Connect with us

ಲೈಫ್ ಸ್ಟೈಲ್

ಜನೌಷಧ ! ಜನರಿಕ್ ಔಷಧ ?! ಏನು ಎತ್ತ..?

Published

on


ಈಗಷ್ಟೇ ಜನೌಷಧಿ ಸಾಪ್ತಾಹ ಮುಗಿದಿದೆ. ದೇಶದ ಮೂಲೆಗಳಲ್ಲೂ ಸಹ ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧಿಗಳನ್ನು ಮಾರಲು ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಜನರಿಕ್ ಔಷಧಗಳನ್ನು ಮಾರುವ ಜನೌಷಧಿ ಕೇಂದ್ರಗಳನ್ನು ಹೆಚ್ಚು ಹೆಚ್ಚಾಗಿ ಸ್ಥಾಪಿಸಲು ಸರ್ಕಾರವು ಪ್ರೋತ್ಸಾಹಿಸುತ್ತಿದೆ. ಹಾಗಿದ್ದರೆ ಈ “ಜನರಿಕ್” ಔಷಧಿಗಳೆಂದರೇನು? ಜನೌಷಧಿಗಳೆಂದರೇನು? ಅವುಗಳ ಬೆಲೆ ಏಕೆ ಕಡಿಮೆ? ಅವುಗಳು ಕಾರ್ಯಕ್ಷಮತೆ ಹೇಗಿರುತ್ತದೆ? ಅವುಗಳಿಗೆ ಲೈಸೆನ್ಸ್ ನೀಡುವವರು ಯಾರು? ಇವುಗಳ ನಿಯಂತ್ರಣ ಹೇಗೆ? ಇತ್ಯಾದಿ ಹಲವು ಪ್ರಶ್ನೆಗಳಿಗೆ ಉತ್ತರ ಬೇಕಲ್ಲವೇ? ಪ್ರಯತ್ನಿಸೋಣ.


  • ಡಾ.ಎನ್.ಬಿ.ಶ್ರೀಧರ, ಶಿವಮೊಗ್ಗ

ನರಿಕ್ ಔಷಧವಂತೆ!!. ಕೆಲಸ ಮಾಡ್ತದೋ ಏನೋ? ಅಲ್ರಿ.. ಅಷ್ಟು ಕಡಿಮೆ ಬೆಲೆಗೆ ಹ್ಯಾಗ್ ಮಾರ್ತಾರೆ? ಅದ್ರಲ್ಲಿ ಔಷಧಿನೇ ಕಡಿಮೆ ಇರಬಹುದು ಅಲ್ವೆ?. ಇದು ಒಂದಿಷ್ಟು ಜನರ ಅಭಿಪ್ರಾಯ.

“ಜನರಿಕ್ ಔಷಧಿ ಕೆಲಸ ಮಾಡಲ್ವಂತೆ. ಅದಕ್ಕೆ ಬ್ರಾಂಡೆಡ್ ಔಷಧಿ ತರ್ಸಿ ಕೊಂಡಿದ್ದೇನೆ. ದುಡ್ಡು ಜಾಸ್ತಿ ಆದರೂ ಪರ್ವಾಗಿಲ್ಲ. ಒಟ್ನಲ್ಲಿ ಚೆನ್ನಾಗಿ ಕೆಲಸ ಮಾಡಬೇಕು. ಇದು ಕೆಲವರ ಅಭಿಪ್ರಾಯ.

ಇತ್ತೀಚೆಗಂತೂ ದುಬಾರಿ ಔಷಧಗಳು ಉತ್ತಮವಾಗಿ ಕೆಲಸ ಮಾಡುತ್ತವೆಂಬ “ಪ್ಲಾಸೆಬೋ” ಪರಿಣಾಮ ಜನರ ತಲೆ ಹೊಕ್ಕುಬಿಟ್ಟಿದೆ. ಅದಕ್ಕೆ “ಡಾಕ್ಟ್ರೇ.. ಔಷಧಿ ದುಬಾರಿಯಾದರೂ ಪರವಾಗಿಲ್ಲ. ರೋಗ ಬೇಗ ಗುಣವಾಗಬೇಕು. ದುಬಾರಿ ಔಷಧಿ ಬರೆದುಕೊಡಿ” ಎನ್ನುವವರ ಸಂಖ್ಯೆಗೇನೂ ಕಡಿಮೆ ಇಲ್ಲ.

ಜನೌಷಧಿ ಕೇಂದ್ರಗಳನ್ನು ಹೆಚ್ಚು ಹೆಚ್ಚಾಗಿ ಸ್ಥಾಪಿಸಲು ಸರ್ಕಾರಗಳೇ ಪ್ರೋತ್ಸಾಹಿಸುತ್ತಿದ್ದಾವೆ. ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧಿಗಳನ್ನು ಮಾರುತ್ತಾರೆ. ಹಾಗಿದ್ದರೆ ಈ ಜನರಿಕ್ ಔಷಧಿಗಳೆಂದರೇನು? ಜನೌಷಧಿಗಳೆಂದರೇನು? ಅವುಗಳ ಬೆಲೆ ಏಕೆ ಕಡಿಮೆ? ಅವುಗಳು ಕಾರ್ಯಕ್ಷಮತೆ ಹೇಗಿರುತ್ತದೆ? ಅವುಗಳಿಗೆ ಲೈಸೆನ್ಸ್ ನೀಡುವವರು ಯಾರು? ಇತ್ಯಾದಿ ಹಲವು ಪ್ರಶ್ನೆಗಳಿಗೆ ಉತ್ತರ ಬೇಕಲ್ಲವೇ? ಪ್ರಯತ್ನಿಸೋಣ…

ಸರಳವಾಗಿ ಉದಾಹರಣೆ ನೀಡಬೇಕೆಂದರೆ “ಕ್ರೋಸಿನ್” ಇದು ತಲೆನೋವಿಗೆ ಉಪಯೋಗಿಸುವ ಔಷಧದ ಬ್ರಾಂಡೆಡ್ ಹೆಸರು. ಇದು ಜಿ.ಎಸ್.ಕೆ ಕಂಪನಿಯ ಬ್ರಾಂಡೆಡ್ ಉತ್ಪನ್ನವಾದರೆ “ಪ್ಯಾರಸೆಟಮಾಲ್” ಇದು ಕ್ರೋಸಿನ್ನಲ್ಲಿರುವ “ಜನರಿಕ್” ಔಷಧಿಯ ಹೆಸರು. ಜನರಿಕ್ ಔಷಧಿಯಾದ “ಪ್ಯಾರಾಸೆಟಮಾಲ್” ಅನ್ನು ಅನೇಕ ಕಂಪನಿಗಳು ಅನೇಕ ಬ್ರಾಂಡೆಡ್ ಹೆಸರಿನಲ್ಲಿಯೂ ತಯಾರಿಸುತ್ತವೆ. ಜನರಿಕ್ ಪ್ಯಾರಸೆಟಮಾಲ್ 15 ಗುಳಿಗೆಗೆ ರೂ: 5 ಇದ್ದರೆ ಕ್ರೋಸಿನ್ 15 ಗುಳಿಗೆಗಳಿಗೆ ರೂ: 30.24 ಇರುತ್ತದೆ. ಅಂದರೆ ಬೆಲೆಯು ಬ್ರಾಂಡೆಡ್ ಔಷಧಿಗೆ ಕನೀಷ್ಟ 6 ಪಟ್ಟು ಜಾಸ್ತಿ !!. ಎರಡರ ಪರಿಣಾಮವೂ ಒಂದೇ. ಇದು ಅನೇಕ ಜನರಿಗೆ ಗೊತ್ತಿರುವುದಿಲ್ಲ.

ಇದನ್ನೂ ಓದಿ | ‘ಮೈತ್ರಿ ಸೇತು’ ಸೇತುವೆಯ ವೈಶಿಷ್ಟ್ಯತೆ..!

ಸಾಮಾನ್ಯವಾಗಿ ಒಂದು ಔಷಧ ಕಂಪನಿ ‘ಹೊಸ ಔಷಧ’ ಕಂಡುಹಿಡಿಯಿತೆಂದರೆ ಇಂತಿಷ್ಟು ವರ್ಷಗಳ ಕಾಲ ಅದರ ಸ್ವಾಮ್ಯತೆ ಅಥವಾ ಹಕ್ಕು ಹೊಂದಿರುತ್ತದೆ. ಅಂದರೆ ಈ ಪೇಟಂಟ್ ಅವಧಿಯಲ್ಲಿ ಬೇರೆ ಯಾವ ಔಷಧ ಕಂಪನಿಗಳೂ ಸಹ ಈ ಹೊಸ ಔಷಧವನ್ನು ಬಳಸಿ ಹೊಸ ಕಂಪನಿ ಹೆಸರಿನೊಂದಿಗೆ ಮಾರುವಂತಿಲ್ಲ. ಪೇಟಂಟ್ ಅವಧಿ ಮುಗಿದ ನಂತರ ಯಾವ ಕಂಪನಿ ಬೇಕಾದರೂ ಈ ಔಷಧವನ್ನು ಸಿದ್ದಪಡಿಸಿ ಹೊಸ ಬ್ರಾಂಡ್ ಹೆಸರಿನಿಂದ ಮಾರುಕಟ್ಟೆಯಲ್ಲಿ ಮುಕ್ತವಾಗಿ ಮಾರಬಹುದು.

ಇದಕ್ಕೆ ಮೂಲ ಕಂಪನಿ/ ಪೇಟಂಟ್ ಪಡೆದಿದ್ದ ಕಂಪನಿಯ ಪರವಾನಗಿ ಬೇಕಾಗಿರುವುದಿಲ್ಲ. ರಾಸಾಯನಿಕ ಹೆಸರು, ಜನರಿಕ್ ಹೆಸರು (ಮೂಲ ಹೆಸರು) ಮತ್ತು ಬ್ರಾಂಡೆಡ್ ಹೆಸರು / ಟ್ರೇಡ್ ನೇಮ್/ ಪ್ರೊಪ್ರೈಟರಿ ಹೆಸರುಗಳಿಂದ ಒಂದು ಔಷಧವನ್ನು ಗುರುತಿಸಬಹುದು. ಇವುಗಳಲ್ಲಿ ಔಷಧದ ರಾಸಾಯನಿಕ ಹೆಸರು ಮತ್ತು ಜನರಿಕ್ ಹೆಸರುಗಳು ಎಂದಿಗೂ ಬದಲಾಗುವುದಿಲ್ಲ. ರಾಸಾಯನಿಕ ಹೆಸರುಗಳನ್ನು ಓದುವುದು ಮತ್ತು ನೆನಪಿಟ್ಟುಕೊಳ್ಳುವುದು ಸಾಮಾನ್ಯವಾಗಿ ಕಷ್ಟ ಸಾದ್ಯ, ಆದರೆ ಜನರಿಕ್ ಹೆಸರುಗಳನ್ನು ಸುಲಭವಾಗಿ ಓದಬಹುದು ಮತ್ತು ನೆನಪಿಟ್ಟುಕೊಳ್ಳಬಹುದು.

ಬ್ರಾಂಡೆಡ್ ಔಷಧಗಳಿಗೆ ಪರ್ಯಾಯವಾಗಿ ಬಳಸುವ ಉದ್ದೇಶದಿಂದ ಸ್ವಾಮ್ಯತೆ ಅಥವಾ ಪೇಟಂಟ್ ಅವಧಿಯ ನಂತರ ಮಾರುಕಟ್ಟೆಯಲ್ಲಿ ಔಷಧದ ಮೂಲ ಹೆಸರಿನಲ್ಲಿ ಲಭ್ಯವಿರುವ ಔಷಧಗಳಿಗೆ “ಜನರಿಕ್ ಔಷಧ” ಗಳು ಎನ್ನುತ್ತಾರೆ.ಸಾರ್ವಜನಿಕರಿಗೆ ಇರುವಂತೆ ಬಹುತೇಕ ಜನರಿಗೆ ಜನರಿಕ್ ಔಷಧಿಗಳ ಬಗ್ಗೆ ಈ ಕೆಳಗಿನ ಸಂಶಯಗಳಿವೆ.

ಜನರಿಕ್ ಔಷಧಗಳು ಏಕೆ ಅಗ್ಗ?

  1. ಬ್ರಾಂಡೆಡ್ ಔಷಧಿಗಳಿಗೆ ಲೈಸನ್ಸ್ ಕೊಡುವಾಗ ಅನುಸರಿವಷ್ಟು ಕಠಿಣ ಕ್ರಮವನ್ನು ಜನರಿಕ್ ಔಷಧಿಗಳಿಗೆ ಅನುಮತಿ ನೀಡುವಾಗ ಅನುಸರಿಸುವುದಿಲ್ಲ.
  2. ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಗಳಷ್ಟು ಕಾರ್ಯಕ್ಷಮತೆ ಹೊಂದಿಲ್ಲ.
  3. ಜನರಿಕ್ ಔಷಧಗಳು ಬ್ರಾಂಡೆಡ್ ಔಷಧಗಳಂತೆ ಉತ್ತಮವಾಗಿ ಉತ್ಪಾದನಾ ಗುಣಮಟ್ಟ ಹೊಂದಿಲ್ಲ.
  4. ಜನರಿಕ್ ಔಷಧಗಳ ಗುಣಮತ್ತ, ಪರಿಣಾಮ, ಅಡ್ಡ ಪರಿಣಾಮ ಇವುಗಳನ್ನು ತಪಾಸಣೆ ಮಾಡಲು ಉತ್ತಮ ಸಂಸ್ಥೆಗಳಿಲ್ಲ.
  5. ಇವುಗಳ ಬೆಲೆ ಕಡಿಮೆ. ಕಾರಣ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿರಬಹುದು.
  6. ಜನರಿಕ್ ಔಷಧಿಗಳಿಗೆ ಅಡ್ಡ ಪರಿಣಾಮಗಳಾದರೆ ತಯಾರಿಕರು ಹೊಣೆಗಾರಿಕೆ ವಹಿಸಿಕೊಳ್ಳುವುದಿಲ್ಲ.

ಈ ಪ್ರಶ್ನೆಗಳಿಗೆಲ್ಲ ಕೆಳಗೆ ಉತ್ತರವಿದೆ.

ಜನರಿಕ್ ಔಷಧಗಳೇಕೆ ಬ್ರಾಂಡೆಡ್ ಔಷಧಗಳಿಗಿಂತ ಅಗ್ಗ?

ಮಾರುಕಟ್ಟೆಗೆ ಹೊಸ ಔಷಧಿ ಲಗ್ಗೆ ಇಡುವ ಮುನ್ನ ಅಮೇರಿಕಾ ಸರ್ಕಾರದ ಅಧೀನದ ಸಂಸ್ಥೆಯಾದ ಆಹಾರ ಮತ್ತು ಔಷಧ ಪರವಾನಗಿ ಪ್ರಾಧಿಕಾರದ (ಎಫ್‌ಡಿಎ) ಕಠಿಣ ಕಣ್ಗಾವಲಿನಲ್ಲಿ ಪುನರಾವಲೋಕನಗೊಂಡಿರುತ್ತದೆ. ಕಂಪನಿಗಳು ಹೊಸ ಔಷಧಗಳನ್ನು ಕಂಡುಹಿಡಿಯುವಲ್ಲಿ ಸಾಕಷ್ಟು ಸಮಯ (ಸುಮಾರು 6-12 ವರ್ಷಗಳು) ಮತ್ತು ಸುಮಾರು 200 ಬಿಲಿಯನ್ ಹಣವನ್ನು ವ್ಯಯಿಸಿರುತ್ತವೆ.

ಎಫ್‌ಡಿಎಯು ಈ ಕಂಪಗಳಿಗೆ ತಾವು ತೊಡಗಿಸಿದ ಹಣವನ್ನು ಹಿಂಪಡೆಯಲು ನೆರವಾಗುವಂತೆ ಪೇಟಂಟ್ ಅವಧಿಯನ್ನು ನೀಡಿ ಮಾರುಕಟ್ಟೆಯಲ್ಲಿ ಏಕಸ್ವಾಮ್ಯವನ್ನು ಸಾಧಿಸಲು ನೆರವಾಗುತ್ತದೆ, ಹಾಗಾಗಿ ಬ್ರಾಂಡೆಡ್ ಔಷಧಗಳು ತುಸು ತುಟ್ಟಿ. ಆದರೆ ಜನರಿಕ್ ಔಷಧಗಳು ಹಾಗಲ್ಲ, ಪೇಟಂಟ್ ಅವಧಿಯ ನಂತರವೇ ಜನರಿಕ್ ಔಷಧಿಗಳನ್ನು ಸಿದ್ದಪಡಿಸಲು ಎಫ್‌ಡಿಎಯು ಪರವಾನಗಿ ನೀಡುವುದರಿಂದ , ಮತ್ತೊಮ್ಮೆ ಪ್ರಾಣಿಗಳ ಮತ್ತು ಮಾನವನ ಮೇಲೆ ಪ್ರಯೋಗ ಮಾಡಿ ಇದರ ಸುರಕ್ಷತೆ ಮತ್ತು ಪರಿಣಾಮದ ಬಗ್ಗೆ ಪರೀಕ್ಷಿಸುವ ಅವಶ್ಯಕತೆ ಇರುವುದಿಲ್ಲ.

ಹಾಗಾಗಿ ಜನರಿಕ್ ಔಷಧಿಗಳು ಅಗ್ಗ. ಬಹು ಮುಖ್ಯವಾಗಿ ಯಾವುದೇ ಕಂಪನಿ ತಯಾರಿಸಿದರೂ ಔಷಧದ ಮೂಲ ಹೆಸರಿನಲ್ಲೆ (ಜನರಿಕ್ ಹೆಸರಿನಲ್ಲಿ) ಮಾರಾಟ ಮಾಡಬೇಕಾಗಿರುವುದರಿಂದ ಮಾರುಕಟ್ಟೆಯಲ್ಲಿ ಕಂಪನಿ ದರ ಪೈಪೋಟಿಗೆ ಇಳಿದುಬಿಡುತ್ತದೆ. ಈ ಕಾರಣಗಳಿಂದ ಜನರಿಕ್ ಔಷಧಗಳು ಬ್ರಾಂಡೆಡ್ ಔಷಧಗಳಿಗಿಂತ ಕೆಲವೊಮ್ಮೆ ಶೇ: 70-85 ರಷ್ಟು ಕಡಿಮೆ ದರದಲ್ಲಿ ಲಭ್ಯವಾಗುತ್ತವೆ.

ಜನರಿಕ್ ಔಷಧಗಳು ಹೇಗೆ ಅನುಮೋದನೆ ಪಡೆಯುತ್ತವೆ?

ಯಾವುದೇ ಕಂಪನಿ ಹೊಸದಾಗಿ ಜನರಿಕ್ ಔಷಧಗಳನ್ನು ಸಿದ್ದಪಡಿಸಿ ಮಾರುಕಟ್ಟೆಗೆ ತರುವ ಮುನ್ನ ಹೊಸ ಅರ್ಜಿಯನ್ನು ಎಫ್‌ಡಿಎಗೆ ಸಲ್ಲಿಸಿರುತ್ತದೆ. ಆಗ ಎಪ್‌ಡಿಎ ವಿವಿಧ ಮೂಲಬೂತ ಪರೀಕ್ಷೆಗಳನ್ನು ನಡೆಸಿದ ನಂತರವೇ ಅನುಮೋದನೆ ನೀಡುತ್ತದೆ.

ಔಷಧದ ಅಡ್ಡಪರಿಣಾಮ ಮತ್ತು ಸುರಕ್ಷತೆಯ ತಪಾಸಣೆ ನಡೆಯುತ್ತದೆಯೇ?

ಹೌದು. ಜನರಿಕ್ ಅಥವಾ ಬೇರೆ ಯಾವುದೇ ಔಷಧ ಇರಲಿ, ಅವು ಎಲ್ಲಿಯವರೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆಯೋ ಅಲ್ಲಿಯವರೆಗೆ ಎಪ್‌ಡಿಎಯ ಕಣ್ಗಾವಲಿನಲ್ಲಿರುತ್ತವೆ. ಔಷಧಗಳು ಸಿದ್ದವಾಗಿ ಬಳಕೆದಾರರಿಗೆ ಲಭ್ಯವಾಗುವ ತನಕದ ಎಲ್ಲಾ ಹಂತದಲ್ಲೂ ಎಪ್‌ಡಿಎಯು ಕಾಲಕಾಲಕ್ಕೆ ನಿರಂತರವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ಔಷಧಗಳ ಸುರಕ್ಷತೆ ಮತ್ತು ಗುಣಮಟ್ಟವನ್ನು ಧೃಢಪಡಿಸುತ್ತದೆ. ಚಿಕಿತ್ಸಾ ವೈಫಲ್ಯ ಅಥವಾ ವೈಪರಿತ್ಯಗಳು ಕಂಡುಬಂದಲ್ಲಿ , ಸಾರ್ವಜನಿಕರಿಗೆ ಹಾಗೂ ಆರೋಗ್ಯ ಕ್ಷೇತ್ರ ವೃತ್ತಿಪರರಿಗೆ ಸೂಚನೆ/ ಸಲಹೆ/ ಶಿಫಾರಸ್ಸುಗಳನ್ನು ನೀಡುವ ಹೊಣೆಗಾರಿಕೆಯನ್ನು ಎಪ್‌ಡಿಎ ಹೊಂದಿದೆ.

ಭಾರತದಲ್ಲಿ ಜನರಿಕ್ ಔಷಧಗಳ ಪರಿಸ್ಥಿತಿ ಏನು?

ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ ಜಗತ್ತಿನ 30% ಜನರಿಗೆ ಅವಶ್ಯಕ ಔಷಧಗಳು ಕೈಗೆಟುಕುತ್ತಿಲ್ಲ. ಇದರ ಪ್ರಮಾಣ ಆಫ್ರಿಕಾ ಮತ್ತು ಏಷಿಯಾದಲ್ಲಿ 50%. ಭಾರತದಲ್ಲಿ ಒಟ್ಟು ಉತ್ಪನ್ನದ ಶೇ 1.2 ರಷ್ಟನ್ನು ಭಾರತೀಯರು ತಮ್ಮ ಆರೋಗ್ಯದ ಮೇಲೆ ಖರ್ಚು ಮಾಡುತ್ತಾರೆ. ವಾರ್ಷಿಕ ವೈದ್ಯಕೀಯ ವೆಚ್ಚವನ್ನು ತಗ್ಗಿಸುವ ಉದ್ದೇಶದಿಂದ ಜನರಿಕ್ ಔಷಧಗಳನ್ನು ಭಾರತದಲ್ಲಿ ಪರಿಚಯಿಸಲಾಗಿದೆ.

ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ

ಪ್ರಯೋಗಾಲಯಗಳಿಗಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್‌ಎಬಿಎಲ್) ಸರ್ಕಾರಿ ಮತ್ತು ಖಾಸಗಿ ತಯಾರಕರಿಂದ ಆಯ್ದ ಬ್ಯಾಚಿನ ಔಷಧಗಳನ್ನು ತಂದು ವಿವಿಧ ಪರೀಕ್ಷೆಗೆ ಒಳಪಡಿಸುವ ಮೂಲಕ ಗುಣಮಟ್ಟ, ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಧೃಢಪಡಿಸಿಕೊಳ್ಳುತ್ತದೆ.

ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆದ ಸರ್ಕಾರೇತರ ಅಥವಾ ಲಾಭ ನಿರಪೇಕ್ಷಿತ ಸಂಘಟನೆಗಳೇ ಸಾಮಾನ್ಯವಾಗಿ ಭಾರತದಲ್ಲಿ ಜನರಿಕ್ ಔಷಧ ತಯಾರಕರು. ಜನರಿಕ್ ಔಷಧಗಳಲ್ಲಿ ದರ ವ್ಯತ್ಯಾಸಗಳಿದ್ದರೂ ಅವುಗಳ ಪರಿಣಾಮಕಾರಿತ್ವವನ್ನು ಹೋಲಿಕೆ ಮಾಡಬಹುದು.

ಜನರಿಕ್ ಮತ್ತು ಬ್ರಾಂಡೆಡ್ ಔಷಧಗಳ ಪರಿಣಾಮಕಾರಿತ್ವದಲ್ಲಿ ವ್ಯತ್ಯಾಸವಿಲ್ಲ ಎಂಬುದು ಸಾಬೀತಾಗಿದ್ದರೂ ಸಹ ಅನೇಕ ಆರೋಗ್ಯ ಸಂಭಂಧಿ ವೃತ್ತಿಪರರು, ಹೆಸರಾಂತ ಕಂಪನಿಗಳ ಔಷಧಗಳನ್ನೇ ಬರೆದುಕೊಡುತ್ತಾರೆ. ಆದರೆ ಅವರಿಗೆ ಕಡಿಮೆ ಹೆಸರಿರುವ ಕಂಪನಿಗಳು ಜನರಿಕ ಔಷಧಗಳನ್ನು ತಯಾರಿಸುತ್ತವೆ ಎಂಬುದೇ ತಿಳಿದಿರುವುದಿಲ್ಲ!

ಔಷಧ ತಯಾರಿಕೆಯಲ್ಲಿ ಬಳಸುವ ಉಪವಸ್ತುಗಳಿಂದ ಅಲ್ಪ ಸ್ವಲ್ಪ ಗುಣಮಟ್ಟದಲ್ಲಿ ವ್ಯತ್ಯಾಸವಾಗಬಹುದೇ ಹೊರತು ಮೂಲ ಔಷಧಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎನ್ನುತ್ತಾರೆ ಸಂಶೋಧಕರು. ಕೆಲವು ಔಷಧಿಗಳ ಗುಣಮಟ್ಟ ಸ್ವಲ್ಪ ಕಡಿಮೆ ಎಂಬ ಅಪವಾದ ಬಿಟ್ಟರೆ ಬಹುತೇಕ ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಿಗಳಿಗಿಂತ ಗುಣ ಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿರುವುದಿಲ್ಲ ಎಂಬುದು ಅಂಬೋಣ.

ಜಾನುವಾರುಗಳಲ್ಲಿಯೂ ಜನರಿಕ್ ಔಷಧಿ ಇದೆಯೇ?

ಇದೆ. ಜನರಿಕ್ ಔಷಧಿಗಳು ಜಾನುವಾರು ಚಿಕಿತ್ಸೆಯಲ್ಲೂ ಇವೆ. ಆದರೆ ಭಾರತದಲ್ಲಿ ಇನ್ನೂ ಇದರ ಜನೌಷಧಿ ಕೇಂದ್ರಗಳು ಇಲ್ಲ. ಈ ಔಷಧಿಗಳಿಗೆ ಅಷ್ಟು ಪರಿಣಾಮ ಹೊಂದಿಲ್ಲ ಎಂಬ ಭಾವನೆಯಿಂದ ಇವುಗಳನ್ನು ಬರೆದುಕೊಡುವುದಿಲ್ಲ ಎನ್ನುತ್ತದೆ ಸಮೀಕ್ಷೆ. ಆದರೆ ಜಾನುವಾರುಗಳ ಜನರಿಕ್ ಔಷಧಿಗಳಿಗೂ ಸಹ ಅಮೇರಿಕದಲ್ಲಿ ಎಫ್ ಡಿ ಎ ಅತ್ಯಂತ ಕಠಿಣ ತಪಾಸಣೆಗಳ ನಂತರವೇ ರಹದಾರಿ ನೀಡುತ್ತದೆ.ಭಾರತದಲ್ಲಿಯೂ ಸಹ ಪಶು ಜನೌಷಧಿ ಕೇಂದ್ರಗಳು ಬಂದರೆ ಜಾನುವಾರುಗಳ ಔಷಧಿ ಕಡಿಮೆ ದರದಲ್ಲಿ ದೊರಕಬಹುದು.

ಜನೌಷಧಿ ಕೇಂದ್ರಗಳೆಂದರೇನು?

ಭಾರತ ಸರ್ಕಾರವು ಜನರಿಕ್ ಔಷಧಿಗಳು ಜನಸಾಮಾನ್ಯರಿಗೆ ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ ವ್ಯವಸ್ಥೆಯೇ ಜನೌಷಧಿ ಕೇಂದ್ರಗಳು. ಇಲ್ಲಿ ದೊರೆಯುವ ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಿಗಳಷ್ಟೇ ಪರಿಣಾಮಕಾರಿಯಾಗಿರಬೇಕು. ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಭಾರತ ಸರ್ಕಾರದ ಔಷಧ ಇಲಾಖೆಯ ಸುಪರ್ಧಿಯಲ್ಲಿ ನಿಯಂತ್ರಣದಲ್ಲಿವೆ. ಬ್ಯೂರೋ ಆಫ್ ಫಾರ್ಮಾ ಪಬ್ಲಿಕ್ ಸೆಕ್ಟರ್ ಅಂಡರ್ಟೇಕಿಂಗ್ಸ್ ಆಫ್ ಇಂಡಿಯಾ ಇದು ಜನೌಷಧಿಗಳ, ತಯಾರಿಕೆ, ಸಾಗಣೆ ಮತ್ತು ಗುಣಮಟ್ಟದ ಹೊಣೆ ಹೊತ್ತಿದೆ.
1. ಪ್ರತಿ ಔಷಧಿ ಬ್ಯಾಚಿನ ಔಷಧಿಗಳ ಗುಣಮಟ್ಟವು ಎನ್.ಎ.ಬಿ.ಎಲ್ ಪ್ರಯೋಗಶಾಲೆಗಳಿಂದ ದೃಢಪಟ್ಟಿರಬೇಕು.
2. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು ದೃಢೀಕರಿಸಲ್ಪಟ್ಟ ಸಂಸ್ಥೆಗಳಿಂದ ಮಾತ್ರ ಔಷಧ ಖರೀದಿಸಬೇಕು.
ಈ ವರೆಗೆ ಸುಮಾರು 4700 ಕ್ಕಿಂತ ಜಾಸ್ತಿ ಜನೌಷಧ ಕೇಂದ್ರಗಳು ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ವರ್ಷದ ಆಯವ್ಯಯದಲ್ಲಿ ಇನ್ನೂ ಜಾಸ್ತಿ ಕೇಂದ್ರಗಳನ್ನು ತೆರೆಯಲು ಭಾರತ ಸರ್ಕಾರ ಉದ್ದೇಶಿಸಿದೆ.

ಯಾರು ಜನೌಷಧಿ ಕೇಂದ್ರಗಳನ್ನು ತೆರೆಯಬಹುದು?

ಸರ್ಕಾರದಿಂದ ಮಾನ್ಯತೆ ಪಡೆದ ಜನಕಲ್ಯಾಣ ಕಾರ್ಯಕ್ರಮದಲ್ಲಿ ಕನೀಷ್ಟ 3 ವರ್ಷ ಅನುಭವವಿರುವ, ಸರ್ಕಾರೇತರ ಸಂಸ್ಥೆಗಳು, ಸಹಕಾರಿ ಸಂಘಗಳು ಸರ್ಕಾರಿ ಸಂಸ್ಥೆಗಳ ಆವರಣದಲ್ಲಿ ಉಚಿತವಾಗಿ ನೀಡಲ್ಪಡುವ ಸ್ಥಳದಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಬಹುದು.

ಅಲ್ಲದೇ ಫಾರ್ಮಾ ಪದವೀದರರು ಸೇರಿದಂತೆ ಯಾವುದೇ ನಿರುದ್ಯೋಗಿ ಪದವೀಧರರು ಅವಶ್ಯಕ ಸ್ಥಳ, ಕನೀಷ್ಟ ಬಂಡವಾಳ, ಶೀತಲಿಕರಣ ಯಂತ್ರ, ಗೋದಾಮು, ಔಷಧಿ ಅಂಗಡಿ ತೆರೆಯಲು ಮೂಲಭೂತ ಸೌಲಭ್ಯ ಮತ್ತಿತರ ರಹದಾರಿ ಹೊಂದಿದ್ದರೆ ಜನೌಷಧಿ ಕೇಂದ್ರಗಳನ್ನು ತೆರೆಯಬಹುದು. ಪ್ರತಿ ಔಷಧಿಯ ಮೇಲೆ ಶೇ: 20 ರಷ್ಟು ಲಾಭ ಇದ್ದೇ ಇದೆ. ಸರ್ಕಾರದಿಂದ ರೂ:1.5 ಲಕ್ಷದ ವರೆಗೆ ಸಹಾಯವೂ ಸಹ ದೊರೆಯುವುದು.

ಹೊಸ ಔಷಧಿಗಳು ಮಾರುಕಟ್ಟೆಗೆ ಬಂದಾಗ ಅವುಗಳ ಕಂಪನಿಯವರು ಹಾಕಿದ ಬಂಡವಾಳ ಮತ್ತು ಲಾಭವನ್ನು ಹಿಂದಿರುಗಿ ಪಡೆಯಲು ಜಾಸ್ತಿ ದುಬಾರಿ ಬೆಲೆಗೆ ಮಾರುವುದು ಸಹಜ. ಅವುಗಳನ್ನು ಖರೀದಿಸುವುದು ಅನಿವಾರ್ಯ ಸಹ. ಆದರೆ ಪೇಟೆಂಟ್ ಅವಧಿ ಮುಗಿದು ಔಷಧಿಯು “ಜನರಿಕ್” ರೂಪದಲ್ಲಿ ದೊರೆಯತೊಡಗಿದಾಗ ಅವುಗಳನ್ನೇ ಖರೀದಿಸುವುದು ಒಳ್ಳೆಯದಲ್ಲವೇ?

ಜನರಿಕ್ ಔಷಧಗಳು ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡಲೆಂದೇ ಬಂದವುಗಳು. ವ್ಯವಸ್ಥೆಯಲ್ಲಿ ಸಣ್ಣ ಪುಟ್ಟ ದೋಷಗಳಿರಬಹುದು.ಕೆಲವೊಮ್ಮೆ ಕಳಪೆ ಔಷಧಿಯೂ ಸಹ ಪತ್ತೆಯಾಗಿರಬಹುದು. ಇದು ವ್ಯಾಪಾರಿ ವೃತ್ತಿಯ ಎಲ್ಲ ರಂಗಗಳಲ್ಲಿದೆ. ಹೀಗಂದ ಮಾತ್ರಕ್ಕೆ ಅವುಗಳನ್ನೆಲ್ಲಾ ಸಂಶಯ ದೃಷ್ಟಿಯಿಂದ ನೋಡುವುದು ಒಳಿತಲ್ಲ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಹಿಂದಿನ ಭಾರತೀಯ ಭಾರತೀಯ ವೈದ್ಯಕೀಯ ಮಂಡಳಿ) ಸಹ ಜನರಿಕ್ ಔಷಧಿಗಳನ್ನೇ ಬರದು ಕೊಡಬೇಕು ಎಂಬ ನಿಯಮ ಮಾಡಿದೆ.ಇದೇ ನಿಯಮವನ್ನು ಭಾರತೀಯ ಪಶುವೈದ್ಯಕೀಯ ಪರಿಷತ್ತು ಸಹ ಕಾಲಕ್ರಮೇಣ ಅನುಕರಿಸಬಹುದು.

ಬಹುತೇಕ ಜನ ಸಾಮಾನ್ಯರು ಸರ್ವೇ ಸಾಮಾನ್ಯವಾಗಿ ಬಳಸಿಲು ಪ್ರಾರಂಭಿಸಿದ ಮೇಲೆ ಮಾತ್ರ ಜನರಿಕ್ ಔಷಧಿಗಳಿಗೆ ಒಂದು ಉತ್ತಮ ಕಾಲ ಬಂದು ಸರ್ಕಾರದ ಆಶಯ ಈಡೇರಬಹುದು.

-(ಡಾ:ಎನ್.ಬಿ.ಶ್ರೀಧರ
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು,
ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ
ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಸುದ್ದಿದಿನ ಕನ್ನಡ ಬೆಳಗಿನ ಪ್ರಮುಖ ಸುದ್ದಿಗಳು

  1. ಇಂದು ಭಾರತದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಹಾರ್‌ಲಾಲ್ ನೆಹರು ಅವರ ಪುಣ್ಯತಿಥಿ. ಸ್ವಾತಂತ್ರ‍್ಯ ನಂತರ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸಿದ್ದ ಅವರು, 1964ರ ಮೇ 27 ರಂದು ನಿಧನರಾದರು. 16 ವರ್ಷಗಳ ಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದ್ದ ಅವರನ್ನು ಇಂದು ದೇಶ ಸ್ಮರಿಸುತ್ತಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ಪಂಡಿತ್ ಜವಹಾರ್‌ಲಾಲ್ ನೆಹರು ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  2. ಪರಿಸರ, ಸಾಮಾಜಿಕ ಆಡಳಿತಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿಯಾಗಿದೆ ಎಂದು ವಿಮಾನ ನಿಲ್ದಾಣದ ಪರಿಸರ ಮತ್ತು ಸಾಮಾಜಿಕ ಆಡಳಿತ ವಿಭಾಗದ ಮುಖ್ಯಸ್ಥ ಎಲ್. ಶ್ರೀಧರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ’ದಿ ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ’ ದಿಂದ ಆಯೋಜಿಸಿದ್ದ ಇಎಸ್‌ಜಿ ಸಮಾವೇಶದಲ್ಲಿ ಮಾತನಾಡಿ, ಶೀಘ್ರದಲ್ಲೇ ವಿಮಾನ ನಿಲ್ದಾಣದಲ್ಲಿ ಮಳೆ ನೀರಿನ ಸಂಗ್ರಹದ ಮೂಲಕ ಶೇಖಡ 100ರಷ್ಟು ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದರು.
  3. ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ಇಂದು ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಳಗಾವಿಯಲ್ಲಿ ರಾಷ್ಟ್ರೀಯ ಸಾಂಪ್ರದಾಯಿಕ ಔಷಧ ಸಂಸ್ಥೆ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಕೆಎಲ್‌ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
  4. ಜಮ್ಮು-ಕಾಶ್ಮೀರದ ಅನಂತ್ ನಾಗ್-ರಾಜೌರಿ ಲೋಕಸಭಾ ಕ್ಷೇತ್ರದಲ್ಲಿ ದಾಖಲೆ ಮಟ್ಟದ ಮತದಾನವಾಗಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜನರನ್ನು ಅಭಿನಂದಿಸಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳ ಬಲವರ್ಧನೆಗೆ ಜನರ ಪಾಲ್ಗೊಳ್ಳುವಿಕೆ ಪ್ರಮುಖ ಕೊಡುಗೆ ನೀಡಲಿದೆ. ಜಮ್ಮು-ಕಾಶ್ಮೀರದ ನಾಗರಿಕರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ್ದಾರೆ ಎಂದು ಹೇಳಿದ್ದಾರೆ.
  5. ಉತ್ತರ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತ ಬೀತಿ ಹಿನ್ನೆಲೆಯಲ್ಲಿ ಸನ್ನದ್ಧತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಮಹತ್ವದ ಸಭೆ ನಡೆಸಿದರು. ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಯ ಅಧಿಕಾರಿಗಳು ಚಂಡಮಾರುತ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
  6. ರೆಮಲ್ ಚಂಡಮಾರುತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ 8 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಬಾಂಗ್ಲಾದೇಶದ ವಿಪತ್ತು ನಿರ್ವಹಣೆ ಹಾಗೂ ಪರಿಹಾರ ಖಾತೆ ರಾಜ್ಯ ಸಚಿವ ಮಹಿಬೂರ್ ರೆಹಮಾನ್ ಮಾತನಾಡಿ, ಜನರ ಸುರಕ್ಷತೆಗಾಗಿ ವ್ಯಾಪಕ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದರು.
  7. ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್‌ನ ತಲಾ 13, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್‌ನ 3 ಮತ್ತು ಚಂಡೀಗಢ್ ಕೇಂದ್ರಾಡಳಿತ ಪ್ರದೇಶದ 1 ಲೋಕಸಭಾ ಕ್ಷೇತ್ರಗಳಲ್ಲಿ ಜೂನ್ 1 ರಂದು ಮತದಾನ ನಡೆಯಲಿದೆ.
  8. ಕೆನರಾ ಬ್ಯಾಂಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತು 45 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.
  9. ರಾಜ್‌ಕೋಟ್ ಅಗ್ನಿ ದುರಂತದಲ್ಲಿ. ಮೃತಪಟ್ಟವರನ್ನು ಗುರುತು ಹಚ್ಚಲು ಡಿಎನ್‌ಎ ಮಾದರಿಯನ್ನು ಅಗತ್ಯ ಪರಿಕ್ಷೆಗಾಗಿ ಕಳುಹಿಸಲಾಗಿದೆ. ಈ ದುರಂತದ ವಿಚಾರವನ್ನು ಗುಜರಾತ್ ಹೈಕೋರ್ಟ್ ಖುದ್ದಾಗಿ ಪರಿಗಣನೆಗೆ ತೆಗೆದುಕೊಂಡಿದ್ದು, ಈ ಪ್ರಕರಣ ಇಂದು ವಿಚಾರಣೆಗೆ ಬರಲಿದೆ.
  10. ಹಿರಿಯ ಬಿಜೆಪಿ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಿರ್ಜಾಪುರ್‌ದಲ್ಲಿ ನಿನ್ನೆ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿ, ಐಎನ್‌ಡಿಐ ಮೈತ್ರಿಕೂಟ ಜಾತಿವಾದಿ ಹಾಗೂ ಕೋಮುವಾದಿ ಎನ್ನುವುದನ್ನು ದೇಶದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಬಿಜೆಪಿ ಎನ್‌ಡಿಎ ಬಡವರು, ದುರ್ಬಲರು ಮತ್ತು ಹಿಂದುಳಿದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
  11. ಹಿರಿಯ ಕಾಂಗ್ರೆಸ್ ಧುರೀಣ ರಾಹುಲ್ ಗಾಂಧಿ ಅವರು, ಹಿಮಾಚಲ ಪ್ರದೇಶದ ಶಿಮ್ಲಾ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಚುನಾವಣಾ ರ‍್ಯಾಲಿ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ಹೋರಾಡುತ್ತಿರುವ ಚುನಾವಣೆಯಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.

ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.

ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಕ್ರೀಡೆ

ಬೆಳಗಿನ ಸುದ್ದಿ ಮುಖ್ಯಾಂಶಗಳು

Published

on

ಬೆಳಗಿನ ಸುದ್ದಿ ಮುಖ್ಯಾಂಶಗಳು

  1. ರಾಜ್ಯ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮುಂದಿನ ತಿಂಗಳ 3 ರಂದು ಚುನಾವಣೆ ನಡೆಯಲಿದೆ. ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 91ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.
  2. ದೇಶದ ಉತ್ತರದ ರಾಜ್ಯಗಳಲ್ಲಿ ನಿನ್ನೆ ತೀವ್ರ ಬಿಸಿಗಾಳಿ ವಾತಾವರಣ ಉಂಟಾಗಿತ್ತು. ಮುಂದಿನ 4 ದಿನಗಳಲ್ಲಿ ವಾಯವ್ಯ ಪೂರ್ವ ಹಾಗೂ ಮಧ್ಯಭಾರತದ ಬಯಲು ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚಿಸಿದೆ.
  3. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶಾದ್ಯಂತ 40 ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರ ಉಕ್ಕೇರಲಿದ್ದು, ಮುಂಜಾಗ್ರತಾ ಕ್ರಮವಾಗಿ ಬುಧವಾರದವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
  4. ತೈವಾನ್‌ನ ಅಧ್ಯಕ್ಷ ಹುದ್ದೆ ಆಯ್ಕೆಯಾಗಿರುವ ಲೈ ಛಿಂಗ್-ತೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ. ಕಳೆದ 4 ವರ್ಷಗಳಿಂದ ದೇಶದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ 64 ವರ್ಷದ ಲೈ ಅವರು, ತೈವಾನ್‌ನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.
  5. ಶ್ರೀಲಂಕಾದ ಸೀತಾಮಾತೆ ಮಂದಿರ-ಸೀತಾ ಇಳಿಯಾದಲ್ಲಿ ನಿನ್ನೆ ಕುಂಬಾಭಿಷೇಕ ಶ್ರದ್ಧಾ-ಭಕ್ತಿ ಸಡಗರ ಸಂಭ್ರಮಗಳಿಂದ ಜರುಗಿತು. ಅಯೋಧ್ಯೆಯ ಸರಯೂ ನದಿಯಿಂದ ತರಲಾಗಿದ್ದ ಸುಮಾರು 25ಲೀಟರ್ ಪವಿತ್ರ ಜಲದಿಂದ ಮಂದಿರದ ಗೋಪುರಕ್ಕೆ ಅಭಿಷೇಕ ನೆರವೇರಿಸಲಾಯಿತು. ಭಾರತ-ನೇಪಾಳ, ಶ್ರೀಲಂಕಾ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ್ದ ಭಕ್ತಾದಿಗಳು ಈ ದೃಶ್ಯವನ್ನು ಕಣ್ಮನಗಳಲ್ಲಿ ತುಂಬಿಕೊಂಡರು.
  6. ಭಾರತದ ಗ್ರಾಂಡ್ ಮಾಸ್ಟರ್ ಅರವಿಂದ್ ಚಿದಂಬರಂ ಶಾರ್ಜಾ ಮಾಸ್ಟರ್‍ಸ್ ಚೆಸ್ ಪಂದ್ಯಾವಳಿಯಲ್ಲಿ ಅತಿಥೇಯ ಶಾರ್ಜಾದ ಎ.ಆರ್. ಸುಲೆಹ್ ಸಲೀಂ ಅವರನ್ನು ಪರಾಭವಗೊಳಿಸಿ 4.5ಅಂಕಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
  7. ಗುವಾಹಾಟಿಯಲ್ಲಿ ನಿನ್ನೆ ರಾತ್ರಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ಕೊಲ್ಕೊತ್ತಾ ನೈಟ್ ರೈಡರ್‍ಸ್ ನಡುವಿನ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಕೆಲಕಾಲ ಮಳೆ ಬಂದು ನಿಂತ ನಂತರ ನಡೆದ ಟಾಸ್ ಗೆದ್ದ ಕೊಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಪುನಃ ಮಳೆ ಬಂದ ಹಿನ್ನೆಲೆ ಪಂದ್ಯ ರದ್ದುಗೊಳಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending