಗಣೇಶ ಪ್ರತಿಷ್ಟಾಪಿಸಿರುವ ಕಡೆಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು, ಅದು ನಿಮಗೂ, ನಮಗೂ ಹೆಚ್ಚು ಅನುಕೂಲ, ಯಾವುದೇ ರೀತಿ ಅಹಿತಕರ ಘಟನೆಗಳು ನಡೆದಯಂತೆ ತಡೆಯಬಹುದಾಗಿದೆ ಎಂದು ಹೇಳಿದರು.

ಸಾರ್ವಜನಿಕವಾಗಿ ವಿವಿಧ ಸಂಘ ಸಂಸ್ಥೆಗಳು ಗಣೇಶ ಪ್ರತಿಷ್ಟಾಪಿಸುವ ಮುನ್ನ ಪಾಲಿಸಬೇಕಾದ ನಿಯಮ ಹಾಗೂ ನಿಬಂಧನಗಳನ್ನು ಪಾಲಿಸಬೇಕು, ಮುಖ್ಯವಾಗಿ ಗಣೇಶ ಪ್ರತಿಷ್ಟಾಪಿಸುವ ಸ್ಥಳದ ಮಾಹಿತಿ ಹಾಗೂ ಸ್ಥಳದ ಮಾಲೀಕರಿಂದ, ಪೊಲೀಸ್ ಇಲಾಖೆಯ ಅನುಮತಿ ಕಡ್ಡಾಯವಾಗಿ ಪಡೆದಿರಬೇಕು.

ಗಣೇಶ ಹಬ್ಬವನ್ನು ಶ್ರದ್ದಾಭಕ್ತಿ, ಶಾಂತಿ ಮತ್ತು ಸೌಹಾರ್ಧತೆಯ ಸಂಕೇತವಾಗಿ ಆಚರಿಸಬೇಕು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಬ್ಬಗಳ ಆಚರಣೆಯಲ್ಲಿ ದುಂದು ವೆಚ್ಚಗಳಿಗೆ ಅವಕಾಶ ನೀಡದೇ ಧಾರ್ಮಿಕತೆ ಸಾರುವಂತಿರಬೇಕು. ಭಾವೈಕ್ಯತೆ ಬಿತ್ತುವ ಮೂಲಕ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ಆಚರಣೆ ಮಾಡಬೇಕು. ಇಂತಹ ಅವಕಾಶಗಳ ಬಳಕೆ ಮಾಡಿಕೊಂಡು ಶಾಂತಿ ಕದಡಲು ಪ್ರಯತ್ನಿಸುವ ಕಿಡಿಗೇಡಿಗಳ ಮೇಲೆ ಇಲಾಖೆ ಹೆಚ್ಚಿನ ನಿಗಾ ವಹಿಸುತ್ತದೆ, ಇಲಾಖಾ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ಗಣೇಶ ವಿಸರ್ಜನೆ ವೇಳೆ ಕರ್ಕಶವಾದ ಸದ್ದು ಮಾಡುವುದು ನಿಷೇಧಿಸಲಾಗಿದೆ, ಹಿರಿಯರು, ಆನಾರೋಗ್ಯದಿಂದ ಬಳಲುತ್ತಿರುವ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳಬೇಕೆಂದರು.

ಸಮಾಜದ ಮುಖಂಡರು ಹಾಗೂ ಹಿರಿಯರು ಯುವಕರಿಗೆ ತಿಳಿವಳಿಕೆಯನ್ನು ನೀಡಿ ಈದ್-ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಮುಸ್ಲಿಂ ಭಾಂದವರು ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ಧತೆಯಿಂದ ಆಚರಿಸಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಆಯುಕ್ತರಾದ ರೇಣುಕಾ ಮಾತನಾಡಿ ಮನೆಗಳಲ್ಲಿನ ಚಿಕ್ಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಪ್ರಮುಖ ಸರ್ಕಲ್‍ಗಳಲ್ಲಿ 30 ಮೊಬೈಲ್ ಟ್ಯಾಂಕರ್‍ಗಳನ್ನು ಅಳವಡಿಸಲಾಗಿರುತ್ತದೆ. ವಿಸರ್ಜನೆ ಮಾಡುವ ವೇಳೆ ಒಂದು ಕಡೆ ಮೂರ್ತಿ ಕೊಡುವುದು, ಇನ್ನೊಂದು ಕಡೆ ಹೂವು, ಪೇಟ ಇತ್ಯಾದಿಗಳನ್ನು ಕೊಡಬೇಕು. ಹಾಗೂ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಶಿರಮಗೊಂಡನಹಳ್ಳಿಯಲ್ಲಿ ಟ್ಯಾಂಕರ್‍ಗಳನ್ನು ಅಳವಡಿಸಲಾಗಿದೆ. ಮತ್ತು ಪಾಕಿರ್ಂಗ್ ಕುಡಿಯುವ ನೀರು, ಲೈಟ್, ಸಿ.ಸಿ ಕ್ಯಾಮೆರಾಗಳ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ತಿಳಿಸಿದರು.

ಪಾಲಿಕೆಯಲ್ಲಿ ಮೂವರು ಅಧಿಕಾರಿಗಳನ್ನು ನೇಮಿಸಿ, ಗಣೇಶ ಮೂರ್ತಿ ಪ್ರತಿಷ್ಟಾಪಿಸಲು ಬೇಕಾದ ಎನ್.ಓ.ಸಿ ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪ ವಿಭಾಗಾಧಿಕಾರಿ ಸಂತೋಷ ಪಾಟೀಲ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ ಸಂತೋಷ ಮಂಜುನಾಥ್ ಹಾಗೂ ಇನ್ನಿತರೆ ಪೊಲೀಸ್ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending