Connect with us

ದಿನದ ಸುದ್ದಿ

ನಕಲಿ ವೈದ್ಯರ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕರ್ನಾಟಕ ಖಾಸಗಿ ಹೋಮಿಯೋಪಥಿಕ್ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿ. ಆರ್.ಅಂಬೇಡ್ಕರ್ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ವೈದ್ಯಕೀಯ ಕೋರ್ಸ್ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಈ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು. ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದು ಹೇಳಿದರು. ಕೆಲವು ಸಂದರ್ಭಗಳಲ್ಲಿ ನಕಲಿ ವೈದ್ಯರುಗಳಿಂದ ಅಮಾಯಕರ ಪ್ರಾಣಕ್ಕೂ ಕುತ್ತು ಬಂದಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Published

on

ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್‌ಡಿಎ ಸಂಸದರ ಸನ್ಮಾನದಲ್ಲಿ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ನೂತನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ ಎಂದು ಹೇಳಿದರು. ಜೆಡಿಎಸ್, ಬಿಜೆಪಿಯದ್ದು, ಸಹಜ ಮೈತ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪಾಲಿಕೆ ಚುನಾವಣೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು. ಬಿಜೆಪಿ, ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending