Connect with us

ದಿನದ ಸುದ್ದಿ

ಯೋಗ ದಿನಕ್ಕೆ ಸಾರ್ವತ್ರಿಕ ರಜೆ ಘೋಷಣೆ ಪ್ರಸ್ತಾವ

Published

on

ವಿಶ್ವ ಯೋಗ ದಿನಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಿದ್ಧವಾಗಿದೆ. ಕಳೆದ ಬಾರಿ 56 ಸಾವಿರ ಮಂದಿಯನ್ನು ಒಂದೆಡೆ ಕಲೆಹಾಕಿ ಗಿನ್ನಿಸ್ ದಾಖಲೆ ಮಾಡಿದ್ದ ಯೋಗ ಸಂಸ್ಥೆಗಳು ಹಾಗೂ ಜಿಲ್ಲಾಡಳಿತವು ಈ ಬಾರಿ ಗರಿಷ್ಠ ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಿದೆ. ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ನಡೆಸಿರುವ ತಯಾರಿಗಳು, ಮೈಸೂರಿನಲ್ಲೇ ಏಕೆ ಇಷ್ಟು ದೊಡ್ಡ ಕಾರ್ಯಕ್ರಮ ನಡೆಸಬೇಕೆಂಬುದನ್ನು ಜಿಎಸ್‍ಎಸ್ ಯೋಗಿಕ್ ಫೌಂಡೇಶನ್‍ನ ಮುಖ್ಯಸ್ಥ ಶ್ರೀ ಹರಿ( ಮೊ. 98862 08000)  ಅವರು ವಿವರಿಸಿದ್ದಾರೆ.
  • ಮೈಸೂರು ಯೋಗದ ವಿಶೇಷತೆಗಳೇನು?
ಮೈಸೂರು ಯೋಗವನ್ನು ಒಂದು ದೊಡ್ಡ ಬ್ರಾಂಡ್ ಮಾಡುವ ಉದ್ದೇಶದಿಂದ ಈ ಹೆಸರಿಡಲಾಗಿದೆ. ಯಾರೇ ಯೋಗ ಮಾಡಿದರೂ ಒಂದೆ. ನಮ್ಮಲ್ಲಿ ಐದು ದೊಡ್ಡ ಯೋಗ ಸಂಸ್ಥೆಗಳಿವೆ. ಎಲ್ಲರೂ ಯೋಗ ಮಾಡುತ್ತಾರೆ. ಯಾರು ದೊಡ್ಡವರು ಯಾರ ಚಿಕ್ಕವರು ಎಂಬ ಮನೋಭಾವನೆ ಬರಬಾರದು ಎಂಬ ಕಾರಣಕ್ಕೆ ಮೈಸೂರು ಯೋಗವನ್ನು ನಮ್ಮೆಲ್ಲರ ಬ್ರಾಂಡ್ ಮಾಡಿಕೊಳ್ಳಲಾಗಿದೆ. ಮೈಸೂರು ಮೊದಲೇ ಯೋಗಕ್ಕೆ ಪ್ರಸಿದ್ಧಿಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಬ್ರಾಂಡ್ ಇನ್ನಷ್ಟು ಹೆಸರು ತಂದಕೊಡುತ್ತದೆ ಎಂಬುದು ಇದರ ಹಿಂದಿನ ಉದ್ದೇಶ. ಹೀಗೆ ನಾವೆಲ್ಲರೂ ಒಂದಾದ ಕಾರಣ ಕಳೆದ ವರ್ಷ ವಿಶ್ವ ಯೋಗ ದಿನದಂದು ದೊಡ್ಡ ಸಾಧನೆ ಮಾಡಲು ಸಾಧ್ಯವಾಯಿತು.
  • ಯೋಗ ಮಾಡಲು ಮೈಸೂರುನಗರ ಏಕೆ ಶ್ರೇಷ್ಠ ಸ್ಥಳ ?
ಒಂದು ರೀತಿಯಲ್ಲಿ ಹೇಳುವುದಾದರೆ ಮೈಸೂರು ಒಂದು ವಿಶಾಲವಾದ ಸ್ಥಳ. ಇಲ್ಲಿನ ಹವಾಗುಣ ಎಲ್ಲರನ್ನು ಸೆಳೆಯಬಲ್ಲದು. ಅರಣ್ಯ ಸಂಪತ್ತು ಯತೇಚ್ಛವಾಗಿರುವುದರಿಂದ ನಗರದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗಿದೆ. ಯಾವಾಗ ಹೆಚ್ಚು ಆಮ್ಲಜನಕವು ದೇಹವನ್ನು ಸೇರುತ್ತದೆಯೋ ಆಗ ದೇಹ ತಾನಾಗಿಯೇ ಸ್ವಚ್ಛಗೊಳ್ಳುತ್ತದೆ. ಆಯುರ್ವೇದ, ಸಂಸ್ಕøತಿ, ಪರಂಪರೆ, ಯೋಗ ಮೊದಲಾದವುಗಳು ಮೈಸೂರಿನಲ್ಲಿ ಸಾಂಪ್ರದಾಯಿಕವಾಗಿ ಬೆಳೆದುಬಂದಂತ ವಿಷಯಗಳಾಗಿವೆ. ಇವು ಯಾವ ಕಾಲಕ್ಕೂ ತಾಜಾ ಆಗಿರುವ ವಿಷಯಗಳೇ. ವಿದೇಶಿಗರು ಇಲ್ಲಿವರೆಗೂ ಹುಡುಕಿಕೊಂಡು ಬಂದು ಯೋಗ ಕಲಿಯಲು ಅದೇ ಕಾರಣ.
ದೊಡ್ಡ ದೊಡ್ಡ ಊರುಗಳಲ್ಲಿ ಪ್ರತಿಷ್ಠೆಗಳೇ ಹೆಚ್ಚಾಗುತ್ತದೆ. ಬೆಂಗಳೂರಿನಂತ ಊರಿನಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆ ಹೊಗಲು ಹೆಚ್ಚು ಸಮಯ ಬೇಕು. ಆದರೆ, ಮೈಸೂರು ಹಾಗಲ್ಲ ಎಲ್ಲವೂ ಸುಲಭವಾಗಿ ಕೈಗೆ ಸಿಗುತ್ತದೆ ಎಂಬ ಕಾರಣಕ್ಕೆ ಮೈಸೂರು ಯೋಗ ಮಾಡಲು ಸೂಕ್ತ ಸ್ಥಳ.
  • ಯೋಗ ದಿನಕ್ಕೆ ಸಾರ್ವತ್ರಿಕ ರಜೆ ಘೋಷಣೆ ಸಾಧ್ಯವಿದೆಯೇ?
ಹೌದು ಇದೊಂದು ಒಳ್ಳೆಯ ಆಲೋಚನೆ. ಸರಕಾರಿ ಮತ್ತು ಖಾಸಗಿ ಶಾಲೆಗಳಿಗೆ ಅರ್ಧದಿನ ರಜೆ ಕೊಡಿ ಎಂದು ಮನವಿ ಮಾಡಿಕೊಂಡಿದ್ದೆವು ಅದಕ್ಕೆ ಅವರು ಒಪ್ಪಿದ್ದಾರೆ. ಸಾರ್ವತ್ರಿಕ ರಜೆ ಘೋಷಣೆಯಾದರೆ ಯೋಗ ದಿನಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತದೆ. ಸದ್ಯದಲ್ಲೇ ಈ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಂಬಂಧಪಟ್ಟವರಿಗೆ ತಲುಪಿಸುವ ಪ್ರಯತ್ನ ಮಾಡುತ್ತೇವೆ.
  • ಯೋಗ ಹೆಸರಿನಲ್ಲಿ ರಾಜ್ಯದ ಜನತೆಯನ್ನು ಒಂದೆಡೆ ಸೇರಿಸಲು ಸಾಧ್ಯವಿದೆಯೇ?
ಸಾಧ್ಯ ಇದೆ ಆದರೆ, ಬಹಳ ಕಷ್ಟ ಒಬ್ಬರು, ಇಬ್ಬರು ಅಥವಾ ಒಂದೇ ಸಂಸ್ಥೆಯಿಂದ ಇದು ಸಾಧ್ಯವಾಗುವ ಕೆಲಸವಲ್ಲ. ದಸರೆಯಲ್ಲಿ ಎಲ್ಲ ರಾಜ್ಯದ ಕಲೆಗಳು ಒಂದೆಡೆ ಸೇರುವಂತೆ ಯೋಗದಿನಕ್ಕೆ ರಾಜ್ಯದ ಯೋಗಾಸಕ್ತರನ್ನು ಒಂದೆಡೆ ಸೇರಿಸಬೇಕಾದರೆ ಬಹಳಷ್ಟು ಹಣ ಖರ್ಚಾಗುತ್ತದೆ. ಸರಕಾರ ಅವರಿಗೆ ಉಳಿಯಲು ಜಾಗ, ಊಟ ತಿಂಡಿ ವ್ಯವಸ್ಥೆ ಮಾಡಿದರೆ ಖಂಡಿತವಾಗಿಯೂ ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಬಹುದು. ಮೈಸುರು ಜಿಲ್ಲಾಡಳಿತ ಯೋಗ ಎಂದ ಕೂಡಲೇ ಅದರ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಕೇಳಿದ ಎಲ್ಲ ಸೌಲಭ್ಯಗಳನ್ನೂ ಕೊಡುತ್ತದೆ ಅದೇ ರೀತಿ ಎಲ್ಲ ಕಡೆಯೂ ಇಂಥ ಸೌಲಭ್ಯಗಳು ಸಿಕ್ಕರೆ ಮೈಸೂರಿನಲ್ಲಿ ಇಂಥ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಬಹುದಾಗಿದೆ.
  • ಮೈಸೂರಿನ ಶುದ್ಧ ಯೋಗವನ್ನು ನ್ಯೂಯಾರ್ಕ್ ಟೈಮ್ಸ್ ಹಾಡಿ ಹೊಗಳಿದೆ. ಈ ಶುದ್ಧ ಯೋಗ ಎಂದರೇನು?
ಶುದ್ಧ ಯೋಗ ಎಂದರೆ ಎಲ್ಲ ಕಾಲಕ್ಕೂ ಅಪ್‍ಡೇಟ್ ಆಗುವ ಯೋಗ. ಇಲ್ಲಿಂದ ಕಲಿತು ಬೇರೆಡೆ ಯೋಗ ಹೇಳಿಕೊಡುವವರು ಇಲ್ಲಿಗಿಂತ ಸ್ವಲ್ಪ ಕಡಿಮೆ ಪಟ್ಟುಗಳನ್ನು ಹೇಳಿಕೊಡುತ್ತಾರೆ. ಆದರೆ, ಮೈಸೂರಿನಲ್ಲಿಹಾಗಲ್ಲ ಯೋಗ ಕುರಿತು ಅಧ್ಯಯನ, ಸಂಶೋಧನೆ ಮಾಡಿ ಅದನ್ನು ಅಪ್‍ಗ್ರೇಡ್ ಮಾಡುವ ಸಾಧ್ಯತೆ ಇದೆ. ಮೊನ್ನೆ ಯಾವುದೋ ಒಂದು ಯೋಗಕ್ಕೆ ಈ ಹೆಸರು ಇಡಬಹುದೇ ಎಂದು ಕೆಲವರು ಸೂಚಿಸಿದರು ಅದನ್ನು ನಾವು ಒಪ್ಪಿಕೊಂಡೆವು ಆ ರೀತಿಯ ಸ್ವೀಕೃತ ಮನೋಭಾವನೆ ಇಲ್ಲಿನ ಯೋಗಕ್ಕಿದೆ. ಇದೊಂದು ವೈಜ್ಞಾನಿಕ ಚಿಂತನೆಯಾಗಿದೆ ಅದೇ ಶುದ್ಧಯೋಗ. ಈಗ ಆರ್ಟ್ ಯೋಗ, ಮ್ಯೂಸಿಕ್ ಯೋಗ, ಮಾರ್ಷಲ್ ಆರ್ಟ್ ಯೋಗ ಸ್ಪೋಟ್ಸ್ ಯೋಗ ಮಾಡಲು ಹೊರಟಿದ್ದೇವೆ ಇವೆಲ್ಲದರ ಜತೆ ಯೋಗವನ್ನು ಮಿಶ್ರಣ ಮಾಡುತ್ತೇವೆ. ಯೋಗವನ್ನು ಒಂದು ವೈಜ್ಞಾನಿಕ ವ್ಯಾಯಾಮವನ್ನಾಗಿ ಮಾಡುತ್ತೇವೆ.
  • ಯೋಗ ಒಂದು ಚೌಕಟ್ಟಿನಿಂದ ಹೊರಬರುತ್ತಲ್ಲ ಇನ್ನು ಅಪ್‍ಗ್ರೇಡ್ ಆಗುವ ಸಾಧ್ಯತೆ ಎಲ್ಲಿ?
ಹಾಗೆ ಅಂದುಕೊಳ್ಳುವುದೇ ತಪ್ಪು, ಯಾರು ಪೂರ್ಣ ಪ್ರಮಾಣದಲ್ಲಿ ಯೋಗ ಕಲಿತಿರುತ್ತಾರೋ ಅದವರು ಒಂದು ಸ್ವೀಕೃತ ಮನೋಭಾವನೆ ಹೊಂದಿರುತ್ತಾರೆ. ಒಂದೇ ಚೌಕಟ್ಟಿನೊಳಗೆ ಯೋಗ ಮಾಡುವುದು ಒಳ್ಳೆಯದಲ್ಲ.
  • ಮೈಸೂರಿನಲ್ಲಿ ಯೋಗ ಎಂಬುದು ಬಹಳ ದುಬಾರಿಯಾಗಿದೆ ಹೌದೆ?
ಖಂಡಿತವಾಗಿಯೂ ಹೌದು. ಆದರೆ, ಅಗತ್ಯಕ್ಕಿಂತ ಹೆಚ್ಚು ಶುಲ್ಕ ವಿಧಿಸುವುದು ಸರಿಯಲ್ಲ. ಎಲ್ಲದಕ್ಕೂ ಒಂದೊಂದು ಸ್ಟಾಂಡರ್ಡ್ ಇರುತ್ತದೆ. ವಿದೇಶಿಗರಿಗೆ ಯೋಗ ಹೇಳಿಕೊಡಬೇಕಾದರೆ ಅವರ ದೇಹಕ್ಕೆ ಒಗ್ಗುವಂತಹ ಅಡಿಗೆ ಮಾಡಿಸಬೇಕು. ಅದಕ್ಕಾಗಿ ವಿಶೇಷ ಬಾಣಸಿಗರು ಬೇಕು. ಅವರು ಉಳಿಯಲು ಒಳ್ಳೆಯ ಜಾಗಗಳೇ ಬೇಕು. ಅದಕ್ಕಾಗಿ ಹೆಚ್ಚು ಹಣ ಖರ್ಚಾಗುತ್ತದೆ. ಹಾಗಾಗಿ ಯೋಗ ಕಲಿಯಲು ಹೆಚ್ಚುಹಣವೂ ಖರ್ಚಾಗುತ್ತದೆ. ಒಂದು ರೀತಿ ಹೇಳುವುದಾದರೆ ಯಾರ್ಯಾರ ಬಂಡವಾಳ ಎಷ್ಟಿರುತ್ತದೆಯೋ ಅದಕ್ಕೆ ತಕ್ಕಂತೆ ಹಣ ವ್ಯಯ ಮಾಡಬೇಕಾಗುತ್ತದೆ.
  • ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಬೇಕೆಂಬ ಪ್ರಸ್ತಾವನೆ ಇತ್ತು. ಅದು ಏಕೆ ಸಾಧ್ಯವಾಗಲಿಲ್ಲ?
ಮಾಡಿದರೆ ತುಂಬ ಒಳ್ಳೆಯದು. ಯೋಗವನ್ನು ಒಂದು ಧರ್ಮ, ಒಂದು ಪಕ್ಷವಾಗಿ ಗುರುತಿಸಿದ್ದರಿಂದ ಅದು ಸಾಧ್ಯವಾಗಲಿಲ್ಲ. ಯೋಗವು ಅದನ್ನೆಲ್ಲ ಮೀರಿದ ಒಂದು ಕಲೆ. ಅದಕ್ಕೆ ರಾಜಕೀಯ ಸೋಂಕು ಅಂಟಿಸುವುದು ಸರಿಯಲ್ಲ. ಇದರಿಂದಾಗಿಯೇ ಯೋಗವು ಶಾಲೆಗಳ ಪಠ್ಯ ಕ್ರಮ ಸೇರುವ ಒಂದು ಅಮೂಲ್ಯ ಅವಕಾಶ ಇಲ್ಲದಂತಾಗಿದೆ. ಯೋಗವನ್ನು ಒಂದು ಧರ್ಮ, ಒಬ್ಬ ವ್ಯಕ್ತಿಯಾಗಿ ಗುರಿತಿಸುವುದು ದೊಡ್ಡ ತಪ್ಪು.
  • ಯೋಗ ಮತ್ತು ಆಯುರ್ವೇದ ನಡುವಿನ ನಂಟಿನಿಂದ ಮೈಸೂರಿನ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆಯೇ?

ಎರಡಕ್ಕೂ ಶೇ. 30ರಷ್ಟು ನಂಟಿರುವುದು ನಿಜ. ಇವೆರಡೂ ವಿಷಯಗಳು ವೈಜ್ಞಾನಿಕವಾಗಿ ದೃಢಪಟ್ಟಿರುವ ಹಳೇ ವಿಷಯಗಳು. ಎರಡೂ ಕೂಡ ಒಂದನ್ನೊಂದು ಅವಲಂಬಿಸಿದೆ. ಆಲೋಪತಿಕ್ ವೈದ್ಯರ ಬಳಿ ಹೋಗಿ ಬೆನ್ನು ನೋವು ಎಂದರೆ ಒಂದು ಚಿಕಿತ್ಸೆ ಪಡೆಯಬೇಕು ಅಥವಾ ಯೋಗ ಮಾಡಬೇಕು ಎಂ ಸಲಹೆ ನೀಡುತ್ತಾರೆ. ಮೈಸೂರು ಯೋಗದ ಜತೆ ಆಯುರ್ವೇದಕ್ಕೂ ಹೆಚ್ಚು ಪ್ರಸಿದ್ಧಿಪಡೆದಿದೆ. ಹಾಗಾಗಿ ಎರಡೂ ವಿಷಯಗಳನ್ನು ಮುನ್ನೆಲೆಯಾಗಿಸಿಕೊಂಡು ಪ್ರವಾಸೋದ್ಯಮವನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಬಹುದು.

  • ಯಾವ್ಯವಾವ ವರ್ಗಕ್ಕೆ ಯೋಗ ಅಗತ್ಯವಾಗಿದೆ?
ಐಟಿ ಬಿಟಿ ಕ್ಷೇತ್ರದಲ್ಲಿರುವವರು ಸಾಮಾನ್ಯವಾಗಿ ಮಹಾ ನಗರಗಳಲ್ಲಿರುತ್ತಾರೆ ಅಲ್ಲಿನ ವಾತಾವರಣ ಕಲುಷಿ ತವಾಗಿರುತ್ತದೆ. ಜತೆಗೆ ಅವರು ಒತ್ತಡದಲ್ಲಿ ಬದುಕುತ್ತಿರುತ್ತಾರೆ ಅವರಿಗೆ ಯೋಗ ಅತಿ ಮುಖ್ಯ. ವಾಹನಗಳ ಹೊಗೆಯ ಮಧ್ಯೆಯೇ ಕೆಲಸ ಮಾಡುವ ಟ್ರಾಫಿಕ್ ಪೊಲೀಸರು, ಕಸ ವಿಲೇವಾರಿ ಮಾಡುವ ಪಾಲಿಕೆ ಸಿಬ್ಬಂದಿ ಇವರೆಲ್ಲರ ಮೇಲಧಿಕಾರಿಗಳು ಯೋಗವನ್ನು ಈ ವರ್ಗದವರಿಗೆ  ಒಳ್ಳೆಯದು.
  • ಈ ವರ್ಷ ಹಮ್ಮಿಕೊಂಡಿರುವ ಯೋಗ ಕಾರ್ಯಕ್ರಮಗಳು ಯಾವುವು?
ಮೂರು ವರ್ಷಗಳ ಹಿಂದೆ ಫಿಟ್ ಇಂಡಿಯಾ ಮೂವ್‍ಮೆಂಟ್ ಎಂಬ ಅಭಿಯಾನದ ಹೆಸರಿಟ್ಟಿದ್ದೆವು. ಅದನ್ನೇ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿ ಆಂದೋಲನ ಆರಂಭಿಸಿದ್ದಾರೆ. ಈ ವರ್ಷ ಮನೆ ಮನೆ ಯೋಗ, ಮನ ಮನ ಯೋಗ ಎಂಬ ಯೋಗವನ್ನು ಆರಂಭಿಸಲಿದ್ದೇವೆ. ಈ ಮೂಲಕ ಯೋಗವ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶವಿದೆ.

ದಿನದ ಸುದ್ದಿ

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

Published

on

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ ಸ್ನೇಹಿ ಗಣೇಶನ ಹಬ್ಬ ಆಚರಣೆಗೆ ಮುಂದಾಗೋಣ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪರಿಸರಕ್ಕೆ ಮಾರಕವಾದ ಪಿಓಪಿ ಗಣೇಶ ಮೂರ್ತಿಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು ಯಾರು ಸಹ ಮಾರಾಟ ಮಾಡುವಂತಿಲ್ಲ. ಮಹಾರಾಷ್ಟ್ರದಿಂದ ಪಿಓಪಿ ಗಣೇಶ ಮೂರ್ತಿಗಳನ್ನು ತಂದು ಹರಿಹರದಲ್ಲಿ ಮಾರಾಟ ಮಾಡುತ್ತಿದ್ದ ವೇಳೆ 17 ಮೂರ್ತಿಗಳನ್ನು ವಶಪಡಿಸಿಕೊಂಡು ಮಾರಾಟಗಾರರ ವಿರುದ್ದ ಕಾನೂನು ಕ್ರಮಕ್ಕೆ ಮುಂದಾಗಲಾಗಿದೆ ಎಂದರು.

ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು ಅಥವಾ ಯಾವುದೇ ಸವಕಳಿ ಇಲ್ಲದ ಬೆಲ್ಲದ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡುವುದರಿಂದ ನಷ್ಟವಿಲ್ಲದೆ ಲಾಭವೇ ಹೆಚ್ಚಿರಲಿದೆ. ಈ ಭಾರಿ ಮೊದಲ ಭಾರಿಗೆ ಜಿಲ್ಲೆಯಲ್ಲಿ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡಲು ಪ್ರೋತ್ಸಾಹ ನೀಡಲಾಗುತ್ತಿದೆ. ಮಂಡ್ಯದಲ್ಲಿ ಈ ಹಿಂದೆ ಕೆಲಸ ಮಾಡುತ್ತಿರುವಾಗ ಅಲ್ಲಿನ ರೈತ ಉತ್ಪಾದಕ ಸಂಸ್ಥೆಯ ಮೂಲಕ ಬೆಲ್ಲದ ಗಣೇಶ ಮೂರ್ತಿ ತಯಾರಿಕೆಗೆ ಪ್ರೋತ್ಸಾಹ ನೀಡುವ ಮೂಲಕ ಉತ್ತೇಜಿಸಲಾಗಿತ್ತು. ಇಂದು ಆ ಸಂಸ್ಥೆಗೆ ಸಾಕಷ್ಟು ಬೇಡಿಕೆ ಬಂದಿದೆ ಎಂದರು.

ಶೂನ್ಯ ನಷ್ಟದ ಬೆಲ್ಲದ ಗಣಪ; ಬೆಲ್ಲದ ಗಣೇಶ ಮೂರ್ತಿಯನ್ನು ರೈತರು ಬೆಳೆದ ಕಬ್ಬಿನಿಂದ ಹಾಲನ್ನು ತೆಗೆದು ಅದರಲ್ಲಿ ಯಾವುದೇ ರಾಸಾಯನಿಕ ಬೆರಸದೇ ಪಾಕವನ್ನು ತಯಾರು ಮಾಡಿ ಈ ಪಾಕದಿಂದ ಗಣೇಶ ಮೂರ್ತಿಯ ಹಚ್ಚಿಗೆ ಬೆರೆಸಿದಾಗ ಅದು ಮೂರ್ತಿಯಾಗುತ್ತದೆ. ಒಂದು ಗಣೇಶ ಮೂರ್ತಿಯನ್ನು ಕನಿಷ್ಠ 2 ಕೆಜಿ ಬೆಲ್ಲದಿಂದ ಮಾಡಬಹುದಾಗಿದೆ. ಇದರಿಂದ ರೈತರಿಗೂ ಆರ್ಥಿಕಾಭಿವೃದ್ದಿಯಾಗಲಿದೆ ಮತ್ತು ರೈತ ಉತ್ಪಾದಕ ಕಂಪನಿಗಳಿಗೂ ಆದಾಯ ಬರಲಿದ್ದು ಆರ್ಥಿಕತೆ ಹಂಚಿಕೆಯಾಗಲಿದೆ. ಇದರಿಂದ ಎಲ್ಲರಿಗೂ ಲಾಭವಾಗಲಿದ್ದು ಖರೀದಿಸಿದ ಗ್ರಾಹಕರಿಗೂ ಯಾವುದೇ ನಷ್ಟ ಉಂಟಾಗುವುದಿಲ್ಲ. ಬೆಲ್ಲದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ವಿಸರ್ಜನೆಯ ದಿನ ಇದೇ ಮೂರ್ತಿಯನ್ನು ಪ್ರಸಾದವನ್ನಾಗಿ ಎಲ್ಲರಿಗೂ ಹಂಚಿಕೆ ಮಾಡಬಹುದಾಗಿದೆ ಎಂದರು.

ದಾವಣಗೆರೆಯಲ್ಲಿಯೇ ತಯಾರು; ಮುಂದಿನ ದಿನಗಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿಯೇ ಬೆಲ್ಲದ ಗಣೇಶ ಮೂರ್ತಿಯನ್ನು ತಯಾರು ಮಾಡಲು ಎಲ್ಲಾ ತಾಂತ್ರಿಕ ನೆರವನ್ನು ರೈತ ಉತ್ಪಾದಕ ಕಂಪನಿಗಳಿಗೆ ಮತ್ತು ಸ್ವ ಸಹಾಯ ಸಂಘಗಳಿಗೆ ಕೊಡಿಸುವ ಮೂಲಕ ಪರಿಸರ ಸ್ನೇಹಿ ಬ್ಯಾಗ್‍ಗಳ ಉತ್ಪಾದನೆ, ಮದುವೆ ಸಮಾರಂಭಗಳಲ್ಲಿ ನೀಡಲು ಬೆಲ್ಲದ ಹಚ್ಚುಗಳನ್ನು ಸಹ ತಯಾರು ಮಾಡಿಸುವ ಮೂಲಕ ಜಿಲ್ಲೆಯ ಜನರಿಗೆ ಆರ್ಥಿಕಾಭಿವೃದ್ದಿ ಮತ್ತು ಜಿಲ್ಲೆಯನ್ನು ಆರ್ಥಿಕಾಭಿವೃದ್ದಿಯತ್ತ ಕೊಂಡೊಯ್ಯಲು ಉದ್ದೇಶಿಸಲಾಗಿದೆ ಎಂದರು.

ಮಣ್ಣಿನ ಗಣೇಶ ಮೂರ್ತಿ ಮಾರಾಟವಾಗುವ ಸ್ಥಳದಲ್ಲಿಯೇ ಈ ಭಾರಿ ಬೆಲ್ಲದ ಮೂರ್ತಿಗಳು ಲಭಿಸುವಂತೆ ಮಾಡಲು ಮಹಾನಗರ ಪಾಲಿಕೆ ಹಾಗೂ ಪರಿಸರ ಇಲಾಖೆಯಿಂದ ಬೆಲ್ಲದ ಗಣೇಶ ಮೂರ್ತಿಗಳನ್ನು ತರಿಸಿಕೊಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಏಕಗವಾಕ್ಷಿ

ಗಣೇಶ ಮೂರ್ತಿಯನ್ನು ಸಾರ್ವಜನಿಕವಾಗಿ ಪ್ರತಿಷ್ಟಾಪನೆ ಮಾಡಲು ಅಗತ್ಯ ಅನುಮತಿಗಾಗಿ ದಾವಣಗೆರೆ ಜಿಲ್ಲೆಯಲ್ಲಿ 7 ಕಡೆ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ದಾವಣಗೆರೆ ಬಡಾವಣೆ ಠಾಣೆ, ಹರಿಹರ ನಗರಸಭಾ ಕಾರ್ಯಾಲಯ, ಮಲೆಬೆನ್ನೂರು ಪುರಸಭಾ ಕಚೇರಿ, ಜಗಳೂರು ಪೊಲೀಸ್ ಠಾಣೆ, ಹೊನ್ನಾಳಿ ಪೊಲೀಸ್ ಠಾಣೆ, ನ್ಯಾಮತಿ ಪೊಲೀಸ್ ಠಾಣೆ, ಚನ್ನಗಿರಿ ಪೊಲೀಸ್ ಠಾಣೆ ಇಲ್ಲಿ ಅನುಮತಿ ಪಡೆಯಬಹುದಾಗಿದ್ದು ಇಲ್ಲಿಯವರೆಗೆ ನೀಡಲಾದ 239 ಪರವಾನಗಿಯಲ್ಲಿ ದಾವಣಗೆರೆಯಲ್ಲಿ 217, ಹರಿಹರ 9, ಮಲೆಬೆನ್ನೂರು 2, ಜಗಳೂರು 6, ನ್ಯಾಮತಿ 1, ಹೊನ್ನಾಳಿ 1, ಚನ್ನಗಿರಿ 3 ಪರವಾನಗಿ ನೀಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪಾಲಿಕೆ ಆಯುಕ್ತರಾದ ರೇಣುಕಾ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಮಹಂತೇಶ್, ಪರಿಸರ ಅಧಿಕಾರಿ ಲಕ್ಷ್ಮಿಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ.

ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ ವಾಲ್ಮೀಕಿ ವಸತಿಯುತ ಪ್ರೌಢಶಾಲೆ, ಹರಿಹರ, 15 ರಂದು ಹೊನ್ನಾಳಿ ತಾಲ್ಲೂಕಿಗೆ ಸಂಬಂಧಿಸಿದಂತೆ ತಾಲ್ಲೂಕು ಕ್ರೀಡಾಂಗಣ, ಹೊನ್ನಾಳಿ, 16 ರಂದು ನ್ಯಾಮತಿ ತಾಲ್ಲೂಕಿಗೆ ಸಂಬಂಧಿಸಿದಂತೆ ತಾಲ್ಲೂಕು ಕ್ರೀಡಾಂಗಣ ಹೊನ್ನಾಳಿ, 16 ರಂದು ಚನ್ನಗಿರಿ ತಾಲ್ಲೂಕಿಗೆ ಸಂಬಂಧಿಸಿದಂತೆ ತಾಲ್ಲೂಕು ಕ್ರೀಡಾಂಗಣ ಚನ್ನಗಿರಿ, 20 ರಂದು ಜಗಳೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಜಗಳೂರಿನ ಬೇಡರ ಕಣ್ಣಪ್ಪ ಪ್ರೌಢ ಶಾಲೆ ಹಾಗೂ 21 ರಂದು ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳು ನಡೆಯಲಿವೆ.

ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ ಮತ್ತು ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸುವಂತಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡದ ಯಾವುದೇ ತಾಲೂಕಿನಲ್ಲಿ ಒಂದು ಬಾರಿ ಭಾಗವಹಿಸಿದ ನಂತರ ಬೇರೆ ಯಾವುದೇ ತಾಲೂಕಿನ ಅಥವಾ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ತಾಲ್ಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ತಂಡವನ್ನು ಮಾತ್ರ ಜಿಲ್ಲಾ ಮಟ್ಟದ ತಟ್ಟೆಗೆ ಕಳುಹಿಸಲಾಗುತ್ತದೆ.

ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ಪ್ರಯಾಣ ಭತ್ಯೆ, ದಿನಭತ್ಯೆ ನೀಡಲಾಗುವುದಿಲ್ಲ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಕೆ.ಆರ್. ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ1 week ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ1 week ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ1 week ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ2 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ2 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

ದಿನದ ಸುದ್ದಿ2 weeks ago

ರಿಯಾಯಿತಿ ದರದಲ್ಲಿ ಲಿಡಕರ್ ವಸ್ತುಗಳ ಮಾರಾಟ

ಸುದ್ದಿದಿನ,ದಾವಣಗೆರೆ : ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡಕರ್) ನಿಗಮದ ವತಿಯಿಂದ ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 20 ರವರೆಗೆ ಅಪ್ಪಟ ಚರ್ಮದ...

ದಿನದ ಸುದ್ದಿ2 weeks ago

ಸೆಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ಮಾರಾಟ ನಿಷೇಧ

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿ ಅಂಗವಾಗಿ ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಮಾರಾಟ ಮಾಡಿದ್ದಲ್ಲಿ ಕಾನೂನು...

ದಿನದ ಸುದ್ದಿ2 weeks ago

ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ...

ದಿನದ ಸುದ್ದಿ2 weeks ago

ಇಂದು ತೆಂಗು ವಿಶ್ವ ದಿನ

ಸುದ್ದಿದಿನ ಡೆಸ್ಕ್ : ಇಂದು ತೆಂಗಿನ ವಿಶ್ವ ದಿನ. ತೆಂಗು ಬೆಳೆಗಾರರ ಹಿತ ರಕ್ಷಣೆ ಹಾಗೂ ತೆಂಗಿನ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಚಿಂತಿಸಲು, ಈ ದಿನಾಚರಣೆ ಮೀಸಲು. ಹೊಸ...

Trending