ಕ್ರೀಡೆ
ಜಿಮ್ನಾಸ್ಟಿಕ್ ನ ಸ್ಪ್ರಿಂಗ್ ಮ್ಯಾನ್..!
- ಡಾ. ಗಿರೀಶ್ ಮೂಗ್ತಿಹಳ್ಳಿ
ಕಲೆ ಸಾಹಿತ್ಯ ಸಂಸ್ಕೃತಿ ಗೆ ಹೆಸರುವಾಸಿ ಆದ ಮೈಸೂರು, ಹಲವಾರು ಸಾಧಕ ರ ತವರೂರಾಗಿದೆ.
ತಾಯಿ ಚಾಮುಂಡೇಶ್ವರಿ ಯ ಆಶೀರ್ವಾದವಿರುವ ಈ ಊರಿನಲ್ಲಿ ಸಾಧಕರಿಗೇನು ಕೊರತೆ ಇಲ್ಲ.
ಅಂತಹ ಸಾಧಕರ ಪಟ್ಟಿಯಲ್ಲಿ ಸೇರಿರುವ ರಾಘವೇಂದ್ರ ಆರ್ ಅರಳಿಕಟ್ಟಿ ಎಂಬ ಪ್ರತಿಭಾನ್ವಿತನ ಪರಿಚಯ ಇಲ್ಲಿದೆ.
ಬಡ ಕುಟುಂಬ ದಲ್ಲಿ ಜನಿಸಿದ ಇವರು ತಾಯಿ ಸರಸ್ವತಿ ಅರಳಿಕಟ್ಟಿ ಯವರ ಆಶ್ರಯ ದಲ್ಲಿ ಬೆಳೆದರೂ ಇವರ ಆಸೆ ಗುರಿ ಬಡತನ ವನ್ನು ಮೀರಿದ್ದಾಗಿತ್ತು. ಬಾಲ್ಯದಿಂದ gymnastics ಕ್ರೀಡಾ ಪಟು ಆದ ಇವರು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಪದಕ ವಿಜೇತರು.
ಕಳೆದ ಸಾಲಿನಲ್ಲಿ Sports Authority of India,
National Instute of Sports
Gymnastics Coaching Diploma ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ ಮೈಸೂರಿಗೆ ಮರಳಿದ್ದಾರೆ.ತಮ್ಮ ವೃತ್ತಿ ಬದುಕನ್ನು gymnastics ತರಬೇತು ದಾರನಾಗಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.
ಈ ವರೆಗೆ ಇವರ ಕ್ರೀಡಾಕ್ಷೇತ್ರದ ಸಾಧನೆಗೆ ಬೆಂಬಲವಿತ್ತ ಇವರ ತರಬೇತುದಾರರಾದ ಅರುಣ್ ಕುಮಾರ್ ಪಾಟೀಲ್(SAI COACH ), ಸುಧೀರ್ ದೇವದಾಸ್, ಬಾಲು, ಲೋಕೇಶ್, Ashok ಮಿಶ್ರ (SAI COACH ), Lakhan sharma(SAI COACH ), ಚಂದ್ರ ಶೇಖರ್ ನಾಯ್ಡು (SAI COACH ) ಇವರುಗಳಿಂದ ತಮ್ಮನ್ನು ಇನ್ನು ಪಕ್ವಮಾಡಿಕೊಳ್ಳುತ್ತಿದ್ದಾರೆ.
ತಮ್ಮದೇ ಉತ್ತಮ ಗುಣಮಟ್ಟದ Acadamy ಯನ್ನು ಸ್ಥಾಪಿಸುವ ಮಹದಾಸೆಯನ್ನು ಹೊಂದಿರುವ ಇವರು, Karnataka Gymnastics ಕ್ರೀಡೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜೇತ ಗೊಳಿಸುವ ಹಾಗೂ ಎಲ್ಲ ವಯೋಮಾನ ದ ಆಸಕ್ತಿ ಉಳ್ಳವರ ದೈಹಿಕ ಸದೃಢತೆಯ ತರಬೇತಿ ಯನ್ನು ನೀಡಿ ಉತ್ತಮ ಆರೋಗ್ಯ ಪೂರ್ಣ ಸಮಾಜ ನಿರ್ಮಾಣದ ಗುರಿ ಹೊಂದಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಾಹಿತ್ಯ ವಿದ್ಯಾರ್ಥಿಯಾದ ಇವರು ತಮ್ಮದೇ ಬರೆವಣಿಗೆ ಶೈಲಿಯನ್ನು ಕಂಡುಕೊಂಡಿದ್ದಾರೆ.
‘ಕೃಷಿ ಕ್ರಾಂತಿ ಪರಿಹಾರ ಸಾಹಿತ್ಯ (ಪಂಥ )’ ಎಂಬ ನಿಲುವನ್ನು ಹೊಂದಿರುವ ಇವರು, ಕೃಷಿ ಎಂಬುವುದು ಹೊಲದಲ್ಲಿ ಬೆಳೆ ಬೆಳೆಯುವದರ ಜೊತೆಗೆ, ಸಮಾಜದ ಎಲ್ಲ ಕ್ಷೇತ್ರ ದಲ್ಲಿಯೂ ಕೃಷಿ ಇದೆ. ಹಾಗಾಗಿ ಉತ್ತಮ ಸಮಾಜಕ್ಕಾಗಿ ಕೃಷಿಯಲ್ಲಿ ಕ್ರಾಂತಿ ಯಾಗಬೇಕಿದೆ. ಹಾಗಾಗಿ ನನ್ನ ವಿಚಾರ ಧಾರೆ ಅದರ ಕಡೆಗಿದೆ ಎಂದು ಹೇಳುತ್ತಾರೆ
ವರ್ಣನೆ, ವಾಸ್ತವ ಎಲ್ಲ ದಿಕ್ಕಿನಿಂದಲೂ ನೋಡುವ ಜೊತೆಗೆ ಪರಿಹರಿಸುವ ಕೃಷಿ ಕ್ರಾಂತಿ ಪರಿಹಾರ ಸಾಹಿತ್ಯಕ್ಕೆ ನಾಂದಿ ಯಾಗಲಿದೆ ಎಂದು ಸಿದ್ಧಾಂತ ಮಂಡಿಸುತ್ತಾರೆ. ಕಥೆ, ಕವನ, ನಾಟಕ, ಕ್ರೀಡೆ, ಜಾನಪದ ಗೀತೆ, ಸಿನಿಮಾ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿ ಕೊಂಡಿರುವ ಇವರು ತಮ್ಮ ಬರೆವಣಿಗೆಯಲ್ಲಿ “ನಗು ” ವಿನ ವಿಚಾರಕ್ಕೆ ಹೆಚ್ಚು ಒತ್ತುಕೊಡುತ್ತಾರೆ. ವರ್ಣನೆ, ಕನಸು, ವಾಸ್ತವಗಳ ಜೊತೆಯಲ್ಲಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ತಿಳಿವಳಿಕೆಗಾರನಾಗಬೇಕು ಎಂಬ ಜವಾಬ್ದಾರಿ ಲೇಖಕನದ್ದು ಆಗಿರುತ್ತದೆ ಎನ್ನುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ
ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ7 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
-
ದಿನದ ಸುದ್ದಿ6 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ3 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ3 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ7 days agoಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
-
ದಿನದ ಸುದ್ದಿ2 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ


