Connect with us

ದಿನದ ಸುದ್ದಿ

ಕಾರ್ನಾಡ್ ನಡೆ ಒಪ್ಪುವಂತದ್ದಲ್ಲ: ಮಹೇಶ್ ಚಂದ್ರ ಗುರು ವಿರೋಧ

Published

on

ನಾನು ನಗರದ ನಕ್ಸಲೀಯ ಎಂಬ ಬೋರ್ಡ್ ಹಾಕಿಕೊಂಡು ಗೌರಿದಿನ ಕಾರ‌್ಯಕ್ರಮದಲ್ಲಿ ಕಾಣಿಸಿಕೊಂಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರು ಈಗ ವಿವಾದದಲ್ಲಿ ಸಿಕ್ಕಿದ್ದಾರೆ.

ಕಾರ್ನಾಡರ ನಡೆ ಕುರಿತು ಪ್ರಗತಿಪರ ಚಳವಳಿಗಳು, ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಪ್ರೊ. ಮಹೇಶ್ ಚಂದ್ರ ಗುರು ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಹಿಂಸೆಯನ್ನು ಪ್ರತಿಪಾದಿಸುವವರ ಜೊತೆ ವಿಚಾರವಾದಿಗಳು ಗುರುತಿಸಿಕೊಳ್ಳಬಾರದು

ಇತ್ತೀಚೆಗೆ ಕಲಬುರ್ಗಿಯಲ್ಲಿ ಜರುಗಿದ ಗೌರಿ ಲಂಕೇಶರ ಮೊದಲ ವರ್ಷದ ಸ್ಮರಣೆ ಸಂದರ್ಭದಲ್ಲಿ ನಾಡಿನ ಹಿರಿಯ ಕಲಾವಿದ ಹಾಗೂ ಜನಪರ ಚಿಂತಕ ಶ್ರೀ ಗಿರೀಶ್ ಕಾರ್ನಾಡ್ ’ನಾನು ನಗರದ ನಕ್ಸಲೀಯ’ ಎಂಬ ಫಲಕವನ್ನು ಹಾಕಿಕೊಂಡಿರುವುದನ್ನು ಮಾಧ್ಯಮಗಳಲ್ಲಿ ಓದಿ ತಿಳಿದುಕೊಂಡಿದ್ದೇನೆ. ಇವರಿಗೆ ಮತ್ತೊಬ್ಬ ಪ್ರತಿಭಾವಂತ ಚಿಂತಕ ಹಾಗೂ ಕಲಾವಿದ ಈ ಫಲಕವನ್ನು ತೊರಿಸುತ್ತಿರುವ ಚಿತ್ರ ಕೂಡ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇದು ನಿಜಕ್ಕೂ ಭಾರತೀಯ ಬಹು ಸಂಸ್ಕೃತಿ ಮತ್ತು ಸಂವಿಧಾನಾತ್ಮಕ ಆಶಯಗಳಿಗೆ ವಿರುದ್ಧವಾಗಿದೆ. ಭಾರತದ ಬಹುಜನರು ಬುದ್ಧನ ಮಾರ್ಗದರ್ಶನದಲ್ಲಿ ಪ್ರಜಾಸತ್ತಾತ್ಮಕ ಹಾಗೂ ಅಹಿಂಸಾತ್ಮಕ ಮಾರ್ಗಗಳ ಮೂಲಕ ತಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದಾರೆ.

ಸ್ವಾತಂತ್ರ ಚಳುವಳಿ ಕೂಡ ಅಹಿಂಸಾ ಮಾರ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ಗಾಂಧಿ ನೇತೃತ್ವದಲ್ಲಿ ಜರುಗಿತು. ’ಬ್ರಿಟೀಷರ ಬಂದೂಕು ಶಕ್ತಿಯನ್ನು ಗಾಂಧಿಯವರ ಅಹಿಂಸಾತ್ಮಕ ಲೇಖನ ಶಕ್ತಿ ಮಣಿಸಿತು’ ಎಂಬ ಅಭಿಮಾನದ ಮಾತುಗಳನ್ನು ಹಿಂದಿನ ಪ್ರಧಾನಿ ಚರ್ಚಿಲ್ ಹೇಳಿದ್ದಾರೆ. ಅಂಬೇಡ್ಕರ್ ತಮ್ಮ ’ಬುದ್ಧ ಮತ್ತು ಮಾರ್ಕ್ಸ್’ ಎಂಬ ಕೃತಿಯಲ್ಲಿ ’ಮಾರ್ಕ್ಸ್‌ವಾದಿಗಳು ಹಿಂಸಾಮಾರ್ಗದಲ್ಲಿ ಮುನ್ನಡೆದು ಸಮಾನತೆ ಗಳಿಸಬಹುದು, ಆದರೆ ಭ್ರಾತೃತ್ವವನ್ನು ಕೊಂದು ಗಳಿಸುವ ಸಮಾನತೆ ಮೌಲ್ಯರಹಿತವಾಗಿದೆ ಮತ್ತು ಅಸಮರ್ಥನೀಯವಾಗಿದೆ’ ಎಂಬ ಮಾತುಗಳನ್ನು ಹೇಳಿರುವುದು ಸಾರ್ವಕಾಲಿಕ ಪ್ರಸ್ತುತತೆ ಹೊಂದಿದೆ.

ಯುದ್ಧದಿಂದ ಜಗತ್ತನ್ನು ಉಳಿಸಲು ಬುದ್ಧಮಾರ್ಗ ಮತ್ತು ಅನಭಿವೃದ್ಧಿಯಿಂದ ಅಭಿವೃದ್ಧಿಯೆಡೆಗೆ ಜಗತ್ತನ್ನು ಮುನ್ನಡೆಸಲು ಅಂಬೇಡ್ಕರ್‌ರವರ ಅಂತ್ಯೋದಯ ಮಾದರಿ ಇಂದು ಅನಿವಾರ್ಯವಾಗಿದೆ ಎಂಬ ಸತ್ಯವನ್ನು ವಿಶ್ವಸಂಸ್ಥೆ ಮನಗಂಡಿದೆ. ಮಾನವ ಬದುಕಿನ ಎಲ್ಲ ಕ್ಷೇತ್ರಗಳಲ್ಲಿಯೂ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ, ಸರ್ವಜನರ ಅಭ್ಯುದಯಗಳಿಗೆ ಪೂರಕವಾದ ವಿಶ್ವಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದಾರೆ. ನೂತನ ಸಹಸ್ರಮಾನದಲ್ಲಿ ಜಾಗತೀಕರಣವೆಂದರೆ ಮಾನವೀಕರಣವೆಂದೇ ಅರ್ಥೈಸಬೇಕು.

ಸರ್ವಧರ್ಮಗಳು ಮತ್ತು ಜನಾಂಗಗಳು ಶಾಂತಿಯಿಂದ ಸಹಬಾಳ್ವೆ ನಡೆಸಲು ಪ್ರಜಾಪ್ರಭುತ್ವ, ಬಹುತ್ವ, ಬಂಧುತ್ವ, ಧರ್ಮ ನಿರಪೇಕ್ಷತೆ, ರಕ್ತಪಾತ ರಹಿತವಾದ ಪರಿವರ್ತನೆ ಇಂದು ಅತ್ಯವಶ್ಯಕ. ಗೌರಿ ಲಂಕೇಶ್ ಪ್ರಜಾಸತ್ತಾತ್ಮಕ ಹಾಗೂ ಅಹಿಂಸಾತ್ಮಕ ಹೋರಾಟಗಳನ್ನು ಪ್ರಜ್ಞಾಪೂರ್ವಕವಾಗಿ ಬೆಂಬಲಿಸಿ ದೇಶದ ಇತಿಹಾಸದಲ್ಲಿ ಶ್ರೇಷ್ಠ ಸ್ಥಾನವನ್ನು ಗಳಿಸಿದ್ದಾರೆ. ಅವರು ನಕ್ಸಲೀಯರನ್ನು ರಕ್ತಪಾತ ಕೇಂದ್ರಿತ ಹೋರಾಟವನ್ನು ಬಿಟ್ಟು ಮುಖ್ಯವಾಹಿನಿಗೆ ಬಂದು ಶಾಂತಿ ಮಾರ್ಗದಲ್ಲಿ ಉದ್ಧಾರವಾಗಿ ಎಂದು ಕರೆ ನೀಡಿದರು.

ಗೌರಿ ಲಂಕೇಶರ ಬಗ್ಗೆ ಅತೀವ ಪ್ರೀತಿ ಮತ್ತು ಅಭಿಮಾನ ಹೊಂದಿರುವ ಗಿರೀಶ್ ಕಾರ್ನಾಡ್ ’ನಾನೂ ನಗರದ ನಕ್ಸಲೀಯ’ ಎಂಬ ಫಲಕವನ್ನು ಇತ್ತೀಚಿನ ಸಭೆಯಲ್ಲಿ ಪ್ರದರ್ಶಿಸಿರುವುದು ಭಾರತದ ಸಂವಿಧಾನ ಮತ್ತು ಬಹುತ್ವಗಳಿಗೆ ನಿಜವಾಗಿಯೂ ಅಪಚಾರವುಂಟಾಗಿದೆ. ಪ್ರಕಾಶ್‌ರಾಜ್‌ರವರು ಕೂಡ ನಕ್ಸಲೀಯ ಸಿದ್ಧಾಂತವನ್ನು ಹೀಗೆ ಬಹಿರಂಗವಾಗಿ ಸಮರ್ಥಿಸುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ನಗರದಲ್ಲಿರಲಿ ಅಥವಾ ಹಳ್ಳಿಯಲ್ಲಿರಲಿ ’ನಾವೆಲ್ಲರೂ ಮನುಷ್ಯರು – ಮಾನವತಾವಾದವೇ ಜಗತ್ತನ್ನು ಉಳಿಸುವ ಮಹಾ ಶಕ್ತಿ’ ಎಂಬ ಸಂದೇಶವನ್ನು ವಿಚಾರವಾದಿಗಳು ಮತ್ತು ಜನಪರ ಹೋರಾಟಗಾರರು ಎಲ್ಲೆಡೆ ಎಲ್ಲರಿಗೂ ನೀಡುವುದು ಅತ್ಯವಶ್ಯಕ.

ಬಲಪಂಥೀಯ ರಾಜಕಾರಣ ಮತ್ತು ನಕ್ಸಲೀಯ ಹೋರಾಟಗಳು ದೇಶದ ಶಾಂತಿ, ಸುವ್ಯವಸ್ಥೆ, ಸಾಮರಸ್ಯ ಮತ್ತು ಪ್ರಗತಿಗಳಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿವೆ. ಇಂದು ಜಗತ್ತನ್ನು ಉಳಿಸುವ ಮತ್ತು ಉದ್ಧರಿಸುವ ಸಲುವಾಗಿ ನಾವೆಲ್ಲರೂ ಬುದ್ಧನ ಮಧ್ಯಮಾರ್ಗವನ್ನು ಅನುಸರಿಸುವುದು ಅನಿವಾರ್ಯ. ಗಾಂಧಿ, ಅಂಬೇಡ್ಕರ್, ಲೋಹಿಯಾ, ಪೆರಿಯಾರ್, ನಾರಾಯಣ ಗುರು ಮೊದಲಾದ ದಾರ್ಶನಿಕರು ನಮಗೆ ಇಂದು ಅನುಕರಣೀಯ ವ್ಯಕ್ತಿಗಳು ಮತ್ತು ಶಕ್ತಿಗಳಾಗಬೇಕು.

(ಲೇಖಕರು-
ಡಾ.ಬಿ.ಪಿ.ಮಹೇಶ ಚಂದ್ರ ಗುರು
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು
ಶೈಕ್ಷಣಿಕ ಮಂಡಳಿ ಸದಸ್ಯರು)

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ16 hours ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ2 days ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ3 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

ದಿನದ ಸುದ್ದಿ3 days ago

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ...

ದಿನದ ಸುದ್ದಿ3 days ago

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು...

ಅಂತರಂಗ4 days ago

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

~ಗೋವರ್ಧನ ನವಿಲೇಹಾಳು  ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ...

ದಿನದ ಸುದ್ದಿ7 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ7 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ1 week ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

Trending