ದಿನದ ಸುದ್ದಿ
ಹಂಪಿ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ; ನಾಡೋಜ ಗೌರವ ಪದವಿ ಪ್ರದಾನ

ವರದಿ: ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸುದ್ದಿದಿನ,ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ಸಮಾರಂಭವು ಶುಕ್ರವಾರ ರಂದು ವಿವಿ ಆವರಣದ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಿತು.
ಈ ವೇಳೆ ಗಣನೀಯ ಸಾಧನೆ ಮಾಡಿದ ಮೂರು ಜನ ಗಣ್ಯರಿಗೆ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಟಿತ ಪದವಿ ನಾಡೋಜ ಗೌರವ ಪದವಿಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.
ನಾಡೋಜ ಗೌರವ ಪದವಿಗೆ ಬಾಜನರಾದವರು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ಶಿವರಾಜ್ ವಿ.ಪಾಟೀಲ್, ಪ್ರಖ್ಯಾತ ಬರಹಗಾರರು ಮತ್ತು ಚಿಂತಕರಾದ ಕುಂ.ವೀರಭದ್ರಪ್ಪ (ಕುಂ.ವೀ), ಪ್ರಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ ಎಂ.ವೆಂಕಟೇಶ್ ಕುಮಾರ್ ಇವರಿಗೆ ಪ್ರದಾನ ಮಾಡಲಾಯಿತು.
ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ತುಮಕೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ರಾಜಾಸಾಬ್ ಎಂ.ಎಚ್, ಹಂಪಿ ವಿವಿ ಕುಲಪತಿ ಡಾ.ಡಿ.ವಿ.ಪರಶಿವಮೂರ್ತಿ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ : ಅನುದಾನ ಬಿಡುಗಡೆಗೆ ಆರ್. ಅಶೋಕ್ ಒತ್ತಾಯ

ಸುದ್ದಿದಿನಡೆಸ್ಕ್:ರಾಜ್ಯದ 31 ಜಿಲ್ಲೆಗಳ, ಒಟ್ಟು 6 ಸಾವಿರದ 380 ಗ್ರಾಮಗಳಲ್ಲಿ, ಗ್ರಾಮಸ್ಥರು ಕುಡಿಯುವ ನೀರಿನ ಬವಣೆ ಎದುರಿಸುತ್ತಿದ್ದು, ಗ್ರಾಮ ಪಂಚಾಯಿತಿಗಳು, ಅನುದಾನವಿಲ್ಲದೆ, ಸೊರಗುತ್ತಿವೆ ಎಂದು, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಎಕ್ಸ್ ಮಾಧ್ಯಮದಲ್ಲಿ, ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಕೂಡಲೇ, ಬರ ಪರಿಸ್ಥತಿ ಸಮೀಕ್ಷಿಸಿ, ಬರ ಪೀಡಿತ ತಾಲೂಕುಗಳನ್ನು ಘೋಷಿಸುವಂತೆ, ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ, ಎಲ್ಲ ಗ್ರಾಮ ಪಂಚಾಯಿತಿಗಳಿಗೆ, ಕೂಡಲೇ ತಲಾ 25 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿ, ಬಿರು ಬೇಸಿಗೆಯಲ್ಲಿ, ಜನತೆಗೆ ಕುಡಿಯುವ ನೀರು ಖಾತ್ರಿ ಪಡಿಸುವಂತೆ, ಒತ್ತಾಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತದೊಂದಿಗೆ ‘ಉಮ್ಮೀದ್ -2024’ ಕಾಯ್ದೆಯಾಗಿ ಜಾರಿ

ಸುದ್ದಿದಿನಡೆಸ್ಕ್:ವಕ್ಫ್ ತಿದ್ದುಪಡಿ ಮಸೂದೆ, ಏಕೀಕೃತ ವಕ್ಫ್ ನಿರ್ವಹಣೆ ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ, ‘ಉಮ್ಮೀದ್ 2024’, ರಾಷ್ಟ್ರ ಪತಿ ದ್ರೌಪದಿ ಮುರ್ಮು ಅವರ ಅಂಕಿತದೊಂದಿಗೆ, ಕಾಯ್ದೆಯಾಗಿ, ದೇಶಾದ್ಯಂತ ಜಾರಿಗೊಂಡಿವೆ.
ಮುಸಲ್ಮಾನ್ ವಕ್ಫ್ ರದ್ದು ಮಸೂದೆ – 2024ಕ್ಕೂ ರಾಷ್ಟ್ರ ಪತಿಯವರು, ತಮ್ಮ ಒಪ್ಪಿಗೆ ಸೂಚಿಸಿದ್ದು, ಆ ಕಾಯ್ದೆ ರದ್ದುಗೊಂಡಿದೆ. ದೇಶಾದ್ಯಂತ ವಕ್ಫ್ ಆಸ್ತಿ ನಿರ್ವಹಣೆ ಹಾಗೂ ಆಡಳಿತದ ಜೊತೆಗೆ, ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು, ಉಮ್ಮೀದ್ ಕಾಯ್ದೆ ಹೊಂದಿದೆ. ವಕ್ಫ್ ರಚನೆಯನ್ನು ಮರು ವ್ಯಾಖ್ಯಾನಿಸಿ, ಸರ್ಕಾರದ ಮೇಲ್ವಿಚಾರಣೆಯನ್ನು ಸಬಲೀಕರಿಸುವುದಕ್ಕೆ ಆದ್ಯತೆ ನೀಡಲಾಗಿದೆ.
ವಕ್ಫ್ ತಿದ್ದುಪಡಿ ಕುರಿತು, ಜಂಟಿ ಸಂಸದೀಯ ಮಂಡಳಿಯಲ್ಲಿ ನಡೆದ ಚರ್ಚೆಗಳು ಐತಿಹಾಸಿಕ; ಸಂವಿಧಾನ ಮತ್ತು ಕಾನೂನು ತಜ್ಞರ ಸಲಹೆ ಪಡೆದು, ವಕ್ಫ್ ತಿದ್ದುಪಡಿ ಮಸೂದೆ- 2024 ‘ಉಮ್ಮೀದ್’ ಹಾಗೂ ಮುಸಲ್ಮಾನ್ ವಕ್ಫ್ ರದ್ದು ಮಸೂದೆ – 2024 ಅನ್ನು, ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಲಾಗಿದೆ ಎಂದು, ಕೇಂದ್ರದ ಅಲ್ಪ ಸಂಖ್ಯಾತರ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಲೋಕಸಭೆಯಲ್ಲಿ, 288 ಸಂಸದರು ಮಸೂದೆಗಳ ಪರ ಹಾಗೂ 232ಸಂಸದರು ವಿರೋಧ ನಿಲುವು ತಾಳಿ, ಮತ ಚಲಾಯಿಸಿದ್ದಾರೆ.
ರಾಜ್ಯಸಭೆಯ128 ಜನ ಸಂಸದರು, ಮಸೂದೆಯ ಪರವಾಗಿ ಹಾಗೂ 95 ಜನ ಸಂಸದರು, ಮಸೂದೆಯ ವಿರುದ್ಧ ತಮ್ಮ ನಿಲುವು ವ್ಯಕ್ತಪಡಿಸಿ, ಮತ ಚಲಾಯಿಸಿದರು.
ಕನಿಷ್ಠ ಇಬ್ಬರು ಮಹಿಳಾ ಸದಸ್ಯೆಯರು ಸೇರಿದಂತೆ, ಕೇಂದ್ರ ವಕ್ಫ್ ಮಂಡಳಿಯ ಎಲ್ಲಾ ಸದಸ್ಯರು ಮುಸ್ಲಿಮರಾಗಿರಬೇಕು. ಇಬ್ಬರು ಸದಸ್ಯರು ಮುಸ್ಲಿಮೇತರರಾಗಿರಬೇಕು. ಸಂಸದರು, ವಿಶ್ರಾಂತ ನ್ಯಾಯಾಧೀಶರು ಮತ್ತು ಕಾಯ್ದೆಯ ಪ್ರಕಾರ ಮಂಡಳಿಗೆ ನೇಮಕಗೊಂಡ ಗಣ್ಯ ವ್ಯಕ್ತಿಗಳು, ಮುಸ್ಲಿಮರಾಗಿರಬೇಕಿಲ್ಲ.
ಮುಸ್ಲಿಮೇತರ ಸದಸ್ಯರು ಮತ್ತು ಮಹಿಳೆಯರನ್ನು, ವಕ್ಫ್-ಸಂಬಂಧಿತ ಸಂಸ್ಥೆಗಳಲ್ಲಿ ಸೇರಿಸಿಕೊಳ್ಳುವ ಮೂಲಕ, ಒಳಗೊಳ್ಳುವಿಕೆಯನ್ನು ಖಚಿತಪಡಿಸುವುದಕ್ಕೆ, ಆದ್ಯತೆ ನೀಡಲಾಗಿದೆ.
ಈ ನಿಬಂಧನೆಗಳು, ದೇಶದಲ್ಲಿ, ವಕ್ಫ್ ಆಸ್ತಿ ನಿರ್ವಹಣೆಯನ್ನು, ಪಾರದರ್ಶಕ, ವಿಶ್ವಾಸಾರ್ಹ ಹಾಗೂ ತಂತ್ರಜ್ಞಾನ ಆಧರಿಸಿ, ಆಧುನೀಕರಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ ಎಂದು, ಸ್ಪಷ್ಟ ಪಡಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾಮಾಜಿಕ ಸುಧಾರಣೆಗೆ ಡಾ. ಬಾಬು ಜಗಜೀವನ್ರಾಂ ಕೊಡುಗೆ ಅಪಾರ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಡಾ.ಬಾಬು ಜಗಜೀವನರಾಂ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕ ಎಂದು ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಬಣ್ಣಿಸಿದರು.
ಶನಿವಾರ (ಏ.5) ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಮಹಾನಗರಪಾಲಿಕೆಯ ಆವರಣದಲ್ಲಿರುವ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂದಿರದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ 118ನೇ ಜಯಂತಿ ಉದ್ಘಾಟಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಡಾ.ಬಾಬು ಜಗಜೀವನ ರಾಂ ಅವರು 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಸಂಪನ್ನ ರಾಜಕಾರಣಿ ಜಗಜೀವನ ರಾಂ. ಕೇಂದ್ರ ಸರ್ಕಾರದಲ್ಲಿ ಹಲವಾರು ಮಹತ್ತರ ಇಲಾಖೆಗಳ ನಿರ್ವಹಣೆಯನ್ನು ಮಾಡಿದ ಏಕೈಕ ರಾಜಕಾರಣಿ ಎಂದು ಹೇಳಿದರು.
ಪುಟ್ಟ ಬಾಲಕನಾಗಿರುವಾಗಲೇ ದೊಡ್ಡ ದೊಡ್ಡ ಚಳುವಳಿಯಲ್ಲಿ ಭಾಗವಹಿಸಿದ್ದರು. ಹಂತ ಹಂತವಾಗಿ ಬೆಳೆದು. ಅಂದಿನ ಕಾಲದಲ್ಲಿಯೇ ಸುಮಾರು ಐವತ್ತು ಸಾವಿರಕ್ಕಿಂತ ಹೆಚ್ಚು ಜನರನ್ನು ಸೇರಿಸಿ ಹೋರಾಟ ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಇವರ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ, ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು.
ಸ್ವಾತಂತ್ರ್ಯ ನಂತರ ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದರು.
ಹಸಿರುಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಳ, ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪು ಮೂಡಿಸಿದ್ದರು. ಅಂತಹ ಮಹಾನ್ ನಾಯಕರ ಜಯಂತಿಯ ಮೂಲಕ ಅವರ ಆದರ್ಶವನ್ನು ನಾವೆಲ್ಲಾ ಪಾಲಿಸಬೇಕು. ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆಯೋಣ ಎಂದರು.
ಇದಕ್ಕೂ ಮುನ್ನ ಮಹಾನಗರಪಾಲಿಕೆ ಆವರಣದ ಉದ್ಯಾನದಲ್ಲಿರುವ ಡಾ.ಬಾಬು ಜಗಜೀವನ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪಿ.ಬಿ.ರಸ್ತೆಯಲ್ಲಿರುವ ಗಾಂಧಿ ಸರ್ಕಲ್ನಿಂದ ಮೆರವಣೆಗೆ ಸಾಗಿ ಮಹಾನಗರಪಾಲಿಕೆ ಬಂದು ಸೇರಿತು.
ಈ ವೇಳೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಅವರು ಸಂವಿಧಾನ ಪೀಠಿಕೆಯನ್ನು ಓದಿದರು. ಪ್ರತಿಭಾ ಪುರಸ್ಕಾರ: 2023-24ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವರುಣ್, ಶೃತಿ, ಸೃಷ್ಠಿ, ಅರ್ಪಿತ, ಲಕ್ಷ್ಮೀ, ಹರ್ಷಧಾರೆ ಇವರಿಗೆ ಸನ್ಮಾನಿಸಲಾಯಿತು.
ನಿವೃತ್ತ ಪ್ರಾಧ್ಯಾಪಕ ರಾಮಚಂದ್ರಪ್ಪ ಎ.ವಿ ಮಾತನಾಡಿ ದೇಶದಲ್ಲಿ ಕೃಷಿಯೇ ಅಭಿವೃದ್ಧಿಯ ಮೂಲಾಧಾರವಾಗಿದೆ. ಈ ದೃಷ್ಟಿಯಿಂದ ದೇಶದ ಭೀಕರ ಬರಗಾಲ, ಕ್ಷಾಮದ ಪರಿಸ್ಥಿತಿಯಲ್ಲಿ ಕೈಗೊಂಡ ಕ್ರಮಗಳು ದೇಶದ ಅಹಾರ ಕೊರತೆಯನ್ನು ನೀಗಿಸಿ ಸುಸ್ಥಿರ ಅಭಿವೃದ್ಧಿಗೆ ಸಹಾಯಕಾರಿಯಾಯಿತು ಎಂದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಸುರೇಶ್.ಬಿ.ಇಟ್ನಾಳ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ.ಸಂತೋಷ್, ದೂಡಾ ಆಯುಕ್ತರಾದ ಹುಲ್ಲುಮನಿ ತಿಮ್ಮಣ್ಣ, ನಿವೃತ್ತ ಪೊಲೀಸ್ ಅಧಿಕಾರಿಗಳಾದ ರವಿನಾರಾಯಣ ಮತ್ತು ರುದ್ರಮುನಿ, ದಲಿತ ಸಮಾಜದ ಮುಖಂಡರಾದ ಮಲ್ಲೇಶ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಹೊಸ ಹಣಕಾಸು ವರ್ಷ ಆರಂಭ | ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ; ಇಲ್ಲದಿದ್ದರೆ ಭಾರೀ ದಂಡ
-
ದಿನದ ಸುದ್ದಿ5 days ago
ಜನಪದ ಕಲೆ ಗ್ರಾಮೀಣ ಜನರ ಜೀವನಾಡಿ : ಪ್ರಾಚಾರ್ಯೆ ಡಾ.ಶಶಿಕಲಾ.ಎಸ್
-
ದಿನದ ಸುದ್ದಿ5 days ago
ದಾವಣಗೆರೆ | ವೃತ್ತಿಪರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಮುಖ್ಯಮಂತ್ರಿ ಪದಕ ; ಮುಖ್ಯ ಪೊಲೀಸ್ ಪೇದೆ ಕೊಟ್ರೇಶ್ ಅಯ್ಕೆ
-
ದಿನದ ಸುದ್ದಿ4 days ago
ದಾವಣಗೆರೆ ವಿ.ವಿ 12ನೇ ಘಟಿಕೋತ್ಸವ | ವಿಶ್ವವಿದ್ಯಾಲಯಗಳಲ್ಲಿ 2500 ಹುದ್ದೆಗಳು ಖಾಲಿ ಇವೆ : ಸಚಿವ ಡಾ.ಎಂ.ಸಿ. ಸುಧಾಕರ್
-
ದಿನದ ಸುದ್ದಿ7 days ago
ದಾವಣಗೆರೆ | ಏಪ್ರಿಲ್ 5 ಮತ್ತು 6 ರಂದು ಜಲಸಾಹಸ ಕ್ರೀಡೆ
-
ದಿನದ ಸುದ್ದಿ4 days ago
ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂರ ಕಡೆಗಣನೆ, ಆಸ್ತಿ ಹಕ್ಕು ಕಸಿದುಕೊಳ್ಳುವ ಅಸ್ತ್ರ: ಸೈಯದ್ ಖಾಲಿದ್ ಅಹ್ಮದ್
-
ದಿನದ ಸುದ್ದಿ3 days ago
ದಾವಣಗೆರೆ | ನಾಳೆ ಡಾ.ಬಾಬು ಜಗಜೀವನ ರಾಂ 118ನೇ ಜನ್ಮ ದಿನಾಚರಣೆ