ಲೈಫ್ ಸ್ಟೈಲ್
ಪ್ರವಾಸ ಕಥನ | ಗೋಕಾಕ್ ನಲ್ಲೊಂದು ಸುತ್ತು..!
Õಪ್ರವಾಸ ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಮಗುವಿನಿಂದ ಹಿಡಿದು ಮುದುಕರವರೆಗೆ ಎಲ್ಲರೂ ಪ್ರವಾಸವನ್ನು ಆನಂದಿಸುವವರೇ ಹೆಚ್ಚು. ಅದರಲ್ಲೂ ನಾನು ಒಬ್ಳು ಪ್ರವಾಸ ಪ್ರೇಮಿ. ಪ್ರವಾಸ ಕಥನಗಳೆಂದರೆ ಅಚ್ಚುಮೆಚ್ಚು. ಹಾಗಂತ ನಾ ಏನು ಹೆಚ್ಚು ಪ್ರವಾಸ ಮಾಡಿಲ್ಲ. ನನಗೆ ಪ್ರಕೃತಿಯ ಸೊಬಗು ಹಾಗೂ ಹಳ್ಳಿಯ ಸೊಬಗನ್ನು ಸಂಪೂರ್ಣವಾಗಿ ಅನುಭವಿಸ್ಬೇಕು ಎಂಬ ಮಹಾದಾಸೆ. ನಾ ಹೋಗುವ ಪ್ರವಾಸಕ್ಕೆ ಇಂಥದ್ದೇ ಜಾಗವಾಗಬೇಕು ಎಂಬ ಅಭಿಲಾಶೆ ಏನಿಲ್ಲ. ಬಂಧುಗಳ ಮನೆಗಳನ್ನ ಹೊರತು ಪಡಿಸಿ ಕಾಡಿನ ಬುಡಕಟ್ಟು ಜನಾಂಗ, ಶೋಷಿತರ, ದಲಿತರ ಮನೆಗಳಿಗೆ ಹೋಗಿ ಅವರ ಜೀವನವನ್ನು ಗಮನಿಸುವುದರಲ್ಲಿ ನನಗದು ಹೆಚ್ಚು ಖುಷಿ.
ಆದರೆ ನಗರ ವಾಸಿಯಾದ ನನಗೆ ಹಳ್ಳಿಯ ಸೊಬಗನಾಗಲಿ ಪ್ರಕೃತಿಯ ಸೊಬಗನ್ನಾಗಲಿ ಅನುಭವಿಸುವುದಕ್ಕೆ ಅವಕಾಶಗಳು ದೊರೆಯಲೇ ಇಲ್ಲ. ಪುಸ್ತಕ ಪ್ರೇಮಿಯಾದ ನನಗೆ ಹಳ್ಳಿಯ ವಾತಾವರಣ, ಬಡವರ ಬವಣೆ, ಶೋಷಿತರ ಜೀವನದ ಕುರಿತ ಕಲ್ಪನೆಗಳು ನನಗಿವೆ. ಹೀಗಿರುವಾಗ ನಾನು ವಿಮಾನದಲ್ಲಿ ಹಾರುವುದು ಬಿಡಿ ಅದನ್ನ ಹತ್ತಿರದಿಂದಲೂ ಒಮ್ಮೆಯೂ ನೋಡಿಲ್ಲ; ವೋಲ್ವೋ ಬಸ್ಸಲ್ಲೂ ಕೂತಿಲ್ಲ. ಸ್ಲೀಪಿಂಗ್ ಕೋಚ್ ಬಸ್ಸಿನ ಮೆತ್ತನೆ ಹಾಸಿಗೆಯಲ್ಲೂ ನಿದ್ರಾ ಸುಖ ಅನುಭವಿಸಿಲ್ಲ. ಆದರೆ ಸಾಕಷ್ಟು ಬಾರಿ ರೈಲು ಪ್ರಯಾಣ ಮಾಡಿದ್ದೇನೆ ಅಷ್ಟೇ.
ಅಂತದ್ದೇ ಒಂದು ರೈಲು ಪ್ರಯಾಣ ಮತ್ತೊಮ್ಮೆ ದೊರಕಿತು. ಇಲ್ಲಿಯವರೆಗೂ ಅಪ್ಪ ಅಮ್ಮನನ್ನು ಬಿಟ್ಟು ದೂರದೂರಿಗೆ ಎಲ್ಲಿಯೂ ಹೋಗದ ನಾನು ಮೊದಲ ಬಾರಿಗೆ ಸ್ನೇಹಿತರೊಡನೆ ಕೂಡಿ ಗೋಕಾಕ್ ಕಡೆ ಪ್ರವಾಸ ಹೋಗುತ್ತಿರುವುದು ಮನಸಿಗೆ ಹೆಚ್ಚು ಖುಷಿ ನೀಡಿತು. ಕಾಯುತ್ತಿದ್ದ ಆ ದಿನವೂ ಬಂತು. ಅಪ್ಪ ಅಮ್ಮನಿಗೆ ಟಾಟಾ ಹೇಳಿ ಆಶೀರ್ವಾದವನ್ನು ಪಡೆದುಕೊಂಡು ಮಧ್ಯರಾತ್ರಿ 1.30ಕ್ಕೆ 7 ಜನರ ತಂಡ ಮನೆ ಬಿಟ್ಟೆವೂ. ಅದರಲ್ಲಿ ಶರತ್,ಶಿವರಾಜ್, ಚಂದ್ರಶೇಖರ್ ದೊಡ್ಡಮನಿ, ಗುರುಸ್ವಾಮಿ, ಗೌತಮಿ ಸೇರಿದಂತೆ ಇವರೆಲ್ಲಾ ನನ್ನ ಸೀನಿಯರ್ಸ್ ಆಗಿದ್ದರು. ವಿಶೇಷ ಅಂದ್ರೆ ನಮ್ಮೊಂದಿಗೆ ನನ್ನ ತಂಗಿ ಯುಗಶ್ರೀಯು ಬಂದಿದ್ದಳು. ಟ್ರೈನ್ ತುಂಬಾ ರೆಷ್ ಆಗಿದ್ದರಿಂದ ನಮಗೆ ಕುಳಿತುಕೊಳ್ಳಲು ಸ್ಥಳ ಸಿಗಲಿಲ್ಲ. ಕೊನೆಯ ಭೋಗಿಯಲ್ಲಿ ಸ್ಥಳ ಸಿಕ್ಕಿತು. ಇನ್ನೆನ್ನೂ ನಿದ್ದೆ ಜೋಂಪಿಗೆ ಹೋದ ನಮಗೆ ಯಾರೋ ಬಂದು ಹೊಡೆದು ಎಬ್ಬಿಸಿದ ಹಾಗಾಯ್ತು. ಕಣ್ಣು ಬಿಟ್ಟು ನೋಡಿದರೆ ನಾವು ಹುಬ್ಬಳ್ಳಿಯಲ್ಲಿ ಇದ್ದೆವು.
ರೈಲು ತನ್ನ ಕೊನೆ ಭೋಗಿಯನ್ನ ಕಳಚುವುದರ ಪರಿಣಾಮ ಆ ಭೋಗಿಯನ್ನು ಬಿಟ್ಟು ಬೇರೆಯ ಕಡೆ ಹೋಗಬೇಕಾಯ್ತು ಆದರೆ ಕುಳಿತುಕೊಳ್ಳಲು ಸ್ಥಳ ಸಿಗದೆ ಹೇಗೋ ನಾವು ಮುಂಜಾನೆ 10 ಗಂಟೆಗೆ ಗೋಕಾಕ್ ಸ್ಥಳಕ್ಕೆ ಬಂದಿಳಿದ್ದೆವು. ಕರ್ನಾಟಕದ ಹಲವೆಡೆ ಓಡಾಡಿದ್ದರೂ ಬೆಳಗಾವಿ ಜಿಲ್ಲೆಗೆ ಬಂದದ್ದು ಇದೇ ಮೊದಲು. ಬೆಳಗಾವಿ ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ನಗರವಾದ ಗೋಕಾಕ್ ಪಶ್ಚಿಮ ಘಟ್ಟಗಳಿಂದ ಸುತ್ತುವರೆದಿದೆ. ಹಚ್ಚ ಹಸಿರು ವಾತಾವರಣ ಹಾಗೂ ಏಸಿಯ ಹಾಗೆ ಸದಾ ಕೂಲ್ ಅಗಿರುವಂತಹ ಸ್ಥಳಕ್ಕೆ ನಮ್ಮನ್ನ ನಾವು ಮೈಗೂಡಿಸಿಕೊಂಡು ನಡೆಯಲಾರಂಭಿಸಿದೇವು.ಗೋಕಾಕ್ದಲ್ಲಿಯೂ ಹಳದಿ ಕೆಂಪು ತೋರಣಗಳು, ಬಾವುಟಗಳು ನಮಗೆ ಸ್ವಾಗತ ಕೋರಿದವು.
ತುಂಬಾ ಹಸಿದಿದ್ದ ನಾವು ಅಲ್ಲೇ ಒಂದು ಅಂಗಡಿಯಲ್ಲಿ ಮೆಣಸಿನಕಾಯಿ ಬಜ್ಜಿ, ಪೂರಿ, ಪಲಾವ್ ತಿಂದು ಟೀ ಕುಡಿದು ಗೋಕಾಕ್ ಅರಬ್ಬಿಯ ಕಡೆಗೆ ನಡೆದೆವು. ನಮ್ಮ ರಾಜ್ಯ ಜಲಪಾತಗಳ ತವರೂರು. ಸಿರಿ ಸೌಂದರ್ಯದ ರುದ್ರರಮಣೀಯ ಖಣಜಗಳು ಎಂದರೆ ಇಲ್ಲಿನ ಫಾಲ್ಸ್. ನಿಸರ್ಗ ಪ್ರಿಯರ ಆಕರ್ಷಣಿಯ ಕೇಂದ್ರ ಬಿಂದುವೂ ಹೌದು. ಪ್ರಕೃತಿಯ ಸುಂದರ ತಾಣಗಳಲ್ಲಿ ಒಂದಾದ ಹಾಗೂ ಮಳೆಗಾಲದಲ್ಲಿ ಮೈದುಂಬಿ ಹರಿಯುವುದು ಗೋಕಾಕ್ ಜಲಪಾತದ ವಿಶೇಷ. ಮಳೆಗಾಲ ಇದೀಗ ಪ್ರಾರಂಭವಾದರಿಂದ ನೀರು ತೀರಾ ಕಡಿಮೆ ಇತ್ತು.
ಗೋಕಾಕ್ ಜಲಪಾತವನ್ನು ಪ್ರವೇಶಿಸುತ್ತಿದ್ದಾಗೆ ನಮ್ಮ ಕಣ್ಣಿಗೆ ಕಂಡದ್ದು ಹಳೆಕಾಲದ ಕಾಟನ್ ಮಿಲ್ ಅದು ನೋಡುವುದ್ದಕ್ಕೆ ಡಿಟೋ ಇಂಡಿಯನ್ ಆಕ್ಸ್ಫಾರ್ಡ್ ವಿಶ್ವವಿದ್ಯಾನಿಲಯದ ತರನೆ ಇತ್ತು. ಅಲ್ಲಿಂದ ಕೆಳಗಿಳಿದು ಹೋದರೆ ನಮ್ಮ ಕಣ್ಣಿಗೆ ಕಾಣಸಿಗುವುದು ತೂಗು ಸೇತುವೆ.
ಅಪರೂಪದ ತೂಗು ಸೇತುವೆ
ಪೂರ್ವಭಿಮುಖವಾಗಿ ಹರಿಯುವ ಘಟಪ್ರಭೆಗೆ, ದಕ್ಷಿಣೋತ್ತರವಾಗಿ ತಂತಿಯ ತೂಗು ಸೇತುವೆಯನ್ನು ನಿರ್ಮಿಸಲಾಗಿದೆ. ಅಪರೂಪದ ತೂಗುವ ತಂತಿಯ ಸೇತುವೆ ಕರ್ನಾಟಕದಲ್ಲಿ ಬೇರಾವ ನದಿಗೂ ನಿರ್ಮಿಸಿಲ್ಲ. ಇದರ ಮೇಲೆ ನಿಂತು ನದಿಯ ಅಂದವನ್ನು ವೀಕ್ಷಿಸುವುದೇ ಒಂದು ಭಾಗ್ಯ. ಈ ಸೇತುವೆಯ ಮೇಲೆ ನಡೆದಾಡುವುದರೊಂದಿಗೆ ಪುಳಕಗೊಳ್ಳುವ ಅವಕಾಶ ಇರುವುದು ಗೋಕಾಕ್ ಜಲಪಾತದಲ್ಲಿ ಮಾತ್ರ.
1 ಮೀ ಅಗಲ, 210ಮೀ (659 ಅಡಿ) ಉದ್ದವಿರುವ ಅಪರೂಪದ ಈ ತಂತಿ ಸೇತುವೆ ಅದ್ಭುತವಾಗಿದೆ. ನದಿಯ ಒಂದು ದಂಡೆಯಿಂದ ಇನ್ನೊಂದು ದಂಡೆಗೆ ಕಾಲ್ನಡಿಗೆಯಲ್ಲಿ ತಲುಪಲು ಈ ತೂಗುಸೇತುವೆ ಸರಳ ದಾರಿಯಾಗಿದೆ. ನದಿಯ ಕಲ್ಲುಬಂಡೆ ಹಾಸಿಗೆಯಿಂದ 14ಮೀ (46 ಅಡಿ) ಎತ್ತರದಲ್ಲಿ ಈ ತೂಗು ಸೇತುವೆ ನಿರ್ಮಿಸಲಾಗಿದ್ದು, ನದಿಯಲ್ಲಿ ಭರ್ತಿ ನೀರು ಬಂದಾಗ ಸೇತುವೆ ಮೇಲಿಂದ ಅಡ್ಡಾಡುವುದೇ ಒಂದು ರಸಘಳಿಗೆ. ಇದರ ಮೇಲೆ ಚಲಿಸುವಾಗ ಹೊಸಬರಾದ ನಮಗೆ ಭಯವಾದದ್ದು ಸಹಜ. ಕೆಳಗೆ ರಭಸದಿಂದ ಹರಿಯುವ ಕತ್ತಿ(ನೀರು ಅತ್ಯಂತ ರಭಸವಾಗಿ ಹರಿಯುವುದರಿಂದ ಕತ್ತಿ ನದಿಯೆಂಬ ಹೆಸರು ಬಂದಿದೆ) ನದಿಯ ಮೇಲಿನ ನಾವೆಯಲ್ಲಿ ಕುಳಿತು ಪ್ರಯಾಣಿಸಿದ ಅನುಭವವಾಗುತ್ತದೆ.
ಇಂತಹ ಸೇತುವೆ ಮೇಲೆ ನಡೆದಾಡುವುದೇ ಒಂದು ಥ್ರಿಲ್. ಇದರ ಮೇಲೆ ನಡೆದುಕೊಂಡು ಹೋಗುವಾಗ ವಾಯುದೇವನೂ ಕೂಡಾ ಒಂದು ಕ್ಷಣ ಎಂತಹ ಮನಸುಗಳಲ್ಲೂ ಭಯದ ವಾತವರಣವನ್ನು ಸೃಷ್ಟಿಸಿಬಿಡುತ್ತಾನೆ. ರಭಸವಾಗಿ ಗಾಳಿ ಬೀಸಿದರೆ ಸಾಕು ಆಯ ತಪ್ಪಿ ಎಲ್ಲಿ ನಾವೇ ಗಾಳಿಯೊಂದಿಗೆ ತೇಲಿಹೋಗುತ್ತೇವೆಯೋ ಎಂಬ ಭಯದಲ್ಲೊಮ್ಮೆ ಚಿಟಾರನೆ ಚಿರುವುಂತಹ ಘಳಿಗೆ ರಸದೌತಣವಾಗಿರುತ್ತದೆ. ಕತ್ತಿಹೊಳೆಯೆಂದೆ ಖ್ಯಾತಿಪಡೆದ ಘಟಪ್ರಭೆ ಬೆಳಗಾವಿ ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ನಗರವಾಗಿದ್ದು ಪಶ್ಚಿಮ ಘಟ್ಟಗಳಿಂದ ಸುತ್ತುವರೆದಿದೆ. ಘಟಪ್ರಭಾ ನದಿಗೆ ಕತ್ತಿಹೊಳೆ ಎಂದು ಕರೆಯುತ್ತಾರೆ. ತಾಮ್ರಪರ್ಣಿ ಮತ್ತು ಹಿರಣ್ಯಕೇಶಿ ನದಿಗಳು ಘಟಪ್ರಭೆಯನ್ನು ಸೇರುತ್ತವೆ. ಮಳೆಗಾಲದಲ್ಲಿ ಕಾಫಿ ಚಹಾ ವರ್ಣಕ್ಕೆ ತಿರುಗುತ್ತವೆ. ಶ್ವೇತವರ್ಣದಲ್ಲು ತಿಳಿಗೊಂಡು ಹಾಲಿನಂತೆ ನೊರೆ ನೊರೆಯಾಗಿ ಹರಿಯುತ್ತದೆ. ಇದರ ಸೊಬಗನ್ನು ನೋಡಲು ಕಣ್ಣೆರಡು ಸಾಲದು. ನೀರಿನ ರಭಸ, ಹಾಲ್ನೊರೆಯಂತಹ ಬಣ್ಣ, ಗಂಭೀರವಾದಂತಹ ಸದ್ದು, ಹತ್ತಿರದ ಸ್ಥಳಗಳಲ್ಲಿ ತಂಪಾದ ನೀರಿನ ಚಿಕ್ಕ ಚಿಕ್ಕ ಹನಿಗಳ ಸಿಂಚನ ಇವೆಲ್ಲವೂ ಸೇರಿ ನಮ್ಮ ಮನದಲ್ಲಿ ರೋಮಾಂಚನದೊಂದಿಗೆ ತಾಜತನದ ಅನುಭವವನ್ನು ನೀಡುತ್ತಿತ್ತು.
ಇದರ ಸುಂದರತೆ ಮತ್ತು ರಮಣೀಯತೆಯನ್ನು ಅತೀ ಸಮೀಪದಿಂದ ಸವಿಯುವಂತಹ ವಾತವರಣವಿದ್ದು, ಧಬಧಬ ಧರೆಗಿಳಿಯುವ ಭಯಂಕರ ಪ್ರವಾಹದಂತೆ ಘಟಪ್ರಭೆ 84 ಅಡಿ ಎತ್ತರದಿಂದ ಧುಮ್ಮಿಕ್ಕುವ ದೃಶ್ಯವನ್ನು ನೋಡಿಯೇ ಸವಿಯಬಹುದು. ಘಟಪ್ರಭೆ ಭಾರಿ ರಭಸದಿಂದ ಪ್ರಪಾತಕ್ಕೆ ಧುಮುಕುವಾಗ, ಸಿಡಿ ಮದ್ದು ಸಿಡಿದಂತೆ ನೀರು ಝಲ್ಲೆಂದು ಪುಟಿದೇಳುತ್ತದೆ. ಪ್ರಕೃತಿಯ ಆ ಅಗಾಧ ಸೌಂದರ್ಯವನ್ನು ಕಣ್ಣಿಂದ ಕಾಣಬೇಕು ಮತ್ತು ಇಂಪಾದ ಸದ್ದನ್ನು ಕಿವಿಂದ ಆಲಿಸಬೇಕು. ಪ್ರವಾಹದಂತೆ ಧುಮುಕುವ ಘಟಪ್ರಭೆ ನಂತರ ಮಂದಗಮನೆಯಾಗಿ ಮೆಲ್ಲನೆ ಚಲಿಸುವ ಈಕೆಯ ಸೌಂದರ್ಯ ನೋಡುವುದೇ ಸಂಭ್ರಮ.
ಭಾರತದ ನಯಾಗರ ಫಾಲ್ಸ್ ಎಂಬ ಹೆಗ್ಗಳಿಕೆ
ಘಟಪ್ರಭೆಯ ಸುತ್ತಲೂ ಎಲ್ಲಿ ನೋಡಿದರೂ ಹಚ್ಚ ಹಸಿರು. ಬೆಟ್ಟ ಗುಡ್ಡಗಳದ್ದೇ ಕಾರುಬಾರು.
ಇಲ್ಲಿಗೆ ಬರುವ ಪ್ರವಾಸಿಗರನ್ನು ಹಸಿರು ದೇವತೆ ಪ್ರೀತಿಸುವ ಬಗೆಯನ್ನು ಕಂಡು ಇಲ್ಲಿಂದ ಹೊರಡಲು ಮನಸ್ಸಾಗದಷ್ಟು ರಮಣೀಯತೆ ಇಲ್ಲಿದೆ. ನಿಸರ್ಗದ ಸಂಧರತೆಯನ್ನು ಸವಿಯುವುದರೊಂದಿಗೆ ಇಲ್ಲಿ ಐತಿಹಾಸಿಕ ಮಹಾಲಿಂಗೇಶ್ವರನ ದೇವಾಲಯವಿದೆ.
177 ಮೀಟರ್ (581 ಅಡಿ) ಅಗಲದ ಬಂಡೆಗಳಲ್ಲಿ ಮೇಲಿಂದ 52 ಮೀಟರ್ (171 ಅಡಿ) ಆಳದ ಕಂದಕಕ್ಕೆ ಘಟಪ್ರಭಾ ನದಿಯ ನೀರು ಧುಮ್ಮಿಕ್ಕುವುದು ಗೋಕಾಕ್ ಜಲಪಾತದ ವೈಶಿಷ್ಟ್ಯ. ವಿಶಾಲ ಬಂಡೆಗಲ್ಲಿನ ಮೇಲಿಂದ ನೀರು ಧುಮ್ಮಿಕ್ಕುವುದರಿಂದ ಈ ಜಲಪಾತವನ್ನು “ಮಿನಿ ನಯಾಗರಾ” ಎಂದು ಕರೆಯಲಾಗುತ್ತದೆ.
ಮೊದಲ ಬಾರಿಗೆ ವಿದ್ಯುತ್ ಉತ್ಪಾದಿಸಿದ ಕೇಂದ್ರ
ನೀರು ಧುಮ್ಮಿಕ್ಕುವ ಕಂದಕದ ಬಳಿ ಇರುವ ವಿದ್ಯುತ್ ಉತ್ಪಾದನೆ ಕೇಂದ್ರವನ್ನು ಬ್ರಿಟೀಷ್ ಕಾಲದಲ್ಲೇ ನಿರ್ಮಿಸಲಾಗಿದೆ. 1887ರಲ್ಲಿ ಕಾರ್ಯರಂಭ ಮಾಡಿದ್ದು, ರಾಜ್ಯದಲ್ಲೇ ಮೊದಲ ಬಾರಿ ವಿದ್ಯುತ್ ಉತ್ಪಾದಿಸಿದ ಕೇಂದ್ರ ಎಂಬ ಹೆಗ್ಗಳಿಕೆ ಪಡೆದಿದೆ. ತದನಂತರ ಬೆಂಗಳೂರಿನಲ್ಲಿ ಆರಂಭಿಸಲಾಯಿತು.ಮಹಾಲಿಂಗೇಶ್ವರ ದೇವಾಸ್ಥಾನ ಇನ್ನೂ ಈ ಸ್ಥಳದ ಕುತೂಹಲಕಾರಿ ಅಂಶವೆಂದರೆ ಚಾಲುಕ್ಯರ ಕಾಲಕ್ಕೆ ಸೇರಿದ ಸ್ಮಾರಕಗಳು ಇಲ್ಲಿನ ಕಲ್ಲಿನ ಕಣಿವೆಯ ಎರಡೂ ದಂಡೆಗಳಲ್ಲಿ ದೊರೆತಿರುವುದು. ಈ ಸ್ಥಳದ ಮತ್ತೊಂದು ಆಕರ್ಷಣೆ ಎಂದರೆ ಚಾಲುಕ್ಯ ವಾಸ್ತುಶೈಲಿಯಲ್ಲಿ ನಿರ್ಮಿಸಲಾದ ಮಹಾಲಿಂಗೇಶ್ವರನ ದೇವಾಸ್ಥಾನ.
ಟ್ರೆಕ್ಕಿಂಗ್ ಗೆ ಹೇಳಿಮಾಡಿಸಿದ ಸ್ಥಳ
ಗೋಕಾಕ್ ಫಾಲ್ಸ್ ಧುಮ್ಮಿಕ್ಕುವುದ್ದನ್ನು ಕೆಳಗಿನಿಂದ ನೋಡಬೇಕೆಂದರೆ ಸುಮಾರು 2 ರಿಂದ 3 ಕಿ.ಮೀ ಕೆಳಗೆ ನಡೆದುಹೋಗಬೇಕು. ಕರ್ನಾಟಕದ ಕರಾವಳಿ ಮತ್ತು ಮಲೆನಾಡಲ್ಲಿ ಧೋ ಧೋ ಎಂದು ಮಳೆಯಾಗಿ ಒಂದು ಹಂತಕ್ಕೆ ಬಂದು ನಿಂತ ಮೇಲೆ ಟ್ರೆಕ್ಕಿಂಗ್ಗೆ ಅಣಿಯಾಗುವಂತಹ ಸಾಹಸಿಗರಿಗೆ ಗೋಕಾಕ್ ಜಲಪಾತ ಹೇಳಿಮಾಡಿಸಿದಂತಹ ಸ್ಥಳವಾಗಿದೆ. ಇಲ್ಲಿ ನಡೆಯುತ್ತ ಹೋದರೆ ಡಿಟೋ 6-5=2 ಮೂವೀಯಲ್ಲಿ ಇರುವಂತಹ ಟ್ರೆಕ್ಕಿಂಗ್ನ ಅನುಭವ ನೀಡುತ್ತದೆ. ಆದರೆ ಅಲ್ಲಿ ದೆವ್ವ ಇರುತ್ತೆ ಇಲ್ಲಿ ನಾವೇ ದೆವ್ವಗಳಾಗಿರುತ್ತವೆ. ದೊಡ್ಡ ದೊಡ್ಡ ಬಂಡೆಗಳು, ಜಾರುವಂತಹ ಕಲ್ಲುಗಳು, ತೊರೆಗಳು, ಗಿಡ ಮರಗಳು, ನಮ್ಮ ಧ್ವನಿ ನಮಗೆ ಪಿಸುಗುಡುವಂತಹ ನಿಶಬ್ಧ ವಾತವರಣ ಹೀಗೆ ಇವೆಲ್ಲಾ ಸೇರಿ ಎಂತಹವರಿಗೂ ಪ್ರಕೃತಿ ಮೇಲೆ ಲವ್ ಆಗಿಬಿಡುತ್ತದೆ.
ಗೋಕಾಕ್ ಸ್ಪೇಷಲ್ ಕರದಂಟು
ಗೋಕಾಕ್ ಬಗ್ಗೆ ಇಷ್ಟೇಲ್ಲಾ ಹೇಳಿ ಕರದಂಟನ್ನು ಮರೆಯಲು ಸಾಧ್ಯವೇ? ಬೆಳಗಾವಿಯತ್ತ ಪ್ರಯಾಣ ಬೆಳೆಸಿದರೆ ಅಲ್ಲಿಯ ಕುಂದ ಹಾಗೂ ಗೋಕಾಕ್ನ ಕರದಂಟು ಅಥವಾ ಅಂಟುಹುಂಡೆಯನ್ನು ಸವಿಯದೆ ಬಂದವರೆ ಇಲ್ಲ. ಅಂಟು ಹಾಕಿ ತಯಾರಿಸುವ ಈ ಉಂಡೆಯನ್ನು ಕರ(ಕೈ)ದಲ್ಲಿ ಉಂಡೆ ಕಟ್ಟುವುದರಿಂದ ಈ ಹೆಸರು ಬಂದಿರಲೂಬಹುದು ಅಲ್ವಾ? ಅದೇನೆ ಇರಲಿ, ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಕೊಬ್ಬರಿ ತುರಿ, ಗಸಗಸೆ, ಅಂಟು, ಬೆಲ್ಲ, ತುಪ್ಪ ಹೀಗೆ ಇವೆಲ್ಲವನ್ನು ಹಾಕಿ ಮಾಡಿದಂತಹ ಕರದಂಟು ಆರೋಗ್ಯಕರವಾದಂತಹ ತಿನಿಸಾಗಿದೆ. ಈ ಗಿರಮಿಟ್ ಜತೆ ಗೋಕಾಕ್ನ ಕರದಂಟನ್ನು ಮೆಲ್ಲುತ್ತ ಭೋರ್ಗರೆಯುವ ಜಲಪಾತ ನೋಡುತ್ತಿದ್ದಾರೆ ನಮ್ಮ ಕಣ್ಣಿಗೆ ಹಬ್ಬವಾಗುವುದರೊಂದಿಗೆ ಬಾಯಿಗೆ ಸಿಹಿಯೂ ಆಗುವುದರಲ್ಲಿ ಸಂಶಯವೇ ಇಲ್ಲ!
ಪ್ರವಾಸಿಗರ ತಾಣ
ನೋಡುಗರ ಆಕರ್ಷಣೀಯ ಕೇಂದ್ರ ಬಿಂದುವಾದ ಗೋಕಾಕ್ ಫಾಲ್ಸ್ ಅನ್ನು ನೋಡಲು ಪಕ್ಕದ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ದೂರದೂರದ ಊರಿಂದ ಪ್ರವಾಸಿಗರು ಈ ಸೌಂದರ್ಯವನ್ನು ಸವಿಯಲು ಬರುತ್ತಾರೆ. ಸೆಲ್ಫೀ, ಫೋಟೋ ತೆಗೆಸಿಕೊಳ್ಳುವುದರೊಂದಿಗೆ ಬೆಟ್ಟದ ಇಕ್ಕೆಲ್ಲಗಳಲ್ಲಿ ಜೋಡಿಸಿರುವ ತೂಗು ಸೇತುವೆಯಲ್ಲಿ ಕೇಕೆ ಹೊಡೆದು ಕುಣಿದು ಕುಪ್ಪಳಿಸುತ್ತಾರೆ. ಒಟ್ಟಾರೆಯಾಗಿ ಈ ಸಮಯವೂ ಪ್ರವಾಸಿಗರಿಗೆ ಪ್ರವಾಸ ಮಾಡಲು ಹೇಳಿಮಾಡಿಸಿದಂತಹ ಸ್ಥಳವಾಗಿದೆ.
ಮಾರ್ಗ
ಗೋಕಾಕ್ ಜಲಪಾತ ಬೆಳಗಾವಿಯಿಂದ 58 ಕಿ.ಮೀ. ಹಾಗೂ ಗೋಕಾಕ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿದೆ. ಈ ಜಲಪಾತ ಕೊಲ್ಲಾಪುರದಿಂದ 100 ಕಿ.ಮೀ., ಸಾಂಗ್ಲಿಯಿಂದ 66 ಕಿ.ಮೀ ಪಣಜಿಯಿಂದ 140 ಕಿ.ಮೀ ದೂರದಲ್ಲಿದೆ. ಗೋಕಾಕ್ ರೋಡ್ ಮತ್ತು ಘಟಪ್ರಭಾ ರೈಲ್ವೆ ನಿಲ್ದಾಣಗಳು ಜಲಪಾತದಿಂದ 10 ಕಿ.ಮೀ ಅಂತರದಲ್ಲಿದೆ. ಬೆಳಗಾವಿ, ಗೋಕಾಕ್ ಮತ್ತು ನಗರ ಪ್ರದೇಶಗಳಿಂದ ಜಲಪಾತಕ್ಕೆ ಸಾರಿಗೆ ಸಂಸ್ಥೆಯ ಬಸ್ ಸೌಕರ್ಯ ಇದೆ. ಖಾಸಾಗಿ ವಾಹನಗಳ ಮೂಲಕವೂ ಗೋಕಾಕ್ ಜಲಪಾತದ ಸ್ಥಳ ತಲುಪಬಹುದು.
–ಪ್ರೀತಿ.ಟಿ.ಎಸ್
ಪತ್ರಿಕೋದ್ಯಮ ವಿದ್ಯಾರ್ಥಿನಿ
3ನೇ ಸೆಮಿಸ್ಟರ್
ದಾವಣಗೆರೆ ವಿಶ್ವವಿದ್ಯಾನಿಲಯ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಗಳೂರು ಜಲಸಂಚಾರಕ್ಕೆ ಹೊಸ ವೇಗ: ಬಿನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ 65 ಕಿ.ಮೀ. ನೀರು ಮಾರ್ಗ!
ಸುದ್ದಿದಿನ,ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದಾಗಲೆಲ್ಲಾ ಎದುರಾಗುವ ನೀರು ನಿಲ್ಲುವಿಕೆ ಹಾಗೂ ಪ್ರವಾಹದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾಂತ್ರಿಕ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ ಬಿನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ನೀರಿನ ಹರಿವನ್ನು ನಿಯಂತ್ರಿಸುವ ವಿಶೇಷ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಯೋಜನೆಯಡಿ ಸುಮಾರು 65 ಕಿ.ಮೀ. ಉದ್ದದ ನೀರಿನ ಮಾರ್ಗ ನಿರ್ಮಿಸುವ ಚಿಂತನೆ ನಡೆದಿದೆ.
ನಗರದಲ್ಲಿ ಮಳೆ ಸುರಿದಾಗ ರಸ್ತೆಗಳು ಜಲಾವೃತವಾಗುವುದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು ಹಾಗೂ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನೀರಿನ ಹರಿವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಪ್ರಮುಖ ಗುರಿಯಾಗಿದೆ.
http://Visit : www.suddidina.com
ಮೆಟ್ರೋ ಮಾರ್ಗದ ಸಮೀಪ ವಿಶೇಷ ವ್ಯವಸ್ಥೆ
ಬಿನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ಮಧ್ಯದಲ್ಲಿರುವ ಓಲ್ಡ್ ಮದ್ರಾಸ್ ಗರ್ದನ್ಸೇತುವೆಯಲ್ಲಿ ಪ್ರಸಕ್ತ ನೀರು ಹರಿವಿಗೆ ಸಂಬಂಧಿಸಿದ ನಿಯಂತ್ರಣ ಕಾಮಗಾರಿ ನಡೆಯುತ್ತಿದೆ. ತಾಂತ್ರಿಕ ತಂಡದ ಪರಿಶೀಲನೆ ಬಳಿಕ ಗರ್ದನ್ಸೇತುವೆ ಸುರಕ್ಷತಾ ತಪಾಸಣೆ ನಡೆಸಲಾಗಿದ್ದು, ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಈ ಭಾಗದಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸುವುದರಿಂದ ಜಲಾವೃತ ಸಮಸ್ಯೆಯನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ. ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ನೀರು ನಿಂತು ಉಂಟಾಗುವ ಸಮಸ್ಯೆಗಳಿಗೆ ಇದು ಪ್ರಮುಖ ಪರಿಹಾರ ಕ್ರಮವಾಗಬಹುದು.
ರೈಲು ಸಂಚಾರಕ್ಕೂ ಸುರಕ್ಷತೆ
ರೈಲು ಸುರಕ್ಷತಾ ನಿಯಮಗಳ ಪ್ರಕಾರ ತಾಂತ್ರಿಕ ಮೇಲ್ವಿಚಾರಣೆ ನಡೆಸಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ನಿರಂತರ ಮಳೆ ಸುರಿದ ಸಂದರ್ಭದಲ್ಲೂ ರೈಲು ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಲಾಗಿದೆ.
ರೈಲು ಸಂಪರ್ಕ ಇರುವ ಪ್ರದೇಶಗಳಲ್ಲಿ ನೀರು ಸಂಗ್ರಹವಾಗುವುದರಿಂದ ಹಳಿಗಳ ಸುರಕ್ಷತೆ ಹಾಗೂ ರೈಲು ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ನೀರು ಹರಿವಿನ ವ್ಯವಸ್ಥೆಯನ್ನು ಸುಧಾರಿಸುವುದರ ಜೊತೆಗೆ ರೈಲು ಮೂಲಸೌಕರ್ಯದ ಸುರಕ್ಷತೆಯನ್ನೂ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಲಾಗುತ್ತಿದೆ.
ಮುಂದಿನ ಹಂತದಲ್ಲಿ ದೊಡ್ಡ ಯೋಜನೆ
ಈ ನೀರಿನ ನಿರ್ವಹಣಾ ಕಾಮಗಾರಿಯ ಆಚ್ಚೋಬಲದಂದೇ ವಾರದೊಳಗೆ ಪೂರ್ಣಗೊಳಿಸುವ ನಿರೀಕ್ಷೆ ಇದೆ. ಕಾಮಗಾರಿ ಮುಗಿದ ಬಳಿಕ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸಲಾಗುತ್ತದೆ. ಮುಂದಿನ ಹಂತದಲ್ಲಿ ಮಳೆ ನೀರು ಸಂಗ್ರಹಣೆ ಹಾಗೂ ನೀರಿನ ಹರಿವಿನ ನಿರ್ವಹಣೆಯನ್ನು ಇನ್ನಷ್ಟು ಬಲಪಡಿಸುವ ಯೋಜನೆಗಳೂ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.
ನಗರದ ವೇಗದ ಬೆಳವಣಿಗೆಗೆ ತಕ್ಕಂತೆ ಮೂಲಸೌಕರ್ಯ ವಿಸ್ತರಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಳೆ ನೀರು ನಿರ್ವಹಣೆ ಬೆಂಗಳೂರಿಗೆ ಅತ್ಯಂತ ಅಗತ್ಯವಾಗಿದೆ. 65 ಕಿ.ಮೀ. ನೀರು ಮಾರ್ಗದ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾದರೆ, ಮಳೆಗಾಲದ ಜಲಾವೃತ ಸಮಸ್ಯೆ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆಯಾಗಲಿದೆ.

ದಿನದ ಸುದ್ದಿ
ರಾಜಕೀಯಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಎಂಟ್ರಿ? ಡಿಕೆಶಿ ಭೇಟಿಯ ಹಿಂದೆ ಇದೆ ‘ಕೈ’ ಲೆಕ್ಕ!
ಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಹೆಚ್ಚಿದ ಕುತೂಹಲ; ವಿಧಾನ ಪರಿಷತ್ಗೆ ನಾಮನಿರ್ದೇಶನದ ಚರ್ಚೆ
ಸುದ್ದಿದಿನ,ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ರಾಜಕೀಯ ಪ್ರವೇಶದ ಕುರಿತು ಇದೀಗ ಚರ್ಚೆ ಜೋರಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ರವಿಚಂದ್ರನ್ ಭೇಟಿಯಾಗಿದ್ದು, ಈ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಕುತೂಹಲ ರಾಜಕೀಯ ಹಾಗೂ ಚಿತ್ರರಂಗದ ವಲಯದಲ್ಲಿ ಮೂಡಿದೆ.
ರವಿಚಂದ್ರನ್ ಮತ್ತು ಡಿಕೆ ಶಿವಕುಮಾರ್ ಬಾಲ್ಯದ ಸ್ನೇಹಿತರು ಹಾಗೂ ಕ್ಲಾಸ್ಮೇಟ್ಗಳು ಎಂಬುದು ವಿಶೇಷ. ಹೀಗಾಗಿ ಇಬ್ಬರ ಭೇಟಿಯನ್ನು ಕೇವಲ ಸ್ನೇಹಪೂರ್ವಕ ಭೇಟಿ ಎಂದೇ ನೋಡಬೇಕೇ ಅಥವಾ ಇದರ ಹಿಂದೆ ಮತ್ತೇನಾದರೂ ರಾಜಕೀಯ ಬೆಳವಣಿಗೆ ಇದೆಯೇ ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ.
http://Visit : www.suddidina.com
ನಾಲ್ಕು ದಶಕಗಳ ಸಿನಿಮಾ ಪಯಣ
ಕ್ರೇಜಿಸ್ಟಾರ್ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದಾರೆ. ನಟನಾಗಿ ಮಾತ್ರವಲ್ಲದೆ ನಿರ್ದೇಶಕ, ನಿರ್ಮಾಪಕರಾಗಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ಅವರ ಕೊಡುಗೆಯನ್ನು ಪರಿಗಣಿಸಿ, ಇದೀಗ ಅವರಿಗೆ ರಾಜಕೀಯ ಕ್ಷೇತ್ರದಲ್ಲೂ ಅವಕಾಶ ನೀಡುವ ಚಿಂತನೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ವಿಶೇಷವಾಗಿ ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡುವ ಸಾಧ್ಯತೆ ಕುರಿತು ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರದಿಂದ ರವಿಚಂದ್ರನ್ ಅವರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡುವ ವಿಚಾರ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
ಡಿಕೆಶಿ ಭೇಟಿಗೆ ಹೊಸ ಅರ್ಥ?
ರವಿಚಂದ್ರನ್ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ. ಬಾಲ್ಯದ ಗೆಳೆಯನನ್ನು ಭೇಟಿಯಾದ ಸಂತಸವನ್ನು ಡಿಕೆ ಶಿವಕುಮಾರ್ ಹಂಚಿಕೊಂಡಿದ್ದರೂ, ಭೇಟಿಯ ರಾಜಕೀಯ ಆಯಾಮದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸದ್ಯಕ್ಕೆ ಹೊರಬಿದ್ದಿಲ್ಲ.
ಆದರೆ ರವಿಚಂದ್ರನ್ ಅವರನ್ನು ಸಾಂಸ್ಕೃತಿಕ ಕ್ಷೇತ್ರದ ಪ್ರತಿನಿಧಿಯಾಗಿ ವಿಧಾನ ಪರಿಷತ್ಗೆ ಕರೆತರುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಂದು ವೇಳೆ ಇದು ಅಧಿಕೃತಗೊಂಡರೆ, ಸಿನಿಮಾ ಕ್ಷೇತ್ರದಿಂದ ರಾಜಕೀಯಕ್ಕೆ ಪ್ರವೇಶಿಸುವ ಮತ್ತೊಬ್ಬ ಪ್ರಮುಖ ವ್ಯಕ್ತಿಯಾಗಿ ರವಿಚಂದ್ರನ್ ಗುರುತಿಸಿಕೊಳ್ಳಲಿದ್ದಾರೆ.
ಅಧಿಕೃತ ಘೋಷಣೆಗಾಗಿ ಕಾಯುವಿಕೆ
ರವಿಚಂದ್ರನ್ ಅವರ ರಾಜಕೀಯ ಪ್ರವೇಶದ ವಿಚಾರ ಸದ್ಯಕ್ಕೆ ಚರ್ಚೆ ಹಾಗೂ ನಿರೀಕ್ಷೆಯ ಹಂತದಲ್ಲಿದೆ. ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬಂದ ಬಳಿಕವಷ್ಟೇ ಈ ಬೆಳವಣಿಗೆಗೆ ಸ್ಪಷ್ಟತೆ ಸಿಗಲಿದೆ.
ಚಿತ್ರರಂಗದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ರವಿಚಂದ್ರನ್ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟರೆ, ಅದು ಕನ್ನಡ ಚಿತ್ರರಂಗ ಹಾಗೂ ಕರ್ನಾಟಕ ರಾಜಕೀಯ ಎರಡರಲ್ಲೂ ಗಮನಾರ್ಹ ಬೆಳವಣಿಗೆಯಾಗಲಿದೆ. ಹೀಗಾಗಿ ಡಿಕೆ ಶಿವಕುಮಾರ್-ರವಿಚಂದ್ರನ್ ಭೇಟಿ ಇದೀಗ ಕುತೂಹಲದ ಕೇಂದ್ರಬಿಂದುವಾಗಿದೆ.

ದಿನದ ಸುದ್ದಿ
ರಸ್ತೆ ನಿಯಮ ಉಲ್ಲಂಘನೆಗೆ ಬ್ರೇಕ್ ಯಾವಾಗ? 4 ವರ್ಷದಲ್ಲಿ 5.67 ಕೋಟಿ ಪ್ರಕರಣ, ₹2,361 ಕೋಟಿ ದಂಡ ಸಂಗ್ರಹ!
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಆತಂಕಕಾರಿ ಪ್ರಮಾಣದಲ್ಲಿ ದಾಖಲಾಗುತ್ತಿವೆ. ರಸ್ತೆ ಸುರಕ್ಷತೆ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೂ, ನಿಯಮ ಉಲ್ಲಂಘನೆಗೆ ಕಡಿವಾಣ ಬೀಳುತ್ತಿಲ್ಲ. ಇದರ ಪರಿಣಾಮವಾಗಿ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಹಾಗೂ ದಂಡ ವಿಧಿಸುವಿಕೆಯನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿದ್ದಾರೆ.
http://Visit : www.suddidina.com
ಕಳೆದ ನಾಲ್ಕು ವರ್ಷಗಳ ಅಂಕಿ-ಅಂಶ ಗಮನಿಸಿದರೆ ರಾಜ್ಯದಲ್ಲಿ ಒಟ್ಟು 5.67 ಕೋಟಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಬರೋಬ್ಬರಿ ₹2,361.75 ಕೋಟಿ ದಂಡ ಸಂಗ್ರಹಿಸಲಾಗಿದೆ. ಈ ಅಂಕಿ-ಅಂಶಗಳು ರಾಜ್ಯದ ರಸ್ತೆಗಳಲ್ಲಿ ನಿಯಮ ಪಾಲನೆಯ ಸವಾಲು ಎಷ್ಟು ದೊಡ್ಡದಾಗಿದೆ ಎಂಬುದನ್ನು ತೋರಿಸುತ್ತವೆ.
2024ರಲ್ಲಿ ಗರಿಷ್ಠ ಪ್ರಕರಣಗಳ ದಾಖಲು
ವರ್ಷವಾರು ಪ್ರಕರಣಗಳನ್ನು ಗಮನಿಸಿದರೆ, 2023ರಲ್ಲಿ 1.27 ಕೋಟಿ ಪ್ರಕರಣಗಳು ದಾಖಲಾಗಿದ್ದರೆ, 2024ರಲ್ಲಿ ಈ ಸಂಖ್ಯೆ 1.61 ಕೋಟಿಗೆ ಏರಿಕೆಯಾಗಿದೆ. 2025ರಲ್ಲಿ 1.60 ಕೋಟಿ ಪ್ರಕರಣಗಳು ದಾಖಲಾಗಿವೆ. 2026ರಲ್ಲಿ ಇದುವರೆಗೆ 1.17 ಕೋಟಿ ಪ್ರಕರಣಗಳು ದಾಖಲಾಗಿವೆ.
ದಂಡ ಸಂಗ್ರಹದಲ್ಲೂ ವರ್ಷದಿಂದ ವರ್ಷಕ್ಕೆ ದೊಡ್ಡ ಮೊತ್ತ ದಾಖಲಾಗಿದೆ. 2023ರಲ್ಲಿ ₹684.76 ಕೋಟಿ, 2024ರಲ್ಲಿ ₹915.95 ಕೋಟಿ ದಂಡ ಸಂಗ್ರಹವಾಗಿದೆ. 2025 ಮತ್ತು 2026ರ ಅಂಕಿ-ಅಂಶಗಳಲ್ಲೂ ಗಮನಾರ್ಹ ಮೊತ್ತ ದಾಖಲಾಗಿದೆ.
ನಿಯಮ ಉಲ್ಲಂಘನೆಗೆ ಕಠಿಣ ಕಾನೂನು ಕ್ರಮ
ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಅಧಿನಿಯಮದ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುತ್ತಿದೆ. ನಿಯಮ ಉಲ್ಲಂಘನೆ ಪುನರಾವರ್ತನೆಯಾಗದಂತೆ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಇದರ ಜತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಆಟೋರಿಕ್ಷಾ ಮತ್ತು ಕ್ಯಾಬ್ ಚಾಲಕರು, ಕೆಎಸ್ಆರ್ಟಿಸಿ, ಖಾಸಗಿ ಹಾಗೂ ಶಾಲಾ ಬಸ್ ಚಾಲಕರು ಸೇರಿದಂತೆ ವಿವಿಧ ವರ್ಗದ ವಾಹನ ಚಾಲಕರಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ.
ಸಾಮಾಜಿಕ ಜಾಲತಾಣವೂ ಜಾಗೃತಿಯ ವೇದಿಕೆ
ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ಮೂಲಕವೂ ಸಂಚಾರ ನಿಯಮ ಪಾಲನೆಯ ಮಹತ್ವವನ್ನು ಜನರಿಗೆ ತಲುಪಿಸಲಾಗುತ್ತಿದೆ. ನಿಯಮ ಉಲ್ಲಂಘನೆಯಿಂದ ಉಂಟಾಗುವ ಅಪಾಯಗಳ ಕುರಿತು ಪೋಸ್ಟರ್ಗಳು ಹಾಗೂ ಜಾಗೃತಿ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಗೃಹ ಇಲಾಖೆ ಮಾಹಿತಿ ನೀಡಿದೆ.
ದಂಡದ ಹಣ ಎಲ್ಲಿ ಹೋಗುತ್ತದೆ?
ಸಂಚಾರ ನಿಯಮ ಉಲ್ಲಂಘನೆಯಿಂದ ಸಂಗ್ರಹವಾಗುವ ದಂಡದ ಮೊತ್ತ ಸರ್ಕಾರದ ಸಂಬಂಧಿತ ಲೆಕ್ಕ ಶೀರ್ಷಿಕೆಗೆ ಜಮೆಯಾಗುತ್ತದೆ. ಸಂಚಾರ ಪೊಲೀಸ್ ವಿಭಾಗಕ್ಕೆ ಈ ಹಣವನ್ನು ಸ್ವತಂತ್ರವಾಗಿ ಬಳಸುವ ಅಧಿಕಾರವಿಲ್ಲ. ಸರ್ಕಾರದ ಆದೇಶದಂತೆ ಸಂಗ್ರಹವಾಗುವ ದಂಡದ ಶೇ.50ರಷ್ಟು ಅನುದಾನವನ್ನು ರಸ್ತೆ ಸುರಕ್ಷತಾ ಕಾರ್ಯಗಳಿಗೆ ಬಳಸಲಾಗುತ್ತಿದೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ4 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ5 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ4 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ5 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ


