Connect with us

ರಾಜಕೀಯ

ನವ ಉದಾರ ವಿತ್ತೀಯ ಆಳ್ವಿಕೆಯ ವಿಕೃತಿ-1: ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನಿಲ್ಲಿಸಿರುವ ಮೋದಿ ಸರಕಾರ

Published

on

 

ದೇಶದ ಅದೃಷ್ಟಹೀನ ಅಲ್ಪ ಸಂಖ್ಯಾತರ ಮೇಲೆ ಆರ್ಭಟಿಸುವ, ಜಬರ್ದಸ್ತು ಮಾಡುವ, ಆಡಂಬರದ ಗಂಡಸುತನ ತೋರಿಸುವ ಮೋದಿ ಸರ್ಕಾರವು ಹಣಕಾಸು ಬಂಡವಾಳದ ವಿರುದ್ಧ ನಿಲ್ಲುವ ಎದೆಗಾರಿಕೆ ಹೊಂದಿಲ್ಲ. ಬದಲಿಗೆ ರಾಜ್ಯಗಳನ್ನು ಆರ್ಥಿಕವಾಗಿ ಹಿಂಡಲು ಮುಂದಾಗುತ್ತದೆ, ರಾಜ್ಯಗಳಿಗೆ ಜಿಎಸ್‌ಟಿ ನಷ್ಟ ಪರಿಹಾರದ ಹಣ ಕೊಡುವುದನ್ನು ನಿಲ್ಲಿಸುತ್ತದೆ, ಬಡವರ ಕಲ್ಯಾಣ ಕಾರ್ಯಕ್ರಮಗಳ ವೆಚ್ಚದ ಕಡಿತವನ್ನು ಮಾಡುತ್ತದೆ. ಅದು, ಹಣಕಾಸು ಬಂಡವಾಳವು ಅರ್ಥವ್ಯವಸ್ಥೆಗೆ ಆಘಾತ ತಲುಪಿಸುವಂತಹ ಆಜ್ಞೆಗಳನ್ನು ಕೊಂಡೊಯ್ಯುವ ಕೊಳವೆಯ ಪಾತ್ರ ವಹಿಸಿದೆ. ಇಲ್ಲಿ ನವ ಉದಾರ ಆಳ್ವಿಕೆಯ ವಿಕೃತಿಯ ಪ್ರಭಾವ ಸ್ಪಷ್ಟವಾಗಿ ಕಾಣುತ್ತದೆ.

-ಪ್ರೊ. ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ. ನಾಗರಾಜ್

ಒಂದು ಅರ್ಥವ್ಯವಸ್ಥೆಯಲ್ಲಿ ವರಮಾನಗಳ ವೃದ್ಧಿ ನಿಧಾನಗೊಳ್ಳುತ್ತಿರುವಾಗ, ಸರ್ಕಾರದ ತೆರಿಗೆ ಆದಾಯದ ಬೆಳವಣಿಗೆಯೂ ನಿಧಾನಗೊಳ್ಳುತ್ತದೆ. ಆದಾಗ್ಯೂ, ಸರ್ಕಾರಕ್ಕೆ ಕೆಲವು ನಿರ್ದಿಷ್ಟ ವೆಚ್ಚಗಳನ್ನು ಕೈಗೊಳ್ಳಲೇಬೇಕಾದ ಅನಿವಾರ್ಯತೆ ಇರುತ್ತದೆ. ಅಂತಹ ಅನಿವಾರ್ಯ ವೆಚ್ಚಗಳನ್ನು ಹೊಂದಿಸಿಕೊಳ್ಳುವ ಸಲುವಾಗಿ, ಸರ್ಕಾರವು ಅಧಿಕ ತೆರಿಗೆಗಳನ್ನು ಹೇರಬೇಕಾಗುತ್ತದೆ; ಇಲ್ಲವೇ ಸಾಲಮಾಡಬೇಕಾಗುತ್ತದೆ (ಅಂದರೆ, ವಿತ್ತೀಯ ಕೊರತೆಯ ಗಾತ್ರ ದೊಡ್ಡದಾಗುತ್ತದೆ).

ಮಹಾ ಯದ್ಧಾನಂತರದ ಕಾಲದಲ್ಲಿ ಎಲ್ಲ ಬಂಡವಾಳಶಾಹಿ ದೇಶಗಳೂ (ಆಗ, ಈ ದೇಶಗಳು ತಮ್ಮ ಅರ್ಥವ್ಯವಸ್ಥೆಯ ಮೇಲೆ ನಿಯಂತ್ರಣ ಹೊಂದಿದ್ದವು) ತಮ್ಮ ಅರ್ಥವ್ಯವಸ್ಥೆಯು ಮಂದಗತಿಗೆ ಇಳಿದಾಗ ತಮ್ಮ ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದವು, ಅಂದರೆ ಸಾಲ ಮಾಡುತ್ತಿದ್ದವು. ಸಾಲ ಮಾಡಿದ ಹಣವನ್ನು ಸರ್ಕಾರಗಳು ಧಾರಾಳವಾಗಿ ಖರ್ಚು ಮಾಡುತ್ತಿದ್ದ ಕಾರಣದಿಂದಾಗಿ, ಬೇಡಿಕೆ ಕುದುರುತ್ತಿತ್ತು ಮತ್ತು ಅರ್ಥವ್ಯವಸ್ಥೆಯು ಚೇತರಿಸಿಕೊಳ್ಳುತ್ತಿತ್ತು. ಇಂತಹ ವಿದ್ಯಮಾನವನ್ನು ಒಂದು ಸ್ವಯಂ ಸ್ಥಿರಕಾರಿ (automatic stabiliser) ಎಂಬುದಾಗಿ ಅರ್ಥಶಾಸ್ತ್ರದ ಪಠ್ಯ ಪುಸ್ತಕಗಳು ತಿಳಿಸುತ್ತವೆ.

ಸರ್ಕಾರಗಳು ಸಂದರ್ಭಾನುಸಾರವಾಗಿ ಸಾಲ ಮಾಡಿ ಅದನ್ನು ಖರ್ಚು ಮಾಡುತ್ತಿದ್ದ ಸಂಗತಿಯು, ತಮ್ಮ ಸಾಮಾಜಿಕ ಮತ್ತು ಆರ್ಥಿಕ ನೀತಿಗಳ ಮೇಲೆ ಎಲ್ಲ ದೇಶಗಳೂ ನಿಯಂತ್ರಣ ಹೊಂದಿದ್ದ ಕಾಲದಲ್ಲಿ ಸಂಗತವಾಗಿತ್ತು. ಆದರೆ, ನವ ಉದಾರವಾದದ ಆಳ್ವಿಕೆಯಲ್ಲಿ ಈ ಸಂಗತಿಯು ಅಸಂಗತವಾಗಿದೆ. ನವ ಉದಾರವಾದದ ಆಳ್ವಿಕೆಯಲ್ಲಿ, ಅರ್ಥವ್ಯವಸ್ಥೆಯ ಮಂದಗತಿಯಿಂದಾಗಿ ತೆರಿಗೆ ಸಂಗ್ರಹ ಇಳಿದಾಗ, ಸರ್ಕಾರವು ಬಂಡವಾಳಗಾರರ ಮೇಲೆ ಅಧಿಕ ತೆರಿಗೆ ವಿಧಿಸಲೂ ಆಗದ ಅಥವಾ ಹೆಚ್ಚು ಸಾಲ ಮಾಡಲೂ ಆಗದ ಪರಿಸ್ಥಿತಿಯಲ್ಲಿದೆ.

ಏಕೆಂದರೆ, ಈ ಎರಡೂ ಕ್ರಮಗಳನ್ನು ಅಂತಾರಾಷ್ಟ್ರೀಯ ಹಣ ಕಾಸು ಬಂಡವಾಳವು ವಿರೋಧಿಸುತ್ತದೆ. ಅದರ ಈ ನಿಲುವಿಗೆ ಸರ್ಕಾರ ಒಪ್ಪಿಕೊಳ್ಳದಿದ್ದರೆ ಬಂಡವಾಳವು ದೇಶದಿಂದ ಪಲಾಯನ ಮಾಡಿ ಒಂದು ಆರ್ಥಿಕ ಬಿಕ್ಕಟ್ಟು ಉಂಟಾಗುತ್ತದೆ. ಒಂದು ವೇಳೆ, ದುಡಿಯುವ ಜನತೆಯ ಮೇಲೆ ಅಧಿಕ ತೆರಿಗೆಗಳ ಭಾರ ಹೊರಿಸಿದರೆ, ಆಗಲೂ, ಒಟ್ಟಾರೆ ಬೇಡಿಕೆ ವೃದ್ಧಿಸುವುದಿಲ್ಲ. ಹಾಗಾಗಿ, ಅರ್ಥವ್ಯವಸ್ಥೆಯ ಮಂದಗತಿ ನಿಲ್ಲದು.

ಒಂದು ವಾಸ್ತವಾಂಶವಾಗಿ ಹೇಳುವುದಾದರೆ, ಅಮೇರಿಕಾ ದೇಶವನ್ನು ಹೊರತುಪಡಿಸಿದರೆ, ಎಲ್ಲಾ ದೇಶಗಳೂ ತಮ್ಮ ವಿತ್ತೀಯ ಕೊರತೆಯು ತಮ್ಮ ದೇಶದ ಜಿಡಿಪಿಯ 3% ಮೀರದಂತೆ ಕಾನೂನು ಮಾಡಿಕೊಂಡಿವೆ. ಭಾರತದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ವಿತ್ತೀಯ ಕೊರತೆಯು ತಮ್ಮ ತಮ್ಮ ಜಿಡಿಪಿಯ 3% ಮೀರದಂತೆ ಕಾನೂನು ಮಾಡಿಕೊಂಡಿವೆ. ಅರ್ಥವ್ಯವಸ್ಥೆಯು ಮಂದಗತಿಗೆ ಇಳಿದಾಗ ತೆರಿಗೆ ಸಂಗ್ರಹವೂ ಇಳಿಯಲೇಬೇಕಾಗುತ್ತದೆ. ಹಾಗಾಗಿ ಸರ್ಕಾರವು ಸಾರ್ವಜನಿಕರಿಗಾಗಿ ಕೈಗೊಳ್ಳುವ ಖರ್ಚುಗಳೂ ಇಳಿಯುತ್ತವೆ.

ಆದ್ದರಿಂದ, ಒಂದು ನವ ಉದಾರ ಆಳ್ವಿಕೆಯಲ್ಲಿ, ಸರ್ಕಾರವು ಕೈಗೊಳ್ಳುವ ಖರ್ಚು ವೆಚ್ಚಗಳು, ಬೇಡಿಕೆ ಕುದುರಿಸುವ ಮತ್ತು ಅರ್ಥವ್ಯವಸ್ಥೆ ಚೇತರಿಸಿಕೊಳ್ಳುವ ಸ್ವಯಂ ಸ್ಥಿರಕಾರಿ ಪರಿಣಾಮವನ್ನು ನವ ಉದಾರ ಆಳ್ವಿಕೆ ಬರುವ ಮೊದಲಿನ ರೀತಿಯಲ್ಲಿ ಬೀರುವುದಿಲ್ಲ. ಮೇಲಾಗಿ, ಅರ್ಥವ್ಯವಸ್ಥೆಯು ಮಂದಗತಿಗೆ ಇಳಿದಾಗ ತೆರಿಗೆ ಸಂಗ್ರಹವೂ ಇಳಿಯುತ್ತದೆ ಮತ್ತು ಸರ್ಕಾರವು ಸಾರ್ವಜನಿಕರಿಗಾಗಿ ಕೈಗೊಳ್ಳುವ ಖರ್ಚುಗಳೂ ಇಳಿಯುತ್ತವೆ.

ಅದರ ಪರಿಣಾಮವಾಗಿ ಅರ್ಥವ್ಯವಸ್ಥೆಯು ಇನ್ನೂ ಹೆಚ್ಚಿನ ಮಂದಗತಿಗೆ ಇಳಿಯುತ್ತದೆ. ಸರ್ಕಾರದ ಕಡಿಮೆ ಖರ್ಚುಗಳು ಆವರ್ತಗಳಲ್ಲಿ ಉಂಟಾಗುವ ಬಿಕ್ಕಟ್ಟಿಗೆ ಇಂಬು ಕೊಡುತ್ತವೆ ಎಂದು ಹೇಳುವುದುಂಟು. ಬಿಕ್ಕಟ್ಟು ಯಾವಾಗಲೂ ಆವರ್ತನಗೊಳ್ಳುತ್ತದೆ ಎಂದು ಸೂಚಿಸುವ ಕಾರಣದಿಂದ ಈ ಹೇಳಿಕೆಯು ನಮ್ಮನ್ನು ತಪ್ಪುದಾರಿಗೆ ಎಳೆಯುತ್ತದೆ.

ಅನಿವಾರ್ಯ ವೆಚ್ಚಗಳನ್ನು ಹೊಂದಿಸಿಕೊಳ್ಳುವ ಸಲುವಾಗಿ ಸರ್ಕಾರಗಳು ಹೆಚ್ಚಿನ ಮಟ್ಟದ ಸಾಲ ಮಾಡುವ ಕ್ರಮವನ್ನು ವಿತ್ತೀಯ ಹೊಣೆಗಾರಿಕೆಯ ಹೆಸರಿನಲ್ಲಿ ಕೈಬಿಡಲಾಗಿದೆ ಮತ್ತು ಎಲ್ಲ ಸರ್ಕಾರಗಳು ವಿತ್ತೀಯ ಶಿಸ್ತು ಪಾಲಿಸುವಂತೆ ಆಜ್ಞಾಪಿಸಲಾಗಿದೆ. ಹಿಂದೆ, ಸರ್ಕಾರಗಳು ಸಂದರ್ಭಕ್ಕನುಸಾರವಾಗಿ ಹೆಚ್ಚಿನ ಮಟ್ಟದ ಸಾಲ ಮಾಡುತ್ತಿದ್ದ ಕ್ರಮವು ಅರ್ಥವ್ಯವಸ್ಥೆಯು ಮಂದಗತಿಗೆ ಇಳಿಯದಂತೆ ರಕ್ಷಿಸುವ ಒಂದು ತಡೆ ಗೋಡೆಯಂತೆ ಕೆಲಸ ಮಾಡುತ್ತಿತ್ತು. ಅಂತಹ ಕ್ರಮವನ್ನು ವಿರೋಧಿಸುವ ನವ ಉದಾರ ಆಳ್ವಿಕೆಯ ಹಠಮಾರಿತನದ ನಿಲುವು ಅರ್ಥವ್ಯವಸ್ಥೆಯ ಮಂದಗತಿಯನ್ನು ಅಧಿಕಗೊಳಿಸುತ್ತದೆ. ಈ ಅಂಶವೇ ನವ ಉದಾರ ವಿತ್ತೀಯ ಆಳ್ವಿಕೆಯ ವಿಕೃತಿಯ ತಿರುಳು.

ಈ ಹಿನ್ನೆಲೆಯಲ್ಲಿ, ತಾನು ಸಿಲುಕಿರುವ ಇಕ್ಕಟ್ಟಿನಿಂದ ನುಣಿಚಿಕೊಳ್ಳಲು ಸರ್ಕಾರವು ಎಲ್ಲ ರೀತಿಯ ಕುಯುಕ್ತಿಗಳನ್ನೂ ಬಳಸುತ್ತಿದೆ. ಭಾರತದಲ್ಲಿ ಈಗ ಎರಡು ಇಂತಹ ಕುಯುಕ್ತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಒಂದು, ಕೇಂದ್ರ ಸರ್ಕಾರವು ತಾನು ಹೊರಬೇಕಾಗಿರುವ ವಿತ್ತೀಯ ಭಾರವನ್ನು, ಬಲವಂತವಾಗಿ ಮತ್ತು ಸಾಂವಿಧಾನಿಕ ಹೊಣೆಗಾರಿಕೆಯನ್ನು ಉಲ್ಲಂಘಿಸಿ, ರಾಜ್ಯ ಸರ್ಕಾರಗಳ ಹೆಗಲಿಗೆ ಹೊರಿಸುತ್ತಿದೆ. ಇಂತಹ ಇನ್ನೊಂದು ಪ್ರಯತ್ನವೆಂದರೆ, ಸಾರ್ವಜನಿಕ ವಲಯವನ್ನು ಖಾಸಗಿಯವರಿಗೆ ಮಾರಲು ಸರ್ಕಾರ ಹುಚ್ಚು ಅವಸರದಲ್ಲಿದೆ. ಹೇಗಾದರೂ ಸರಿ ಒಂದಿಷ್ಟು ಹಣ ಕೈಗೆ ಸಿಕ್ಕಿದರೆ ಸಾಕು ಎನ್ನುವ ಅದರ ಮಂದದೃಷ್ಠಿಯ ಮನೋಭಾವ ಖಂಡನೀಯ. ಈ ಎರಡೂ ಪ್ರಯತ್ನಗಳನ್ನು ಒಂದೊಂದಾಗಿ ಪರಿಶೀಲಿಸೋಣ.

ಕೇಂದ್ರ ಸರ್ಕಾರವು ತಾನು ಹೊರಬೇಕಾಗಿರುವ ರಕ್ಷಣಾ ವೆಚ್ಚದ ಭಾರವನ್ನು, ಬಲವಂತವಾಗಿ ಮತ್ತು ಸಾಂವಿಧಾನಿಕ ಹೊಣೆಗಾರಿಕೆಯನ್ನು ಉಲ್ಲಂಘಿಸಿ, ಹೇಗೆ ರಾಜ್ಯ ಸರ್ಕಾರಗಳ ಹೆಗಲಿಗೆ ಹೊರಿಸಲು ಪ್ರಯತ್ನಿಸುತ್ತಿದೆ ಎಂಬ ಅಂಶವನ್ನು ಈಗಾಗಲೇ ಚರ್ಚಿಸಲಾಗಿದೆ (ಜನಶಕ್ತಿ- ಸಂಚಿಕೆ 37, ಸೆಪ್ಟೆಂಬರ್ 9-15, 2019). ದೇಶದ ರಕ್ಷಣೆ ಸಂಬಂಧಿತ ಖರ್ಚು ವೆಚ್ಚಗಳನ್ನು ಮತ್ತು ರಕ್ಷಣೆಗೆ ಸಂಬಂಧಿಸಿದ ಎಲ್ಲ ತೀರ್ಮಾನಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಪ್ರತ್ಯೇಕವಾಗಿ ಮತ್ತು ಏಕಮಾತ್ರವಾಗಿ ಕೇಂದ್ರ ಸರ್ಕಾರಕ್ಕೆ ವಹಿಸಲಾಗಿದೆ.

ಇದನ್ನು ಸಂವಿಧಾನದ ಏಳನೆಯ ಷೆಡ್ಯೂಲಿನಲ್ಲಿ ನಿರ್ದಿಷ್ಟವಾಗಿ ನಮೂದಿಸಲಾಗಿದೆ. ಈ ಸಂವಿಧಾನಿಕ ಏರ್ಪಾಟಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದಾಗ್ಯೂ, ತನ್ನ ಸಾಂವಿಧಾನಿಕ ಹೊಣೆಗಾರಿಕೆಯನ್ನು ಉಲ್ಲಂಘಿಸಿ, ಕೇಂದ್ರ ಸರ್ಕಾರವು ತನ್ನ ಪಾಲಿಗೆ ವಹಿಸಿರುವ ರಕ್ಷಣಾ ಖರ್ಚು ವೆಚ್ಚಗಳನ್ನು, ಕೇಂದ್ರ ಮತ್ತು ರಾಜ್ಯಗಳ ನಡುವೆ ಹಂಚಿಕೆಯಾಗುವ ಹಣದಿಂದ ಮುರಿದುಕೊಳ್ಳಲು ಆದೇಶಿಸುವಂತೆ ಹದಿನೈದನೆಯ ಹಣ ಕಾಸು ಆಯೋಗವನ್ನು ಕೋರಿದೆ. ಅಂದರೆ, ಕೇಂದ್ರ ಸರ್ಕಾರವೇ ಹೊರಬೇಕಾದ ರಕ್ಷಣಾ ವೆಚ್ಚದ ಹೊರೆಯನ್ನು ಬಲವಂತವಾಗಿ ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಲಾಗುತ್ತಿದೆ.

ಇಲ್ಲಿಯವರೆಗೆ, ಈ ವಿಷಯವು, ರಾಜ್ಯಗಳಿಗೆ ಒಡ್ಡಿದ ಒಂದು ಬೆದರಿಕೆಯಾಗಿ ಉಳಿದಿದೆ. ಆದರೆ, ಇನ್ನೊಂದು ವಿಷಯದಲ್ಲಿ-ಜಿಎಸ್‌ಟಿಯ ನಷ್ಟ ತುಂಬಿಕೊಡುವ ವಿಷಯದಲ್ಲಿ – ಕೇಂದ್ರ ಸರ್ಕಾರವು ಈಗಾಗಲೇ ರಾಜ್ಯಗಳನ್ನು ಹಿಂಡಿ ಹಿಪ್ಪೆ ಮಾಡಿದೆ. ಜಿಎಸ್‌ಟಿ ಜಾರಿ ಮಾಡುವ ಸಂದರ್ಭದಲ್ಲಿ, ರಾಜ್ಯಗಳು ಜಿಎಸ್‌ಟಿ ಪದ್ಧತಿಯನ್ನು ಒಪ್ಪಿಕೊಳ್ಳುವಂತೆ ಅವುಗಳ ಮನ ಒಲಿಸುವ ಸಲುವಾಗಿ, ಜಿಎಸ್‌ಟಿಯ ಜಾರಿಯಿಂದ ರಾಜ್ಯಗಳಿಗೆ ಉಂಟಾಗುವ ತೆರಿಗೆ ಆದಾಯದ ನಷ್ಟವನ್ನು ಐದು ವರ್ಷಗಳ ಅವಧಿಯವರೆಗೆ ತುಂಬಿಕೊಡುತ್ತೇವೆ ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಭರವಸೆ ಕೊಟ್ಟಿತ್ತು.

ಈ ಉದ್ದೇಶಕ್ಕಾಗಿ ಒಂದು ಪರಿಹಾರ ನಿಧಿಯನ್ನೂ ಸ್ಥಾಪಿಸಲಾಗಿತ್ತು ಮತ್ತು ಕೆಲವು ನಿರ್ದಿಷ್ಟ ತೆರಿಗೆಗಳಿಂದ ಬರುವ ಹಣವನ್ನು ಈ ನಿಧಿಗೆ ತುಂಬುವ ಏರ್ಪಾಟನ್ನೂ ಮಾಡಲಾಗಿತ್ತು. ತೆರಿಗೆ ಆದಾಯದ ನಷ್ಟವನ್ನು ಲೆಕ್ಕ ಹಾಕುವ ಸಲುವಾಗಿ, ಒಂದು ಮೂಲ ವರ್ಷದ ತೆರಿಗೆ ಆದಾಯದ ಮೇಲೆ ಪ್ರತಿ ವರ್ಷವೂ 14% ತೆರಿಗೆ ಅದಾಯ ಹೆಚ್ಚುವ ಒಂದು ವಾಸ್ತವಿಕ ಅಂದಾಜಿನ ಮೇಲೆ, ರಾಜ್ಯಗಳಿಗೆ ಉಂಟಾಗುವ ತೆರಿಗೆ ಆದಾಯದ ನಷ್ಟವನ್ನು ಲೆಕ್ಕ ಹಾಕುವ ವಿಧಾನವನ್ನೂ ಒಪ್ಪಿಕೊಳ್ಳಲಾಗಿತ್ತು.

ಆದರೆ, ಕೇಂದ್ರ ಸರ್ಕಾರವು ಆಗಸ್ಟ್ ತಿಂಗಳಿನಿಂದೀಚೆಗೆ ರಾಜ್ಯಗಳಿಗೆ ಜಿಎಸ್‌ಟಿ ನಷ್ಟ ಪರಿಹಾರದ ಹಣ ಕೊಡುವುದನ್ನು ನಿಲ್ಲಿಸಿದೆ. ನಷ್ಟ ಪರಿಹಾರ ನಿಧಿಯಲ್ಲಿ ಸಾಕಷ್ಟು ಹಣವಿಲ್ಲ ಎಂದು ಹೇಳುತ್ತಿದೆ. ಆದರೆ, ರಾಜ್ಯಗಳಿಗೆ ತೆರಿಗೆ ಆದಾಯ ನಷ್ಟ ತುಂಬಿಕೊಡುವುದಾಗಿ ಕೇಂದ್ರ ಕೊಟ್ಟ ಭರವಸೆಗೂ ಮತ್ತು ನಿಧಿಯಲ್ಲಿ ಎಷ್ಟು ಹಣ ಇದೆ ಎಂಬುದಕ್ಕೂ ಸಂಬಂಧವಿಲ್ಲ; ನಷ್ಟ ತುಂಬಿಕೊಡುವ ಅಂಶವನ್ನು ಸಂವಿಧಾನ ತಿದ್ದುಪಡಿಯಲ್ಲಿ ನಮೂದಿಸಲಾಗಿತ್ತು; ನಷ್ಟ ಪರಿಹಾರ ನಿಧಿಯಲ್ಲಿ ಸಾಕಷ್ಟು ಹಣವಿಲ್ಲದಿದ್ದರೆ ಕೇಂದ್ರ ಸರ್ಕಾರವು ತನ್ನ ಪಾಲಿನ ಜಿಎಸ್‌ಟಿ ಆದಾಯದಿಂದಲೇ ಕೊಡಲಿ ಎಂದು ರಾಜ್ಯಗಳು ಹೇಳುತ್ತಿರುವುದು ಸರಿಯಾಗಿಯೇ ಇದೆ.

ಜಿಎಸ್‌ಟಿ ಜಾರಿಯಿಂದಾಗಿ ಪ್ರಸಕ್ತ ಹಣ ಕಾಸು ವರ್ಷದ ಹೆಚ್ಚಿನ ತಿಂಗಳುಗಳಲ್ಲಿ ಮಾಸಿಕ ತೆರಿಗೆ ಸಂಗ್ರಹವು ಒಂದು ಲಕ್ಷ ಕೋಟಿ ರೂ. ದಾಟುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಜಿಎಸ್‌ಟಿಯಲ್ಲಿರುವ ನ್ಯೂನತೆಗಳ ಕಾರಣದಿಂದಾಗಿ ಮತ್ತು ಮಂದಗತಿಗೆ ಇಳಿದಿರುವ ಅರ್ಥವ್ಯವಸ್ಥೆಯ ಕಾರಣದಿಂದಾಗಿ ತೆರಿಗೆ ಸಂಗ್ರಹದಲ್ಲಿ ಕೊರತೆಯುಂಟಾಗುತ್ತಿದೆ. ಹಬ್ಬಗಳ ಕಾರಣದಿಂದಾಗಿ ವಹಿವಾಟು ಹೆಚ್ಚಿಗೆ ಇದ್ದ ನವೆಂಬರ್ ತಿಂಗಳಿನಲ್ಲಿ ಮಾತ್ರ ಒಂದು ಲಕ್ಷ ಕೋಟಿಗಿಂತಲೂ ಜಾಸ್ತಿ ತೆರಿಗೆ ಸಂಗ್ರಹವಾಗಿತ್ತು.

ಆದಾಯದ ಕೊರತೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರವು, ನಷ್ಟ ತುಂಬಿಕೊಡುವ ಸಂವಿಧಾನಿಕ ಭರವಸೆಯನ್ನು ಮುರಿದು, ತಲೆಯ ಮೇಲೆ ಮರಿಗಳನ್ನು ಹೊತ್ತಿದ್ದ ಕೋತಿಯೊಂದು ನೀರಿನ ಮಟ್ಟ ಮೂಗಿನವರೆಗೆ ಏರಿದಾಗ ಆ ಮರಿಗಳನ್ನೇ ನಿಂತ ಕಾಲ ಕೆಳಗೆ ಹಾಕಿಕೊಂಡು ಜೀವ ಉಳಿಸಿಕೊಳ್ಳುವ ಕೋತಿಯ ರೀತಿಯಲ್ಲಿ ರಾಜ್ಯಗಳನ್ನು ತುಳಿಯುತ್ತಿದೆ. ಅದರ ಜೊತೆಯಲ್ಲಿ, ಹಂಚಿಕೆಯಾಗಬೇಕಾದ ಸಂಯೋಜಿತ ಜಿಎಸ್‌ಟಿ(ಐಜಿಎಸ್‌ಟಿ) ಸಂಗ್ರಹದ ಸಿಂಹ ಪಾಲನ್ನು ಕೇಂದ್ರವೇ ಇಟ್ಟುಕೊಳ್ಳುತ್ತಿದೆ.

ಕೇಂದ್ರ ಸರ್ಕಾರದ ಇಂತಹ ಇಬ್ಬಗೆಯ ಹಿಂಡುವಿಕೆಯಿಂದಾಗಿ ರಾಜ್ಯಗಳ ಹಣಕಾಸಿನ ಪರಿಸ್ಥಿತಿ ಕಳವಳಕಾರಿಯಾಗಿದೆ. ಬಡವರ ಅರೋಗ್ಯ ರಕ್ಷಣೆ, ಶಿಕ್ಷಣ ಮುಂತಾದ ಕಲ್ಯಾಣ ಕಾರ್ಯಕ್ರಮಗಳ ವೆಚ್ಚದ ಹೆಚ್ಚಿನ ಭಾಗವನ್ನು ರಾಜ್ಯಗಳು ಭರಿಸುವ ಕಾರಣದಿಂದಾಗಿ, ರಾಜ್ಯಗಳ ಆದಾಯ ಇಳಿದಾಗ ಇಂತಹ ಕಲ್ಯಾಣ ಕಾರ್ಯಕ್ರಮಗಳ ವೆಚ್ಚಗಳ ಇಳಿಕೆಯು ಬಡವರನ್ನು ಇನ್ನೂ ಹೆಚ್ಚಿನ ಬಡತನಕ್ಕೆ ತಳ್ಳುತ್ತದೆ.

ಕೇಂದ್ರ ಸರ್ಕಾರವು ಸಾಲ ಮಾಡುವ ಮೂಲಕ (ಅಂದರೆ, ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ) ರಾಜ್ಯಗಳಿಗೆ ನಷ್ಟ ತುಂಬಿಕೊಡುವ ಭರವಸೆಯನ್ನು ಈಡೇರಿಸಿದ್ದರೆ, ಈ ರೀತಿಯಲ್ಲಿ ರಾಜ್ಯಗಳ ಹಿಂಡುವಿಕೆಯನ್ನು ತಪ್ಪಿಸಬಹುದಿತ್ತು. (ಬಂಡವಾಳಿಗರ ಮೇಲೆ ತೆರಿಗೆ ಹಾಕುವ ಕೆಚ್ಚೆದೆ ಕೇಂದ್ರ ಸರ್ಕಾರಕ್ಕೆ ಇಲ್ಲವೆಂಬ ಅಂಶವನ್ನು ಇತ್ತೀಚೆಗೆ ಅದು ಬಂಡವಾಳಿಗರಿಗೆ ಕೊಟ್ಟಿರುವ ತೆರಿಗೆ ವಿನಾಯ್ತಿಯ ಕ್ರಮವೇ ಸಾಬೀತು ಮಾಡುತ್ತದೆ).

ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಂಡು ಒಟ್ಟಾರೆ ಬೇಡಿಕೆಯನ್ನು ಉತ್ತೇಜಿಸಿ ಉದ್ಯೋಗ ಸೃಷ್ಠಿಸಬಹುದಿತ್ತು, ಅದೂ ಕೂಡ ಹಣದುಬ್ಬರಕ್ಕೆ ಎಡೆ ಇಲ್ಲದಂತೆ. ಇತ್ತೀಚೆಗೆ ಹಣದುಬ್ಬರ ನುಸುಳುತ್ತಿರುವುದು ನಿಜವಾದರೂ, ಅದು ನಿರ್ದಿಷ್ಟ ವಲಯಕ್ಕೆ (ಅದಕ್ಕೆ ಈರುಳ್ಳಿ ಒಂದು ಉದಾಹರಣೆ) ಸಂಬಂಧಿಸುತ್ತದೆ. ಸರಬರಾಜಿಗೆ ಸಂಬಂಧಿಸಿದ ಇಂತಹ ಸಮಸ್ಯೆಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನಿವಾರಿಸಿಕೊಂಡು, ಹಣದುಬ್ಬರಕ್ಕೆ ಆಸ್ಪದವಿಲ್ಲದ ರೀತಿಯಲ್ಲಿ, ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಳ್ಳಬಹುದಿತ್ತು.

ಆದರೆ, ವಿತ್ತೀಯ ಕೊರತೆಯನ್ನು ಈ ರೀತಿಯಲ್ಲಿ ಹೆಚ್ಚಿಸಿಕೊಳ್ಳುವುದನ್ನು ಅಂತಾರಾಷ್ಟ್ರೀಯ ಹಣಕಾಸು ಬಂಡವಾಳವು ಒಪ್ಪುವುದಿಲ್ಲ. ದೇಶದ ಅದೃಷ್ಟಹೀನ ಅಲ್ಪ ಸಂಖ್ಯಾತರ ಮೇಲೆ ಆರ್ಭಟಿಸುವ, ಜಬರ್ದಸ್ತು ಮಾಡುವ, ಆಡಂಬರದ ಗಂಡಸುತನ ತೋರಿಸುವ ಮೋದಿ ಸರ್ಕಾರವು ಹಣಕಾಸು ಬಂಡವಾಳದ ವಿರುದ್ಧ ನಿಲ್ಲುವ ಎದೆಗಾರಿಕೆ ಹೊಂದಿಲ್ಲ.

ಹಣಕಾಸು ಬಂಡವಾಳವು ಮುಖ ಸಿಂಡರಿಕೊಳ್ಳುವಂತಹ ಯಾವ ಕ್ರಮವನ್ನೂ ಅದು ಕೈಗೊಳ್ಳುವುದಕ್ಕಿಂತ ರಾಜ್ಯಗಳ ಹಿಂಡುವಿಕೆಯನ್ನು ಇಷ್ಟಪಡುತ್ತದೆ; ಬಡವರ ಕಲ್ಯಾಣ ಕಾರ್ಯಕ್ರಮಗಳ ವೆಚ್ಚದ ಕಡಿತವನ್ನು ಇಷ್ಟಪಡುತ್ತದೆ. ಅದು, ಹಣಕಾಸು ಬಂಡವಾಳವು ಅರ್ಥವ್ಯವಸ್ಥೆಗೆ ಆಘಾತ ತಲುಪಿಸುವಂತಹ ಆಜ್ಞೆಗಳನ್ನು ಕೊಂಡೊಯ್ಯುವ ಕೊಳವೆಯ ಪಾತ್ರ ವಹಿಸಿದೆ ಮತ್ತು ನವ ಉದಾರ ಆಳ್ವಿಕೆಯ ವಿಕೃತಿಯ ಪ್ರಭಾವ ಸ್ಪಷ್ಟವಾಗಿ ಕಾಣುತ್ತದೆ.

( ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಅಂದಾಜು 500 ಲಕ್ಷ ಮೊತ್ತದ ಕಳಪೆ ಕಾಮಗಾರಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಶ್ರೀ ಶಿವಮೂರ್ತಿ, ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ದಾವಣಗೆರೆ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಕಾಮಗಾರಿಯನ್ನು ಅಂದಾಜು 500 ಲಕ್ಷ ಮೊತ್ತದಲ್ಲಿ ಕೈಗೊಳ್ಳಲಾಗಿದ್ದು, ಸದರಿ ಕಾಮಗಾರಿ ನಡೆದು ಒಂದು ವರ್ಷದ ಒಳಗಾಗಿ ರಸ್ತೆಯು ಹಾಳಾಗಿರುತ್ತದೆ. ಹೀಗಾಗಿ ಸದರಿ ಕಾಮಗಾರಿಗೆ ಸಂಬAಧಿಸಿದ ದಾಖಲೆಗಳನ್ನು ಮಾಹಿತಿಹಕ್ಕು ಅಡಿಯಲ್ಲಿ ಪಡೆದು ಪರಿಶೀಲನೆ ಮಾಡಿದಾಗ, ಅಂತಿಮ ಬಿಲ್ಲನ್ನು ಮಂಜೂರು ಮಾಡುವ ಪೂರ್ವದಲ್ಲಿಯೇ ಸದರಿ ಕಾಮಗಾರಿಯು ಹದಗೆಟ್ಟಿರುವ ಮಾಹಿತಿ ಪಡೆದು, ಮಾಹಿತಿಹಕ್ಕು ಅಡಿಯಲ್ಲಿ ಸಂಬಂಧಿಸಿದ ಕಡತಗಳನ್ನು ಪಡೆದು ಪರಿಶೀಲನೆ ಮಾಡಿದಾಗ ಕಳಪೆ ಕಾಮಗಾರಿ ನಡೆದಿರುವುದು ಕಂಡು ಬಂದ ಕಾರಣ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರು ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ದಾವಣಗೆರೆ ಇವರಿಗೆ ನಮ್ಮ ದೂರು ಅರ್ಜಿಯನ್ನು ವರ್ಗಾಹಿಸಿ, ‘ಸದರಿ ವಿಷಯದ ಕುರಿತು ಸ್ಥಳ ಪರಿಶೀಲನೆ ನಡೆಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಮನವಿದಾರರಿಗೆ ಹಿಂಬರಹ ನೀಡುವಂತೆ’ ತಿಳಿಸಿರುತ್ತಾರೆ. ಆದರೆ 3 ತಿಂಗಳು ಕಳೆದರೂ ಕಾರ್ಯಪಾಲಕ ಅಭಿಯಂತರರಾದ ಶ್ರೀ ಶಿವಮೂರ್ತಿ ಇವರು ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು ನಿಗಧಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ರ‍್ಕಾರದ ಕರ‍್ಯರ‍್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜನವರಿ 3 ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸಲು ಜನವರಿ 24 ರವರೆಗೆ ಅವಕಾಶವಿದೆ. ಜನವರಿ 11 ರಂದು ನಡೆದ ವಿಶೇಷ ಅಭಿಯಾನದಲ್ಲಿ 85 ರ‍್ಜಿಗಳು ಸ್ವೀಕೃತವಾಗಿದ್ದು, ಮುಂದಿನ ಅಭಿಯಾನವು ಜನವರಿ 18 ರಂದು ನಡೆಯಲಿದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಮತಗಟ್ಟೆಗಳ ಪುನರ್ ವಿಂಗಡಣೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಹಿಂದೆ 217 ಮತಗಟ್ಟೆಗಳಿದ್ದವು. ನಿಯಮದಂತೆ 1200 ಕ್ಕಿಂತ ಹೆಚ್ಚು ಮತದಾರರಿರುವ ಕಡೆ ಹೊಸ ಮತಗಟ್ಟೆಗಳನ್ನು ಸೃಜಿಸಿ, ಪ್ರಸ್ತುತ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 24 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗಿದ್ದು, ಮೂಲಭೂತ ಸೌರ‍್ಯಗಳಾದ ರ‍್ಯಾಂಪ್ ಮುಂತಾದವುಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.

ರಾಜಕೀಯ ಪಕ್ಷಗಳಿಗೆ ಎರಡು ಪ್ರಮುಖ ಮನವಿಗಳನ್ನು ಮಾಡಿ ಬಿಎಲ್ಎ ಪ್ರತಿಯೊಂದು ಮತಗಟ್ಟೆ ಮಟ್ಟದಲ್ಲಿ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿ ಪಟ್ಟಿಯನ್ನು ನೀಡಬೇಕು. ಇದರಿಂದ ಮೃತ ಮತದಾರರ ಹೆಸರು ಕೈಬಿಡುವುದು ಮತ್ತು ವಿಳಾಸ ಬದಲಾವಣೆ ಕರ‍್ಯ ಸುಲಭವಾಗುತ್ತದೆ. ಹೆಸರು ಸರ‍್ಪಡೆಗೆ ಯುವ ಮತದಾರರು ಹಾಗೂ ಕೈಬಿಟ್ಟು ಹೋದ ರ‍್ಹ ಮತದಾರರ ಹೆಸರನ್ನು ಸೇರಿಸಲು ಸಹಕರಿಸಬೇಕು ಎಂದರು.

ಕ್ಷೇತ್ರದ ಮತದಾರರ ವಿವರ

ಕರಡು ಪಟ್ಟಿಯಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,158 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,13,555 ಹಾಗೂ ಮಹಿಳಾ ಮತದಾರರು 1,17,603 ಇದ್ದು, ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಲಿಂಗ ಅನುಪಾತ

ಕ್ಷೇತ್ರದ ಮತದಾರರ ಪಟ್ಟಿಯಲ್ಲಿನ ಲಿಂಗ ಅನುಪಾತವು 1036 ಆಗಿದ್ದು, ಇದು ಜಿಲ್ಲೆಯ ಜನಗಣತಿ ಅನುಪಾತಕ್ಕಿಂತ 972 ಮತ್ತು ರಾಜ್ಯದ ಸರಾಸರಿಗಿಂತಲೂ ಹೆಚ್ಚಿದೆ. ಮತದಾರರ ಜನಸಂಖ್ಯೆ ಅನುಪಾತ ಶೇ. 83.62 ರಷ್ಟಿದೆ. ಯುವ ಮತದಾರರಾದ 18-19 ವಯೋಮಾನದವರು ಕ್ಷೇತ್ರದಲ್ಲಿ ಒಟ್ಟು 1,692 ಮತದಾರರಿದ್ದು ಇದರಲ್ಲಿ 905 ಪುರುಷ, 787 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ವಿಕಲಚೇತನ ಮತದಾರರು ಒಟ್ಟು 2,544 ಮತದಾರರಿದ್ದು, ಇದರಲ್ಲಿ 1,397 ಪುರುಷರು ಮತ್ತು 1,147 ಮಹಿಳೆಯರಿದ್ದಾರೆ.

ವಿವಿಧ ವಯೋಮಾನದ ಮತದಾರರ ಅಂಕಿ-ಅಂಶಗಳು

ಯುವ ಮತದಾರರು, 18-19 ರ‍್ಷ ವಯೋಮಾನದ ಒಟ್ಟು 1,692 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 905 ಪುರುಷರು ಮತ್ತು 787 ಮಹಿಳಾ ಮತದಾರರಿದ್ದಾರೆ.

20-29 ರ‍್ಷ: ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರಿರುವ ವಿಭಾಗಗಳಲ್ಲಿ ಇದೂ ಒಂದು. ಒಟ್ಟು 43,616 ಮತದಾರರಿದ್ದು, ಇದರಲ್ಲಿ 21,601 ಪುರುಷರು, 22,002 ಮಹಿಳೆಯರು ಮತ್ತು 13 ತೃತೀಯ ಲಿಂಗಿ ಮತದಾರರಿದ್ದಾರೆ.
30-39 ರ‍್ಷ: ಈ ವಯೋಮಾನದಲ್ಲಿ ಒಟ್ಟು 55,814 ಮತದಾರರಿದ್ದಾರೆ. ಇದರಲ್ಲಿ 26,450 ಪುರುಷರು, 29,349 ಮಹಿಳೆಯರು ಮತ್ತು 15 ತೃತೀಯ ಲಿಂಗಿ ಮತದಾರರಿದ್ದಾರೆ.
ಮಧ್ಯವಯಸ್ಕರು: 40-49 ರ‍್ಷ: ಒಟ್ಟು 55,400 ಮತದಾರರಿದ್ದು, ಇದರಲ್ಲಿ 27,507 ಪುರುಷರು, 27,885 ಮಹಿಳೆಯರು ಮತ್ತು 8 ತೃತೀಯ ಲಿಂಗಿಗಳು ಸೇರಿದ್ದಾರೆ.
50-59 ರ‍್ಷ: ಈ ವಿಭಾಗದಲ್ಲಿ ಒಟ್ಟು 37,167 ಮತದಾರರಿದ್ದಾರೆ 18,917 ಪುರುಷರು, 18,245 ಮಹಿಳೆಯರು ಮತ್ತು 5 ತೃತೀಯ ಲಿಂಗಿಗಳು.

ಹಿರಿಯ ನಾಗರಿಕರು

60-69 ರ‍್ಷ: ಒಟ್ಟು 21,314 ಮತದಾರರಿದ್ದಾರೆ 10,484 ಪುರುಷರು, 10,826 ಮಹಿಳೆಯರು ಮತ್ತು 4 ತೃತೀಯ ಲಿಂಗಿಗಳು. 70-79 ರ‍್ಷ: ಈ ವಯೋಮಾನದ ಒಟ್ಟು 10,870 ಮತದಾರರಿದ್ದಾರೆ. ಇದರಲ್ಲಿ 5,310 ಪುರುಷರು ಮತ್ತು 5,560 ಮಹಿಳಾ ಮತದಾರರಿದ್ದಾರೆ.

80 ರ‍್ಷ ಮೇಲ್ಪಟ್ಟವರು

ಕ್ಷೇತ್ರದಲ್ಲಿ ಒಟ್ಟು 4,734 ಹಿರಿಯ ಮತದಾರರಿದ್ದಾರೆ 2,149 ಪುರುಷರು ಮತ್ತು 2,585 ಮಹಿಳೆಯರು ಇದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

Published

on

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು ಅಭಿವೃದ್ಧಿ ಆಗಬೇಕು. ಜಲಮೂಲಗಳ ಶುದ್ದೀಕರಣ, ಹೂಳೆತ್ತಿ ಅಂತರ್ಜಲ ಹೆಚ್ಚಳದ ಮೂಲಕ ಸ್ವಾವಲಂಬಿ ಹಳ್ಳಿಯ ರೂಪುರೇಷ ಹಾಕಿಕೊಂಡು ಪಂಚಾಯತ್‍ನಲ್ಲಿ ತೀರ್ಮಾನ ಮಾಡಿಕೊಂಡರೆ ಜನರು ಉದ್ಯೋಗ ಖಾತರಿಯಲ್ಲಿ ಹಳ್ಳಿಯನ್ನು ಕಟ್ಟುವ ಕೆಲಸ ಮಾಡುತ್ತಾರೆ ಎಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ (Dr.Prabha Malikarjun) ತಿಳಿಸಿದರು.

ಅವರು ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮ ಉದ್ಘಾಟಿಸಿ ಅವರು (Dr.Prabha Malikarjun) ಮಾತನಾಡಿದರು.

ಉದ್ಯೋಗ ಖಾತರಿ ಯೋಜನೆ ಅನುಷ್ಟಾನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಉತ್ತಮ ಕೆಲಸ ಮಾಡಿ ಜನರಿಗೆ ಉದ್ಯೋಗ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೊನ್ನೂರು ಗ್ರಾಪಂನಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದರಿಂದ ಇಲ್ಲಿನ ಗ್ರಾಪಂ ಉದ್ಯೋಗ ಖಾತರಿಯಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ ಎಂದು ಅವರು (Dr.Prabha Malikarjun) ಶ್ಲಾಘಿಸಿದರು.

ಮನರೇಗಾದಿಂದ ದೇಶದಲ್ಲಿ 5 ರಿಂದ 6 ಕೋಟಿ ಜನ ಕೂಲಿಕಾರ್ಮಿಕರು ಆರ್ಥಿಕವಾಗಿ ಸಬಲರಾಗಿದ್ದಾರೆ. 2005 ರಿಂದ 2026 ರವರೆಗೆ ಸುಮಾರು 20 ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಕಾರಣವಾಗಿತ್ತು. ಈಗ ಇದನ್ನು ಕೇಂದ್ರ ಸರ್ಕಾರ ಬದಲಾಯಿಸಿ ವಿಕಸಿತ ಭಾರತ-ಗ್ಯಾರಂಟೀ ಫಾರ್ ರೋಜಗಾರ್ ಮತ್ತು ಆವೀಜಿಕ ಮಿಷನ್ ವಿಬಿ-ಜಿ.ರಾಮ್ ಜಿ ಕಾಯ್ದೆ-2005 ಎಂದು ಬದಲಿಸಿದ್ದು ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ನೀಡಲು ಮುಂದಾಗಿದೆ. ಮಹಿಳಾ ಮತ್ತು ಪುರುಷರಿಗೆ ಸಮಾನವಾದ ಕೆಲಸ ಕೊಡುವ ಯೋಜನೆವೊಂದಿದ್ದರೆ ಅದು, ‘ಮನರೇಗಾ’ ಯೋಜನೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾಪುರುಷನ ಹೆಸರಿಟ್ಟ ‘ಮನರೇಗಾ’ಯೋಜನೆಯ ಹೆಸರನ್ನೇ ಅಳಿಸುವ ಕೆಲಸ ಮಾಡಿದೆ ಎಂದು ಸಂಸದರು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಅವರು ಹಳ್ಳಿ ಜನರ ದನಿಯಾಗಿ, ಅವರ ಕಷ್ಟ-ಸುಖಗಳನ್ನು ಅಂಚಿಕೊಂಡಿದ್ದಾರೆ. ಅವರು ಬಡವರ ಕಷ್ಟ-ಸುಖಗಳನ್ನು ಚೆನ್ನಾಗಿ ಅರಿತುಕೊಂಡಿದ್ದಾರೆ. ಅವರ ಜೊತೆಯಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾದಾಗ ಅವರಿಂದ ಸಾಕಷ್ಟು ಕಲಿಯುವ ಅವಕಾಶ ಸಿಕ್ಕಿದೆ. ಸ್ವಯಂ ಉದ್ಯೋಗದಲ್ಲಿ ನೀವು ಹೇಗೆ ಆರ್ಥಿಕವಾಗಿ ಸಬಲರಾಗಬಹುದು ಎಂಬ ಬಗ್ಗೆ ತಿಳಿಸಿದ್ದಾರೆ ಎಂದು (Dr.Prabha Malikarjun) ಮೆಚ್ಚುಗೆ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ, ದೇಶದಲ್ಲಿ ದುಡಿಯುವ ವರ್ಗಕ್ಕೆ ಕೆಲಸ ಕೊಡಬೇಕೆಂಬ ಉದ್ದೇಶದಿಂದ 2005ರಲ್ಲಿ ಯುಪಿಎ ಸರ್ಕಾರ ನೇತೃತ್ವ ವಹಿಸಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ‘ಮನರೇಗಾ’ ಯೋಜನೆ ಜಾರಿಗೊಳಿಸುವ ಮೂಲಕ ದುಡಿಯುವ ವರ್ಗಕ್ಕೆ ಕೆಲಸ ಕೊಟ್ಟು ಆರ್ಥಿಕವಾಗಿ ಸಬಲರನ್ನಾಗಿ ಮಾಡಿತು. ಅಂದಿನಿಂದ ಈವರೆಗೆ ದೇಶದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಮನರೇಗಾ’ ಯೋಜನೆ ಜಾರಿಗೊಳ್ಳುವ ಪೂರ್ವದಲ್ಲಿ ಇಲ್ಲಿನ ಹಳ್ಳಿಯ ಜನರು ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ಕಾಫಿನಾಡು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದರು. ಯಾವಾಗ ಹಿಂದಿನ ಯುಪಿಎ ಸರ್ಕಾರ ‘ಮನರೇಗಾ’ ಯೋಜನೆ ಜಾರಿಗೊಳಿಸಿತು. ಅಂದಿನಿಂದ ಈವರೆಗೂ ಹಳ್ಳಿಯ ಜನರು ಬದುಕು ಕಂಡುಕೊಂಡು ಆರ್ಥಿಕವಾಗಿ ಸಬಲರಾದರು. ಆದರೆ ಈಗ ಕೇಂದ್ರ ಸರ್ಕಾರ ‘ಮನರೇಗಾ’ ಹೆಸರು ಬದಲಾಯಿಸುತ್ತಿದೆ ಎಂದು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲ್ ರಾವ್, ತಾಪಂ ಇಓ ರಾಮಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

Trending