Connect with us

ದಿನದ ಸುದ್ದಿ

ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.

ಇತ್ತೀಚಿಗೆ ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ವೃಂದದವರೊಂದಿಗೆ ಭೇಟಿ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರಲ್ಲದೇ, ಕೆಲ ಸಮಯ ಅವರೊಂದಿಗೆ ಲೋಕಸಭಾ ಕ್ಷೇತ್ರದ ಸೇವೆಯ ಬಗ್ಗೆ ಮಾತುಕತೆ ನಡೆಸಿದರು.

ಪ್ರಭಾ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳನ್ನು ಅನುಸರಿಸಿ, ಸಮಾಜಕ್ಕೆ ಹಿತಕರವಾಗಿ ಕೊಡುಗೆ ನೀಡುವ ಮಹತ್ವವನ್ನು ವಿವರಿಸಿದರು. ಅವರು ಮಕ್ಕಳ ಹಲವು ಪ್ರಶ್ನೆಗಳಿಗೆ ಸಮಾಧಾನಕರ ಉತ್ತರಗಳನ್ನು ನೀಡಿದರು.
ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಹೊಣೆಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ಹೊಂದಿದರು. ಇವರ ಮಾತುಗಳು ಪ್ರೋತ್ಸಾಹ ಮತ್ತು ಮಹತ್ವದ ಸಂದೇಶಗಳಿಂದ ತುಂಬಿದ್ದವು. ಅಲ್ಲದೇ ಮಕ್ಕಳಿಗೆ ಭವಿಷ್ಯದಲ್ಲಿ ಸ್ಫೂರ್ತಿಯಿಂದ ಉಜ್ವಲತೆಗೆ ಸಾಕ್ಷಿಯಾದವು.

ಓದುತ್ತಿರುವ ತರಗತಿಯ ಬಗ್ಗೆ ಎಲ್ಲ ಮಕ್ಕಳ ವಿಚಾರಿಸುತ್ತಾ, ಭವ್ಯ ಭವಿಷ್ಯದಲ್ಲಿ ಯಾವ ಸ್ಥಾನ ಇಚ್ಚಿಸುವಿರಾ ಎಂದು ಕೇಳುತ್ತಾ, ಶಿಕ್ಷಕ ವೃತ್ತಿಯೂ ಸಹ ಅಮೂಲ್ಯವಾಗಿದೆ. ಅಕ್ಷರ ಜ್ಞಾನ ನೀಡುವ ಕೆಲಸಕ್ಕೂ ಒತ್ತು ಕೊಡಬೇಕು. ಜನರ ಬಳಿಯೇ ಹೋಗಿ ಕಷ್ಟ, ನಷ್ಟಗಳ ವಿಚಾರಿಸಿ ಪರಿಹರಿಸುವುದೇ ನಿಜವಾದ ಸಮಾಜ ಸೇವೆ. ಅದುವೇ ಸಾಮಾಜಿಕ ನಾಯಕನ ಹೊಣೆಗಾರಿಕೆ. ಈ ರೀತಿ ನಿಮ್ಮ ಭವಿಷ್ಯದಲ್ಲೂ ಆಗಿ ಎಂದರು.

ಮಕ್ಕಳು ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಸೆಲ್ಯೂಟ್ ಮೂಲಕ ಅವರ ಲೋಕಸಭಾ ಸ್ಥಾನ ಅಲಂಕರಿಸಿದ್ದಕ್ಕೆ ಹಾಗೂ ಅವರ ಸೇವೆಗೆ ಗೌರವ ಸೂಚಿಸಿದರು. ಇದಕ್ಕೆ ಪ್ರಭಾ ಮಲ್ಲಿಕಾರ್ಜುನ ತಾವೂ ಸೆಲ್ಯೂಟ್ ಮಾಡಿ ವಿದ್ಯಾರ್ಥಿಗಳಿಗೆ ಧನ್ಯವಾದ ತಿಳಿಸಿದರು. ಅಲ್ಲದೇ ವಿದ್ಯಾರ್ಥಿಗಳು ನೆನಪಿನ ಕಾಣಿಕೆಯಾಗಿ ಪ್ರಭಾ ಮಲ್ಲಿಕಾರ್ಜುನ ಭಾವಚಿತ್ರವುಳ್ಳ ಫೋಟೋ ನೀಡಿದರು.

ಈ ಸಂದರ್ಭದಲ್ಲಿ ಗುರುಕುಲ ವಸತಿಯುತ ಶಾಲೆ ಅಧ್ಯಕ್ಷ ಅಬ್ದುಲ್ ಆರ್., ಸಾನಿಯಾ ಜೆಹರ, ಶಿಕ್ಷಣ ಸಂಯೋಜಕರಾದ ಶ್ವೇತ.ಎಂ. ಹೆಚ್, ರೇಖಾ ಎಲ್. ಪಾಟೀಲ್, ಎಜಾಜ್ ಅಹ್ಮದ್, ಸಂದೀಪ್ ಪಿ., ಶಾಂತ ಡಿ.ಎಸ್., ರೇಖಾ ಎನ್.ಆರ್., ಸವಿತಾ ಕಾಟ್ವೆ, ಸಹ ಶಿಕ್ಷಕರಾದ ಬಸವರಾಜ್, ಸುಭಾಷ್ ಓ., ಸೈಯದ ಹಮೀಬಾ, ಸಾಯಿರಾ ಖಾನಮ್, ನೂರ್ ಜಹಾನ್, ಹಮೀದ ಬಾನು, ಹಾಗೂ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.

ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.

ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending