Connect with us

ದಿನದ ಸುದ್ದಿ

ಪ್ರಸಕ್ತ ಸಂದರ್ಭದಲ್ಲಿ ಬಡವಿಭಾಗಗಳಿಗೆ ಹಣ ವರ್ಗಾವಣೆ ಯೋಜನೆಗಳು

Published

on

ಈಗ ಪ್ರಸ್ತಾಪಿಸಲಾಗುತ್ತಿರುವ ನಗದು ವರ್ಗಾವಣೆಯು, ಮೋದಿ ಸರಕಾರದ ಪಿಎಂ-ಕಿಸಾನ್ ಆಗಲಿ,ಅಥವ ಕಾಂಗ್ರೆಸಿನ “ನ್ಯಾಯ್” ಅಗಲಿ, ನವ ಉದಾರ ಬಂಡವಾಳಶಾಹಿಯು ಬಿಕ್ಕಟ್ಟಿಗೆ ಒಳಗಾಗಿರುವ ಅಂಶವನ್ನು ಸೂಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನವ-ಉದಾರವಾದಿಬಂಡವಾಳಶಾಹಿಯ ಆಚೆಗೆ ನೋಡಲಾರದ ರಾಜಕೀಯ ಪಡೆಗಳಲ್ಲಿ ಒಂದು ಸನ್ನಿಗೆ ಒಳಗಾದ ರೀತಿಯಲ್ಲಿ ಕೋಮು ಭಾವನೆಗಳನ್ನು ಕೆಣಕಿ ವೋಟು ಬಾಚಿಕೊಳ್ಳುವ ಸನ್ನಾಹದಲ್ಲಿ ತೊಡಗಿದ್ದರೆ, ಇನ್ನೊಂದು, ಜಾತ್ಯಾತೀತ ಮನೋಭಾವ ಹೊಂದಿರುವ ರಾಜಕೀಯ ಪಡೆಯು ನವ ಉದಾರ ಬಂಡವಾಳಶಾಹಿಗೆ ಒಂದು “ಮಾನವೀಯ ಮುಖ” ತೊಡಿಸುವ ಆಶ್ವಾಸನೆ ಕೊಡುತ್ತಿದೆ.

ಇಂತಹನೆರವೇರಲಾರದಆಶ್ವಾಸನೆಗಳನ್ನುಎಡಪಂಥಿಯರುಬೆಂಬಲಿಸಬೇಕೇ? ಬಡವರಿಗೆ ಪರಿಹಾರ ದೊರಕಿಸುವ ಆಶ್ವಾಸನೆಯಿಂದ ಕೂಡಿದ ಕ್ರಮಗಳಿಗೆ ಈ ರಾಜಕೀಯ ಪಡೆಗಳು ಮುಂದಾದಾಗ ಎಡ ಪಂಥೀಯರು ಅದನ್ನು ಸ್ವಾಗತಿಸಬೇಕುಎನ್ನುತ್ತಾರೆಪ್ರೊ. ಪ್ರಭಾತ್ಪಟ್ನಾಯಕ್. . ಏಕೆಂದರೆ, ನವ ಉದಾರವಾದದ ತರ್ಕ ಮತ್ತು ಚಾಳಿಯಿಂದಾಗಿ ಒಂದೋ ಈ ಆಶ್ವಾಸನೆ ಕೊಟ್ಟವರು ಅದನ್ನು ಮುರಿಯುತ್ತಾರೆ, ಆಗ ಎಡ ಶಕ್ತಿಗಳು ಅದನ್ನು ಎತ್ತಿ ತೋರಿಸಿ ಅದರ ವಿರುದ್ಧ ಹೋರಾಡಬೇಕಾಗುತ್ತದೆ, ಇಲ್ಲವೇ ನವ ಉದಾರ ವ್ಯವಸ್ಥೆಯನ್ನೇ ಮೀರಲು ಆರಂಭಗೊಳ್ಳುವ ಒಂದು ಗತಿತಾರ್ಕಿಕ ಪ್ರಕ್ರಿಯೆಯನ್ನು ಎಡ ಶಕ್ತಿಗಳು ಉದ್ದೀಪಿಸಬಹುದು.

ಮೊದಲು ಮೋದಿ ಸರ್ಕಾರವು ತನ್ನ ಕೊನೆಯ ಬಜೆಟ್‌ನಲ್ಲಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸುವ ಒಂದು ಯೋಜನೆಯ ಘೋಷಣೆ ಮಾಡಿತು. ಈ ಯೋಜನೆಯ ಪ್ರಕಾರ, ಅತಿ ಸಣ್ಣ ರೈತ ಕುಟುಂಬವೊಂದಕ್ಕೆ ವಾರ್ಷಿಕ 12,000 ರೂಗಳನ್ನು ಅವರ ಬ್ಯಾಂಕ್ ಖಾತೆಗೆ ಸರ್ಕಾರವೇ ನೇರವಾಗಿ ವರ್ಗಾಯಿಸುತ್ತದೆ. ಈ ಯೋಜನೆಯು ಸುಮಾರು 12 ಕೋಟಿ ಮಂದಿಗೆ ಅನುಕೂಲ ಕಲ್ಪಿಸುತ್ತದೆ ಎಂದು ಅವರು ಹೇಳುವಾಗ ಚುನಾವಣೆಗಳಲ್ಲಿ ವೋಟು ಬಾಚಿಕೊಳ್ಳುವುದಷ್ಟೇ ಅವರ ಉದ್ದೇಶ. ಆದರೆ, ಅವರು ಘೋಷಣೆ ಮಾಡಿರುವ ಹಣದ ಮೊತ್ತವು ಅದೆಷ್ಟು ಜುಜುಬಿ ಎಂದರೆ, ಅದರ ಬಗ್ಗೆ ಮೋದಿ ಕೂಡ ತಮ್ಮ ಚುನಾವಣಾ ಭಾಷಣಗಳಲ್ಲಿ ತುತ್ತೂರಿ ಊದುವುದನ್ನೇ ನಿಲ್ಲಿಸಿದ್ದಾರೆ. ಬದಲಿಗೆ, ಬಿಜೆಪಿಯು ಪ್ರಜ್ಞಾ ಠಾಕುರ್ ಅಂತಹ ಭಯೋತ್ಪಾದನೆ ಆರೋಪಿಯನ್ನು ಕಣಕ್ಕಿಳಿಸಿ ಕೋಮು ಭಾವನೆಗಳನ್ನು ಕೆಣಕಿ ವೋಟು ಬಾಚಿಕೊಳ್ಳುವ ತನ್ನ ಹಳೆಯ ಚಾಳಿಗೆ ಮರಳಿದೆ.

ಈಗ ಕಾಂಗ್ರೆಸ್‌ನ ಸರದಿ. ಅದು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ “ನ್ಯಾಯ್” ಎಂಬ ಹೆಸರಿನ ಒಂದು ಹೆಚ್ಚು ಮಹತ್ವಾಕಾಂಕ್ಷೆಯ ಯೋಜನೆಯನ್ನು ಘೋಷಿಸಿದೆ. ಅದರ ಪ್ರಕಾರ, ಸುಮಾರು ಐದು ಕೋಟಿ ಅತ್ಯಂತ ಬಡ ಕುಟುಂಬಗಳಿಗೆ ತಿಂಗಳಿಗೆ 6000 ರೂಗಳನ್ನು ಅವರ ಖಾತೆಗೆ ವರ್ಗಾಯಿಸಲಾಗುವುದು.
ಈ ಯೋಜನೆಗೆ ವಾರ್ಷಿಕ 3.6 ಲಕ್ಷ ಕೋಟಿ ರೂ ವೆಚ್ಚ ತಗಲುತ್ತದೆ. (ಮೋದಿ ಸರ್ಕಾರದ ಯೋಜನೆಗೆ ತಗಲುವ ವೆಚ್ಚ ವಾರ್ಷಿಕ 72,000 ಕೋಟಿ ರೂಗಳು). ಕಾಂಗ್ರೆಸ್‌ನ ಈ ಯೋಜನೆಗೆ ಹಣ ಒದಗಿಸಿಕೊಳ್ಳುವ ಬಗ್ಗೆ ವಿವರಗಳು ಇನ್ನೂ ಲಭ್ಯವಿಲ್ಲವಾದರೂ ಈ ಯೋಜನೆ ಗಂಭೀರತೆಯಿಂದ ಕೂಡಿದೆ ಎಂಬ ಭಾವನೆ ಇದೆ.

ಬಡವರಿಗೆನೆರವಿನ “ಔದಾರ್ಯ”

ಬಡವರಿಗೆ ಈ ದೇಶದಲ್ಲಿ ದೊರೆಯುವ ಯಾವುದೇ ರೀತಿಯ ನೆರವು ಸ್ವಾಗತಾರ್ಹವೇ. “ನ್ಯಾಯ್”ಯೋಜನೆಯಲ್ಲಿ ಎರಡು ಸಮಸ್ಯೆಗಳು ಎದ್ದು ಕಾಣುತ್ತವೆ. ಮೊದಲನೆಯ ಸಮಸ್ಯೆ ಎಂದರೆ, ಇದೊಂದು ನಗದು ಹಣ ವರ್ಗಾವಣೆಯ ಯೋಜನೆ. ಹಾಲಿ ಇರುವ ಕಲ್ಯಾಣ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಅಧಿಕವಾಗಿ ಈ ಯೋಜನೆ ಸೇರಿಕೊಳ್ಳುತ್ತದೆ ಎಂದು ಭಾವಿಸಿಕೊಂಡರೂ ಸಹ, ಬಡವರಿಗೆ ಒಂದಿಷ್ಟು ಹಣ ಕೊಟ್ಟು ಸರ್ಕಾರ ಕೈ ತೊಳೆದುಕೊಳ್ಳುತ್ತದೆ, ಅಷ್ಟೆ. ಶಿಕ್ಷಣ ಮತ್ತು ಆರೋಗ್ಯ ಇಂತಹ ಸಾರ್ವತ್ರಿಕ ಅಗತ್ಯ ಸೇವೆಗಳನ್ನು ಒದಗಿಸುವ ತನ್ನ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳುತ್ತದೆ. ಹಾಗಾಗಿ, ಇಂತಹ ಅಗತ್ಯ ಸೇವೆಗಳನ್ನು ಖಾಸಗಿಯಾಗಿ ಒದಗಿಸುವವರು ತಮ್ಮ ಸೇವೆಗಳ ಬೆಲೆ ಏರಿಸಿ ಬಡವರಿಗೆ ವರ್ಗಾವಣೆಯಾದ ಈ ಹಣವನ್ನು ತಮ್ಮ ಜೇಬಿಗೆ ಇಳಿಸಿಕೊಳ್ಳುತ್ತಾರೆ.

ಎರಡನೆಯ ಸಮಸ್ಯೆ ಎಂದರೆ, ಈ ಯೋಜನೆಯು ಕೆಲವೇ ಮಂದಿಗೆ ಮಾತ್ರ ಫಲ ದೊರಕಿಸುವ ಗುರಿ ಹೊಂದಿದೆ. ಹಾಗಾಗಿ, ಅನೇಕ ಮಂದಿ ಈ ಯೋಜನೆಯಿಂದ ಹೊರಗುಳಿಯುತ್ತಾರೆ. ಮೇಲಾಗಿ, ಫಲಾನುಭವಿಗಳ ಆಯ್ಕೆ ಮನಸೋ ಇಚ್ಛೆಯಾಗಿರುತ್ತದೆ. ಉದಾಹರಣೆಗೆ, ಒಂದು ನಿಗದಿಪಡಿಸಿದ ವರಮಾನ ಮಿತಿಯೊಳಗಿರುವ ಒಂದು ಕುಟುಂಬಕ್ಕೆ ತಿಂಗಳಿಗೆ 6000 ರೂ ದೊರೆಯುವಾಗ, ಆ ಮಿತಿಗಿಂತ ಒಂದು ರೂ ಹೆಚ್ಚಿನ ವರಮಾನವಿರುವ ಕುಟುಂಬಕ್ಕೆ ಏನೂ ಸಿಗುವುದಿಲ್ಲ. ಇದು ಬಡ ಜನತೆಯ ನಡುವೆ ವಿರಸ ಸೃಷ್ಠಿಸುತ್ತದೆ.

ಯಾವುದೇ ಸೀಮಿತ ಫಲಾನುಭವಿ ಯೋಜನೆಯು ಸರ್ಕಾರದ ಔದಾರ್ಯಪೂರ್ಣ ಬಕ್ಷೀಸು ಎನಿಸುತ್ತದೆ. ಇದನ್ನು ಪಡೆಯಲು ಒಬ್ಬ ವ್ಯಕ್ತಿಯು ದೈನ್ಯತೆಯಿಂದ ಕೋರಿಕೆ ಸಲ್ಲಿಸಬೇಕಾಗುತ್ತದೆ. ಇದು, ಮೂಲಭೂತವಾಗಿ ಪ್ರಜಾಪ್ರಭುತ್ವ-ವಿರೋಧಿ ನಡೆಯಾಗುತ್ತದೆ.ಕೆಲವು ವಸ್ತುಗಳು ಮತ್ತು ಸೇವೆಗಳನ್ನುಒಂದು ಸಾರ್ವತ್ರಿಕವಾಗಿ ಹಕ್ಕು ಆಗಿ ಪ್ರತಿ ಪ್ರಜೆಗೂ ಒದಗಿಸಬೇಕಾದ ಸರ್ಕಾರವು, ಅದರ ಬದಲಿಗೆ ಅವನ್ನು ದಾನವೋ ಭಿಕ್ಷೆಯೋ ಎಂಬಂತೆ ಕೊಡುವಂತಾಗುತ್ತದೆ. ಆದ್ದರಿಂದ, ಕೆಲವು ಆರ್ಥಿಕ ಹಕ್ಕುಗಳು ಸಾರ್ವತ್ರಿಕವಾಗಿ ಜಾರಿಯಾದಾಗ ಮಾತ್ರ ಇಂತಹ ಸೀಮಿತ ಫಲಾನುಭವಿ ಯೋಜನೆಗಳು ಬಡ ಜನತೆಯ ನಡುವೆ ಸೃಷ್ಠಿಸುವ ವಿರಸ ನಿವಾರಣೆಯಾಗುತ್ತದೆ.

ವರ್ಗಾವಣೆಯ ವಿಷಯವನ್ನು ಈಗಏಕೆ ಎತ್ತಲಾಗಿದೆ?

ಇಂತಹ ಯೋಜನೆಗಳ ಬಗ್ಗೆ ಅನಿಸಿಕೆಗಳನ್ನು ಬದಿಗೆ ಸರಿಸಿ, ಒಂದು ಪ್ರಶ್ನೆ ಕೇಳಬೇಕಿದೆ: ಇದ್ದಕ್ಕಿದ್ದಂತೆಯೇ ಇಂತಹ ವರ್ಗಾವಣೆಯ ವಿಷಯವನ್ನು ಏಕೆ ಎತ್ತಲಾಗಿದೆ? ಅಭಿವೃದ್ಧಿಯ ಬಗ್ಗೆ ಮಾತನಾಡಿಯೇ ಮೋದಿ 2014ರ ಚುನಾವಣೆ ಗೆದ್ದರು. ಅದಕ್ಕೂ ಹಿಂದೆ, ಜಿಡಿಪಿಯ ಬೆಳವಣಿಗೆ ದರ, ಭಾರತ ಒಂದು ಬಲಿಷ್ಠ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಬಗ್ಗೆ, ಪ್ರಕಾಶಮಾನ ಭಾರತ ಮುಂತಾದ ವಿಷಯಗಳ ಬಗ್ಗೆ ಚರ್ಚೆಯಾಗುತ್ತಿತ್ತೇ ವಿನಃ, ಯಾವತ್ತೂ ಬಡವರಿಗೆ ಹಣ ವರ್ಗಾಯಿಸುವ ಚರ್ಚೆ ಇರಲೇ ಇಲ್ಲ. ಯುಪಿಎ-1 ಸರ್ಕಾರ ಜಾರಿಗೆ ತಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ 2014 ರ ಚುನಾವಣೆಯ ಸಂದರ್ಭದಲ್ಲಿಯೂ ಸಹ ಚರ್ಚೆಯಾಗಲಿಲ್ಲ. ಈ ಎಲ್ಲ ಅಂಶಗಳನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಿಡಿಪಿ ಉನ್ನತವಾಗಿ ಬೆಳೆಯುತ್ತದೆ ಮತ್ತು ಅದರಿಂದಾಗಿಯೇ ಎಲ್ಲರ ಏಳಿಗೆಯಾಗುತ್ತದೆ ಎಂಬುದಾಗಿ ಎಲ್ಲರೂ ನಂಬಿದ್ದರು. ಆದರೆ, ಈಗ ಇಂತಹ ಬೊಗಳೆಯ ಮಾತುಗಳಿಗೆ ಮತದಾರರು ಮರುಳಾಗುತ್ತಿಲ್ಲ.

ಈಗ ಪ್ರಸ್ತಾಪಿಸಲಾಗುತ್ತಿರುವ ನೇರ ವರ್ಗಾವಣೆಯು, ಸಂಕ್ಷಿಪ್ತವಾಗಿ ಹೇಳುವುದಾದರೆ, ನವ ಉದಾರ ಬಂಡವಾಳಶಾಹಿಯು ಬಿಕ್ಕಟ್ಟಿಗೆ ಒಳಗಾಗಿರುವ ಅಂಶವನ್ನು ಸೂಚಿಸುತ್ತದೆ. ನವ ಉದಾರ ಬಂಡವಾಳಶಾಹಿಯು ಉತ್ಪಾದಕ ಶಕ್ತಿಗಳನ್ನು ವೇಗವಾಗಿ ಬೆಳೆಸುವುದರಿಂದ ಜಿಡಿಪಿ ಉನ್ನತವಾಗಿ ಬೆಳೆಯುತ್ತದೆ. ಅದರಿಂದ ಎಲ್ಲರೂ ಪ್ರಯೋಜನ ಪಡೆಯುತ್ತಾರೆ ಎಂದು ಪ್ರಚುರಪಡಿಸುತ್ತಿದ್ದ ಅದರ ಸಿದ್ದಾಂತವು ಈಗ ವಿಶ್ವಾಸಾರ್ಹತೆ ಕಳೆದುಕೊಂಡಿದೆ.
ಈ ಸಂಗತಿ ಬಿಜೆಪಿಯು ಹುಚ್ಚು ಹಿಡಿದ ರೀತಿಯಲ್ಲಿ ಪ್ರಚೋದನಾಕಾರಿ ಕೋಮು ಪ್ರಚಾರಕ್ಕೆ ಮರಳಿರುವ ಅಂಶದಲ್ಲಿಯೂ ಕಾಣ ಬರುತ್ತದೆ. ಹಿಂದೆ ಅಭಿವೃದ್ಧಿಯ ಬಗ್ಗೆ ಅವರು ಕೊಟ್ಟ ಭರವಸೆಗಳು ಈಗ ಟೊಳ್ಳು ಶಬ್ದಗಳಾಗಿ ಕೇಳಿಸುತ್ತಿವೆ, ಅವುಗಳನ್ನು ಈಗ ಪುನರಾವರ್ತಿಸುವಂತಿಲ್ಲ. ಸಧ್ಯದ ಪರಿಸ್ಥಿತಿಯಲ್ಲಿ, ಅಂದರೆ, ಬಂಡವಾಳಶಾಹಿಯ ಬಿಕ್ಕಟ್ಟಿನ ಸಂರ್ಭದಲ್ಲಿ, “ಅಭಿವೃದ್ಧಿ” ಘೋಷಣೆಯ ಮೂಲಕ ಎಳ್ಳಷ್ಟೂ ಪರಿಹಾರ ಸಿಗುವುದಿಲ್ಲ ಎಂಬುದು ಜನತೆಗೆ ಅನುಭವದ ಮೂಲಕವೇ ತಿಳಿದಿದೆ.

ಈ ವಿದ್ಯಮಾನಗಳನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ನವ ಉದಾರ ಬಂಡವಾಳಶಾಹಿಯು ಇಂದು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಅದಕ್ಕೆ ಬದ್ಧವಾಗಿರುವ ಒಂದು ರಾಜಕೀಯ ಪಡೆ ಸನ್ನಿಗೆ ಒಳಗಾದ ರೀತಿಯಲ್ಲಿ ಕೋಮು ಭಾವನೆಗಳನ್ನು ಕೆಣಕಿ ವೋಟು ಬಾಚಿಕೊಳ್ಳುವ ಸನ್ನಾಹದಲ್ಲಿ ತೊಡಗಿದೆ. ಅದೇ ಸಮಯದಲ್ಲಿ, ಇನ್ನೊಂದು ರಾಜಕೀಯ ಪಡೆ ಇನ್ನೊಂದು ರೀತಿಯಲ್ಲಿ ಕಾರ್ಯಮಗ್ನವಾಗಿದೆ. ವಿಶಾಲ ಜಾತ್ಯಾತೀತ ಮನೋಭಾವ ಹೊಂದಿರುವ ಈ ಪಡೆಯು ನವ ಉದಾರ ಬಂಡವಾಳಶಾಹಿಗೆ ಒಂದು ಮಾನವೀಯ ಮುಖ ತೊಡಿಸಿ, ಸಮಾಜದ ತಳಸ್ತರದದಲ್ಲಿವ ಒಟ್ಟು ಜನಸಂಖ್ಯೆಯ ಐದನೇ ಒಂದು ಭಾಗದಷ್ಟು ಮಂದಿಗೆ ನೇರ ಹಣ ವರ್ಗಾವಣೆಯ ಮೂಲಕ ನವ ಉದಾರ ಬಂಡವಾಳಶಾಹಿಯ ದಿಕ್ಪಥವನ್ನು ಪರಿಷ್ಕರಿಸುವ ಆಶ್ವಾಸನೆ ಕೊಡುತ್ತಿದೆ.

ನಿಜ, ಇಂತಹ ನೇರ ಹಣ ವರ್ಗಾವಣೆ ಯೋಜನೆ ಕಾರ್ಯಸಾಧ್ಯ, ಅವಕ್ಕೆ ಹಣ ಹೊಂದಿಸಿಕೊಳ್ಳುವುದು ಸಾಧ್ಯವಿದೆ. ಅದಕ್ಕೆ ತಗಲುವ ವೆಚ್ಚವು ಜಿಡಿಪಿಯ ಸುಮಾರು ಶೇ.2 ರಷ್ಟಾಗುತ್ತದೆ. ಆದರೆ, ನವ ಉದಾರ ಬಂಡವಾಳಶಾಹಿಯ ಅಂತರ್ಗತ ತರ್ಕವೇ ಇಂತಹ ವರ್ಗಾವಣೆಗೆ ಅಡ್ಡಿಯಾಗುತ್ತದೆ. ಜಿಡಿಪಿಯ ಸುಮಾರು ಶೇ.2 ರಷ್ಟಾಗುವ ಈ ಮೊತ್ತವನ್ನು ಬಂಡವಾಳದಾರರ ಮೇಲೆ ತೆರಿಗೆ ಹಾಕಿಯೋ ಅಥವಾ ಸಮಾಜದ ಶ್ರೀಮಂತ ವಿಭಾಗಗಳ ಮೇಲೆ ತೆರಿಗೆ ಹಾಕುವ ಮೂಲಕವೋ ಹೊಂದಿಸಿಕೊಳ್ಳಬಹುದು. ಅಥವಾ, ವಿತ್ತೀಯ ಕೊರತೆಯ ಗಾತ್ರವನ್ನು ಹೆಚ್ಚಿಸಿಕೊಳ್ಳುವ ಮೂಲಕ, ಅಥವಾ ಈ ಎರಡೂ ವಿಧಾನಗಳ ಸಂಯೋಜನೆಯ ಮೂಲಕವೂ ಹೊಂದಿಸಿಕೊಳ್ಳಬಹುದು.

ಆದರೆ ಸಂಪನ್ಮೂಲಗಳನ್ನು ಹೊಂದಿಸಿಕೊಳ್ಳುವ ಈ ಎರಡೂ ವಿಧಾನಗಳನ್ನು ಜಾಗತೀಕರಣಗೊಂಡ ಹಣಕಾಸು ಬಂಡವಾಳವು ಅನಿಷ್ಟವೆಂದೇ ಬಗೆಯುತ್ತದೆ. ಈ ಕಾರಣದಿಂದಾಗಿ, ನೇರ ಹಣ ವರ್ಗಾವಣೆಯ ಯೋಜನೆಯನ್ನು ಜಾರಿಗೊಳಿಸ ಬಯಸುವ ಯಾವುದೇ ಸರ್ಕಾರವು ನವ ಉದಾರವಾದದ ಏರ್ಪಾಡಿನಲ್ಲಿ ಕೆಲವು ಬದಲಾವಣೆ ಮಾಡಬೇಕಾಗುತ್ತದೆ (ಆಗ, ಈ ಬದಲಾವಣೆಯ ಕ್ರಿಯೆಯು ತನ್ನದೇ ಒಂದು ಗತಿ ತಾರ್ಕಿಕ ಚಲನೆಯನ್ನು ಹೊಮ್ಮಿಸುತ್ತದೆ). ಇದು ಸಾಧ್ಯವಾಗದಿದ್ದಲ್ಲಿ, ಹಾಲಿ ಕಲ್ಯಾಣ ಕಾರ್ಯಕ್ರಮಗಳನ್ನು ನಿಲ್ಲಿಸುವ ಮೂಲಕ ವರ್ಗಾವಣೆ ಯೋಜನೆಗೆ ಹಣ ಹೊಂದಿಸಿಕೊಳ್ಳಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ವರ್ಗಾವಣೆಯ ಉದ್ದೇಶವೇ ವಿಫಲವಾಗುತ್ತದೆ.

ಕಲ್ಯಾಣವೆಚ್ಚಗಳನ್ನುಸ್ವಾಗತಿಸುವುದುಪರಿಷ್ಕರಣವಾದವೇ?

ಬಂಡವಾಳಶಾಹಿ ವ್ಯವಸ್ಥೆಯು ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಸಲುವಾಗಿಯೇ ಸ್ವಲ್ಪ ಮಟ್ಟಿನ ನೆರವನ್ನು ಬಡವರಿಗೆ ಒದಗಿಸಬಲ್ಲದು, ಮತ್ತು ಒದಗಿಸುತ್ತದೆ, ಇಂತಹ ವರ್ಗಾವಣೆ ಯೋಜನೆಗಳನ್ನು, ಅಥವ ಒಟ್ಟಾರೆಯಾಗಿ ಕಲ್ಯಾಣ ವೆಚ್ಚಗಳನ್ನು ಸ್ವಾಗತಿಸುವುದು ಪರಿಷ್ಕರಣವಾದ ಆಗುತ್ತದಷ್ಟೇ ಎಂಬುದಾಗಿ ವಾದಿಸುವ ಪ್ರವೃತ್ತಿ ಕೆಲವು ಎಡ ಪಂಥೀಯ ವಲಯಗಳಲ್ಲಿದೆ. ನೇರ ಹಣ ವರ್ಗಾವಣೆ ಅಥವಾ ಕಲ್ಯಾಣ ಕಾರ್ಯಕ್ರಮಗಳು ವ್ಯವಸ್ಥೆಯಲ್ಲಿ ಕಾರ್ಯಸಾಧ್ಯವಾದ ಕೇವಲ ಸುಧಾರಣಾ ಕ್ರಮಗಳು. ಅದಕ್ಕೆ ಪ್ರಶಂಸೆಯ ಅಗತ್ಯವಿಲ್ಲ ಎನ್ನುತ್ತಾರೆ ಅವರು.

ವ್ಯಂಗ್ಯದ ಸಂಗತಿಯೆಂದರೆ ಬಡವರಿಗೆ ನೆರವು ಒದಗಿಸುವ ಬಗ್ಗೆ ನವ ಉದಾರ ಬಂಡವಾಳಶಾಹಿಯ ಸಮರ್ಥಕರು ಹೊಂದಿರುವ ಅಭಿಪ್ರಾಯವೂ ಇದೇ ರೀತಿಯಲ್ಲಿದೆ. ಬಡವರಿಗೆ ನೆರವು ಒದಗಿಸಬಹುದಾದಷ್ಟು ಹೊಂದಿಕೆಯನ್ನು ಅದು ಮಾಡಿಕೊಳ್ಳಬಲ್ಲದು, ಅದರ ಅಂತರ್ಗತ ತರ್ಕವು ಇಂತಹ ನೆರವಿಗೆ ಅಡ್ಡಿಯಾಗುವುದಿಲ್ಲ ಎಂದು ಅವರು ವಾದಿಸುತ್ತಾರೆ.

ಶ್ರೀಮಂತರಿಗೆ ಮತ್ತು ಕಾರ್ಪೊರೇಟ್‌ಗಳಿಗೆ ತೆರಿಗೆ ಕಡಿತ ಮಾಡಿದರೆ ಅದರ ಫಲವು ಕೆಳಕ್ಕೆ ಜಿನುಗಿ ತಳಸ್ತರಗಳಿಗೂ ಪ್ರಯೋಜನ ಸಿಗುತ್ತದೆ ಎಂಬ ಜಿನುಗು ಸಿದ್ಧಾಂತವು ಅಪಹಾಸ್ಯಗೊಳಗಾಗಿದ್ದ ಸಂದರ್ಭದಲ್ಲಿ ನವ ಉದಾರ ಬಂಡವಾಳಶಾಹಿಯ ಹೊಸ ಸಮರ್ಥನೆಯಾಗಿ, ಹನ್ನೊಂದನೇ ಪಂಚವಾರ್ಷಿಕ ಯೋಜನೆಯ ದಸ್ತಾವೇಜಿನಲ್ಲಿ, ಜಿಡಿಪಿ ಉನ್ನತವಾಗಿ ಬೆಳೆದಾಗ ಮಾತ್ರ ಸರ್ಕಾರದ ಆದಾಯವೂ ವೇಗವಾಗಿ ಬೆಳೆದು ಬಡತನ ತೊಡೆದು ಹಾಕುವ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚು ಹಣ ದೊರೆಯುತ್ತದೆ ಎಂಬುದಾಗಿ ಹೇಳಲಾಗಿತ್ತು. ಇದೊಂದು ಸೋಗು. ಬಡತನ ನಿವಾರಿಸುವ ಸಲುವಾಗಿ ಅಗತ್ಯ ಸಂಪನ್ಮೂಲಗಳ ಕ್ರೋಢೀಕರಣಕ್ಕೆ ನವ ಉದಾರ ಆಳ್ವಿಕೆಯು ಅಡ್ಡಿಪಡಿಸುವುದಿಲ್ಲ ಎಂದು ತೋರಿಸಲು ಈ ರೀತಿಯ ಸೋಗು ಹಾಕಲಾಗಿತ್ತು.

ಸರ್ಕಾರದ ಈ ಅಭಿಪ್ರಾಯ ಸರಿಯೇ ಇದ್ದರೆ, ನವ ಉದಾರ ಆಳ್ವಿಕೆಯಲ್ಲಿ ಉನ್ನತವಾಗಿ ಜಿಡಿಪಿ ಬೆಳೆದದ್ದರ ಜೊತೆಯಲ್ಲೇ ಬಡತನವೂ ಅಗಾಧವಾಗಿ ಬೆಳೆಯುತ್ತಿರಲಿಲ್ಲ. ಹಸಿವೆಯ ಹಾಹಾಕಾರ ತೀವ್ರಗೊಳ್ಳುತ್ತಿರಲಿಲ್ಲ. ನಿರುದ್ಯೋಗ ಬೃಹದಾಕಾರವಾಗಿ ಬೆಳೆಯುತ್ತಿರಲಿಲ್ಲ. ದುಡಿಯುವ ಜನತೆಯ ತಲಾ ವರಮಾನವು ಉದಾರೀಕರಣ ಪೂರ್ವದಲ್ಲಿ ಇದ್ದುದಕ್ಕಿಂತಲೂ ಕೆಳಗೆ ಇಳಿಯುವ ಮಟ್ಟಿಗೆ ಅವರನ್ನು ಹಿಂಡುತ್ತಿರಲಿಲ್ಲ. ಇವೆಲ್ಲವೂ ಅಲ್ಲಗಳೆಯಲಾಗದ ವಾಸ್ತವ ಸಂಗತಿಗಳು.

ಸ್ವಲ್ಪವೂ ಜಗ್ಗದ ನವ ಉದಾರ ಬಂಡವಾಳಶಾಹಿಯ ವರ್ತನೆಯಿಂದಾಗಿಯೇ ಇವೆಲ್ಲವೂ ಘಟಿಸಿವೆ. ಜೊತೆಯಲ್ಲಿ, ಅದರ ಅಂತರ್ಗತ ತರ್ಕದ ಅಗತ್ಯವಾಗಿ ಒಂದು ಧೃವದಲ್ಲಿ ಬೆಳೆಯುತ್ತಲೇ ಹೋಗುವ ಐಶ್ವರ್ಯವನ್ನೂ, ಇನ್ನೊಂದು ಧೃವದಲ್ಲಿ ಹೆಚ್ಚುತ್ತಲೇ ಹೋಗುವ ಬಡತನವನ್ನೂ ಹುಟ್ಟಿಸಿದೆ. ಇಂತಹ ಒಂದು ವ್ಯವಸ್ಥೆಯೊಳಗೆ ಬಡತನ ನಿವಾರಣೆ ಸಾಧ್ಯವೇ ಇಲ್ಲ. ಬಡತನ ನಿವಾರಣೆ ಸಾಧ್ಯವಾಗಬೇಕು ಎಂದಾದರೆ ನವ ಉದಾರ ಆಳ್ವಿಕೆಯ ಏರ್ಪಾಡನ್ನು ಮೀರಲೇಬೇಕಾಗುತ್ತದೆ.

ಕರಾರುವಾಕ್ಕಾಗಿ ಇದೇ ಕಾರಣದಿಂದಾಗಿ, ಬಡವರಿಗೆ ಪರಿಹಾರ ದೊರಕಿಸುವ ಆಶ್ವಾಸನೆಯಿಂದ ಕೂಡಿದ ಕ್ರಮಗಳನ್ನು ಕೈಗೊಳ್ಳಲು ನವ ಉದಾರವಾದದಿಂದ ಆಚೆ ನೋಡಲಾಗದ ರಾಜಕೀಯ ಪಡೆಗಳು ಮುಂದಾದಾಗ ಎಡ ಪಂಥೀಯರು ಅದನ್ನು ಸ್ವಾಗತಿಸಬೇಕು. ಏಕೆಂದರೆ, ನವ ಉದಾರವಾದದ ತರ್ಕ ಮತ್ತು ಚಾಳಿಯಿಂದಾಗಿ ಒಂದೋ ಈ ಆಶ್ವಾಸನೆ ಕೊಟ್ಟವರು ಅದನ್ನು ಮುರಿಯುತ್ತಾರೆ, ಆಗ ಎಡ ಶಕ್ತಿಗಳು ಅದನ್ನು ಎತ್ತಿ ತೋರಿಸಿ ಅದರ ವಿರುದ್ಧ ಹೋರಾಡಬೇಕಾಗುತ್ತದೆ, ಇಲ್ಲವೇ ನವ ಉದಾರ ವ್ಯವಸ್ಥೆಯನ್ನು ಮೀರಲು ಆರಂಭಗೊಳ್ಳುವ ಒಂದು ಗತಿತಾರ್ಕಿಕ ಪ್ರಕ್ರಿಯೆಯನ್ನು ಎಡ ಶಕ್ತಿಗಳು ಉದ್ದೀಪಿಸಬಹುದು.

ನವ ಉದಾರವಾದಿ ಬಂಡವಾಳಶಾಹಿಯ ಬಿಕ್ಕಟ್ಟಿನ ಸಮಯದಲ್ಲಿ ಮತ್ತು ಅದರ ಪರಿಣಾಮವಾಗಿ ಜನತೆ ಜರ್ಜರಿತರಾಗಿದ್ದಾರೆ. ಅವರ ಆಕ್ರೋಶವನ್ನು ಬೇರೆಡೆಗೆ ತಿರುಗಿಸುವ ಉದ್ದೇಶದಿಂದ ಕಾರ್ಪೊರೇಟ್-ಹಣಕಾಸು ಕುಳಗಳು ಕೋಮುವಾದಿ ಮತ್ತು ಛಿದ್ರಕಾರಿ ಅಜೆಂಡಾ ಹೊಂದಿರುವ ಶಕ್ತಿಗಳನ್ನು ಪ್ರೋತ್ಸಾಹಿಸುವ ಪ್ರವೃತ್ತಿ ಬೆಳೆಸಿಕೊಂಡಿರುವ ಸನ್ನಿವೇಶದಲ್ಲಿ, ಜನ ಜೀವನದ ದೈಹಿಕ ಸ್ಥಿತಿ-ಗತಿಗಳ ಬಗ್ಗೆ ಗಮನವನ್ನು ಕೇಂದ್ರೀಕರಿಸಿ ಅವರ ಸ್ಥಿತಿ-ಗತಿಗಳನ್ನು ಸುಧಾರಿಸುವ ಯಾವುದೇ ಕಾರ್ಯಕ್ರಮವು ಆ ಕಾರಣದಿಂದಾಗಿಯೇ ಕಾರ್ಪೊರೇಟ್-ಕೋಮುವಾದಿ ಮೈತ್ರಿಗೆ ಎದುರಾಗುವ ಒಂದು ಪ್ರಗತಿಪರ ಪ್ರತಿ-ಶಕ್ತಿಯಾಗುತ್ತದೆ. ಜನರ ಜೀವನ, ಅವರ ಸ್ಥಿತಿ-ಗತಿಗಳನ್ನು ಸುಧಾರಿಸುವ ಕಾರ್ಯಕ್ರಮ ಮತ್ತು ನವ ಉದಾರವಾದಿ ಬಂಡವಾಳಶಾಹಿಯ ತರ್ಕ ಇವುಗಳ ನಡುವೆ ಇರುವ ವೈರುಧ್ಯದ ಅರಿವಿಲ್ಲದ ಬೂರ್ಜ್ವಾ ರಾಜಕೀಯ ಪಡೆಗಳು ಜನರ ಸ್ಥಿತಿ-ಗತಿಗಳು ಸುಧಾರಿಸಬೇಕೆಂದು ಸಮರ್ಥಿಸುವುದು ಅಷ್ಟರಮಟ್ಟಿಗೆ ಒಳ್ಳೆಯದೇ.

-ಪ್ರೊ. ಪ್ರಭಾತ್ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

( ಈ ವಾರದ ಜನಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ2 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ3 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ4 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ4 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ1 week ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ2 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ2 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ2 weeks ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ2 weeks ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

Trending