Connect with us

ದಿನದ ಸುದ್ದಿ

ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.

ಇತ್ತೀಚಿಗೆ ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ವೃಂದದವರೊಂದಿಗೆ ಭೇಟಿ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರಲ್ಲದೇ, ಕೆಲ ಸಮಯ ಅವರೊಂದಿಗೆ ಲೋಕಸಭಾ ಕ್ಷೇತ್ರದ ಸೇವೆಯ ಬಗ್ಗೆ ಮಾತುಕತೆ ನಡೆಸಿದರು.

ಪ್ರಭಾ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳನ್ನು ಅನುಸರಿಸಿ, ಸಮಾಜಕ್ಕೆ ಹಿತಕರವಾಗಿ ಕೊಡುಗೆ ನೀಡುವ ಮಹತ್ವವನ್ನು ವಿವರಿಸಿದರು. ಅವರು ಮಕ್ಕಳ ಹಲವು ಪ್ರಶ್ನೆಗಳಿಗೆ ಸಮಾಧಾನಕರ ಉತ್ತರಗಳನ್ನು ನೀಡಿದರು.
ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಹೊಣೆಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ಹೊಂದಿದರು. ಇವರ ಮಾತುಗಳು ಪ್ರೋತ್ಸಾಹ ಮತ್ತು ಮಹತ್ವದ ಸಂದೇಶಗಳಿಂದ ತುಂಬಿದ್ದವು. ಅಲ್ಲದೇ ಮಕ್ಕಳಿಗೆ ಭವಿಷ್ಯದಲ್ಲಿ ಸ್ಫೂರ್ತಿಯಿಂದ ಉಜ್ವಲತೆಗೆ ಸಾಕ್ಷಿಯಾದವು.

ಓದುತ್ತಿರುವ ತರಗತಿಯ ಬಗ್ಗೆ ಎಲ್ಲ ಮಕ್ಕಳ ವಿಚಾರಿಸುತ್ತಾ, ಭವ್ಯ ಭವಿಷ್ಯದಲ್ಲಿ ಯಾವ ಸ್ಥಾನ ಇಚ್ಚಿಸುವಿರಾ ಎಂದು ಕೇಳುತ್ತಾ, ಶಿಕ್ಷಕ ವೃತ್ತಿಯೂ ಸಹ ಅಮೂಲ್ಯವಾಗಿದೆ. ಅಕ್ಷರ ಜ್ಞಾನ ನೀಡುವ ಕೆಲಸಕ್ಕೂ ಒತ್ತು ಕೊಡಬೇಕು. ಜನರ ಬಳಿಯೇ ಹೋಗಿ ಕಷ್ಟ, ನಷ್ಟಗಳ ವಿಚಾರಿಸಿ ಪರಿಹರಿಸುವುದೇ ನಿಜವಾದ ಸಮಾಜ ಸೇವೆ. ಅದುವೇ ಸಾಮಾಜಿಕ ನಾಯಕನ ಹೊಣೆಗಾರಿಕೆ. ಈ ರೀತಿ ನಿಮ್ಮ ಭವಿಷ್ಯದಲ್ಲೂ ಆಗಿ ಎಂದರು.

ಮಕ್ಕಳು ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಸೆಲ್ಯೂಟ್ ಮೂಲಕ ಅವರ ಲೋಕಸಭಾ ಸ್ಥಾನ ಅಲಂಕರಿಸಿದ್ದಕ್ಕೆ ಹಾಗೂ ಅವರ ಸೇವೆಗೆ ಗೌರವ ಸೂಚಿಸಿದರು. ಇದಕ್ಕೆ ಪ್ರಭಾ ಮಲ್ಲಿಕಾರ್ಜುನ ತಾವೂ ಸೆಲ್ಯೂಟ್ ಮಾಡಿ ವಿದ್ಯಾರ್ಥಿಗಳಿಗೆ ಧನ್ಯವಾದ ತಿಳಿಸಿದರು. ಅಲ್ಲದೇ ವಿದ್ಯಾರ್ಥಿಗಳು ನೆನಪಿನ ಕಾಣಿಕೆಯಾಗಿ ಪ್ರಭಾ ಮಲ್ಲಿಕಾರ್ಜುನ ಭಾವಚಿತ್ರವುಳ್ಳ ಫೋಟೋ ನೀಡಿದರು.

ಈ ಸಂದರ್ಭದಲ್ಲಿ ಗುರುಕುಲ ವಸತಿಯುತ ಶಾಲೆ ಅಧ್ಯಕ್ಷ ಅಬ್ದುಲ್ ಆರ್., ಸಾನಿಯಾ ಜೆಹರ, ಶಿಕ್ಷಣ ಸಂಯೋಜಕರಾದ ಶ್ವೇತ.ಎಂ. ಹೆಚ್, ರೇಖಾ ಎಲ್. ಪಾಟೀಲ್, ಎಜಾಜ್ ಅಹ್ಮದ್, ಸಂದೀಪ್ ಪಿ., ಶಾಂತ ಡಿ.ಎಸ್., ರೇಖಾ ಎನ್.ಆರ್., ಸವಿತಾ ಕಾಟ್ವೆ, ಸಹ ಶಿಕ್ಷಕರಾದ ಬಸವರಾಜ್, ಸುಭಾಷ್ ಓ., ಸೈಯದ ಹಮೀಬಾ, ಸಾಯಿರಾ ಖಾನಮ್, ನೂರ್ ಜಹಾನ್, ಹಮೀದ ಬಾನು, ಹಾಗೂ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಕ್ಕಳ ದಿನಾಚರಣೆ ಅಂಗವಾಗಿ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸಿಗಾಗಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿದ ವ್ಯಕ್ತಿ ಹಾಗೂ ಸಂಸ್ಥೆಗೆ ಪ್ರಶಸ್ತಿ ಪತ್ರ ನೀಡಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸ್ವೀಕೃತವಾಗದ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 14 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ಗ್ರಂಥಾಲಯ ಇಲಾಖೆಯಿಂದ 2021 ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗೆ ಲೇಖಕರು, ಪ್ರಕಾಶಕರು, ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದ್ದು ರಾಜ್ಯ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆಯಾದ ತಾತ್ಕಾಲಿಕ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ ಮತ್ತು ದಾವಣಗೆರೆ ಕೇಂದ್ರ ಗ್ರಂಥಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 9 ರೊಳಗಾಗಿ ಲಿಖಿತವಾಗಿ ಸಲ್ಲಿಸಲು ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ನಾಳೆ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ, ನಗರದ ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ ; ಇಲ್ಲಿದೆ ಸಂಪೂರ್ಣ ಮಾಹಿತಿ

Published

on

ಸುದ್ದಿದಿನ,ದಾವಣಗೆರೆ:ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ನಾಳೆ ಬೆಳಗ್ಗೆ 10 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿನ ವಾಹನ ಸಂಚಾರಿ ಮಾರ್ಗದಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಬದಲಾವಣೆಯ ಮಾರ್ಗಗಳ ವಿವರ

ಹರಿಹರ ಕಡೆಯಿಂದ ಬಾತಿ ಮೂಲಕ ಹಳೇ ಪಿ.ಬಿ ರಸ್ತೆಯಲ್ಲಿ ಬರುವ ಎಲ್ಲಾ ತರಹದ ಭಾರಿ ವಾಹನಗಳು ಮತ್ತು ಖಾಸಗಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಚಲಿಸಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ಎ.ಪಿ.ಎಂ.ಸಿ ದನದ ಮಾರ್ಕೇಟ್ ಆವರಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ತೆರಳುವುದು.

ಹರಿಹರ ಕಡೆಯಿಂದ ಬಾತಿ ಮೂಲಕ ಹಳೇ ಪಿ.ಬಿ ರಸ್ತೆಯಲ್ಲಿ ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಚಲಿಸಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಕಾರ್ಯನಿರ್ವಹಿಸುವುದು.

ಚಿತ್ರದುರ್ಗ ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಬರುವ ವಾಹನಗಳು ಮತ್ತು ಖಾಸಗಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ಎ.ಪಿ.ಎಂ.ಸಿ ಯ ದನದ ಮಾರ್ಕೇಟ್ ಆವರಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಸಾಗುವುದು.

ಚಿತ್ರದುರ್ಗ ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಬಂದು ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮಾರ್ಗವಾಗಿ ಕಾರ್ಯನಿರ್ವಹಿಸುವುದು.

ಜಗಳೂರು ಮತ್ತು ಕಂಚಿಕೆರೆ ಮಾರ್ಗವಾಗಿ ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ವೆಂಕಟೇಶ್ವರ ಸರ್ಕಲ್‍ನಿಂದ ಬಂಬೂಬಜಾರ್ ರಸ್ತೆ ಮಾರ್ಗವಾಗಿ ಆರ್.ಎಂ.ಸಿ ಫೈ ಓವರ್ ಮುಖಾಂತರ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ವಾಪಾಸ್ ಅದೇ ಮಾರ್ಗವಾಗಿ ಕಾರ್ಯ ನಿರ್ವಹಿಸುವುದು.

ಚನ್ನಗಿರಿ ಕಡೆಯಿಂದ ಹದಡಿ ರಸ್ತೆ ಮೂಲಕ ಬರುವ ಎಲ್ಲಾ ತರಹದ ವಾಹನಗಳು ಮತ್ತು ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹದಡಿ ಅಂಡರ್ ಪಾಸ್ ಮೂಲಕ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ಪ್ರಯಾಣಿಕರನ್ನು ಇಳಿಸಿ ಅಲ್ಲಿಂದಲೇ ವಾಪಾಸ್ ಹೊರಡುವುದು.

ಶಾಮನೂರು ಬೈಪಾಸ್ ಮೂಲಕ ಬರುವ ಎಲ್ಲಾ ತರಹದ ಭಾರಿ ವಾಹನಗಳು ಶಾರದಾಂಭ ಸರ್ಕಲ್ ಮೂಲಕ ಬಾಲಾಜಿ ಸರ್ಕಲ್ ಕಡೆ ಚಲಿಸುವುದು, ಸಂಗೊಳ್ಳಿ ರಾಯಣ್ಣ ಸರ್ಕಲ್ ಕಡೆ ಬಾರದೇ ಜಿ.ಎಂ.ಐ.ಟಿ ಕಾಲೇಜ್ ಕಡೆ ಚಲಿಸುವುದು.

ಕೊಂಡಜ್ಜಿ ಮಾರ್ಗವಾಗಿ ಬರುವ ವಾಹನಗಳು, ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಆರ್.ಟಿ.ಓ ಸರ್ಕಲ್ ವರೆಗೆ ಬಂದು ಪ್ರಯಾಣಿಕರನ್ನು ಇಲ್ಲಿಯೇ ಇಳಿಸಿ ಅಲ್ಲಿಂದಲೇ ವಾಪಾಸ್ ಹೋಗಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending