Connect with us

ದಿನದ ಸುದ್ದಿ

ಯೋಗ ದಿನಕ್ಕೆ ಸಾರ್ವತ್ರಿಕ ರಜೆ ಘೋಷಣೆ ಪ್ರಸ್ತಾವ

Published

on

ವಿಶ್ವ ಯೋಗ ದಿನಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಿದ್ಧವಾಗಿದೆ. ಕಳೆದ ಬಾರಿ 56 ಸಾವಿರ ಮಂದಿಯನ್ನು ಒಂದೆಡೆ ಕಲೆಹಾಕಿ ಗಿನ್ನಿಸ್ ದಾಖಲೆ ಮಾಡಿದ್ದ ಯೋಗ ಸಂಸ್ಥೆಗಳು ಹಾಗೂ ಜಿಲ್ಲಾಡಳಿತವು ಈ ಬಾರಿ ಗರಿಷ್ಠ ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಿದೆ. ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ನಡೆಸಿರುವ ತಯಾರಿಗಳು, ಮೈಸೂರಿನಲ್ಲೇ ಏಕೆ ಇಷ್ಟು ದೊಡ್ಡ ಕಾರ್ಯಕ್ರಮ ನಡೆಸಬೇಕೆಂಬುದನ್ನು ಜಿಎಸ್‍ಎಸ್ ಯೋಗಿಕ್ ಫೌಂಡೇಶನ್‍ನ ಮುಖ್ಯಸ್ಥ ಶ್ರೀ ಹರಿ( ಮೊ. 98862 08000)  ಅವರು ವಿವರಿಸಿದ್ದಾರೆ.
  • ಮೈಸೂರು ಯೋಗದ ವಿಶೇಷತೆಗಳೇನು?
ಮೈಸೂರು ಯೋಗವನ್ನು ಒಂದು ದೊಡ್ಡ ಬ್ರಾಂಡ್ ಮಾಡುವ ಉದ್ದೇಶದಿಂದ ಈ ಹೆಸರಿಡಲಾಗಿದೆ. ಯಾರೇ ಯೋಗ ಮಾಡಿದರೂ ಒಂದೆ. ನಮ್ಮಲ್ಲಿ ಐದು ದೊಡ್ಡ ಯೋಗ ಸಂಸ್ಥೆಗಳಿವೆ. ಎಲ್ಲರೂ ಯೋಗ ಮಾಡುತ್ತಾರೆ. ಯಾರು ದೊಡ್ಡವರು ಯಾರ ಚಿಕ್ಕವರು ಎಂಬ ಮನೋಭಾವನೆ ಬರಬಾರದು ಎಂಬ ಕಾರಣಕ್ಕೆ ಮೈಸೂರು ಯೋಗವನ್ನು ನಮ್ಮೆಲ್ಲರ ಬ್ರಾಂಡ್ ಮಾಡಿಕೊಳ್ಳಲಾಗಿದೆ. ಮೈಸೂರು ಮೊದಲೇ ಯೋಗಕ್ಕೆ ಪ್ರಸಿದ್ಧಿಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಬ್ರಾಂಡ್ ಇನ್ನಷ್ಟು ಹೆಸರು ತಂದಕೊಡುತ್ತದೆ ಎಂಬುದು ಇದರ ಹಿಂದಿನ ಉದ್ದೇಶ. ಹೀಗೆ ನಾವೆಲ್ಲರೂ ಒಂದಾದ ಕಾರಣ ಕಳೆದ ವರ್ಷ ವಿಶ್ವ ಯೋಗ ದಿನದಂದು ದೊಡ್ಡ ಸಾಧನೆ ಮಾಡಲು ಸಾಧ್ಯವಾಯಿತು.
  • ಯೋಗ ಮಾಡಲು ಮೈಸೂರುನಗರ ಏಕೆ ಶ್ರೇಷ್ಠ ಸ್ಥಳ ?
ಒಂದು ರೀತಿಯಲ್ಲಿ ಹೇಳುವುದಾದರೆ ಮೈಸೂರು ಒಂದು ವಿಶಾಲವಾದ ಸ್ಥಳ. ಇಲ್ಲಿನ ಹವಾಗುಣ ಎಲ್ಲರನ್ನು ಸೆಳೆಯಬಲ್ಲದು. ಅರಣ್ಯ ಸಂಪತ್ತು ಯತೇಚ್ಛವಾಗಿರುವುದರಿಂದ ನಗರದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗಿದೆ. ಯಾವಾಗ ಹೆಚ್ಚು ಆಮ್ಲಜನಕವು ದೇಹವನ್ನು ಸೇರುತ್ತದೆಯೋ ಆಗ ದೇಹ ತಾನಾಗಿಯೇ ಸ್ವಚ್ಛಗೊಳ್ಳುತ್ತದೆ. ಆಯುರ್ವೇದ, ಸಂಸ್ಕøತಿ, ಪರಂಪರೆ, ಯೋಗ ಮೊದಲಾದವುಗಳು ಮೈಸೂರಿನಲ್ಲಿ ಸಾಂಪ್ರದಾಯಿಕವಾಗಿ ಬೆಳೆದುಬಂದಂತ ವಿಷಯಗಳಾಗಿವೆ. ಇವು ಯಾವ ಕಾಲಕ್ಕೂ ತಾಜಾ ಆಗಿರುವ ವಿಷಯಗಳೇ. ವಿದೇಶಿಗರು ಇಲ್ಲಿವರೆಗೂ ಹುಡುಕಿಕೊಂಡು ಬಂದು ಯೋಗ ಕಲಿಯಲು ಅದೇ ಕಾರಣ.
ದೊಡ್ಡ ದೊಡ್ಡ ಊರುಗಳಲ್ಲಿ ಪ್ರತಿಷ್ಠೆಗಳೇ ಹೆಚ್ಚಾಗುತ್ತದೆ. ಬೆಂಗಳೂರಿನಂತ ಊರಿನಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆ ಹೊಗಲು ಹೆಚ್ಚು ಸಮಯ ಬೇಕು. ಆದರೆ, ಮೈಸೂರು ಹಾಗಲ್ಲ ಎಲ್ಲವೂ ಸುಲಭವಾಗಿ ಕೈಗೆ ಸಿಗುತ್ತದೆ ಎಂಬ ಕಾರಣಕ್ಕೆ ಮೈಸೂರು ಯೋಗ ಮಾಡಲು ಸೂಕ್ತ ಸ್ಥಳ.
  • ಯೋಗ ದಿನಕ್ಕೆ ಸಾರ್ವತ್ರಿಕ ರಜೆ ಘೋಷಣೆ ಸಾಧ್ಯವಿದೆಯೇ?
ಹೌದು ಇದೊಂದು ಒಳ್ಳೆಯ ಆಲೋಚನೆ. ಸರಕಾರಿ ಮತ್ತು ಖಾಸಗಿ ಶಾಲೆಗಳಿಗೆ ಅರ್ಧದಿನ ರಜೆ ಕೊಡಿ ಎಂದು ಮನವಿ ಮಾಡಿಕೊಂಡಿದ್ದೆವು ಅದಕ್ಕೆ ಅವರು ಒಪ್ಪಿದ್ದಾರೆ. ಸಾರ್ವತ್ರಿಕ ರಜೆ ಘೋಷಣೆಯಾದರೆ ಯೋಗ ದಿನಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತದೆ. ಸದ್ಯದಲ್ಲೇ ಈ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಂಬಂಧಪಟ್ಟವರಿಗೆ ತಲುಪಿಸುವ ಪ್ರಯತ್ನ ಮಾಡುತ್ತೇವೆ.
  • ಯೋಗ ಹೆಸರಿನಲ್ಲಿ ರಾಜ್ಯದ ಜನತೆಯನ್ನು ಒಂದೆಡೆ ಸೇರಿಸಲು ಸಾಧ್ಯವಿದೆಯೇ?
ಸಾಧ್ಯ ಇದೆ ಆದರೆ, ಬಹಳ ಕಷ್ಟ ಒಬ್ಬರು, ಇಬ್ಬರು ಅಥವಾ ಒಂದೇ ಸಂಸ್ಥೆಯಿಂದ ಇದು ಸಾಧ್ಯವಾಗುವ ಕೆಲಸವಲ್ಲ. ದಸರೆಯಲ್ಲಿ ಎಲ್ಲ ರಾಜ್ಯದ ಕಲೆಗಳು ಒಂದೆಡೆ ಸೇರುವಂತೆ ಯೋಗದಿನಕ್ಕೆ ರಾಜ್ಯದ ಯೋಗಾಸಕ್ತರನ್ನು ಒಂದೆಡೆ ಸೇರಿಸಬೇಕಾದರೆ ಬಹಳಷ್ಟು ಹಣ ಖರ್ಚಾಗುತ್ತದೆ. ಸರಕಾರ ಅವರಿಗೆ ಉಳಿಯಲು ಜಾಗ, ಊಟ ತಿಂಡಿ ವ್ಯವಸ್ಥೆ ಮಾಡಿದರೆ ಖಂಡಿತವಾಗಿಯೂ ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಬಹುದು. ಮೈಸುರು ಜಿಲ್ಲಾಡಳಿತ ಯೋಗ ಎಂದ ಕೂಡಲೇ ಅದರ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಕೇಳಿದ ಎಲ್ಲ ಸೌಲಭ್ಯಗಳನ್ನೂ ಕೊಡುತ್ತದೆ ಅದೇ ರೀತಿ ಎಲ್ಲ ಕಡೆಯೂ ಇಂಥ ಸೌಲಭ್ಯಗಳು ಸಿಕ್ಕರೆ ಮೈಸೂರಿನಲ್ಲಿ ಇಂಥ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಬಹುದಾಗಿದೆ.
  • ಮೈಸೂರಿನ ಶುದ್ಧ ಯೋಗವನ್ನು ನ್ಯೂಯಾರ್ಕ್ ಟೈಮ್ಸ್ ಹಾಡಿ ಹೊಗಳಿದೆ. ಈ ಶುದ್ಧ ಯೋಗ ಎಂದರೇನು?
ಶುದ್ಧ ಯೋಗ ಎಂದರೆ ಎಲ್ಲ ಕಾಲಕ್ಕೂ ಅಪ್‍ಡೇಟ್ ಆಗುವ ಯೋಗ. ಇಲ್ಲಿಂದ ಕಲಿತು ಬೇರೆಡೆ ಯೋಗ ಹೇಳಿಕೊಡುವವರು ಇಲ್ಲಿಗಿಂತ ಸ್ವಲ್ಪ ಕಡಿಮೆ ಪಟ್ಟುಗಳನ್ನು ಹೇಳಿಕೊಡುತ್ತಾರೆ. ಆದರೆ, ಮೈಸೂರಿನಲ್ಲಿಹಾಗಲ್ಲ ಯೋಗ ಕುರಿತು ಅಧ್ಯಯನ, ಸಂಶೋಧನೆ ಮಾಡಿ ಅದನ್ನು ಅಪ್‍ಗ್ರೇಡ್ ಮಾಡುವ ಸಾಧ್ಯತೆ ಇದೆ. ಮೊನ್ನೆ ಯಾವುದೋ ಒಂದು ಯೋಗಕ್ಕೆ ಈ ಹೆಸರು ಇಡಬಹುದೇ ಎಂದು ಕೆಲವರು ಸೂಚಿಸಿದರು ಅದನ್ನು ನಾವು ಒಪ್ಪಿಕೊಂಡೆವು ಆ ರೀತಿಯ ಸ್ವೀಕೃತ ಮನೋಭಾವನೆ ಇಲ್ಲಿನ ಯೋಗಕ್ಕಿದೆ. ಇದೊಂದು ವೈಜ್ಞಾನಿಕ ಚಿಂತನೆಯಾಗಿದೆ ಅದೇ ಶುದ್ಧಯೋಗ. ಈಗ ಆರ್ಟ್ ಯೋಗ, ಮ್ಯೂಸಿಕ್ ಯೋಗ, ಮಾರ್ಷಲ್ ಆರ್ಟ್ ಯೋಗ ಸ್ಪೋಟ್ಸ್ ಯೋಗ ಮಾಡಲು ಹೊರಟಿದ್ದೇವೆ ಇವೆಲ್ಲದರ ಜತೆ ಯೋಗವನ್ನು ಮಿಶ್ರಣ ಮಾಡುತ್ತೇವೆ. ಯೋಗವನ್ನು ಒಂದು ವೈಜ್ಞಾನಿಕ ವ್ಯಾಯಾಮವನ್ನಾಗಿ ಮಾಡುತ್ತೇವೆ.
  • ಯೋಗ ಒಂದು ಚೌಕಟ್ಟಿನಿಂದ ಹೊರಬರುತ್ತಲ್ಲ ಇನ್ನು ಅಪ್‍ಗ್ರೇಡ್ ಆಗುವ ಸಾಧ್ಯತೆ ಎಲ್ಲಿ?
ಹಾಗೆ ಅಂದುಕೊಳ್ಳುವುದೇ ತಪ್ಪು, ಯಾರು ಪೂರ್ಣ ಪ್ರಮಾಣದಲ್ಲಿ ಯೋಗ ಕಲಿತಿರುತ್ತಾರೋ ಅದವರು ಒಂದು ಸ್ವೀಕೃತ ಮನೋಭಾವನೆ ಹೊಂದಿರುತ್ತಾರೆ. ಒಂದೇ ಚೌಕಟ್ಟಿನೊಳಗೆ ಯೋಗ ಮಾಡುವುದು ಒಳ್ಳೆಯದಲ್ಲ.
  • ಮೈಸೂರಿನಲ್ಲಿ ಯೋಗ ಎಂಬುದು ಬಹಳ ದುಬಾರಿಯಾಗಿದೆ ಹೌದೆ?
ಖಂಡಿತವಾಗಿಯೂ ಹೌದು. ಆದರೆ, ಅಗತ್ಯಕ್ಕಿಂತ ಹೆಚ್ಚು ಶುಲ್ಕ ವಿಧಿಸುವುದು ಸರಿಯಲ್ಲ. ಎಲ್ಲದಕ್ಕೂ ಒಂದೊಂದು ಸ್ಟಾಂಡರ್ಡ್ ಇರುತ್ತದೆ. ವಿದೇಶಿಗರಿಗೆ ಯೋಗ ಹೇಳಿಕೊಡಬೇಕಾದರೆ ಅವರ ದೇಹಕ್ಕೆ ಒಗ್ಗುವಂತಹ ಅಡಿಗೆ ಮಾಡಿಸಬೇಕು. ಅದಕ್ಕಾಗಿ ವಿಶೇಷ ಬಾಣಸಿಗರು ಬೇಕು. ಅವರು ಉಳಿಯಲು ಒಳ್ಳೆಯ ಜಾಗಗಳೇ ಬೇಕು. ಅದಕ್ಕಾಗಿ ಹೆಚ್ಚು ಹಣ ಖರ್ಚಾಗುತ್ತದೆ. ಹಾಗಾಗಿ ಯೋಗ ಕಲಿಯಲು ಹೆಚ್ಚುಹಣವೂ ಖರ್ಚಾಗುತ್ತದೆ. ಒಂದು ರೀತಿ ಹೇಳುವುದಾದರೆ ಯಾರ್ಯಾರ ಬಂಡವಾಳ ಎಷ್ಟಿರುತ್ತದೆಯೋ ಅದಕ್ಕೆ ತಕ್ಕಂತೆ ಹಣ ವ್ಯಯ ಮಾಡಬೇಕಾಗುತ್ತದೆ.
  • ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಬೇಕೆಂಬ ಪ್ರಸ್ತಾವನೆ ಇತ್ತು. ಅದು ಏಕೆ ಸಾಧ್ಯವಾಗಲಿಲ್ಲ?
ಮಾಡಿದರೆ ತುಂಬ ಒಳ್ಳೆಯದು. ಯೋಗವನ್ನು ಒಂದು ಧರ್ಮ, ಒಂದು ಪಕ್ಷವಾಗಿ ಗುರುತಿಸಿದ್ದರಿಂದ ಅದು ಸಾಧ್ಯವಾಗಲಿಲ್ಲ. ಯೋಗವು ಅದನ್ನೆಲ್ಲ ಮೀರಿದ ಒಂದು ಕಲೆ. ಅದಕ್ಕೆ ರಾಜಕೀಯ ಸೋಂಕು ಅಂಟಿಸುವುದು ಸರಿಯಲ್ಲ. ಇದರಿಂದಾಗಿಯೇ ಯೋಗವು ಶಾಲೆಗಳ ಪಠ್ಯ ಕ್ರಮ ಸೇರುವ ಒಂದು ಅಮೂಲ್ಯ ಅವಕಾಶ ಇಲ್ಲದಂತಾಗಿದೆ. ಯೋಗವನ್ನು ಒಂದು ಧರ್ಮ, ಒಬ್ಬ ವ್ಯಕ್ತಿಯಾಗಿ ಗುರಿತಿಸುವುದು ದೊಡ್ಡ ತಪ್ಪು.
  • ಯೋಗ ಮತ್ತು ಆಯುರ್ವೇದ ನಡುವಿನ ನಂಟಿನಿಂದ ಮೈಸೂರಿನ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆಯೇ?

ಎರಡಕ್ಕೂ ಶೇ. 30ರಷ್ಟು ನಂಟಿರುವುದು ನಿಜ. ಇವೆರಡೂ ವಿಷಯಗಳು ವೈಜ್ಞಾನಿಕವಾಗಿ ದೃಢಪಟ್ಟಿರುವ ಹಳೇ ವಿಷಯಗಳು. ಎರಡೂ ಕೂಡ ಒಂದನ್ನೊಂದು ಅವಲಂಬಿಸಿದೆ. ಆಲೋಪತಿಕ್ ವೈದ್ಯರ ಬಳಿ ಹೋಗಿ ಬೆನ್ನು ನೋವು ಎಂದರೆ ಒಂದು ಚಿಕಿತ್ಸೆ ಪಡೆಯಬೇಕು ಅಥವಾ ಯೋಗ ಮಾಡಬೇಕು ಎಂ ಸಲಹೆ ನೀಡುತ್ತಾರೆ. ಮೈಸೂರು ಯೋಗದ ಜತೆ ಆಯುರ್ವೇದಕ್ಕೂ ಹೆಚ್ಚು ಪ್ರಸಿದ್ಧಿಪಡೆದಿದೆ. ಹಾಗಾಗಿ ಎರಡೂ ವಿಷಯಗಳನ್ನು ಮುನ್ನೆಲೆಯಾಗಿಸಿಕೊಂಡು ಪ್ರವಾಸೋದ್ಯಮವನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಬಹುದು.

  • ಯಾವ್ಯವಾವ ವರ್ಗಕ್ಕೆ ಯೋಗ ಅಗತ್ಯವಾಗಿದೆ?
ಐಟಿ ಬಿಟಿ ಕ್ಷೇತ್ರದಲ್ಲಿರುವವರು ಸಾಮಾನ್ಯವಾಗಿ ಮಹಾ ನಗರಗಳಲ್ಲಿರುತ್ತಾರೆ ಅಲ್ಲಿನ ವಾತಾವರಣ ಕಲುಷಿ ತವಾಗಿರುತ್ತದೆ. ಜತೆಗೆ ಅವರು ಒತ್ತಡದಲ್ಲಿ ಬದುಕುತ್ತಿರುತ್ತಾರೆ ಅವರಿಗೆ ಯೋಗ ಅತಿ ಮುಖ್ಯ. ವಾಹನಗಳ ಹೊಗೆಯ ಮಧ್ಯೆಯೇ ಕೆಲಸ ಮಾಡುವ ಟ್ರಾಫಿಕ್ ಪೊಲೀಸರು, ಕಸ ವಿಲೇವಾರಿ ಮಾಡುವ ಪಾಲಿಕೆ ಸಿಬ್ಬಂದಿ ಇವರೆಲ್ಲರ ಮೇಲಧಿಕಾರಿಗಳು ಯೋಗವನ್ನು ಈ ವರ್ಗದವರಿಗೆ  ಒಳ್ಳೆಯದು.
  • ಈ ವರ್ಷ ಹಮ್ಮಿಕೊಂಡಿರುವ ಯೋಗ ಕಾರ್ಯಕ್ರಮಗಳು ಯಾವುವು?
ಮೂರು ವರ್ಷಗಳ ಹಿಂದೆ ಫಿಟ್ ಇಂಡಿಯಾ ಮೂವ್‍ಮೆಂಟ್ ಎಂಬ ಅಭಿಯಾನದ ಹೆಸರಿಟ್ಟಿದ್ದೆವು. ಅದನ್ನೇ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿ ಆಂದೋಲನ ಆರಂಭಿಸಿದ್ದಾರೆ. ಈ ವರ್ಷ ಮನೆ ಮನೆ ಯೋಗ, ಮನ ಮನ ಯೋಗ ಎಂಬ ಯೋಗವನ್ನು ಆರಂಭಿಸಲಿದ್ದೇವೆ. ಈ ಮೂಲಕ ಯೋಗವ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶವಿದೆ.

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ12 hours ago

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ...

ಅಂತರಂಗ5 days ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ5 days ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ6 days ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ1 week ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ2 weeks ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 weeks ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 weeks ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 weeks ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ3 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

Trending