ದಿನದ ಸುದ್ದಿ

ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.

ಇತ್ತೀಚಿಗೆ ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ವೃಂದದವರೊಂದಿಗೆ ಭೇಟಿ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರಲ್ಲದೇ, ಕೆಲ ಸಮಯ ಅವರೊಂದಿಗೆ ಲೋಕಸಭಾ ಕ್ಷೇತ್ರದ ಸೇವೆಯ ಬಗ್ಗೆ ಮಾತುಕತೆ ನಡೆಸಿದರು.

ಪ್ರಭಾ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳನ್ನು ಅನುಸರಿಸಿ, ಸಮಾಜಕ್ಕೆ ಹಿತಕರವಾಗಿ ಕೊಡುಗೆ ನೀಡುವ ಮಹತ್ವವನ್ನು ವಿವರಿಸಿದರು. ಅವರು ಮಕ್ಕಳ ಹಲವು ಪ್ರಶ್ನೆಗಳಿಗೆ ಸಮಾಧಾನಕರ ಉತ್ತರಗಳನ್ನು ನೀಡಿದರು.
ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಹೊಣೆಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ಹೊಂದಿದರು. ಇವರ ಮಾತುಗಳು ಪ್ರೋತ್ಸಾಹ ಮತ್ತು ಮಹತ್ವದ ಸಂದೇಶಗಳಿಂದ ತುಂಬಿದ್ದವು. ಅಲ್ಲದೇ ಮಕ್ಕಳಿಗೆ ಭವಿಷ್ಯದಲ್ಲಿ ಸ್ಫೂರ್ತಿಯಿಂದ ಉಜ್ವಲತೆಗೆ ಸಾಕ್ಷಿಯಾದವು.

ಓದುತ್ತಿರುವ ತರಗತಿಯ ಬಗ್ಗೆ ಎಲ್ಲ ಮಕ್ಕಳ ವಿಚಾರಿಸುತ್ತಾ, ಭವ್ಯ ಭವಿಷ್ಯದಲ್ಲಿ ಯಾವ ಸ್ಥಾನ ಇಚ್ಚಿಸುವಿರಾ ಎಂದು ಕೇಳುತ್ತಾ, ಶಿಕ್ಷಕ ವೃತ್ತಿಯೂ ಸಹ ಅಮೂಲ್ಯವಾಗಿದೆ. ಅಕ್ಷರ ಜ್ಞಾನ ನೀಡುವ ಕೆಲಸಕ್ಕೂ ಒತ್ತು ಕೊಡಬೇಕು. ಜನರ ಬಳಿಯೇ ಹೋಗಿ ಕಷ್ಟ, ನಷ್ಟಗಳ ವಿಚಾರಿಸಿ ಪರಿಹರಿಸುವುದೇ ನಿಜವಾದ ಸಮಾಜ ಸೇವೆ. ಅದುವೇ ಸಾಮಾಜಿಕ ನಾಯಕನ ಹೊಣೆಗಾರಿಕೆ. ಈ ರೀತಿ ನಿಮ್ಮ ಭವಿಷ್ಯದಲ್ಲೂ ಆಗಿ ಎಂದರು.

ಮಕ್ಕಳು ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಸೆಲ್ಯೂಟ್ ಮೂಲಕ ಅವರ ಲೋಕಸಭಾ ಸ್ಥಾನ ಅಲಂಕರಿಸಿದ್ದಕ್ಕೆ ಹಾಗೂ ಅವರ ಸೇವೆಗೆ ಗೌರವ ಸೂಚಿಸಿದರು. ಇದಕ್ಕೆ ಪ್ರಭಾ ಮಲ್ಲಿಕಾರ್ಜುನ ತಾವೂ ಸೆಲ್ಯೂಟ್ ಮಾಡಿ ವಿದ್ಯಾರ್ಥಿಗಳಿಗೆ ಧನ್ಯವಾದ ತಿಳಿಸಿದರು. ಅಲ್ಲದೇ ವಿದ್ಯಾರ್ಥಿಗಳು ನೆನಪಿನ ಕಾಣಿಕೆಯಾಗಿ ಪ್ರಭಾ ಮಲ್ಲಿಕಾರ್ಜುನ ಭಾವಚಿತ್ರವುಳ್ಳ ಫೋಟೋ ನೀಡಿದರು.

ಈ ಸಂದರ್ಭದಲ್ಲಿ ಗುರುಕುಲ ವಸತಿಯುತ ಶಾಲೆ ಅಧ್ಯಕ್ಷ ಅಬ್ದುಲ್ ಆರ್., ಸಾನಿಯಾ ಜೆಹರ, ಶಿಕ್ಷಣ ಸಂಯೋಜಕರಾದ ಶ್ವೇತ.ಎಂ. ಹೆಚ್, ರೇಖಾ ಎಲ್. ಪಾಟೀಲ್, ಎಜಾಜ್ ಅಹ್ಮದ್, ಸಂದೀಪ್ ಪಿ., ಶಾಂತ ಡಿ.ಎಸ್., ರೇಖಾ ಎನ್.ಆರ್., ಸವಿತಾ ಕಾಟ್ವೆ, ಸಹ ಶಿಕ್ಷಕರಾದ ಬಸವರಾಜ್, ಸುಭಾಷ್ ಓ., ಸೈಯದ ಹಮೀಬಾ, ಸಾಯಿರಾ ಖಾನಮ್, ನೂರ್ ಜಹಾನ್, ಹಮೀದ ಬಾನು, ಹಾಗೂ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version