Connect with us

ಲೈಫ್ ಸ್ಟೈಲ್

ಪ್ರವಾಸ ಕಥನ | ಗೋಕಾಕ್ ನಲ್ಲೊಂದು ಸುತ್ತು..!

Published

on

Õಪ್ರವಾಸ ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಮಗುವಿನಿಂದ ಹಿಡಿದು ಮುದುಕರವರೆಗೆ ಎಲ್ಲರೂ ಪ್ರವಾಸವನ್ನು ಆನಂದಿಸುವವರೇ ಹೆಚ್ಚು. ಅದರಲ್ಲೂ ನಾನು ಒಬ್ಳು ಪ್ರವಾಸ ಪ್ರೇಮಿ. ಪ್ರವಾಸ ಕಥನಗಳೆಂದರೆ ಅಚ್ಚುಮೆಚ್ಚು. ಹಾಗಂತ ನಾ ಏನು ಹೆಚ್ಚು ಪ್ರವಾಸ ಮಾಡಿಲ್ಲ. ನನಗೆ ಪ್ರಕೃತಿಯ ಸೊಬಗು ಹಾಗೂ ಹಳ್ಳಿಯ ಸೊಬಗನ್ನು ಸಂಪೂರ್ಣವಾಗಿ ಅನುಭವಿಸ್ಬೇಕು ಎಂಬ ಮಹಾದಾಸೆ. ನಾ ಹೋಗುವ ಪ್ರವಾಸಕ್ಕೆ ಇಂಥದ್ದೇ ಜಾಗವಾಗಬೇಕು ಎಂಬ ಅಭಿಲಾಶೆ ಏನಿಲ್ಲ. ಬಂಧುಗಳ ಮನೆಗಳನ್ನ ಹೊರತು ಪಡಿಸಿ ಕಾಡಿನ ಬುಡಕಟ್ಟು ಜನಾಂಗ, ಶೋಷಿತರ, ದಲಿತರ ಮನೆಗಳಿಗೆ ಹೋಗಿ ಅವರ ಜೀವನವನ್ನು ಗಮನಿಸುವುದರಲ್ಲಿ ನನಗದು ಹೆಚ್ಚು ಖುಷಿ.

ಆದರೆ ನಗರ ವಾಸಿಯಾದ ನನಗೆ ಹಳ್ಳಿಯ ಸೊಬಗನಾಗಲಿ ಪ್ರಕೃತಿಯ ಸೊಬಗನ್ನಾಗಲಿ ಅನುಭವಿಸುವುದಕ್ಕೆ ಅವಕಾಶಗಳು ದೊರೆಯಲೇ ಇಲ್ಲ. ಪುಸ್ತಕ ಪ್ರೇಮಿಯಾದ ನನಗೆ ಹಳ್ಳಿಯ ವಾತಾವರಣ, ಬಡವರ ಬವಣೆ, ಶೋಷಿತರ ಜೀವನದ ಕುರಿತ ಕಲ್ಪನೆಗಳು ನನಗಿವೆ. ಹೀಗಿರುವಾಗ ನಾನು ವಿಮಾನದಲ್ಲಿ ಹಾರುವುದು ಬಿಡಿ ಅದನ್ನ ಹತ್ತಿರದಿಂದಲೂ ಒಮ್ಮೆಯೂ ನೋಡಿಲ್ಲ; ವೋಲ್ವೋ ಬಸ್ಸಲ್ಲೂ ಕೂತಿಲ್ಲ. ಸ್ಲೀಪಿಂಗ್ ಕೋಚ್ ಬಸ್ಸಿನ ಮೆತ್ತನೆ ಹಾಸಿಗೆಯಲ್ಲೂ ನಿದ್ರಾ ಸುಖ ಅನುಭವಿಸಿಲ್ಲ. ಆದರೆ ಸಾಕಷ್ಟು ಬಾರಿ ರೈಲು ಪ್ರಯಾಣ ಮಾಡಿದ್ದೇನೆ ಅಷ್ಟೇ.

ಅಂತದ್ದೇ ಒಂದು ರೈಲು ಪ್ರಯಾಣ ಮತ್ತೊಮ್ಮೆ ದೊರಕಿತು. ಇಲ್ಲಿಯವರೆಗೂ ಅಪ್ಪ ಅಮ್ಮನನ್ನು ಬಿಟ್ಟು ದೂರದೂರಿಗೆ ಎಲ್ಲಿಯೂ ಹೋಗದ ನಾನು ಮೊದಲ ಬಾರಿಗೆ ಸ್ನೇಹಿತರೊಡನೆ ಕೂಡಿ ಗೋಕಾಕ್ ಕಡೆ ಪ್ರವಾಸ ಹೋಗುತ್ತಿರುವುದು ಮನಸಿಗೆ ಹೆಚ್ಚು ಖುಷಿ ನೀಡಿತು. ಕಾಯುತ್ತಿದ್ದ ಆ ದಿನವೂ ಬಂತು. ಅಪ್ಪ ಅಮ್ಮನಿಗೆ ಟಾಟಾ ಹೇಳಿ ಆಶೀರ್ವಾದವನ್ನು ಪಡೆದುಕೊಂಡು ಮಧ್ಯರಾತ್ರಿ 1.30ಕ್ಕೆ 7 ಜನರ ತಂಡ ಮನೆ ಬಿಟ್ಟೆವೂ. ಅದರಲ್ಲಿ ಶರತ್,ಶಿವರಾಜ್, ಚಂದ್ರಶೇಖರ್ ದೊಡ್ಡಮನಿ, ಗುರುಸ್ವಾಮಿ, ಗೌತಮಿ ಸೇರಿದಂತೆ ಇವರೆಲ್ಲಾ ನನ್ನ ಸೀನಿಯರ್ಸ್ ಆಗಿದ್ದರು. ವಿಶೇಷ ಅಂದ್ರೆ ನಮ್ಮೊಂದಿಗೆ ನನ್ನ ತಂಗಿ ಯುಗಶ್ರೀಯು ಬಂದಿದ್ದಳು. ಟ್ರೈನ್ ತುಂಬಾ ರೆಷ್ ಆಗಿದ್ದರಿಂದ ನಮಗೆ ಕುಳಿತುಕೊಳ್ಳಲು ಸ್ಥಳ ಸಿಗಲಿಲ್ಲ. ಕೊನೆಯ ಭೋಗಿಯಲ್ಲಿ ಸ್ಥಳ ಸಿಕ್ಕಿತು. ಇನ್ನೆನ್ನೂ ನಿದ್ದೆ ಜೋಂಪಿಗೆ ಹೋದ ನಮಗೆ ಯಾರೋ ಬಂದು ಹೊಡೆದು ಎಬ್ಬಿಸಿದ ಹಾಗಾಯ್ತು. ಕಣ್ಣು ಬಿಟ್ಟು ನೋಡಿದರೆ ನಾವು ಹುಬ್ಬಳ್ಳಿಯಲ್ಲಿ ಇದ್ದೆವು.

ರೈಲು ತನ್ನ ಕೊನೆ ಭೋಗಿಯನ್ನ ಕಳಚುವುದರ ಪರಿಣಾಮ ಆ ಭೋಗಿಯನ್ನು ಬಿಟ್ಟು ಬೇರೆಯ ಕಡೆ ಹೋಗಬೇಕಾಯ್ತು ಆದರೆ ಕುಳಿತುಕೊಳ್ಳಲು ಸ್ಥಳ ಸಿಗದೆ ಹೇಗೋ ನಾವು ಮುಂಜಾನೆ 10 ಗಂಟೆಗೆ ಗೋಕಾಕ್ ಸ್ಥಳಕ್ಕೆ ಬಂದಿಳಿದ್ದೆವು. ಕರ್ನಾಟಕದ ಹಲವೆಡೆ ಓಡಾಡಿದ್ದರೂ ಬೆಳಗಾವಿ ಜಿಲ್ಲೆಗೆ ಬಂದದ್ದು ಇದೇ ಮೊದಲು. ಬೆಳಗಾವಿ ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ನಗರವಾದ ಗೋಕಾಕ್ ಪಶ್ಚಿಮ ಘಟ್ಟಗಳಿಂದ ಸುತ್ತುವರೆದಿದೆ. ಹಚ್ಚ ಹಸಿರು ವಾತಾವರಣ ಹಾಗೂ ಏಸಿಯ ಹಾಗೆ ಸದಾ ಕೂಲ್ ಅಗಿರುವಂತಹ ಸ್ಥಳಕ್ಕೆ ನಮ್ಮನ್ನ ನಾವು ಮೈಗೂಡಿಸಿಕೊಂಡು ನಡೆಯಲಾರಂಭಿಸಿದೇವು.ಗೋಕಾಕ್‍ದಲ್ಲಿಯೂ ಹಳದಿ ಕೆಂಪು ತೋರಣಗಳು, ಬಾವುಟಗಳು ನಮಗೆ ಸ್ವಾಗತ ಕೋರಿದವು.

ತುಂಬಾ ಹಸಿದಿದ್ದ ನಾವು ಅಲ್ಲೇ ಒಂದು ಅಂಗಡಿಯಲ್ಲಿ ಮೆಣಸಿನಕಾಯಿ ಬಜ್ಜಿ, ಪೂರಿ, ಪಲಾವ್ ತಿಂದು ಟೀ ಕುಡಿದು ಗೋಕಾಕ್ ಅರಬ್ಬಿಯ ಕಡೆಗೆ ನಡೆದೆವು. ನಮ್ಮ ರಾಜ್ಯ ಜಲಪಾತಗಳ ತವರೂರು. ಸಿರಿ ಸೌಂದರ್ಯದ ರುದ್ರರಮಣೀಯ ಖಣಜಗಳು ಎಂದರೆ ಇಲ್ಲಿನ ಫಾಲ್ಸ್. ನಿಸರ್ಗ ಪ್ರಿಯರ ಆಕರ್ಷಣಿಯ ಕೇಂದ್ರ ಬಿಂದುವೂ ಹೌದು. ಪ್ರಕೃತಿಯ ಸುಂದರ ತಾಣಗಳಲ್ಲಿ ಒಂದಾದ ಹಾಗೂ ಮಳೆಗಾಲದಲ್ಲಿ ಮೈದುಂಬಿ ಹರಿಯುವುದು ಗೋಕಾಕ್ ಜಲಪಾತದ ವಿಶೇಷ. ಮಳೆಗಾಲ ಇದೀಗ ಪ್ರಾರಂಭವಾದರಿಂದ ನೀರು ತೀರಾ ಕಡಿಮೆ ಇತ್ತು.

ಗೋಕಾಕ್ ಜಲಪಾತವನ್ನು ಪ್ರವೇಶಿಸುತ್ತಿದ್ದಾಗೆ ನಮ್ಮ ಕಣ್ಣಿಗೆ ಕಂಡದ್ದು ಹಳೆಕಾಲದ ಕಾಟನ್ ಮಿಲ್ ಅದು ನೋಡುವುದ್ದಕ್ಕೆ ಡಿಟೋ ಇಂಡಿಯನ್ ಆಕ್ಸ್‍ಫಾರ್ಡ್ ವಿಶ್ವವಿದ್ಯಾನಿಲಯದ ತರನೆ ಇತ್ತು. ಅಲ್ಲಿಂದ ಕೆಳಗಿಳಿದು ಹೋದರೆ ನಮ್ಮ ಕಣ್ಣಿಗೆ ಕಾಣಸಿಗುವುದು ತೂಗು ಸೇತುವೆ.

ಅಪರೂಪದ ತೂಗು ಸೇತುವೆ

ಪೂರ್ವಭಿಮುಖವಾಗಿ ಹರಿಯುವ ಘಟಪ್ರಭೆಗೆ, ದಕ್ಷಿಣೋತ್ತರವಾಗಿ ತಂತಿಯ ತೂಗು ಸೇತುವೆಯನ್ನು ನಿರ್ಮಿಸಲಾಗಿದೆ. ಅಪರೂಪದ ತೂಗುವ ತಂತಿಯ ಸೇತುವೆ ಕರ್ನಾಟಕದಲ್ಲಿ ಬೇರಾವ ನದಿಗೂ ನಿರ್ಮಿಸಿಲ್ಲ. ಇದರ ಮೇಲೆ ನಿಂತು ನದಿಯ ಅಂದವನ್ನು ವೀಕ್ಷಿಸುವುದೇ ಒಂದು ಭಾಗ್ಯ. ಈ ಸೇತುವೆಯ ಮೇಲೆ ನಡೆದಾಡುವುದರೊಂದಿಗೆ ಪುಳಕಗೊಳ್ಳುವ ಅವಕಾಶ ಇರುವುದು ಗೋಕಾಕ್ ಜಲಪಾತದಲ್ಲಿ ಮಾತ್ರ.

1 ಮೀ ಅಗಲ, 210ಮೀ (659 ಅಡಿ) ಉದ್ದವಿರುವ ಅಪರೂಪದ ಈ ತಂತಿ ಸೇತುವೆ ಅದ್ಭುತವಾಗಿದೆ. ನದಿಯ ಒಂದು ದಂಡೆಯಿಂದ ಇನ್ನೊಂದು ದಂಡೆಗೆ ಕಾಲ್ನಡಿಗೆಯಲ್ಲಿ ತಲುಪಲು ಈ ತೂಗುಸೇತುವೆ ಸರಳ ದಾರಿಯಾಗಿದೆ. ನದಿಯ ಕಲ್ಲುಬಂಡೆ ಹಾಸಿಗೆಯಿಂದ 14ಮೀ (46 ಅಡಿ) ಎತ್ತರದಲ್ಲಿ ಈ ತೂಗು ಸೇತುವೆ ನಿರ್ಮಿಸಲಾಗಿದ್ದು, ನದಿಯಲ್ಲಿ ಭರ್ತಿ ನೀರು ಬಂದಾಗ ಸೇತುವೆ ಮೇಲಿಂದ ಅಡ್ಡಾಡುವುದೇ ಒಂದು ರಸಘಳಿಗೆ. ಇದರ ಮೇಲೆ ಚಲಿಸುವಾಗ ಹೊಸಬರಾದ ನಮಗೆ ಭಯವಾದದ್ದು ಸಹಜ. ಕೆಳಗೆ ರಭಸದಿಂದ ಹರಿಯುವ ಕತ್ತಿ(ನೀರು ಅತ್ಯಂತ ರಭಸವಾಗಿ ಹರಿಯುವುದರಿಂದ ಕತ್ತಿ ನದಿಯೆಂಬ ಹೆಸರು ಬಂದಿದೆ) ನದಿಯ ಮೇಲಿನ ನಾವೆಯಲ್ಲಿ ಕುಳಿತು ಪ್ರಯಾಣಿಸಿದ ಅನುಭವವಾಗುತ್ತದೆ.

ಇಂತಹ ಸೇತುವೆ ಮೇಲೆ ನಡೆದಾಡುವುದೇ ಒಂದು ಥ್ರಿಲ್. ಇದರ ಮೇಲೆ ನಡೆದುಕೊಂಡು ಹೋಗುವಾಗ ವಾಯುದೇವನೂ ಕೂಡಾ ಒಂದು ಕ್ಷಣ ಎಂತಹ ಮನಸುಗಳಲ್ಲೂ ಭಯದ ವಾತವರಣವನ್ನು ಸೃಷ್ಟಿಸಿಬಿಡುತ್ತಾನೆ. ರಭಸವಾಗಿ ಗಾಳಿ ಬೀಸಿದರೆ ಸಾಕು ಆಯ ತಪ್ಪಿ ಎಲ್ಲಿ ನಾವೇ ಗಾಳಿಯೊಂದಿಗೆ ತೇಲಿಹೋಗುತ್ತೇವೆಯೋ ಎಂಬ ಭಯದಲ್ಲೊಮ್ಮೆ ಚಿಟಾರನೆ ಚಿರುವುಂತಹ ಘಳಿಗೆ ರಸದೌತಣವಾಗಿರುತ್ತದೆ. ಕತ್ತಿಹೊಳೆಯೆಂದೆ ಖ್ಯಾತಿಪಡೆದ ಘಟಪ್ರಭೆ ಬೆಳಗಾವಿ ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ನಗರವಾಗಿದ್ದು ಪಶ್ಚಿಮ ಘಟ್ಟಗಳಿಂದ ಸುತ್ತುವರೆದಿದೆ. ಘಟಪ್ರಭಾ ನದಿಗೆ ಕತ್ತಿಹೊಳೆ ಎಂದು ಕರೆಯುತ್ತಾರೆ. ತಾಮ್ರಪರ್ಣಿ ಮತ್ತು ಹಿರಣ್ಯಕೇಶಿ ನದಿಗಳು ಘಟಪ್ರಭೆಯನ್ನು ಸೇರುತ್ತವೆ. ಮಳೆಗಾಲದಲ್ಲಿ ಕಾಫಿ ಚಹಾ ವರ್ಣಕ್ಕೆ ತಿರುಗುತ್ತವೆ. ಶ್ವೇತವರ್ಣದಲ್ಲು ತಿಳಿಗೊಂಡು ಹಾಲಿನಂತೆ ನೊರೆ ನೊರೆಯಾಗಿ ಹರಿಯುತ್ತದೆ. ಇದರ ಸೊಬಗನ್ನು ನೋಡಲು ಕಣ್ಣೆರಡು ಸಾಲದು. ನೀರಿನ ರಭಸ, ಹಾಲ್ನೊರೆಯಂತಹ ಬಣ್ಣ, ಗಂಭೀರವಾದಂತಹ ಸದ್ದು, ಹತ್ತಿರದ ಸ್ಥಳಗಳಲ್ಲಿ ತಂಪಾದ ನೀರಿನ ಚಿಕ್ಕ ಚಿಕ್ಕ ಹನಿಗಳ ಸಿಂಚನ ಇವೆಲ್ಲವೂ ಸೇರಿ ನಮ್ಮ ಮನದಲ್ಲಿ ರೋಮಾಂಚನದೊಂದಿಗೆ ತಾಜತನದ ಅನುಭವವನ್ನು ನೀಡುತ್ತಿತ್ತು.

ಇದರ ಸುಂದರತೆ ಮತ್ತು ರಮಣೀಯತೆಯನ್ನು ಅತೀ ಸಮೀಪದಿಂದ ಸವಿಯುವಂತಹ ವಾತವರಣವಿದ್ದು, ಧಬಧಬ ಧರೆಗಿಳಿಯುವ ಭಯಂಕರ ಪ್ರವಾಹದಂತೆ ಘಟಪ್ರಭೆ 84 ಅಡಿ ಎತ್ತರದಿಂದ ಧುಮ್ಮಿಕ್ಕುವ ದೃಶ್ಯವನ್ನು ನೋಡಿಯೇ ಸವಿಯಬಹುದು. ಘಟಪ್ರಭೆ ಭಾರಿ ರಭಸದಿಂದ ಪ್ರಪಾತಕ್ಕೆ ಧುಮುಕುವಾಗ, ಸಿಡಿ ಮದ್ದು ಸಿಡಿದಂತೆ ನೀರು ಝಲ್ಲೆಂದು ಪುಟಿದೇಳುತ್ತದೆ. ಪ್ರಕೃತಿಯ ಆ ಅಗಾಧ ಸೌಂದರ್ಯವನ್ನು ಕಣ್ಣಿಂದ ಕಾಣಬೇಕು ಮತ್ತು ಇಂಪಾದ ಸದ್ದನ್ನು ಕಿವಿಂದ ಆಲಿಸಬೇಕು. ಪ್ರವಾಹದಂತೆ ಧುಮುಕುವ ಘಟಪ್ರಭೆ ನಂತರ ಮಂದಗಮನೆಯಾಗಿ ಮೆಲ್ಲನೆ ಚಲಿಸುವ ಈಕೆಯ ಸೌಂದರ್ಯ ನೋಡುವುದೇ ಸಂಭ್ರಮ.
ಭಾರತದ ನಯಾಗರ ಫಾಲ್ಸ್ ಎಂಬ ಹೆಗ್ಗಳಿಕೆ
ಘಟಪ್ರಭೆಯ ಸುತ್ತಲೂ ಎಲ್ಲಿ ನೋಡಿದರೂ ಹಚ್ಚ ಹಸಿರು. ಬೆಟ್ಟ ಗುಡ್ಡಗಳದ್ದೇ ಕಾರುಬಾರು.

ಇಲ್ಲಿಗೆ ಬರುವ ಪ್ರವಾಸಿಗರನ್ನು ಹಸಿರು ದೇವತೆ ಪ್ರೀತಿಸುವ ಬಗೆಯನ್ನು ಕಂಡು ಇಲ್ಲಿಂದ ಹೊರಡಲು ಮನಸ್ಸಾಗದಷ್ಟು ರಮಣೀಯತೆ ಇಲ್ಲಿದೆ. ನಿಸರ್ಗದ ಸಂಧರತೆಯನ್ನು ಸವಿಯುವುದರೊಂದಿಗೆ ಇಲ್ಲಿ ಐತಿಹಾಸಿಕ ಮಹಾಲಿಂಗೇಶ್ವರನ ದೇವಾಲಯವಿದೆ.
177 ಮೀಟರ್ (581 ಅಡಿ) ಅಗಲದ ಬಂಡೆಗಳಲ್ಲಿ ಮೇಲಿಂದ 52 ಮೀಟರ್ (171 ಅಡಿ) ಆಳದ ಕಂದಕಕ್ಕೆ ಘಟಪ್ರಭಾ ನದಿಯ ನೀರು ಧುಮ್ಮಿಕ್ಕುವುದು ಗೋಕಾಕ್ ಜಲಪಾತದ ವೈಶಿಷ್ಟ್ಯ. ವಿಶಾಲ ಬಂಡೆಗಲ್ಲಿನ ಮೇಲಿಂದ ನೀರು ಧುಮ್ಮಿಕ್ಕುವುದರಿಂದ ಈ ಜಲಪಾತವನ್ನು “ಮಿನಿ ನಯಾಗರಾ” ಎಂದು ಕರೆಯಲಾಗುತ್ತದೆ.

ಮೊದಲ ಬಾರಿಗೆ ವಿದ್ಯುತ್ ಉತ್ಪಾದಿಸಿದ ಕೇಂದ್ರ
ನೀರು ಧುಮ್ಮಿಕ್ಕುವ ಕಂದಕದ ಬಳಿ ಇರುವ ವಿದ್ಯುತ್ ಉತ್ಪಾದನೆ ಕೇಂದ್ರವನ್ನು ಬ್ರಿಟೀಷ್ ಕಾಲದಲ್ಲೇ ನಿರ್ಮಿಸಲಾಗಿದೆ. 1887ರಲ್ಲಿ ಕಾರ್ಯರಂಭ ಮಾಡಿದ್ದು, ರಾಜ್ಯದಲ್ಲೇ ಮೊದಲ ಬಾರಿ ವಿದ್ಯುತ್ ಉತ್ಪಾದಿಸಿದ ಕೇಂದ್ರ ಎಂಬ ಹೆಗ್ಗಳಿಕೆ ಪಡೆದಿದೆ. ತದನಂತರ ಬೆಂಗಳೂರಿನಲ್ಲಿ ಆರಂಭಿಸಲಾಯಿತು.ಮಹಾಲಿಂಗೇಶ್ವರ ದೇವಾಸ್ಥಾನ ಇನ್ನೂ ಈ ಸ್ಥಳದ ಕುತೂಹಲಕಾರಿ ಅಂಶವೆಂದರೆ ಚಾಲುಕ್ಯರ ಕಾಲಕ್ಕೆ ಸೇರಿದ ಸ್ಮಾರಕಗಳು ಇಲ್ಲಿನ ಕಲ್ಲಿನ ಕಣಿವೆಯ ಎರಡೂ ದಂಡೆಗಳಲ್ಲಿ ದೊರೆತಿರುವುದು. ಈ ಸ್ಥಳದ ಮತ್ತೊಂದು ಆಕರ್ಷಣೆ ಎಂದರೆ ಚಾಲುಕ್ಯ ವಾಸ್ತುಶೈಲಿಯಲ್ಲಿ ನಿರ್ಮಿಸಲಾದ ಮಹಾಲಿಂಗೇಶ್ವರನ ದೇವಾಸ್ಥಾನ.

ಟ್ರೆಕ್ಕಿಂಗ್ ಗೆ ಹೇಳಿಮಾಡಿಸಿದ ಸ್ಥಳ

ಗೋಕಾಕ್ ಫಾಲ್ಸ್ ಧುಮ್ಮಿಕ್ಕುವುದ್ದನ್ನು ಕೆಳಗಿನಿಂದ ನೋಡಬೇಕೆಂದರೆ ಸುಮಾರು 2 ರಿಂದ 3 ಕಿ.ಮೀ ಕೆಳಗೆ ನಡೆದುಹೋಗಬೇಕು. ಕರ್ನಾಟಕದ ಕರಾವಳಿ ಮತ್ತು ಮಲೆನಾಡಲ್ಲಿ ಧೋ ಧೋ ಎಂದು ಮಳೆಯಾಗಿ ಒಂದು ಹಂತಕ್ಕೆ ಬಂದು ನಿಂತ ಮೇಲೆ ಟ್ರೆಕ್ಕಿಂಗ್‍ಗೆ ಅಣಿಯಾಗುವಂತಹ ಸಾಹಸಿಗರಿಗೆ ಗೋಕಾಕ್ ಜಲಪಾತ ಹೇಳಿಮಾಡಿಸಿದಂತಹ ಸ್ಥಳವಾಗಿದೆ. ಇಲ್ಲಿ ನಡೆಯುತ್ತ ಹೋದರೆ ಡಿಟೋ 6-5=2 ಮೂವೀಯಲ್ಲಿ ಇರುವಂತಹ ಟ್ರೆಕ್ಕಿಂಗ್‍ನ ಅನುಭವ ನೀಡುತ್ತದೆ. ಆದರೆ ಅಲ್ಲಿ ದೆವ್ವ ಇರುತ್ತೆ ಇಲ್ಲಿ ನಾವೇ ದೆವ್ವಗಳಾಗಿರುತ್ತವೆ. ದೊಡ್ಡ ದೊಡ್ಡ ಬಂಡೆಗಳು, ಜಾರುವಂತಹ ಕಲ್ಲುಗಳು, ತೊರೆಗಳು, ಗಿಡ ಮರಗಳು, ನಮ್ಮ ಧ್ವನಿ ನಮಗೆ ಪಿಸುಗುಡುವಂತಹ ನಿಶಬ್ಧ ವಾತವರಣ ಹೀಗೆ ಇವೆಲ್ಲಾ ಸೇರಿ ಎಂತಹವರಿಗೂ ಪ್ರಕೃತಿ ಮೇಲೆ ಲವ್ ಆಗಿಬಿಡುತ್ತದೆ.

ಗೋಕಾಕ್ ಸ್ಪೇಷಲ್ ಕರದಂಟು

ಗೋಕಾಕ್ ಬಗ್ಗೆ ಇಷ್ಟೇಲ್ಲಾ ಹೇಳಿ ಕರದಂಟನ್ನು ಮರೆಯಲು ಸಾಧ್ಯವೇ? ಬೆಳಗಾವಿಯತ್ತ ಪ್ರಯಾಣ ಬೆಳೆಸಿದರೆ ಅಲ್ಲಿಯ ಕುಂದ ಹಾಗೂ ಗೋಕಾಕ್‍ನ ಕರದಂಟು ಅಥವಾ ಅಂಟುಹುಂಡೆಯನ್ನು ಸವಿಯದೆ ಬಂದವರೆ ಇಲ್ಲ. ಅಂಟು ಹಾಕಿ ತಯಾರಿಸುವ ಈ ಉಂಡೆಯನ್ನು ಕರ(ಕೈ)ದಲ್ಲಿ ಉಂಡೆ ಕಟ್ಟುವುದರಿಂದ ಈ ಹೆಸರು ಬಂದಿರಲೂಬಹುದು ಅಲ್ವಾ? ಅದೇನೆ ಇರಲಿ, ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಕೊಬ್ಬರಿ ತುರಿ, ಗಸಗಸೆ, ಅಂಟು, ಬೆಲ್ಲ, ತುಪ್ಪ ಹೀಗೆ ಇವೆಲ್ಲವನ್ನು ಹಾಕಿ ಮಾಡಿದಂತಹ ಕರದಂಟು ಆರೋಗ್ಯಕರವಾದಂತಹ ತಿನಿಸಾಗಿದೆ. ಈ ಗಿರಮಿಟ್ ಜತೆ ಗೋಕಾಕ್‍ನ ಕರದಂಟನ್ನು ಮೆಲ್ಲುತ್ತ ಭೋರ್ಗರೆಯುವ ಜಲಪಾತ ನೋಡುತ್ತಿದ್ದಾರೆ ನಮ್ಮ ಕಣ್ಣಿಗೆ ಹಬ್ಬವಾಗುವುದರೊಂದಿಗೆ ಬಾಯಿಗೆ ಸಿಹಿಯೂ ಆಗುವುದರಲ್ಲಿ ಸಂಶಯವೇ ಇಲ್ಲ!

ಪ್ರವಾಸಿಗರ ತಾಣ

ನೋಡುಗರ ಆಕರ್ಷಣೀಯ ಕೇಂದ್ರ ಬಿಂದುವಾದ ಗೋಕಾಕ್ ಫಾಲ್ಸ್ ಅನ್ನು ನೋಡಲು ಪಕ್ಕದ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ದೂರದೂರದ ಊರಿಂದ ಪ್ರವಾಸಿಗರು ಈ ಸೌಂದರ್ಯವನ್ನು ಸವಿಯಲು ಬರುತ್ತಾರೆ. ಸೆಲ್ಫೀ, ಫೋಟೋ ತೆಗೆಸಿಕೊಳ್ಳುವುದರೊಂದಿಗೆ ಬೆಟ್ಟದ ಇಕ್ಕೆಲ್ಲಗಳಲ್ಲಿ ಜೋಡಿಸಿರುವ ತೂಗು ಸೇತುವೆಯಲ್ಲಿ ಕೇಕೆ ಹೊಡೆದು ಕುಣಿದು ಕುಪ್ಪಳಿಸುತ್ತಾರೆ. ಒಟ್ಟಾರೆಯಾಗಿ ಈ ಸಮಯವೂ ಪ್ರವಾಸಿಗರಿಗೆ ಪ್ರವಾಸ ಮಾಡಲು ಹೇಳಿಮಾಡಿಸಿದಂತಹ ಸ್ಥಳವಾಗಿದೆ.

ಮಾರ್ಗ

ಗೋಕಾಕ್ ಜಲಪಾತ ಬೆಳಗಾವಿಯಿಂದ 58 ಕಿ.ಮೀ. ಹಾಗೂ ಗೋಕಾಕ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿದೆ. ಈ ಜಲಪಾತ ಕೊಲ್ಲಾಪುರದಿಂದ 100 ಕಿ.ಮೀ., ಸಾಂಗ್ಲಿಯಿಂದ 66 ಕಿ.ಮೀ ಪಣಜಿಯಿಂದ 140 ಕಿ.ಮೀ ದೂರದಲ್ಲಿದೆ. ಗೋಕಾಕ್ ರೋಡ್ ಮತ್ತು ಘಟಪ್ರಭಾ ರೈಲ್ವೆ ನಿಲ್ದಾಣಗಳು ಜಲಪಾತದಿಂದ 10 ಕಿ.ಮೀ ಅಂತರದಲ್ಲಿದೆ. ಬೆಳಗಾವಿ, ಗೋಕಾಕ್ ಮತ್ತು ನಗರ ಪ್ರದೇಶಗಳಿಂದ ಜಲಪಾತಕ್ಕೆ ಸಾರಿಗೆ ಸಂಸ್ಥೆಯ ಬಸ್ ಸೌಕರ್ಯ ಇದೆ. ಖಾಸಾಗಿ ವಾಹನಗಳ ಮೂಲಕವೂ ಗೋಕಾಕ್ ಜಲಪಾತದ ಸ್ಥಳ ತಲುಪಬಹುದು.

ಪ್ರೀತಿ.ಟಿ.ಎಸ್
ಪತ್ರಿಕೋದ್ಯಮ ವಿದ್ಯಾರ್ಥಿನಿ
3ನೇ ಸೆಮಿಸ್ಟರ್
ದಾವಣಗೆರೆ ವಿಶ್ವವಿದ್ಯಾನಿಲಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

Published

on

  • ರುದ್ರಪ್ಪ ಹನಗವಾಡಿ

ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು.

ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ ನಿಯೋಜಿಸಿದ್ದರೋ ಅದನ್ನು ಬಿಟ್ಟು ಇತರೆ ಸಾಮಾನ್ಯ ವಿಷಯಗಳಲ್ಲಿ ಅವರಿಗೆ ಸಂಬಂಧಿಸಿರುವುದಿಲ್ಲ. ಹಾಗಾಗಿ ನಾನು ನನ್ನ ಕೆಲಸಗಳನ್ನು ಬಿಟ್ಟು ತಾಲ್ಲೂಕು ಕಛೇರಿ ಕೆಲಸಗಳಲ್ಲಿ ತೊಡಗಿಕೊಂಡಿರಲಿಲ್ಲ. ಆದರೆ ಇದೇ ಸಮಯದಲ್ಲಿ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಜಾತ್ರೆಯ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ವಿಶೇಷ ಸಭೆ ನಡೆಸಿ ಅಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯ ಆಚರಣೆಯನ್ನು ತಡೆಯಲು ಸೂಚನೆ ನೀಡಿತ್ತು.

ಬೆತ್ತಲೆಸೇವೆಯ ಈ ಅನಾಗರಿಕ ಆಚರಣೆಯ ಬಗ್ಗೆ ಪ್ರೊ. ಬಿ. ಕೃಷ್ಣಪ್ಪನವರು, ನಾನು ಸೊರಬಕ್ಕೆ ಬರುವ ಒಂದು ವರ್ಷ ಮುಂಚಿನಿAದ ಬೆತ್ತಲೆ ಸೇವೆಯ ಆಚರಣೆ ಒಂದು ಅನಾಗರಿಕ ಆಚರಣೆ ಎನ್ನುವ ಬಗ್ಗೆ ಅನೇಕ ಲೇಖನಗಳನ್ನು ಬರೆದು ಇದನ್ನು ತಡೆಗಟ್ಟಬೇಕೆಂದು ಅಂದಿನ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವ ಪತ್ರ ಬರೆದು ಈ ವಿಷಯಗಳೆಲ್ಲಾ ದಿನಪತ್ರಿಕೆ ಮತ್ತು ಆಗ ಜಾಣಜಾಣೆಯರ ಪತ್ರಿಕೆ ಎಂದು ಹೇಳಿ ತರುತ್ತಿದ್ದ ಲಂಕೇಶ್ ಪತ್ರಿಕೆಯಲ್ಲೂ ಪ್ರಕಟಗೊಂಡಿತ್ತು.

1986ರ ಜಾತ್ರೆ ಸಮಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ತಂಗರಾಜ್ ಅವರು ಕಂದಾಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಭೆ ನಡೆಸಿ ಬೆತ್ತಲೆ ಹೋಗುವ ಜನರನ್ನು ಜಾಗೃತಗೊಳಿಸಿ ತಡೆಯಬೇಕೆಂದು ಜಿಲ್ಲಾಡಳಿತ ತೀರ್ಮಾನಿಸಿತ್ತು. ಕೃಷ್ಣಪ್ಪನವರ ಡಿಎಸ್‌ಎಸ್ ಸಂಘಟನೆಯ ಹೋರಾಟದ ಜೊತೆಗೆ ಶಿವಮೊಗ್ಗ-ಸಾಗರ-ಸೊರಬದಲ್ಲಿನ ಎಲ್ಲ ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘ, ಪ್ರಗತಿಪರ ಮಹಿಳಾ ಲೇಖಕಿಯರ ಸಂಘಟನೆಗಳು ಕೈಜೋಡಿಸಿದ್ದವು. ಭದ್ರಾವತಿಯಿಂದ ಪ್ರೊ. ಚಂದ್ರಶೇಖರಯ್ಯ, ಡಿಎಸ್‌ಎಸ್ ಚಂದ್ರು, ತೋರಣಗಟ್ಟಿ ಚಂದ್ರಶೇಖರ್, ಬಿದರಳ್ಳಿ ನರಸಿಂಹಮೂರ್ತಿ, ಇನ್ನೂ ಅನೇಕ ಪ್ರಗತಿಪರ ಹೋರಾಟಗಾರರು ಭಾಗವಹಿಸಿದ್ದರು.

ನಾನು ಸರ್ಕಾರದ ಭಾಗವಾಗಿ ಸಂಜೆ ಹಳ್ಳಿಗಳಿಗೆ ಕರಪತ್ರಗಳನ್ನು ಹಂಚಿ, ‘ಯಾವ ದೇವರಿಗೂ ಬೆತ್ತಲೆ ಪೂಜೆ ಸಲ್ಲಿಸುವುದು ಇಷ್ಟವಾಗದು. ಇದೆಲ್ಲ ಹಿಂದುಳಿದವರನ್ನೂ, ದಲಿತರನ್ನೂ ಶೋಷಣೆ ಮಾಡುವ ಕ್ರೂರ ಪದ್ಧತಿ, ಇವನ್ನು ನಿವಾರಣೆಮಾಡಬೇಕೆಂದು ಭಾಷಣ ಮಾಡುತ್ತಾ ತಾಲ್ಲೂಕು ಕಛೇರಿಯ ಸಿಬ್ಬಂದಿಯನ್ನು ಹಲವು ತಂಡಗಳಾಗಿ ಮಾಡಿಕೊಂಡು ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದೆವು. ಸರ್ಕಾರದ ನಿರ್ದೇಶನವಿದ್ದುದರ ಜೊತೆಗೆ ಈ ವಿಷಯಗಳು ನನಗೆ ಇಷ್ಟವಾದ ಕೆಲಸವಾಗಿದ್ದರಿಂದ ಹೆಚ್ಚಿನ ಆಸಕ್ತಿಯಿಂದ ಬೆತ್ತಲೆ ಸೇವೆ ವಿರುದ್ಧ ಪ್ರಚಾರ ಮಾಡುತ್ತಿದ್ದೆವು. ಹೀಗೆ ಎಲ್ಲಾ ಕಡೆ ಪ್ರಚಾರ ಮಾಡಿದ ಮೇಲೆ ಪ್ರೊ.ಬಿ.ಕೆ ಮತ್ತು ಶಿವಪ್ಪ ಮಾಸ್ತರು ಇನ್ನು ಕೆಲವು ಗೆಳೆಯರು ನಮ್ಮಲ್ಲಿ ಊಟ ಉಪಚಾರ ಮಾಡಿ ಹೋಗುತ್ತಿದ್ದರು. ಇದರ ಸಂಪೂರ್ಣ ಘಟನೆಯ ವಿವರವನ್ನು ಈಗಾಗಲೇ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ 2010ರಲ್ಲಿ ಪ್ರಕಟಿಸಿರುವ ‘ಬಯಲು.. ಬೆತ್ತಲೆ..ಚಂದ್ರಗುತ್ತಿ’ ಎಂಬ ಪುಸ್ತಕದಲ್ಲಿನ ಮಾಹಿತಿಯನ್ನು ಇಲ್ಲಿ ಮುಂದುವರೆಸಲಾಗಿದೆ.

ಬೆತ್ತಲೆ ಸೇವೆ ನಡೆಯುವ ಒಂದು ವಾರ ಮುಂಚಿತವಾಗಿಯೇ ಕೃಷ್ಣಪ್ಪನವರ ನೇತೃತ್ವದಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳೊಡನೆ ಸಂಜೆ ಹಳ್ಳಿಗಳಿಗೆ ಹೋಗಿ ಭಾಷಣಗಳ ಮುಖಾಂತರ ಬೆತ್ತಲೆ ಸೇವೆಯನ್ನು ವಿರೋಧಿಸುವ ಪ್ರಚಾರದಲ್ಲಿ ನಾನೂ ತೊಡಗಿಸಿಕೊಂಡಿದ್ದೆ. ಚಂದ್ರಗುತ್ತಿ ದೇವಸ್ಥಾನ ಸಮಿತಿಯ ಸಂಚಾಲಕರಾಗಿದ್ದ ಈಡೂರು ಪರಶುರಾಮಪ್ಪ ಮತ್ತು ಅವರ ಸ್ನೇಹಿತರು ವೈಯಕ್ತಿಕವಾಗಿ ಬೆತ್ತಲೆ ಸೇವೆಯನ್ನು ವಿರೋಧಿಸುವ ಹೋರಾಟಕ್ಕೆ ನಮ್ಮ ಬಳಿ ಸಮ್ಮತಿಸಿದ್ದರೂ ಇದನ್ನು ವಿರೋಧಿಸುವುದು ಹೇಗೆ ಎಂಬುದರ ಬಗ್ಗೆ ಅವರಲ್ಲಿ ದುಗುಡ ತುಂಬಿತ್ತು. ಆಗಿನ ಜನಪ್ರತಿನಿಧಿಗಳು ಯಾರೂ ಈ ಬಗ್ಗೆ ಚಕಾರವೆತ್ತುತ್ತಿರಲಿಲ್ಲ. ಇದೊಂದು ಅತಿ ಸೂಕ್ಷ್ಮ ವಿಚಾರವೆಂದೂ- ಏನಾದರೂ ಮಾತನಾಡಿದರೆ ಜನರಿಂದ ದೂರ ಆಗುವ ಆತಂಕ ರಾಜಕಾರಣಿಗಳ ಒಳ ಇಂಗಿತವಾಗಿತ್ತು. ಚುನಾವಣಾ ರಾಜಕೀಯದ ದೃಷ್ಟಿಯಿಂದ ಅವರಿಗೆ ಇದೆಲ್ಲ ಬೇಡದ ವಿಚಾರವಾಗಿತ್ತು.

ಈ ಹಿನ್ನೆಲೆಯಲ್ಲಿ ಬೆತ್ತಲೆಸೇವೆ ನಡೆಸುವ ಮೊದಲ ದಿನ ಸರ್ಕಾರವು ಸೂಚಿಸಿದಂತೆ ಡಿ.ಎಸ್.ಎಸ್. ಮತ್ತು ಇತರೆ ಸಂಘಟನೆಯ ಕಾರ್ಯಕರ್ತರು- ಬೆತ್ತಲೆ ಹೋಗುತ್ತಿದ್ದವರನ್ನು ತಡೆದು ಅವರಿಗಾಗಿ ಹೊಸ ಬಟ್ಟೆ ತಂದಿದ್ದ ಮಹಿಳಾ ಕಾರ್ಯಕರ್ತರು ಅವರಿಗೆ ಸುತ್ತಿ- ಕಳುಹಿಸುತ್ತಿದ್ದರು. ಅವರು ಸುತ್ತಿಕೊಂಡು ಮುಂದೆ ಹೋಗುತ್ತಿದ್ದಾಗ ಮತ್ತೆ ಬಿಚ್ಚಿಕೊಂಡು ಓಡುತ್ತಿದ್ದುದು ನಡೆಯುತ್ತಲೂ ಇತ್ತು. ಮೊದಲ ದಿನದ ಈ ಕರ‍್ಯ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಿತು. ಸರ್ಕಾರ ಮತ್ತು ಡಿಎಸ್‌ಎಸ್ ಕರ‍್ಯಕರ್ತರು ಕೂಡ ಇದು ಸಂಪೂರ್ಣ ಯಶಸ್ವಿಯಾಯಿತೆಂದೇ ಭಾವಿಸಿದೆವು.

ಆದರೆ ಎರಡನೇ ದಿನ ಅಂದರೆ, 20-3-1986ರಂದು ಬೆಳಿಗ್ಗೆಯಿಂದಲೇ ಜನಸಾಗರ ವಿವಿಧ ಕಡೆಗಳಿಂದ ಹರಿದು ಬರುತ್ತಿತ್ತು. ನಾನು ನನ್ನ ಸಿಬ್ಬಂದಿಯೊಡನೆ ಮಾಮೂಲಿನಂತೆ ಜಾತ್ರೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಬೆತ್ತಲೆ ಸೇವೆ ಮಾಡೋ ಹೆಂಗಸಿನ ಫೋಟೋ ತೆಗೆಯುತ್ತಿದ್ದ ಇನ್ನೊಬ್ಬ ಮಹಿಳಾ ಫೋಟೋಗ್ರಾಫರ್‌ನನ್ನು ನಮ್ಮ ಎದುರಿಗೆ ಅಡ್ಡಹಾಕಿ ಅವಳು ತೆಗೆದಿದ್ದ ಫೋಟೋ ರೀಲುಗಳನ್ನು ಹೊರತೆಗೆದು ಅವಳನ್ನು ನಮ್ಮ ಎದುರಿಗೆ ಥಳಿಸಲು ಮುಂದಾಗಿ, ಅವಳನ್ನು ನಗ್ನಗೊಳಿಸಿದರು. ಆಗ ಜೋಗಿತಿಯರನ್ನು ನಾನು ತಡೆಯಲು ಹೋದಾಗ ವಾಗ್ವಾದ-ತಳ್ಳಾಟ ಪ್ರಾರಂಭವಾಯಿತು.

ಸರ್ಕಾರ ಮತ್ತು ವಿವಿಧ ಸಂಘಟನೆಗಳನ್ನು ಜೋಗತಿಯರು ಎದುರು ಹಾಕಿಕೊಳ್ಳುವುದನ್ನು ಊಹಿಸದಿದ್ದ ನಮಗೆ ಇದೆಲ್ಲ ಅನಿರೀಕ್ಷಿತ ಬೆಳವಣಿಗೆಯಾಗಿತ್ತು. ಜನರು ಅಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರನ್ನ ಹೊಡೆದರಂತೆ. ಇಲ್ಲಿ ಬಟ್ಟೆ ಬಿಚ್ಚಿದರಂತೆ, ಎಂಬ ವದಂತಿಗಳನ್ನ ಹಬ್ಬಿಸಿ ಸರ್ಕಾರದ ವ್ಯವಸ್ಥೆಯಲ್ಲಾಗಲೀ, ಡಿಎಸ್ ಎಸ್ ಮತ್ತಿತರ ಹೋರಾಟಗಾರರಾಗಲೀ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಏನೂ ತಿಳಿಯದಂತಾಗಿದ್ದರು. ನನ್ನೊಡನೆ ಇದ್ದ ಸಿಬ್ಬಂದಿ ಚದುರಿ ಹೋಗಿ ನಾನು ರಕ್ಷಣೆಗಾಗಿ ಪೋಲೀಸ್ ವ್ಯಾನಿಗೆ ಹತ್ತಿಕೊಂಡಿದ್ದೆ. ನಾವು ತಂದಿದ್ದ ಜೀಪಿಗೆ ಬೆಂಕಿ ಹಚ್ಚಿಟ್ಟು ಜೋಗತಿಯರು ಅಟ್ಟಹಾಸ ಮೆರೆದಿದ್ದರು. ನಾವು ವ್ಯಾನಿನ ಒಳಗೆ ಇದ್ದು, ಇನ್ನು ಮುಂದೆ ಏನಾಗುವುದೋ ಅನ್ನೋ ಆತಂಕದಲ್ಲಿದ್ದಾಗ ನನಗೆ ಪರಿಚಿತ ವ್ಯಕ್ತಿಯೊಬ್ಬ ಓಡಿಬಂದು ನನ್ನ ಪರಿಚಯ ಗುರುತು ಸಿಗದಂತೆ ಭಂಡಾರ ಹಾಕಿ ಅಲ್ಲಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ತನ್ನ ಪಂಚೆ ನೀಡಿ ಪ್ಯಾಂಟ್ ಷರಟು ತೆಗೆಸಿ ನಾನು ಯಾರೋ ಅನ್ನೋ ರೀತಿ ಮಾಡಿಕೊಂಡು ತನ್ನ ರಾಜದೂತ್ ಮೋಟಾರ್‌ಬೈಕ್‌ನಲ್ಲಿ ಸೊರಬಕ್ಕೆ ತಂದುಬಿಟ್ಟರು.

ಅಲ್ಲಿಂದ ಎಲ್ಲರಿಗೂ ಫೋನ್ ಮಾಡಿ ಆಗಿದ್ದ ಅನಾಹುತವನ್ನು ತಿಳಿಸಿದೆ. ಇದು ಸುಮಾರು ಮಧ್ಯಾಹ್ನ 3.00 ಘಂಟೆಯ ತನಕ ಜೋಗತಿಯರ ಅಟ್ಟಹಾಸಕ್ಕೆ ಗುರಿಯಾದ ಡಿ.ಎಸ್.ಎಸ್. ಮತ್ತು ಇತರೆ ಕರ‍್ಯಕರ್ತರು ತಮಗೆ ಸಿಕ್ಕ ಸಿಕ್ಕ ಕಡೆ ಚದುರಿ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಂಡು ಪರಾರಿಯಾದರು. ಈ ಸಂದರ್ಭದಲ್ಲಿ ಕೃಷ್ಣಪ್ಪನವರೇನಾದರೂ ಈ ಜೋಗತಿಯರ ಕೈಗೆ ಸಿಕ್ಕಿದ್ದರೆ ಬಹುಶಃ ಅಂದೇ ಅವರ ಕೊಲೆ ಮಾಡಲು ಹೇಸುತ್ತಿರಲಿಲ್ಲ.

ಸುಮಾರು 4.00 ಘಂಟೆಯ ಸುಮಾರಿಗೆ ಹೆಚ್ಚಿನ ಪೋಲೀಸ್ ಬಂದು ಇಡೀ ಜೋಗತಿಯರ ಸಮೂಹವನ್ನು ಬೆತ್ತಲೆಯಾಗಿಯೇ ಅರೆಸ್ಟ್ ಮಾಡಿ ಸೊರಬ ಪೋಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ದರು. ಸುಮಾರು 5-6 ಘಂಟೆಯ ಸುಮಾರಿಗೆ ಪೋಲೀಸ್ ಬಂದು ಇವರಲ್ಲಿ ಯಾರು ನಿಮ್ಮ ಮೇಲೆ ಹಲ್ಲೆ ಮಾಡಿದರು ಗುರ್ತಿಸಿ ಎಂದು ಹೇಳಿದರು.

ಪೊಲೀಸರೊಡನೆ ಹೋಗಿ ನೋಡುತ್ತೇನೆ, ಅದೊಂದು ಭಯಂಕರ ದೃಶ್ಯ. ಪೀಚಲು ದೇಹಗಳ ಅನಾರೋಗ್ಯವೇ ಮೂರ್ತಿವೆತ್ತ- ಕುಡಿತದ ಅಮಲಿನಲ್ಲಿದ್ದ ಅವರಿಗೆ ತಾವೇನು ಮಾಡಿದ್ದೆವು ಅನ್ನುವುದೇ ಅವರಿಗೆ ಗೊತ್ತಿರಲಿಲ್ಲ. ಯಾವುದೋ ಕಾಡಿನ ಪ್ರಾಣಿಗಳಂತೆ ಪಿಳಿಪಿಳಿ ಕಣ್ಣು ಬಿಡುತ್ತಾ ಆ ರೂಮಿಗೆ ಬಂದವರನ್ನು ನೋಡುತ್ತಿದ್ದರು. ನನಗೆ `ಯಾರು ಏನು ಮಾಡಿದರು ಎನ್ನುವುದನ್ನ ಯಾರ ಮೇಲೆ ಹೇಳಲಿ’ ಎನ್ನುತ್ತಾ ಈಚೆಗೆ ಬಂದೆ. ಆದರೆ ಈ ಜೋಗತಿಯರು ಅಂತಹ ಸ್ಥಿತಿಯಲ್ಲೂ ತಮ್ಮ ಬಳಿ ಬೆಳಗಿನಿಂದ ದೋಚಿದ ಒಡವೆಗಳು ಮತ್ತು ಹಣ ಇರುವುದು ಸಣ್ಣ ಸಣ್ಣ ಚೀಲಗಳಲ್ಲಿರುವುದು ಪರಿಶೀಲಿಸಿದಾಗ ಕಂಡು ಬಂತು.

ಈ ಘಟನೆಯ ನಂತರ ಆದ ಮಾರನೇ ದಿನ ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಮುಖ ಸುದ್ದಿಯಾಗಿ ವರದಿಗಳು ಪ್ರಕಟಗೊಂಡವು. ನಾನು ಆತಂಕದಿAದ ನನ್ನ ಹೆಂಡತಿಗೆ ‘I ಚಿm Sಚಿಜಿe’ ಎಂದು ತಂತಿ ನೀಡಿದಾಗ ಅವಳು ಗಲಿಬಿಲಿಗೊಂಡು ಫೋನ್ ಮಾಡಿದಳು. ಇತ್ತ ನನ್ನ ಹಳ್ಳಿ ಹನಗವಾಡಿಯಿಂದ ಬಂದಿದ್ದ ಜೋಗತಿಯರಿಂದಲೇ ರೋಚಕವಾಗಿ ತಲುಪಿದ್ದ ಸುದ್ದಿಯಿಂದ, ವರದಿಗಳನ್ನು ಕೇಳಿಕೊಂಡ ನಮ್ಮ ಊರಿನ ಜನರು ಮತ್ತು ನಮ್ಮ ಅವ್ವ, ಅಣ್ಣ-ತಮ್ಮಂದಿರು ಮತ್ತು ಮಿತ್ರರ ದಂಡು ಸೊರಬಕ್ಕೆ ನನ್ನನ್ನು ನೋಡಲು ಬಂದಿದ್ದರು. ಅವರು ನಾನು ಮಾಮೂಲಿನಂತೆ ಇದ್ದುದನ್ನು ನೋಡಿ ನೆಮ್ಮದಿಗೊಂಡರು. ನನ್ನ ತಮ್ಮನೊಬ್ಬ ನಿನ್ನನ್ನು ಆಸ್ಪತ್ರೆಯಲ್ಲಿ ಬ್ಯಾಂಡೇಜ್ ಸಮೇತ ನೋಡುವ ಕಲ್ಪನೆಯಲ್ಲಿಯೆ ಓಡಿ ಬಂದೆವು ಎಂದಾಗ ನಾನು ಕೂದಲೆಳೆಯಲ್ಲಿ ಸಾವು ತಪ್ಪಿದ್ದನ್ನು ವಿವರಿಸಲಿಲ್ಲ.

ನಾನು ತಹಶೀಲ್ದಾರನಾಗಿ ಹೊಸದರಲ್ಲಿ ಆಗಿದ್ದ ಈ ಘಟನೆ ಇಂದಿಗೂ ನನಗೆ ಎಚ್ಚರಿಕೆಯ ಮಾರ್ಗ ಸೂಚಿಯಾಗಿದೆ. ಒಂದು ವಿಷಾದದ ಸಂಗತಿಯೆAದರೆ ನಮ್ಮ ಪೋಲೀಸರು ಇಂದಿಗೂ ಯಥಾಸ್ಥಿತಿಯ ರಕ್ಷಕರಾಗಿಯೇ ಉಳಿದಿದ್ದಾರೆ. ಅವರನ್ನು ಬದಲಾಗುತ್ತಿರುವ ಕಾಲಮಾನದ ಜೊತೆಗೆ ಬದಲಾವಣೆಯ ರೂವಾರಿಗಳಾಗುವಂತೆ ತರಬೇತಿ ನೀಡುವಲ್ಲಿ ಸರ್ಕಾರವು ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ.

ಈ ಘಟನೆಯ ನಂತರದ ಆದ ಬೆಳವಣಿಗೆಯ ಹಿನ್ನೆಲೆಯಲ್ಲಿ ಒಂದು ಮಹತ್ತರ ಬದಲಾವಣೆ ಆ ಪ್ರದೇಶದಲ್ಲಿ ಆಗಿದೆ. ಬೆತ್ತಲೆ ಸೇವೆಯನ್ನು ಸರ್ಕಾರ ನಿಷೇಧಿಸಿದೆ. ಅದರೊಟ್ಟಿಗೆ ಅನೇಕ ಸಾಮಾಜಿಕ ಅನಿಷ್ಟಗಳ ಬಗ್ಗೆ ಸಾಮಾನ್ಯ ಜನರ ಮಧ್ಯದಲ್ಲಿ ಚರ್ಚೆಗಳಾಗಿವೆ. ಕೃಷ್ಣಪ್ಪನವರ ಹೋರಾಟ ಹೊಸ ದಿಕ್ಕಿನೆಡೆಗೆ ಸಮಾಜವನ್ನು ಮುಖ ಮಾಡಿಸಿದೆ. ಇದು ಅವರ ಆತ್ಮಕ್ಕೆ ನೆಮ್ಮದಿಯನ್ನು ನೀಡಿದೆ ಎಂದರೆ ತಪ್ಪಾಗಲಾರದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Published

on

ಫೋಟೋ | ವಿಜಿಯಾ ಶೆಟ್ಟಿ, ಮೇಕಪ್ ಆರ್ಟಿಸ್ಟ್, ಬೆಂಗಳೂರು

ಸುದ್ದಿದಿನ,ಬೆಂಗಳೂರು:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂ.ಸಂ. 9740982585, 9380162042 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜೀವನಶೈಲಿಯಲ್ಲಾದ ಬದಲಾವಣೆಯೇ ಹೃದಯ ಸಂಬಂಧಿ ಖಾಯಿಲೆಗಳಿಗೆ ಕಾರಣ : ಸಂಸದ ಡಾ. ಸಿ.ಎನ್. ಮಂಜುನಾಥ್

Published

on

ಸುದ್ದಿದಿನಡೆಸ್ಕ್:ಜಗತ್ತಿನಾದ್ಯಂತ ಇಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತಿದೆ. ಜಾಗತಿಕವಾಗಿ ಹೃದಯದ ಆರೋಗ್ಯದ ಬಗ್ಗೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್ 29 ಅನ್ನು ವಿಶ್ವ ಹೃದಯ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ದಿನ ಜಗತ್ತಿನಾದ್ಯಂತ ಅತಿ ಹೆಚ್ಚಿನ ಪ್ರಮಾಣದ ಜನರ ಸಾವಿಗೆ ಕಾರಣವಾಗಿರುವ ಹೃದ್ರೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರಗಳು, ಆರೋಗ್ಯ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ವರ್ಷದ ಘೋಷವಾಕ್ಯ ಕ್ರಿಯೆಗಾಗಿ ಹೃದಯವನ್ನು ಬಳಸಿ ಎಂಬುದಾಗಿದೆ.

ದೇಶದಲ್ಲಿ ವರ್ಷಕ್ಕೆ ಸುಮಾರು 30 ಲಕ್ಷದಷ್ಟು ಜನರು ಹೃದಯ ಸಂಬAದಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಇದಕ್ಕೆ ಪ್ರಮುಖ ಕಾರಣ ಜೀವನ ಶೈಲಿಯಲ್ಲಾದ ಬದಲಾವಣೆ ಎಂದು ಹೃದ್ರೋಗತಜ್ಞ ಹಾಗು ಸಂಸದ ಡಾ: ಸಿ.ಎನ್ ಮಂಜುನಾಥ್ ಹೇಳಿದ್ದಾರೆ.

ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆ ಆವರಣದಲ್ಲಿ ನಡೆದ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದೇಶದಲ್ಲಿ 1960 ರಲ್ಲಿ ಶೇಕಡ 4 ರಷ್ಟು ಇದ್ದ ಹೃದಯ ಸಂಬಂದಿ ಕಾಯಿಲೆಗಳು ಶೇಕಡ ಈಗ 10ರಷ್ಟು ಏರಿಕೆಯಾಗಿದೆ. ಇತ್ತೀಚೆಗೆ 50 ಕ್ಕಿಂತ ಕಡಿಮೆ ವಯಸಿನವರಲ್ಲಿ ಹೆಚ್ಚಾಗಿ ಈ ಸಮಸ್ಯೆಗಳು ಕಂಡು ಬರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಹೆಚ್. ಡಿ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ನಗರದ ಹೃದ್ರೋಗ ತಜ್ಞ ಡಾ: ವಿಜಯ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿಶ್ವ ಹೃದಯ ದಿನದ ಅಂಗವಾಗಿ ಶಿವಮೊಗ್ಗದಲ್ಲಿಂದು ಸಹ್ಯಾದ್ರಿ ಸ್ನೇಹ ಸಂಘ, ಐಎಂಎ ಮತ್ತು ಮೆಟ್ರೋ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಡಾ ಶಿವಶಂಕರ್ ಹೃದಯ ರೋಗ ತಜ್ಞರು ಮೆಟ್ರೋ ಆಸ್ಪತ್ರೆ, ಐಎಂಎ ಜಿಲ್ಲಾ ಶಾಖೆ ಅಧ್ಯಕ್ಷ ಡಾ ಶ್ರೀಧರ್, ಕಾರ್ಯದರ್ಶಿ ಡಾ ವಿನಯಾ ಶ್ರೀನಿವಾಸ್, ಮೆಟ್ರೋ ಆಸ್ಪತ್ರೆಯ ಆಡಳಿತಾಧಿಕಾರಿ ರೆಹಮತ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ದಸರಾ,ದೀಪಾವಳಿ ಹಬ್ಬ ; ಹಣ ವಸೂಲಿಗೆ ಇಳಿದ ಖಾಕಿ ಪಡೆ

ವಿಶೇಷ ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ 5, 10 ಸಾವಿರ ರೂಪಾಯಿ ಪ್ರತಿ ಅಂಗಡಿ, ಲಾಡ್ಜ್, ಹೋಟೆಲ್ ಗಳಿಂದ ಹಣ ವಸೂಲಿಗೆ ಇಳಿದ ಖಾಕಿ...

ದಿನದ ಸುದ್ದಿ4 hours ago

ದಾವಣಗೆರೆ | ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಸುದ್ದಿದಿನ,ದಾವಣಗೆರೆ : ಕಳದೆ 15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತ ದೇಹ ಅಸ್ಥಿಪಂಜರದ ರೂಪದಲ್ಲಿ ಪೊದೆಯೊಂದರಲ್ಲಿ ಪತ್ತೆಯಾದ ಘಟನೆ ದಾವಣಗೆರೆ ತಾಲೂಕಿನ ಅಣಜಿ ಕೆರೆ ಏರಿಯ...

ದಿನದ ಸುದ್ದಿ5 hours ago

ಜಗಳೂರು | ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿ ಕೊಂದ ಪತಿ

ಸುದ್ದಿದಿನ,ದಾವಣಗೆರೆ : ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿಯನ್ನ ಪತಿ ಕೊಲೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಹೊಸಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ. ಸತ್ಯಮ್ಮ ಎಂಬಾಕೆ ಪತಿಯಿಂದ ಕೊಲೆಯಾಗಿದ್ದು, ತಾಲೂಕಿನ...

ದಿನದ ಸುದ್ದಿ5 hours ago

ದಾವಣಗೆರೆ | ಅ.29ರಂದು ರೈತರಿಗೆ ಸುಸ್ಥಿರ ಕೃಷಿ ತರಬೇತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕಾಡಜ್ಜಿ, ಇಲ್ಲಿ ಅಕ್ಟೋಬರ್ 29 ರಂದು ಜಿಲ್ಲೆಯ ರೈತರಿಗೆ ಸುಸ್ಥಿರ ಕೃಷಿ-ಸ್ವಾವಲಂಭಿ ಜೀವನಕ್ಕಾಗಿ ನೂತನ ತಾಂತ್ರಿಕತೆಗಳ ಕುರಿತು ಒಂದು ದಿನದ ತರಬೇತಿ...

ದಿನದ ಸುದ್ದಿ5 hours ago

ದಾವಣಗೆರೆ | ಒಳಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ; ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ : ಸರ್ಕಾರಕ್ಕೆ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ ; ಒಳಮೀಸಲಾತಿಗೆ ಆಗ್ರಹಿಸಿ ಜಿಲ್ಲಾ ಮಾದಿಗ ಸಮಾಜ ಹಾಗೂ ಛಲವಾದಿ ಮಹಾಸಭಾ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಯದೇವ ವೃತ್ತ, ಅಶೋಕ ರಸ್ತೆ ಮಾರ್ಗವಾಗಿ...

ದಿನದ ಸುದ್ದಿ6 hours ago

ಜಗಳೂರು| ಐಟಿಐ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಜಗಳೂರು ಇಲ್ಲಿ ಐಟಿಐ ಕೋರ್ಸ್ ಗಳಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಎಸ್ ಎಸ್ ಎಲ್ ಸಿ ಪಾಸಾದ...

ದಿನದ ಸುದ್ದಿ6 hours ago

ದಾವಣಗೆರೆ | ನಾಳೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ: ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ,...

ದಿನದ ಸುದ್ದಿ6 hours ago

ಸರ್ಕಾರಿ ನೌಕರರ ಜಿಲ್ಲಾ ಶಾಖೆ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಸಂಘದ ಮೇರಿದೇವಾಸಿಯಾ...

ದಿನದ ಸುದ್ದಿ7 hours ago

ರಾಜ್ಯಾದ್ಯಂತ ಕಿತ್ತೂರು ಚೆನ್ನಮ್ಮ ವಿಜಯೋತ್ಸವ; ಹುಟ್ಟೂರು ಕಾಕತಿಯಲ್ಲಿ ಹಬ್ಬದ ಸಂಭ್ರಮ

ಸುದ್ದಿದಿನಡೆಸ್ಕ್:ಕಿತ್ತೂರ ರಾಣಿ ಚನ್ನಮ್ಮ 200ನೇ ವರ್ಷದ ವಿಜಯೋತ್ಸವ ಐತಿಹಾಸಿಕ ಹೋರಾಟದ ಮಹತ್ವವನ್ನು ಸಾರಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ರಾಣಿ ಚೆನ್ನಮ್ಮ...

ದಿನದ ಸುದ್ದಿ8 hours ago

ಕುವೆಂಪು ವಿಶ್ವವಿದ್ಯಾಲಯದ ಪ್ರವೇಶಾತಿಗೆ ಅವಧಿ ವಿಸ್ತರಣೆ

ಸುದ್ದಿದಿನ,ಶಿವಮೊಗ್ಗ:ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಲಿನ ಸ್ನಾತಕೊತ್ತರ ಪದವಿ/ ಸ್ನಾತಕೊತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು....

Trending