ದಿನದ ಸುದ್ದಿ
ಕಾರ್ನಾಡ್ ನಡೆ ಒಪ್ಪುವಂತದ್ದಲ್ಲ: ಮಹೇಶ್ ಚಂದ್ರ ಗುರು ವಿರೋಧ
ನಾನು ನಗರದ ನಕ್ಸಲೀಯ ಎಂಬ ಬೋರ್ಡ್ ಹಾಕಿಕೊಂಡು ಗೌರಿದಿನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರು ಈಗ ವಿವಾದದಲ್ಲಿ ಸಿಕ್ಕಿದ್ದಾರೆ.
ಕಾರ್ನಾಡರ ನಡೆ ಕುರಿತು ಪ್ರಗತಿಪರ ಚಳವಳಿಗಳು, ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಪ್ರೊ. ಮಹೇಶ್ ಚಂದ್ರ ಗುರು ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಹಿಂಸೆಯನ್ನು ಪ್ರತಿಪಾದಿಸುವವರ ಜೊತೆ ವಿಚಾರವಾದಿಗಳು ಗುರುತಿಸಿಕೊಳ್ಳಬಾರದು
ಇತ್ತೀಚೆಗೆ ಕಲಬುರ್ಗಿಯಲ್ಲಿ ಜರುಗಿದ ಗೌರಿ ಲಂಕೇಶರ ಮೊದಲ ವರ್ಷದ ಸ್ಮರಣೆ ಸಂದರ್ಭದಲ್ಲಿ ನಾಡಿನ ಹಿರಿಯ ಕಲಾವಿದ ಹಾಗೂ ಜನಪರ ಚಿಂತಕ ಶ್ರೀ ಗಿರೀಶ್ ಕಾರ್ನಾಡ್ ’ನಾನು ನಗರದ ನಕ್ಸಲೀಯ’ ಎಂಬ ಫಲಕವನ್ನು ಹಾಕಿಕೊಂಡಿರುವುದನ್ನು ಮಾಧ್ಯಮಗಳಲ್ಲಿ ಓದಿ ತಿಳಿದುಕೊಂಡಿದ್ದೇನೆ. ಇವರಿಗೆ ಮತ್ತೊಬ್ಬ ಪ್ರತಿಭಾವಂತ ಚಿಂತಕ ಹಾಗೂ ಕಲಾವಿದ ಈ ಫಲಕವನ್ನು ತೊರಿಸುತ್ತಿರುವ ಚಿತ್ರ ಕೂಡ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದು ನಿಜಕ್ಕೂ ಭಾರತೀಯ ಬಹು ಸಂಸ್ಕೃತಿ ಮತ್ತು ಸಂವಿಧಾನಾತ್ಮಕ ಆಶಯಗಳಿಗೆ ವಿರುದ್ಧವಾಗಿದೆ. ಭಾರತದ ಬಹುಜನರು ಬುದ್ಧನ ಮಾರ್ಗದರ್ಶನದಲ್ಲಿ ಪ್ರಜಾಸತ್ತಾತ್ಮಕ ಹಾಗೂ ಅಹಿಂಸಾತ್ಮಕ ಮಾರ್ಗಗಳ ಮೂಲಕ ತಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದಾರೆ.
ಸ್ವಾತಂತ್ರ ಚಳುವಳಿ ಕೂಡ ಅಹಿಂಸಾ ಮಾರ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ಗಾಂಧಿ ನೇತೃತ್ವದಲ್ಲಿ ಜರುಗಿತು. ’ಬ್ರಿಟೀಷರ ಬಂದೂಕು ಶಕ್ತಿಯನ್ನು ಗಾಂಧಿಯವರ ಅಹಿಂಸಾತ್ಮಕ ಲೇಖನ ಶಕ್ತಿ ಮಣಿಸಿತು’ ಎಂಬ ಅಭಿಮಾನದ ಮಾತುಗಳನ್ನು ಹಿಂದಿನ ಪ್ರಧಾನಿ ಚರ್ಚಿಲ್ ಹೇಳಿದ್ದಾರೆ. ಅಂಬೇಡ್ಕರ್ ತಮ್ಮ ’ಬುದ್ಧ ಮತ್ತು ಮಾರ್ಕ್ಸ್’ ಎಂಬ ಕೃತಿಯಲ್ಲಿ ’ಮಾರ್ಕ್ಸ್ವಾದಿಗಳು ಹಿಂಸಾಮಾರ್ಗದಲ್ಲಿ ಮುನ್ನಡೆದು ಸಮಾನತೆ ಗಳಿಸಬಹುದು, ಆದರೆ ಭ್ರಾತೃತ್ವವನ್ನು ಕೊಂದು ಗಳಿಸುವ ಸಮಾನತೆ ಮೌಲ್ಯರಹಿತವಾಗಿದೆ ಮತ್ತು ಅಸಮರ್ಥನೀಯವಾಗಿದೆ’ ಎಂಬ ಮಾತುಗಳನ್ನು ಹೇಳಿರುವುದು ಸಾರ್ವಕಾಲಿಕ ಪ್ರಸ್ತುತತೆ ಹೊಂದಿದೆ.
ಯುದ್ಧದಿಂದ ಜಗತ್ತನ್ನು ಉಳಿಸಲು ಬುದ್ಧಮಾರ್ಗ ಮತ್ತು ಅನಭಿವೃದ್ಧಿಯಿಂದ ಅಭಿವೃದ್ಧಿಯೆಡೆಗೆ ಜಗತ್ತನ್ನು ಮುನ್ನಡೆಸಲು ಅಂಬೇಡ್ಕರ್ರವರ ಅಂತ್ಯೋದಯ ಮಾದರಿ ಇಂದು ಅನಿವಾರ್ಯವಾಗಿದೆ ಎಂಬ ಸತ್ಯವನ್ನು ವಿಶ್ವಸಂಸ್ಥೆ ಮನಗಂಡಿದೆ. ಮಾನವ ಬದುಕಿನ ಎಲ್ಲ ಕ್ಷೇತ್ರಗಳಲ್ಲಿಯೂ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ, ಸರ್ವಜನರ ಅಭ್ಯುದಯಗಳಿಗೆ ಪೂರಕವಾದ ವಿಶ್ವಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದಾರೆ. ನೂತನ ಸಹಸ್ರಮಾನದಲ್ಲಿ ಜಾಗತೀಕರಣವೆಂದರೆ ಮಾನವೀಕರಣವೆಂದೇ ಅರ್ಥೈಸಬೇಕು.
ಸರ್ವಧರ್ಮಗಳು ಮತ್ತು ಜನಾಂಗಗಳು ಶಾಂತಿಯಿಂದ ಸಹಬಾಳ್ವೆ ನಡೆಸಲು ಪ್ರಜಾಪ್ರಭುತ್ವ, ಬಹುತ್ವ, ಬಂಧುತ್ವ, ಧರ್ಮ ನಿರಪೇಕ್ಷತೆ, ರಕ್ತಪಾತ ರಹಿತವಾದ ಪರಿವರ್ತನೆ ಇಂದು ಅತ್ಯವಶ್ಯಕ. ಗೌರಿ ಲಂಕೇಶ್ ಪ್ರಜಾಸತ್ತಾತ್ಮಕ ಹಾಗೂ ಅಹಿಂಸಾತ್ಮಕ ಹೋರಾಟಗಳನ್ನು ಪ್ರಜ್ಞಾಪೂರ್ವಕವಾಗಿ ಬೆಂಬಲಿಸಿ ದೇಶದ ಇತಿಹಾಸದಲ್ಲಿ ಶ್ರೇಷ್ಠ ಸ್ಥಾನವನ್ನು ಗಳಿಸಿದ್ದಾರೆ. ಅವರು ನಕ್ಸಲೀಯರನ್ನು ರಕ್ತಪಾತ ಕೇಂದ್ರಿತ ಹೋರಾಟವನ್ನು ಬಿಟ್ಟು ಮುಖ್ಯವಾಹಿನಿಗೆ ಬಂದು ಶಾಂತಿ ಮಾರ್ಗದಲ್ಲಿ ಉದ್ಧಾರವಾಗಿ ಎಂದು ಕರೆ ನೀಡಿದರು.
ಗೌರಿ ಲಂಕೇಶರ ಬಗ್ಗೆ ಅತೀವ ಪ್ರೀತಿ ಮತ್ತು ಅಭಿಮಾನ ಹೊಂದಿರುವ ಗಿರೀಶ್ ಕಾರ್ನಾಡ್ ’ನಾನೂ ನಗರದ ನಕ್ಸಲೀಯ’ ಎಂಬ ಫಲಕವನ್ನು ಇತ್ತೀಚಿನ ಸಭೆಯಲ್ಲಿ ಪ್ರದರ್ಶಿಸಿರುವುದು ಭಾರತದ ಸಂವಿಧಾನ ಮತ್ತು ಬಹುತ್ವಗಳಿಗೆ ನಿಜವಾಗಿಯೂ ಅಪಚಾರವುಂಟಾಗಿದೆ. ಪ್ರಕಾಶ್ರಾಜ್ರವರು ಕೂಡ ನಕ್ಸಲೀಯ ಸಿದ್ಧಾಂತವನ್ನು ಹೀಗೆ ಬಹಿರಂಗವಾಗಿ ಸಮರ್ಥಿಸುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ನಗರದಲ್ಲಿರಲಿ ಅಥವಾ ಹಳ್ಳಿಯಲ್ಲಿರಲಿ ’ನಾವೆಲ್ಲರೂ ಮನುಷ್ಯರು – ಮಾನವತಾವಾದವೇ ಜಗತ್ತನ್ನು ಉಳಿಸುವ ಮಹಾ ಶಕ್ತಿ’ ಎಂಬ ಸಂದೇಶವನ್ನು ವಿಚಾರವಾದಿಗಳು ಮತ್ತು ಜನಪರ ಹೋರಾಟಗಾರರು ಎಲ್ಲೆಡೆ ಎಲ್ಲರಿಗೂ ನೀಡುವುದು ಅತ್ಯವಶ್ಯಕ.
ಬಲಪಂಥೀಯ ರಾಜಕಾರಣ ಮತ್ತು ನಕ್ಸಲೀಯ ಹೋರಾಟಗಳು ದೇಶದ ಶಾಂತಿ, ಸುವ್ಯವಸ್ಥೆ, ಸಾಮರಸ್ಯ ಮತ್ತು ಪ್ರಗತಿಗಳಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿವೆ. ಇಂದು ಜಗತ್ತನ್ನು ಉಳಿಸುವ ಮತ್ತು ಉದ್ಧರಿಸುವ ಸಲುವಾಗಿ ನಾವೆಲ್ಲರೂ ಬುದ್ಧನ ಮಧ್ಯಮಾರ್ಗವನ್ನು ಅನುಸರಿಸುವುದು ಅನಿವಾರ್ಯ. ಗಾಂಧಿ, ಅಂಬೇಡ್ಕರ್, ಲೋಹಿಯಾ, ಪೆರಿಯಾರ್, ನಾರಾಯಣ ಗುರು ಮೊದಲಾದ ದಾರ್ಶನಿಕರು ನಮಗೆ ಇಂದು ಅನುಕರಣೀಯ ವ್ಯಕ್ತಿಗಳು ಮತ್ತು ಶಕ್ತಿಗಳಾಗಬೇಕು.
(ಲೇಖಕರು-
ಡಾ.ಬಿ.ಪಿ.ಮಹೇಶ ಚಂದ್ರ ಗುರು
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು
ಶೈಕ್ಷಣಿಕ ಮಂಡಳಿ ಸದಸ್ಯರು)

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.
ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.
ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.
ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ7 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
-
ದಿನದ ಸುದ್ದಿ4 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ3 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ2 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ18 hours agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ10 hours agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

