ದಿನದ ಸುದ್ದಿ

ಹಂಪಿ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ; ನಾಡೋಜ ಗೌರವ ಪದವಿ ಪ್ರದಾನ

Published

on

ವರದಿ: ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸುದ್ದಿದಿನ,ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ಸಮಾರಂಭವು ಶುಕ್ರವಾರ ರಂದು ವಿವಿ ಆವರಣದ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಿತು.

ಈ ವೇಳೆ ಗಣನೀಯ ಸಾಧನೆ ಮಾಡಿದ ಮೂರು ಜನ ಗಣ್ಯರಿಗೆ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಟಿತ ಪದವಿ ನಾಡೋಜ ಗೌರವ ಪದವಿಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

ನಾಡೋಜ ಗೌರವ ಪದವಿಗೆ ಬಾಜನರಾದವರು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ಶಿವರಾಜ್ ವಿ.ಪಾಟೀಲ್, ಪ್ರಖ್ಯಾತ ಬರಹಗಾರರು ಮತ್ತು ಚಿಂತಕರಾದ ಕುಂ.ವೀರಭದ್ರಪ್ಪ (ಕುಂ.ವೀ), ಪ್ರಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ ಎಂ.ವೆಂಕಟೇಶ್ ಕುಮಾರ್ ಇವರಿಗೆ ಪ್ರದಾನ ಮಾಡಲಾಯಿತು.

ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ತುಮಕೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ರಾಜಾಸಾಬ್ ಎಂ.ಎಚ್, ಹಂಪಿ ವಿವಿ ಕುಲಪತಿ ಡಾ.ಡಿ.ವಿ.ಪರಶಿವಮೂರ್ತಿ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version