Connect with us

ದಿನದ ಸುದ್ದಿ

ಜೀವನ ಮೌಲ್ಯಗಳನ್ನು ಮಕ್ಕಳಿಗೆ ಹೇಳಿಕೊಡುವಲ್ಲಿ ಕನ್ನಡದ ಶಿಶುಗೀತೆಗಳು ಅತ್ಯಂತ ಪೂರಕ : ಎಚ್.ಬಿ. ಮಂಜುನಾಥ್

Published

on

ಸುದ್ದಿದಿನ,ದಾವಣಗೆರೆ: ಜೀವನ ಮೌಲ್ಯಗಳನ್ನು ಪ್ರಾಮಾಣಿಕವಾಗಿ ಎಲ್ಲಿ ಪಾಲಿಸಲಾಗುತ್ತದೆಯೋ ಅದಕ್ಕೆ ಸುಸಂಸ್ಕೃತ ಸಮಾಜ ಎಂದು ಹೇಳುತ್ತಾರೆ. ಜೀವನ ಮೌಲ್ಯಗಳು ಸಾಕಾರಗೊಳ್ಳಬೇಕಾದರೆ ಮಕ್ಕಳು ಚಿಕ್ಕವರಿರುವಾಗಲೇ ಅವರಿಗೆ ಅರಿವಾಗುವ ಹಾಗೆ ನಾವು ಹೇಳಿದ್ದೇ ಆದಲ್ಲಿ ಜೀವನ ಮೌಲ್ಯಗಳು ಸಮಾಜದಲ್ಲಿ ಸಾಕಾರಗೊಳ್ಳುತ್ತವೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ. ಮಂಜುನಾಥ್ ಹೇಳಿದರು.

ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು 65ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಹಮ್ಮಿಕೊಂಡ ಅಂತರ್ಜಾಲ ಮೂಲಕ ಕನ್ನಡ ನುಡಿ ಹಬ್ಬ ಕಾರ್ಯಕ್ರಮದ 14 ನೇ ದಿನದ ಕಾರ್ಯಕ್ರಮದಲ್ಲಿ “ಕನ್ನಡ ಕೆಲವು ಶಿಶುಗೀತೆ ಗಳಲ್ಲಿ ನಮ್ಮ ಸಂಸ್ಕೃತಿ” ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡಿದರು.

ಜೀವನ ಮೌಲ್ಯಗಳನ್ನು, ಬದುಕಿನ ಒಳ್ಳೆಯ ಅಂಶಗಳನ್ನು ಮಕ್ಕಳಿಗೆ ಹೇಳಿಕೊಡುವಲ್ಲಿ ನಮ್ಮ ಕನ್ನಡದ ಶಿಶುಗೀತೆಗಳು ಅತ್ಯಂತ ಪೂರಕವಾಗಿವೆ ಎಂದು ತಿಳಿಸಿದರು.

ಮುಂದುವರೆದು ಮಾತನಾಡುತ್ತ ನಾವು ಮತ್ತೊಬ್ಬರಿಗೆ ಉಪಕಾರಿ ಆಗಿರಬೇಕು, ಇನ್ನೊಬ್ಬರ ಒಳ್ಳೆಯತನ ಗುರುತಿಸಬೇಕು, ಮನೆಗೆ ಒಬ್ಬರನ್ನು ಕರೆಯಬೇಕು, ಎಲ್ಲ ಪ್ರಾಣಿ -ಪಕ್ಷಿ, ಗಿಡ- ಮರ -ಬಳ್ಳಿ, ಪ್ರಕೃತಿಯನ್ನು ನಮ್ಮಂತೆ ಅವುಗಳನ್ನು ನೋಡಬೇಕು. ಅದರಲ್ಲಿ ನಮ್ಮನ್ನು ನಾವು ಕಾಣಬೇಕು. ಇವೆಲ್ಲಾ ಜೀವನ ಮೌಲ್ಯಗಲಾಗಿರುತ್ತವೆ ಎಂದು ಹೆಚ್. ಬಿ. ಮಂಜುನಾಥರವರು ತಿಳಿಸಿದರು. ಇಂತಹ ಜೀವನ ಮೌಲ್ಯಗಳನ್ನು ಚಿಕ್ಕ ಚಿಕ್ಕ ಮಕ್ಕಳಿಗೆ ಬಾಲ್ಯದಿಂದಲೇ ಹೇಳಿಕೊಡುತ್ತಾ ಬಂದಾಗ ಅವರು ಮುಂದೆ ಮೌಲ್ಯಯುತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ನಿಟ್ಟಿನಲ್ಲಿ ಹೇಳುವುದಾದರೆ ನಮ್ಮ ಕರ್ನಾಟಕದ ಕೆಲವು ದಶಕಗಳ ಹಿಂದಿನ ದಿನಗಳಲ್ಲಿ ನಾನು ಪ್ರಾಥಮಿಕ ಶಾಲೆಯಲ್ಲಿ ಕಲಿತ ಕೆಲವು ಪದ್ಯಗಳು ಇವತ್ತಿಗೂ ನನಗೆ ನೆನಪಿದೆ ಎಂದು ಆ ಪದ್ಯಗಳನ್ನು ನೆನಪಿಸುತ್ತಾ ಮಂಜುನಾಥರವರು ಕೆಳಗಿನ ಕೆಲವು ಶಿಶು ಗೀತೆಗಳನ್ನು ಉದಾಹರಿಸಿದರು.

ಬಾರಲೇ ಹಕ್ಕಿ, ಬಣ್ಣದ ಹಕ್ಕಿ
ಬಾರಲೇ ಹಕ್ಕಿ, ಹಾರುವ ಹಕ್ಕಿ,

ಗೆಳೆಯರು ಆಡಲು ಯಾರು ಇಲ್ಲ
ಕಳೆಯುವುದೆಂದು ವೇಳೆಯನೆಲ್ಲ

ಅಮ್ಮನು ನೀರಿಗೆ ಹೋಗಿಹಳು, ಅಪ್ಪನು ಪೇಟೆಗೆ ಹೋಗಿಹನು,

ಅಮ್ಮನು ಬರಲಿ, ಅಪ್ಪನು ಬರಲಿ,
ತಿನ್ನಲು ಅಣ್ಣನು ಕೊಡಿಸುವೆನು

ನನಗೂ ಹಾರಲು ಕಲಿಸು
ಬಾ ಬಾ ಬಾ
ನನಗೂ ಹಾಡಲು ಕಳಿಸು
ನಾನು ನೀನು ಇಬ್ಬರೂ ಸೇರಿ
ಮುಗಿಲಿಗೆ ಹಾರುವ ಬಾ.

ಈ ಶಿಶು ಗೀತೆಯನ್ನು ನೆನಪಿಸಿಕೊಳ್ಳುತ್ತಾ ಮಗು ಇದರಲ್ಲಿರುವ ತಾದಾತ್ಮ ಕತೆ ಯನ್ನು ಅನುಭವಿಸುತ್ತಾ ಆನಂದಿಸುತ್ತದೆ. ಈ ಶಿಶುಗೀತೆಗಳು ಕೊನೆಯಲ್ಲಿ ನೀತಿಯನ್ನು ಹೇಳುವಂತಹ ಗುಣವನ್ನು ಹೊಂದಿವೆ ಎಂದು ತಿಳಿಸುತ್ತಾ ಮುಂದುವರೆದು..

ಬಣ್ಣದ ತಗಡಿನ ತುತ್ತೂರಿ ಕಾಸಿಗೆ ಕೊಂಡನು ಕಸ್ತೂರಿ”
“ ಚಂದಿರನೇತಕೆ ಓಡುವನಮ್ಮ ಮೋಡಕೆ ಬೆದರಿಹನೆ”
ಎಂಬ ಕೆಲವು ಶಿಶು ಗೀತೆಗಳನ್ನು ಹಾಡುತ್ತಾ
“ ಒಂದು ಎರಡು ಬಾಳೆಲೆದೆರಡು ಮೂರು-ನಾಲ್ಕು ಅನ್ನ ಹಾಕು”
ಈ ಗೀತೆಯಲ್ಲಿ ಮನೆಗೆ ಬಂದ ಅತಿಥಿಗಳಿಗೆ ಬಾಳೆ ಎಲೆಯಲ್ಲಿ ಬಿಸಿ ಅನ್ನ ಮಾಡಿ, ಊಟ ಹಾಕು. ಅತಿಥಿಗಳು ಊಟ ಮಾಡಿದ ಎಲೆಯನ್ನು ನೀನು ತೆಗೆದುಹಾಕು ಎನ್ನುವ ಅತಿಥಿ ಸತ್ಕಾರದ ನೀತಿಯನ್ನು ಈ ಶಿಶುಗೀತೆಯು ಒಳಗೊಂಡಿರುವುದನ್ನು ತಿಳಿಸಿದರು.
ಏರುತಿಹುದು ಹಾರುತಿಹುದು ನೋಡು ನಮ್ಮ ಭಾವುಟ” ಎಂಬ ಗೀತೆಯನ್ನು ಹಾಡುತ್ತಾ ಈ ಗೀತೆಗಳು ಮಕ್ಕಳಿಗೆ ಅರ್ಥವಾಗುವ ಹಾಗೆ ಮಗುವಿನ ಕಲ್ಪನೆಯನ್ನು ಕಟ್ಟಿ ಕೊಡುವುದಕ್ಕೆ ಸಾಧ್ಯವಾಗಿದೆ ಜೊತೆಗೆ ವಿಶಾಲವಾದ ಭಾವನೆಗಳನ್ನು ಬೆಳೆಸುವುದರೊಂದಿಗೆ ಮಕ್ಕಳಲ್ಲಿ ರಾಷ್ಟ್ರಾಭಿಮಾನ, ರಾಷ್ಟ್ರೀಯ ಐಕ್ಯತೆ, ರಾಷ್ಟ್ರೀಯ ಗೌರವವನ್ನು ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರಧ್ವಜದ ಮಹತ್ವ, ರಾಷ್ಟ್ರದ ಮಹತ್ವ ಹೀಗೆ ಹಲವು ಕಲ್ಪನೆಗಳನ್ನು ವಿಚಾರಗಳನ್ನು ಭಾವನೆಗಳನ್ನು ಮಕ್ಕಳಲ್ಲಿ ಬಿತ್ತರಿಸುವ ರೊಂದಿಗೆ ಮೌಲ್ಯಯುತವಾದ ನೀತಿಗಳನ್ನು ಮಕ್ಕಳಿಗೆ ಕಲಿಸುತ್ತವೆ ನುಡಿದರುು ಎಂದರು.

ಅಧ್ಯಕ್ಷೀಯ ನುಡಿ ಗಳನ್ನಾಡಿದ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಬಿ ವಾಮದೇವಪ್ಪ ನವರು ಇಂದು ಮಕ್ಕಳ ದಿನಾಚರಣೆ. ನೆಹರುರವರ 131ನೇ ಹುಟ್ಟುಹಬ್ಬವನ್ನು ನೆನಪಿಸಿಕೊಳ್ಳುತ್ತಾ ಪುಟಾಣಿಗಳಾದ ಕುಮಾರ ನಿಶ್ಚಲ್ ಎಸ್ ಕಿರ್ತಿ, ಹಾಗೂ ಕುಮಾರಿ ಧಾತ್ರಿ ಎಸ್ ಕೀರ್ತಿ ಇವರಿಗೆ ಸಿಹಿ ತಿನ್ನಿಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸುತ್ತಾ ನಾಡಿನ ಎಲ್ಲಾ ಮಕ್ಕಳಿಗೂ ಶುಭವನ್ನು ಹಾರೈಸಿದರು.

ಅಧ್ಯಕ್ಷೀಯ ನುಡಿಗಳನ್ನಾಡಿದ ಅವರು, ಶಿಶುಗೀತೆಗಳ ರಚನಾಕಾರರು ನಮ್ಮ ಕನ್ನಡ ಸಾಹಿತ್ಯ ಪರಿಷತ್ತಿನಲ್ಲೂ ಅನೇಕರಿದ್ದಾರೆ. ಶಿಶುಗೀತೆಗಳು ಮನಸ್ಸಿಗೆ ಮುದ ನೀಡುವಂತಹ ಮತ್ತು ಮಕ್ಕಳನ್ನು ಉರಿದುಂಬಿಸು ವಂತಹ ಒಂದು ಸ್ಫೂರ್ತಿಯ ಸೆಲೆಯಾಗಿವೆ ಎಂದು ಶಿಶು ಗೀತೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

“ಅಜ್ಜನ ಕೋಲಿದು ನನ್ನಯ ಕುದುರೆ ಹೆಜ್ಜೆ ಹೆಜ್ಜೆಗೂ ಕುಣಿಯುವ ಕುದುರೆ
ಕಾಲಿಲ್ಲದೆ ಓಡಾಡುವ ಕುದುರೆ
ಅಜ್ಜನ ಕೋಲಿದು ನನ್ನಯ ಕುದುರೆ “

ಎಂಬ ಶಿಶು ಗೀತೆಯನ್ನು ನೆನಪಿಸುತ್ತಾ, ಇಂತಹ ಹಲವಾರು ಶಿಶುಗೀತೆಗಳು ಇಂದು ಜನಮಾನಸದಿಂದ ದೂರ ಸರಿಯುತ್ತಿವೆ ಎಂದು ವಿಷಾದ ವ್ಯಕ್ತಪಡಿಸುತ್ತಾ, ಈ ಗೀತೆಗಳನ್ನು ಹಿರೇಕೋಗಲೂರಿನ ಗೀತಾ, ದಾವಣಗೆಯ ಹಿರಿಯ ಕವಿಯತ್ರಿ ಭಾಗ್ಯಲಕ್ಷ್ಮಿಸು ಅಮೃತಾಪುರ್, ಕಡಲ ತೀರದ ಭಾರ್ಗವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಶಿವರಾಮ ಕಾರಂತರು ಇನ್ನೂ ಹಲವಾರು ಕವಿಗಳು ಶಿಶು ಗೀತೆಗಳನ್ನು ರಚಿಸಿ ಕನ್ನಡ ಸಾಹಿತ್ಯ ಪರಿಷತ್ತಿಗೆ ತಮ್ಮದೇ ಆದ ಕೊಡುಗೆ ನೀಡಿರುವುದನ್ನು ನೆನಪಿಸಿ ಕೊಟ್ಟರು.
ಕಾರ್ಯಕ್ರಮದ ಆರಂಭದಲ್ಲಿ ಉಪನ್ಯಾಸಕರ ಪರಿಚಯವನ್ನು ಮಾಡಿಕೊಡುವುದರೊಂದಿಗೆ ಶ್ರೀಮತಿ ರೂಪ ಟಿ. ಎಸ್. ಸಹಾಯಕ ಪ್ರಾಧ್ಯಾಪಕರು, ಆರ್. ವಿ. ಇಂಜಿನಿಯರಿಂಗ್ ಕಾಲೇಜು ಬೆಂಗಳೂರು. ಇವರು ಸರ್ವರನ್ನು ಸ್ವಾಗತಿಸಿದರು.

ದಾವಣಗೆರೆಯ ವಿನಾಯಕ ಬಡಾವಣೆಯ ವಿನೂತನ ಮಹಿಳಾ ಸಮಾಜದ ಕಲ್ಯಾಣಿ ತಂಡದ ಸದಸ್ಯರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending