Connect with us

ದಿನದ ಸುದ್ದಿ

ದಸರೆಗಾಗಿ 25 ಕೋಟಿ ಅನುದಾನ ಕೇಳಿದ ಜಿಟಿಡಿ

Published

on

ಸುದ್ದಿದಿನ ಡೆಸ್ಕ್: ಈ ಬಾರಿಯ ಮೈಸೂರು ದಸರಾಕ್ಕೆ ಸರಕಾರಕ್ಕೆ 25 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ .ಟಿ .ದೇವೇಗೌಡ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ದಸರಾ- 2018 ಕಾರ್ಯಕಾರಿ ಸಮಿತಿಯ ಸಭೆ ಬಳಿಕ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಕಳೆದ ಬಾರಿ ದಸರಾಕ್ಕೆನೀಡಿದ 15 ಕೋಟಿ ರೂಪಾಯಿ ಅನುದಾನ ಖರ್ಚಾಗಿದೆ. ಈ ಬಾರಿ 25 ಕೋಟಿ ರೂ. ಗೆ ಪ್ರಸ್ತಾವನೆ ಕಳುಹಿಸಲಾಗುವುದು. ವಿವಿಧ ಇಲಾಖೆಗಳ ಜೊತೆ ಗೂಡಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಈ ಬಾರಿ 16 ದಸರಾ ಉಪಸಮಿತಿ ರಚಿಸಲಾಗುವುದು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನ ಕಾರ್ಯಕರ್ತರು ಸೇರಿದಂತೆ 20 ರಿಂದ 25 ಮಂದಿಗೆ ಸಮಿತಿ ಒಂದಕ್ಕೆ ಅವಕಾಶ ನೀಡಲಾಗುವುದು ಈಗಾಗಲೇ ಪಕ್ಷದ ಅಧ್ಯಕ್ಷರಿಗೆ ಕಾರ್ಯಕರ್ತರ ಪಟ್ಟಿ ಕಳಿಸಿ ಕೊಡಲು ತಿಳಿಸಲಾಗಿದೆ ಎಂದರು.

ದಸರಾ ಕಾರ್ಯಕ್ರಮದ ಪಟ್ಟಿಯನ್ನು ಸೆಪ್ಟೆಂಬರ್ 25ಕ್ಕೆ ಅಂತಿಮಗೊಳಿಸಲಾಗುವುದು. ಸೆ. 26 ರಂದು ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು ಎಂದರು.

ಸಭೆಯಿಂದ ಹೊರನಡೆದ ಸಚಿವ ಪುಟ್ಟ ರಂಗ ಶೆಟ್ಟಿ: ಸಭೆಯಲ್ಲಿ ಸಚಿವ ಪುಟ್ಟರಂಗಶೆಟ್ಟಿ ಪೋಸ್ಟರ್ ನಲ್ಲಿ ತಮ್ಮ ಫೋಟೋ ಹಾಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ. ಬಳಿಕ ಅವರು ಸಭೆಯಿಂದ ನಿರ್ಗಮಿಸಿದರು. ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಜಿ ಟಿ ದೇವೇಗೌಡ ಅವರು ಭಾವಚಿತ್ರ ಇಲ್ಲದ ಬಗ್ಗೆ ಪುಟ್ಟರಂಗಶೆಟ್ಟಿ ಶೆಟ್ಟಿ ಗಮನಕ್ಕೆ ತಂದಿದ್ದಾರೆ. ಇದನ್ನು ಸರಿ ಪಡಿಸಲಾಗುವುದು. ಈ ಬಾರಿ ಮೈಸೂರು, ಚಾಮರಾಜನಗರದ ಎಲ್ಲಾ ಸಚಿವರನ್ನು ದಸರಾ ಉಪ ಸಮಿತಿ ಉಪಾಧ್ಯಕ್ಷರನ್ನಾಗಿ ಮಾಡಲು ಅಧಿಸೂಚನೆ ಹೊರಡಿಸಲಾಗುವುದು. ಶಾಸಕ ತನ್ವೀರ್ ಸೇಠ್ ಅವರು ಬೇರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾರಣ ಸಭೆಯಲ್ಲಿ ಭಾಗವಹಿಸಿಲ್ಲ. ಕಾಂಗ್ರೆಸ್ ಶಾಸಕ ಯತಿಂದ್ರ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಹೇಳಿದರು.

ಈ ಬಾರಿ ಜಂಬೂ ಸವಾರಿ ಈ ಹಿಂದಿನಂತೆ ಒಂದೇ ದಿನ ಇರುತ್ತದೆ. ಆದರೆ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲು ಭಾನುವಾರ ಒಂದು ದಿನ ಹೆಚ್ಚುವರಿ ಕಾರ್ಯಕ್ರಮ ನೀಡಲು ಅವಕಾಶ ನೀಡಲಾಗುವುದು. ಜಂಬೂಸವಾರಿಯ ರಿಹರ್ಸಲ್ ಇರುವುದಿಲ್ಲ ಎಂದರು.

ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಮಾತನಾಡಿ ಮಡಿಕೇರಿ ದಸರಾ ಆ ಯೋಜನೆ ಮಾಡುವ ಸಂಬಂಧ ಸ್ಥಳೀಯರ ಜೊತೆ ಚರ್ಚೆ ಮಾಡಲಾಗುತ್ತದೆ ಎಂದರು.

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending