Connect with us

ದಿನದ ಸುದ್ದಿ

ಯೋಗ ದಿನಕ್ಕೆ ಸಾರ್ವತ್ರಿಕ ರಜೆ ಘೋಷಣೆ ಪ್ರಸ್ತಾವ

Published

on

ವಿಶ್ವ ಯೋಗ ದಿನಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಿದ್ಧವಾಗಿದೆ. ಕಳೆದ ಬಾರಿ 56 ಸಾವಿರ ಮಂದಿಯನ್ನು ಒಂದೆಡೆ ಕಲೆಹಾಕಿ ಗಿನ್ನಿಸ್ ದಾಖಲೆ ಮಾಡಿದ್ದ ಯೋಗ ಸಂಸ್ಥೆಗಳು ಹಾಗೂ ಜಿಲ್ಲಾಡಳಿತವು ಈ ಬಾರಿ ಗರಿಷ್ಠ ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಿದೆ. ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ನಡೆಸಿರುವ ತಯಾರಿಗಳು, ಮೈಸೂರಿನಲ್ಲೇ ಏಕೆ ಇಷ್ಟು ದೊಡ್ಡ ಕಾರ್ಯಕ್ರಮ ನಡೆಸಬೇಕೆಂಬುದನ್ನು ಜಿಎಸ್‍ಎಸ್ ಯೋಗಿಕ್ ಫೌಂಡೇಶನ್‍ನ ಮುಖ್ಯಸ್ಥ ಶ್ರೀ ಹರಿ( ಮೊ. 98862 08000)  ಅವರು ವಿವರಿಸಿದ್ದಾರೆ.
  • ಮೈಸೂರು ಯೋಗದ ವಿಶೇಷತೆಗಳೇನು?
ಮೈಸೂರು ಯೋಗವನ್ನು ಒಂದು ದೊಡ್ಡ ಬ್ರಾಂಡ್ ಮಾಡುವ ಉದ್ದೇಶದಿಂದ ಈ ಹೆಸರಿಡಲಾಗಿದೆ. ಯಾರೇ ಯೋಗ ಮಾಡಿದರೂ ಒಂದೆ. ನಮ್ಮಲ್ಲಿ ಐದು ದೊಡ್ಡ ಯೋಗ ಸಂಸ್ಥೆಗಳಿವೆ. ಎಲ್ಲರೂ ಯೋಗ ಮಾಡುತ್ತಾರೆ. ಯಾರು ದೊಡ್ಡವರು ಯಾರ ಚಿಕ್ಕವರು ಎಂಬ ಮನೋಭಾವನೆ ಬರಬಾರದು ಎಂಬ ಕಾರಣಕ್ಕೆ ಮೈಸೂರು ಯೋಗವನ್ನು ನಮ್ಮೆಲ್ಲರ ಬ್ರಾಂಡ್ ಮಾಡಿಕೊಳ್ಳಲಾಗಿದೆ. ಮೈಸೂರು ಮೊದಲೇ ಯೋಗಕ್ಕೆ ಪ್ರಸಿದ್ಧಿಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಬ್ರಾಂಡ್ ಇನ್ನಷ್ಟು ಹೆಸರು ತಂದಕೊಡುತ್ತದೆ ಎಂಬುದು ಇದರ ಹಿಂದಿನ ಉದ್ದೇಶ. ಹೀಗೆ ನಾವೆಲ್ಲರೂ ಒಂದಾದ ಕಾರಣ ಕಳೆದ ವರ್ಷ ವಿಶ್ವ ಯೋಗ ದಿನದಂದು ದೊಡ್ಡ ಸಾಧನೆ ಮಾಡಲು ಸಾಧ್ಯವಾಯಿತು.
  • ಯೋಗ ಮಾಡಲು ಮೈಸೂರುನಗರ ಏಕೆ ಶ್ರೇಷ್ಠ ಸ್ಥಳ ?
ಒಂದು ರೀತಿಯಲ್ಲಿ ಹೇಳುವುದಾದರೆ ಮೈಸೂರು ಒಂದು ವಿಶಾಲವಾದ ಸ್ಥಳ. ಇಲ್ಲಿನ ಹವಾಗುಣ ಎಲ್ಲರನ್ನು ಸೆಳೆಯಬಲ್ಲದು. ಅರಣ್ಯ ಸಂಪತ್ತು ಯತೇಚ್ಛವಾಗಿರುವುದರಿಂದ ನಗರದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗಿದೆ. ಯಾವಾಗ ಹೆಚ್ಚು ಆಮ್ಲಜನಕವು ದೇಹವನ್ನು ಸೇರುತ್ತದೆಯೋ ಆಗ ದೇಹ ತಾನಾಗಿಯೇ ಸ್ವಚ್ಛಗೊಳ್ಳುತ್ತದೆ. ಆಯುರ್ವೇದ, ಸಂಸ್ಕøತಿ, ಪರಂಪರೆ, ಯೋಗ ಮೊದಲಾದವುಗಳು ಮೈಸೂರಿನಲ್ಲಿ ಸಾಂಪ್ರದಾಯಿಕವಾಗಿ ಬೆಳೆದುಬಂದಂತ ವಿಷಯಗಳಾಗಿವೆ. ಇವು ಯಾವ ಕಾಲಕ್ಕೂ ತಾಜಾ ಆಗಿರುವ ವಿಷಯಗಳೇ. ವಿದೇಶಿಗರು ಇಲ್ಲಿವರೆಗೂ ಹುಡುಕಿಕೊಂಡು ಬಂದು ಯೋಗ ಕಲಿಯಲು ಅದೇ ಕಾರಣ.
ದೊಡ್ಡ ದೊಡ್ಡ ಊರುಗಳಲ್ಲಿ ಪ್ರತಿಷ್ಠೆಗಳೇ ಹೆಚ್ಚಾಗುತ್ತದೆ. ಬೆಂಗಳೂರಿನಂತ ಊರಿನಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆ ಹೊಗಲು ಹೆಚ್ಚು ಸಮಯ ಬೇಕು. ಆದರೆ, ಮೈಸೂರು ಹಾಗಲ್ಲ ಎಲ್ಲವೂ ಸುಲಭವಾಗಿ ಕೈಗೆ ಸಿಗುತ್ತದೆ ಎಂಬ ಕಾರಣಕ್ಕೆ ಮೈಸೂರು ಯೋಗ ಮಾಡಲು ಸೂಕ್ತ ಸ್ಥಳ.
  • ಯೋಗ ದಿನಕ್ಕೆ ಸಾರ್ವತ್ರಿಕ ರಜೆ ಘೋಷಣೆ ಸಾಧ್ಯವಿದೆಯೇ?
ಹೌದು ಇದೊಂದು ಒಳ್ಳೆಯ ಆಲೋಚನೆ. ಸರಕಾರಿ ಮತ್ತು ಖಾಸಗಿ ಶಾಲೆಗಳಿಗೆ ಅರ್ಧದಿನ ರಜೆ ಕೊಡಿ ಎಂದು ಮನವಿ ಮಾಡಿಕೊಂಡಿದ್ದೆವು ಅದಕ್ಕೆ ಅವರು ಒಪ್ಪಿದ್ದಾರೆ. ಸಾರ್ವತ್ರಿಕ ರಜೆ ಘೋಷಣೆಯಾದರೆ ಯೋಗ ದಿನಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತದೆ. ಸದ್ಯದಲ್ಲೇ ಈ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಂಬಂಧಪಟ್ಟವರಿಗೆ ತಲುಪಿಸುವ ಪ್ರಯತ್ನ ಮಾಡುತ್ತೇವೆ.
  • ಯೋಗ ಹೆಸರಿನಲ್ಲಿ ರಾಜ್ಯದ ಜನತೆಯನ್ನು ಒಂದೆಡೆ ಸೇರಿಸಲು ಸಾಧ್ಯವಿದೆಯೇ?
ಸಾಧ್ಯ ಇದೆ ಆದರೆ, ಬಹಳ ಕಷ್ಟ ಒಬ್ಬರು, ಇಬ್ಬರು ಅಥವಾ ಒಂದೇ ಸಂಸ್ಥೆಯಿಂದ ಇದು ಸಾಧ್ಯವಾಗುವ ಕೆಲಸವಲ್ಲ. ದಸರೆಯಲ್ಲಿ ಎಲ್ಲ ರಾಜ್ಯದ ಕಲೆಗಳು ಒಂದೆಡೆ ಸೇರುವಂತೆ ಯೋಗದಿನಕ್ಕೆ ರಾಜ್ಯದ ಯೋಗಾಸಕ್ತರನ್ನು ಒಂದೆಡೆ ಸೇರಿಸಬೇಕಾದರೆ ಬಹಳಷ್ಟು ಹಣ ಖರ್ಚಾಗುತ್ತದೆ. ಸರಕಾರ ಅವರಿಗೆ ಉಳಿಯಲು ಜಾಗ, ಊಟ ತಿಂಡಿ ವ್ಯವಸ್ಥೆ ಮಾಡಿದರೆ ಖಂಡಿತವಾಗಿಯೂ ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಬಹುದು. ಮೈಸುರು ಜಿಲ್ಲಾಡಳಿತ ಯೋಗ ಎಂದ ಕೂಡಲೇ ಅದರ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಕೇಳಿದ ಎಲ್ಲ ಸೌಲಭ್ಯಗಳನ್ನೂ ಕೊಡುತ್ತದೆ ಅದೇ ರೀತಿ ಎಲ್ಲ ಕಡೆಯೂ ಇಂಥ ಸೌಲಭ್ಯಗಳು ಸಿಕ್ಕರೆ ಮೈಸೂರಿನಲ್ಲಿ ಇಂಥ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಬಹುದಾಗಿದೆ.
  • ಮೈಸೂರಿನ ಶುದ್ಧ ಯೋಗವನ್ನು ನ್ಯೂಯಾರ್ಕ್ ಟೈಮ್ಸ್ ಹಾಡಿ ಹೊಗಳಿದೆ. ಈ ಶುದ್ಧ ಯೋಗ ಎಂದರೇನು?
ಶುದ್ಧ ಯೋಗ ಎಂದರೆ ಎಲ್ಲ ಕಾಲಕ್ಕೂ ಅಪ್‍ಡೇಟ್ ಆಗುವ ಯೋಗ. ಇಲ್ಲಿಂದ ಕಲಿತು ಬೇರೆಡೆ ಯೋಗ ಹೇಳಿಕೊಡುವವರು ಇಲ್ಲಿಗಿಂತ ಸ್ವಲ್ಪ ಕಡಿಮೆ ಪಟ್ಟುಗಳನ್ನು ಹೇಳಿಕೊಡುತ್ತಾರೆ. ಆದರೆ, ಮೈಸೂರಿನಲ್ಲಿಹಾಗಲ್ಲ ಯೋಗ ಕುರಿತು ಅಧ್ಯಯನ, ಸಂಶೋಧನೆ ಮಾಡಿ ಅದನ್ನು ಅಪ್‍ಗ್ರೇಡ್ ಮಾಡುವ ಸಾಧ್ಯತೆ ಇದೆ. ಮೊನ್ನೆ ಯಾವುದೋ ಒಂದು ಯೋಗಕ್ಕೆ ಈ ಹೆಸರು ಇಡಬಹುದೇ ಎಂದು ಕೆಲವರು ಸೂಚಿಸಿದರು ಅದನ್ನು ನಾವು ಒಪ್ಪಿಕೊಂಡೆವು ಆ ರೀತಿಯ ಸ್ವೀಕೃತ ಮನೋಭಾವನೆ ಇಲ್ಲಿನ ಯೋಗಕ್ಕಿದೆ. ಇದೊಂದು ವೈಜ್ಞಾನಿಕ ಚಿಂತನೆಯಾಗಿದೆ ಅದೇ ಶುದ್ಧಯೋಗ. ಈಗ ಆರ್ಟ್ ಯೋಗ, ಮ್ಯೂಸಿಕ್ ಯೋಗ, ಮಾರ್ಷಲ್ ಆರ್ಟ್ ಯೋಗ ಸ್ಪೋಟ್ಸ್ ಯೋಗ ಮಾಡಲು ಹೊರಟಿದ್ದೇವೆ ಇವೆಲ್ಲದರ ಜತೆ ಯೋಗವನ್ನು ಮಿಶ್ರಣ ಮಾಡುತ್ತೇವೆ. ಯೋಗವನ್ನು ಒಂದು ವೈಜ್ಞಾನಿಕ ವ್ಯಾಯಾಮವನ್ನಾಗಿ ಮಾಡುತ್ತೇವೆ.
  • ಯೋಗ ಒಂದು ಚೌಕಟ್ಟಿನಿಂದ ಹೊರಬರುತ್ತಲ್ಲ ಇನ್ನು ಅಪ್‍ಗ್ರೇಡ್ ಆಗುವ ಸಾಧ್ಯತೆ ಎಲ್ಲಿ?
ಹಾಗೆ ಅಂದುಕೊಳ್ಳುವುದೇ ತಪ್ಪು, ಯಾರು ಪೂರ್ಣ ಪ್ರಮಾಣದಲ್ಲಿ ಯೋಗ ಕಲಿತಿರುತ್ತಾರೋ ಅದವರು ಒಂದು ಸ್ವೀಕೃತ ಮನೋಭಾವನೆ ಹೊಂದಿರುತ್ತಾರೆ. ಒಂದೇ ಚೌಕಟ್ಟಿನೊಳಗೆ ಯೋಗ ಮಾಡುವುದು ಒಳ್ಳೆಯದಲ್ಲ.
  • ಮೈಸೂರಿನಲ್ಲಿ ಯೋಗ ಎಂಬುದು ಬಹಳ ದುಬಾರಿಯಾಗಿದೆ ಹೌದೆ?
ಖಂಡಿತವಾಗಿಯೂ ಹೌದು. ಆದರೆ, ಅಗತ್ಯಕ್ಕಿಂತ ಹೆಚ್ಚು ಶುಲ್ಕ ವಿಧಿಸುವುದು ಸರಿಯಲ್ಲ. ಎಲ್ಲದಕ್ಕೂ ಒಂದೊಂದು ಸ್ಟಾಂಡರ್ಡ್ ಇರುತ್ತದೆ. ವಿದೇಶಿಗರಿಗೆ ಯೋಗ ಹೇಳಿಕೊಡಬೇಕಾದರೆ ಅವರ ದೇಹಕ್ಕೆ ಒಗ್ಗುವಂತಹ ಅಡಿಗೆ ಮಾಡಿಸಬೇಕು. ಅದಕ್ಕಾಗಿ ವಿಶೇಷ ಬಾಣಸಿಗರು ಬೇಕು. ಅವರು ಉಳಿಯಲು ಒಳ್ಳೆಯ ಜಾಗಗಳೇ ಬೇಕು. ಅದಕ್ಕಾಗಿ ಹೆಚ್ಚು ಹಣ ಖರ್ಚಾಗುತ್ತದೆ. ಹಾಗಾಗಿ ಯೋಗ ಕಲಿಯಲು ಹೆಚ್ಚುಹಣವೂ ಖರ್ಚಾಗುತ್ತದೆ. ಒಂದು ರೀತಿ ಹೇಳುವುದಾದರೆ ಯಾರ್ಯಾರ ಬಂಡವಾಳ ಎಷ್ಟಿರುತ್ತದೆಯೋ ಅದಕ್ಕೆ ತಕ್ಕಂತೆ ಹಣ ವ್ಯಯ ಮಾಡಬೇಕಾಗುತ್ತದೆ.
  • ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಬೇಕೆಂಬ ಪ್ರಸ್ತಾವನೆ ಇತ್ತು. ಅದು ಏಕೆ ಸಾಧ್ಯವಾಗಲಿಲ್ಲ?
ಮಾಡಿದರೆ ತುಂಬ ಒಳ್ಳೆಯದು. ಯೋಗವನ್ನು ಒಂದು ಧರ್ಮ, ಒಂದು ಪಕ್ಷವಾಗಿ ಗುರುತಿಸಿದ್ದರಿಂದ ಅದು ಸಾಧ್ಯವಾಗಲಿಲ್ಲ. ಯೋಗವು ಅದನ್ನೆಲ್ಲ ಮೀರಿದ ಒಂದು ಕಲೆ. ಅದಕ್ಕೆ ರಾಜಕೀಯ ಸೋಂಕು ಅಂಟಿಸುವುದು ಸರಿಯಲ್ಲ. ಇದರಿಂದಾಗಿಯೇ ಯೋಗವು ಶಾಲೆಗಳ ಪಠ್ಯ ಕ್ರಮ ಸೇರುವ ಒಂದು ಅಮೂಲ್ಯ ಅವಕಾಶ ಇಲ್ಲದಂತಾಗಿದೆ. ಯೋಗವನ್ನು ಒಂದು ಧರ್ಮ, ಒಬ್ಬ ವ್ಯಕ್ತಿಯಾಗಿ ಗುರಿತಿಸುವುದು ದೊಡ್ಡ ತಪ್ಪು.
  • ಯೋಗ ಮತ್ತು ಆಯುರ್ವೇದ ನಡುವಿನ ನಂಟಿನಿಂದ ಮೈಸೂರಿನ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆಯೇ?

ಎರಡಕ್ಕೂ ಶೇ. 30ರಷ್ಟು ನಂಟಿರುವುದು ನಿಜ. ಇವೆರಡೂ ವಿಷಯಗಳು ವೈಜ್ಞಾನಿಕವಾಗಿ ದೃಢಪಟ್ಟಿರುವ ಹಳೇ ವಿಷಯಗಳು. ಎರಡೂ ಕೂಡ ಒಂದನ್ನೊಂದು ಅವಲಂಬಿಸಿದೆ. ಆಲೋಪತಿಕ್ ವೈದ್ಯರ ಬಳಿ ಹೋಗಿ ಬೆನ್ನು ನೋವು ಎಂದರೆ ಒಂದು ಚಿಕಿತ್ಸೆ ಪಡೆಯಬೇಕು ಅಥವಾ ಯೋಗ ಮಾಡಬೇಕು ಎಂ ಸಲಹೆ ನೀಡುತ್ತಾರೆ. ಮೈಸೂರು ಯೋಗದ ಜತೆ ಆಯುರ್ವೇದಕ್ಕೂ ಹೆಚ್ಚು ಪ್ರಸಿದ್ಧಿಪಡೆದಿದೆ. ಹಾಗಾಗಿ ಎರಡೂ ವಿಷಯಗಳನ್ನು ಮುನ್ನೆಲೆಯಾಗಿಸಿಕೊಂಡು ಪ್ರವಾಸೋದ್ಯಮವನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಬಹುದು.

  • ಯಾವ್ಯವಾವ ವರ್ಗಕ್ಕೆ ಯೋಗ ಅಗತ್ಯವಾಗಿದೆ?
ಐಟಿ ಬಿಟಿ ಕ್ಷೇತ್ರದಲ್ಲಿರುವವರು ಸಾಮಾನ್ಯವಾಗಿ ಮಹಾ ನಗರಗಳಲ್ಲಿರುತ್ತಾರೆ ಅಲ್ಲಿನ ವಾತಾವರಣ ಕಲುಷಿ ತವಾಗಿರುತ್ತದೆ. ಜತೆಗೆ ಅವರು ಒತ್ತಡದಲ್ಲಿ ಬದುಕುತ್ತಿರುತ್ತಾರೆ ಅವರಿಗೆ ಯೋಗ ಅತಿ ಮುಖ್ಯ. ವಾಹನಗಳ ಹೊಗೆಯ ಮಧ್ಯೆಯೇ ಕೆಲಸ ಮಾಡುವ ಟ್ರಾಫಿಕ್ ಪೊಲೀಸರು, ಕಸ ವಿಲೇವಾರಿ ಮಾಡುವ ಪಾಲಿಕೆ ಸಿಬ್ಬಂದಿ ಇವರೆಲ್ಲರ ಮೇಲಧಿಕಾರಿಗಳು ಯೋಗವನ್ನು ಈ ವರ್ಗದವರಿಗೆ  ಒಳ್ಳೆಯದು.
  • ಈ ವರ್ಷ ಹಮ್ಮಿಕೊಂಡಿರುವ ಯೋಗ ಕಾರ್ಯಕ್ರಮಗಳು ಯಾವುವು?
ಮೂರು ವರ್ಷಗಳ ಹಿಂದೆ ಫಿಟ್ ಇಂಡಿಯಾ ಮೂವ್‍ಮೆಂಟ್ ಎಂಬ ಅಭಿಯಾನದ ಹೆಸರಿಟ್ಟಿದ್ದೆವು. ಅದನ್ನೇ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿ ಆಂದೋಲನ ಆರಂಭಿಸಿದ್ದಾರೆ. ಈ ವರ್ಷ ಮನೆ ಮನೆ ಯೋಗ, ಮನ ಮನ ಯೋಗ ಎಂಬ ಯೋಗವನ್ನು ಆರಂಭಿಸಲಿದ್ದೇವೆ. ಈ ಮೂಲಕ ಯೋಗವ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶವಿದೆ.

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.

ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.

ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ5 hours ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ2 days ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ2 days ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ3 days ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ3 days ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ3 days ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ5 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ6 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ6 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

Trending