ರಾಜಕೀಯ
ಗೌಡರ ‘ಗಿಮಿಕ್ ಪಾಲಿಟಿಕ್ಸ್’
ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಕಾವು ಬೇಸಿಗೆಯ ಬಿರು ಬಿಸಿಲಿಗಿಂತ ಹೆಚ್ಚಾಗಿ ಕಾವೇರಿದೆ. ರಾಜ್ಯದ ದಿಗ್ಗಜ ರಾಜಕೀಯ ನಾಯಕರು ಈ ಬಾರಿ ಚುನಾವಣೆಯಲ್ಲಿ ಗೆಲ್ಲಲೆ ಬೇಕೆಂದು ಪಣ ತೊಟ್ಟು ಚುನಾವಣಾ ಅಖಾಡಕ್ಕೆ ಧುಮುಕ್ಕಿದ್ದಾರೆ. ಈಬಾರಿಯ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿದ್ದ ರಾಮನಗರ ರಾಜಕೀಯ ಚುನಾವಣೆಗೂ ಮುಂಚೆಯೇ ಪರೋಕ್ಷ ಫಲಿತಾಂಶ ಹರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ
ಕುಮಾರ ಸ್ವಾಮಿ ಹಾಗೂ ಇಂಧನ ಸಚಿವ ಡಿ.ಕೆ ಶಿವಕುಮಾರ್ ಈ ಬಾರಿ ರಾಜಕೀಯ ಚದುರಂಗಕ್ಕೆ ಗೋಲಿ ಹೋಡೆದಿದ್ದಾರೆ. ರಾಮನಗರದಲ್ಲಿ ಈ ಬಾರಿ ಜಿದ್ದಾ ಜಿದ್ದಿ ಎಲೆಕ್ಷನ್ ನಡೆಯುತ್ತದೆ ಎಂದು ಭಾವಿಸಿದವರು ಬಾಯ್ಮುಚ್ಚಿ ಕುಳಿತ್ತಿದ್ದಾರೆ. ರಾಜಕೀಯ ಬದ್ದ ವೈರಿಗಳೆಂದೆ ಭಾವಿಸಿದ್ದ ಈ ನಾಯಕರು ಸದ್ದಿಲ್ಲದೆ ಒಳ ರಾಜಕೀಯ ಮಾಡುತ್ತಿದ್ದಾರೆ ಎಂಬ ಮಾತು ರಾಮನಗರ ರಾಜಕೀಯದಲ್ಲಿ ಕೇಳಿಬರುತ್ತಿದೆ.
ಇದಕ್ಕೆ ಪೂರಕವೆಂಬತೆ ಕನಕಪುರದಲ್ಲಿ ನಾಮಕಾವಸ್ಥೆಗೆ ಜೆಡಿಎಸ್ ಆಭ್ಯಥಿಯನ್ನಾಗಿ ನಾರಯಣಗೌಡರನ್ನು ಕಣಕ್ಕಿಳಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಅಲ್ಲದೆ ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಇಕ್ಬಾಲ್ ಹುಸೇನ್ ಅವರನ್ನು ಕಣಕಿಳಿಸಿದ್ದಾರೆ ಡಿಕೆಶಿ ಎರಡು ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳಲ್ಲಿ ತಮ್ಮ ಡಮ್ಮಿ ಅಭ್ಯರ್ಥಿಗಳ ಮುಂದೆ ರಾಜಕೀಯ ಮಾಡುತ್ತಿದ್ದಾರೆ. ಇನ್ನೂ ಚನ್ನ ಪಟ್ಟಣದ ವಿಚಾರಕ್ಕೆ ಬಂದರೆ ಕಾಂಗ್ರೆಸ್ನಿಂದ ಸಾರಿಗೆ ಸಚಿವ ಎಚ್ ಎಮ್ ರೇವಣ್ಣ ಅವರನ್ನು ಅಭ್ಯರ್ಥಿಯಾಗಿ ಮಾಡಿ ಬಲಿಪಶುವಮಾಡಿದ್ದಾರೆ. ಏಕೆಂದರೆ ಈ ಭಾರಿ ಶತಾಯಗತಾಯ. ಚನ್ನಪಟ್ಟಣದಲ್ಲಿ ಸಿಪಿ ಯೋಗೆಶ್ವರ್ ಅವರನ್ನು ಸೋಲಿಸಲೇ ಬೇಕೆಂದು ಡಿಕೆ ಶಿವಕುಮಾರ್ ಹಾಗೂ ಕುಮಾರಸ್ವಾಮಿ ತೆರೆಮರೆಯಲ್ಲಿ ಆಟವಾಡುತ್ತಿದ್ದಾರೆ. ಸ್ವಹಿತ ರಾಜಕೀಯಕ್ಕೆ ಇಬ್ಬರು ನಾಯಕರು ರಾಮನಗರದ ಜನರನ್ನು ಮೂರ್ಖರನ್ನಗಿ ಮಾಡುತ್ತಿದ್ದಾರೆ. ಈ ಇಬ್ಬರು ನಾಯಕರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು ರಾಜ್ಯದಲ್ಲಿ ಪ್ರಬಲ ಒಕ್ಕಲಿಗ ನಾಯಕರಾಗಿದ್ದಾರೆ. ಇನ್ನೂ ಯೋಗೇಶ್ವರ್ ಸಹ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು ಇವರು ಪ್ರಬಲಾಗದಂತೆ ಮಾಡುವುದೆ ಇವರ ಉದ್ದೇಶವಾಗಿದೆ.
ರಾಮನಗರದಲ್ಲಿ ಇದುವರೆಗೂ ಬೇರೆ ನಾಯಕರು ಬೆಳೆಯದ ಹಾಗೆ ನೋಡಿ ಕೊಂಡಿರು ಎಚ್ಡಿಕೆ ಮುಂದಿನ ದಿನಗಳಲ್ಲಿ ರಾಮನಗರವನ್ನು ತನ್ನ ಕುಟುಂಬ ರಾಜಕೀಯಕ್ಕೆ ಕೇಂದ್ರವಾಗಿ ಮಾಡಿಕೋಳ್ಳೊ ಸಾಧ್ಯತೆಯನ್ನು ತಳ್ಳಿ ಹಾಕುವ ಹಾಗಿಲ್ಲ. ಇನ್ನೂ ಕನಕಪುರದಲ್ಲಿಯು ಸಹ ಇದುವರೆಗೂ ಯಾವ ನಾಯಕರು ಬೆಳೆಯದಂತೆ ನೋಡಿಕೊಂಡಿರು ಡಿಕೆಶಿ ಅಧಿಕಾರವನ್ನು ತನ್ನ ಕುಟುಂಬದಲ್ಲೇ ಹಿಡಿತದಲ್ಲೆ ಇಟ್ಟುಕೊಂಡಿದ್ದಾರೆ. ಕನಕಪುರದ ಜನ ಇವರ ಅಧಿಕಾರದ ದರ್ಪಕ್ಕೆ ಹೆದರಿ ಇವರ ವಿರುದ್ದ ತಿರುಗಿಬೀಳುವ ಸಾಹಸಕ್ಕೆ ಕೈಹಾಕಿಲ್ಲ. ಅಭಿವೃದ್ಧಿ ಹೆಸರಲ್ಲಿ ಕನಕಪುರದ ಎಲ್ಲಾ ಸರ್ಕಾರಿ ಕಾಮಗಾರಿಗಳ ಗುತ್ತಿಗೆಗಳನ್ನು ತನ್ನ ಚೇಲಾಗಳಿಗೆ ಮೀಸಲಿಟ್ಟಿರುವ ಡಿಕೆಶಿ ಸರ್ಕಾರದ ಕೆಲಸಗಳನ್ನು ತನ್ನ ಸಂಭಂದಿಗಳಿಗೆ ಮಿಸ್ ಅಗದ ಹಾಗೇ ನೋಡಿಕೊಂಡಿದ್ದಾರೆ. ತನಗೆ ಬೇಕಾದ ಅಧಿಕಾರಿಗಳನ್ನೆ ಕನಕಪುರದಲ್ಲಿ ಹಾಕಿಸಿಕೊಂಡು ಕನಕಾಸುರನಾಗಿ ಮೆರೆಯುತ್ತಿರುವ ಡಿಕೆಶಿಗೆ ಅಲ್ಲಿನ ಜನ ತಿರುಗಿ ಬೀಳದೆ ಇದ್ದರೆ ಕೋಟಿಗಟ್ಟಲೆ ಸಂಪಾದಿಸಿ ಮುಂದಿನ ಚುನಾವಣೆ ವೇಳೆಗೆ 5000 ಸಾವಿರ ಕೋಟಿಯ ಆಸ್ತಿಯನ್ನು ಘೋಷಿಸಿದರು ಆಶ್ಚರ್ಯ ಪಡಬೇಕಾಗಿಲ್ಲ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401
ದಿನದ ಸುದ್ದಿ
ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್
ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.
ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243