ದಿನದ ಸುದ್ದಿ
ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ‘ಎಳೆ’ ತಂದರೋ..!
- ನವೀನ್ ಸಾಗರ್, ಬೆಂಗಳೂರು
ಸಿನಿಮಾ ಹಾಡುಗಳು ಕವನಗಳು ಎಲ್ಲ ಗದ್ಯಗಳಷ್ಟು ನೇರ ಸಲೀಸು ಅಲ್ಲ. ಹೇಳಬೇಕಿರೊದನ್ನು ಗದ್ಯಗಳ ಹಾಗೆ ಸೀದಾಸಾದಾವಾಗಿ ಕವನಗಳು, ಸಿನಿಗೀತೆಗಳು ಹೇಳುವುದಿಲ್ಲ. ಹಾಗೆ ಹೇಳಿಬಿಟ್ಟರೆ ಅವು ಕವನ/ಹಾಡು/ಪದ್ಯಗಳೇ ಅಲ್ಲ!!!
ಹಾಡು ಅಂದರೆ ಅಲ್ಲಿ ಉಪಮೆಗಳು ಗೂಢಾರ್ಥಗಳು ದ್ವಂದ್ವಾರ್ಥಗಳು(ದ್ವಂದ್ವಾರ್ಥ ಅಂದ್ರೆ ಅಶ್ಲೀಲ ಮಾತ್ರವೇ ಅಲ್ಲ), ಎರಡುಮೂರು ವಿಚಾರಗಳನ್ನು ಹೇಳಬಲ್ಲ ಒಂದೇ ಒಂದು ಸಾಲು, ಇನ್ಯಾವತ್ತೋ ರೆಲೆವೆಂಟ್ ಅನಿಸಬಲ್ಲ ಕಲ್ಪನೆಗಳು ಏನೇನೋ ತುಂಬಿಹೋಗಿರುತ್ತವೆ. ಅದಕ್ಕೊಂದು ಮೂಡ್ ಇರುತ್ತೆ.
ಒಬ್ಬೊಬ್ಬ ಓದುಗನಲ್ಲಿ ಒಂದೊಂದು ಭಾವ ಹುಟ್ಟಿಸಬಲ್ಲ ಶಕ್ತಿ ಕವಿತೆಗಳಿಗಿರುತ್ತದೆ. ನನಗೆ ರೊಮ್ಯಾಂಟಿಕ್ ಅನಿಸುವ ಗೀತೆಯೊಂದು ಇನ್ನೊಬ್ಬನಿಗೆ ವಿರಹಗೀತೆ ಅನಿಸಬಹುದು. ನನಗೆ ಲಾಲಿ ಹಾಡೆನಿಸುವ ಗೀತೆಯೊಂದು ಇನ್ಯಾರಿಗೋ ಜಾಲಿ ಗೀತೆ ಅನಿಸಬಹುದು. ಇನ್ನೊಬ್ರಿಗೆ ಶೋಕಗೀತೆ ಅನಿಸೋ ಗೀತೆಯಲ್ಲಿ ನನಗೇನೋ ತುಂಟತನ ಕಾಣಿಸಬಹುದು. ಸಭ್ಯಗೀತೆ ಅನಿಸುವ ಹಾಡೊಂದು ಸಾಲುಸಾಲಲ್ಲೂ ಡಬಲ್ ಮೀನಿಂಗ್ ತುಂಬ್ಕೊಂಡಿದೆಯಲ್ಲ ಅನಿಸಬಹುದು. ಗ್ರಹಿಕೆ ಮೂಡು ವಯಸ್ಸು ಸಂದರ್ಭ ಇವೆಲ್ಲದರ ಮೇಲೆ ಹಾಡೊಂದು ನಮ್ಮನ್ನು ತಲುಪೋ ಬಗೆ ಬದಲಾಗುತ್ತಾ ಹೋಗುತ್ತದೆ. ಅಷ್ಟಾಗಿಯೂ ಅಸಲಿಗೆ ಅದನ್ನು ಬರೆದ ಕವಿಯ ಯೋಚನೆ ನಾವು ಗ್ರಹಿಸಿದ್ದೆಲ್ಲಕ್ಕಿಂತ ಭಿನ್ನವಾಗಿದ್ದಿನ್ನೇನೋ ಇದ್ದರೂ ಇರಬಹುದು.
ಹಲವು ಬಾರಿ ಕವಿಗೆ ತನ್ನ ಗೀತೆ ತಾನಂದುಕೊಂಡ ಭಾವದಲ್ಲೇ ರೀಚ್ ಆಗಿದೆ ಅನ್ನೋ ಖುಷಿ ತೃಪ್ತಿ ಸಿಗುತ್ತದೆ. ಕೆಲವು ಬಾರಿ .. ಅರೆ ಬರೆಯುವಾಗ ನಾನೇ ಹೀಗೊಂದು ಗೂಡಾರ್ಥದ ಬಗ್ಗೆ ಯೋಚಿಸಿರಲಿಲ್ಲ. ಕೇಳುಗ ಇದಕ್ಕೆ ಇನ್ನೊಂದು ಆಯಾಮವನ್ನೇ ಕೊಟ್ಟುಬಿಟ್ಟನಲ್ಲ ಅಂತ ಅಚ್ಚರಿಯಾಗಬಹುದು. ಕೆಲವೊಮ್ಮೆ ತನಗೇ ಗೊತ್ತಿಲ್ಲದ ಅರ್ಥ ಹುಟ್ಟಿಸಿ ತನ್ನನ್ನು ಕೇಳುಗರು ಮೇಲೇರಿಸಿ ಕೂರಿಸಿದಾಗ, ಈ ಕ್ರೆಡಿಟ್ ಬಿಟ್ಟುಕೊಡಲಿಷ್ಟ ಪಡದ ಕರಪ್ಟ್ ಮನಸು.. ಹೌದೌದು ನಾನು ಹೀಗೆ ಎರಡರ್ಥ ಹುದುಗಿಸಿಈ ಸಾಲು ಬರೆದಿದ್ದೆ ಎಂದು ಧ್ವನಿಗೂಡಿಸುತ್ತದೆ. ಅದೇ ವಿವಾದಕ್ಕೋ ಅವಹೇಳನಕ್ಕೋ ಕಾರಣವಾದರೆ .. ಇಲ್ಲ ನಾನು ಬರೆದದ್ದು ಈ ಅರ್ಥದಲ್ಲಿ ಅಂತ ಸೇಫ್ಟಿ ಮೋಡ್ ಗೂ ಹೋಗುತ್ತದೆ. ಹಾಡು/ಕವಿತೆಗಳಿಗೆ ಈ ವ್ಯಾಖ್ಯಾನದ ಮೂಲಕ ಬಚಾವಾಗುವ ಇಮೇಜ್ ರೂಪಿಸಿಕೊಳ್ಳುವ ಅವಕಾಶವಿರುತ್ತದೆ. ಗದ್ಯಗಳಿಗೆ ಆ ಪ್ರಿವೆಲೇಜ್ ಇರೋದಿಲ್ಲ.
ಸಂಭ್ರಮ ಚಿತ್ರದಲ್ಲಿ ಹಂಸಲೇಖ … “ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ಎಳೆ ತಂದರೋ…” ಗೀತೆಯಲ್ಲಿ ” ಎಳೆ” ಪದವನ್ನು ಎರಡರ್ಥ ಬರುತ್ತದೆಂದೇ ಬಳಸಿದರೋ ಬರೆದ ಮೇಲೆ ಎರಡರ್ಥ ಕೇಳುಗರ ಗ್ರಹಿಕೆಗೆ ಬಂತೋ ಎಂಬ ಪ್ರಶ್ನೆಯಂತೆ ಇದು. ಹಂಸ ಲೇಖಾವ್ರು ಪ್ರೀತಿಯ ’ಎಳೆ’ಯ ಬಗ್ಗೆ ಬರೆದಿರಬಹುದು. ಅಥವಾ ಎಳೆದು ತಂದರೋ ಎಂದು ಕೇಳಿಯೂ ಬರೆದಿರಬಹುದು. ಅಥವಾ ಅವರಿಗಿರೋ ಪನ್ ಸೆನ್ಸ್ ಗೆ ಈ ಎರಡೂ ಅರ್ಥ ಬರಲಿ ಅಂತಲೇ ಎಳೆ ಎಂಬ ಪದ ಬಳಸಿರಬಹುದು. ಈ ಥರದ ಸಾಕಷ್ಟು ಉದಾಹರಣೆ ಸಿಗುತ್ತದೆ. ಸಾಹಿತ್ಯ ಗಮನಿಸಲು ಶುರು ಮಾಡಿದಾಗ ಇಂಥ ಖುಷಿ ಅನುಭೂತಿಗಳು ಸಿಗಲಾರಂಭಿಸುತ್ತವೆ. ರಿಸರ್ಚಿನಂಥ ಖುಷಿ
ಹಂಸಲೇಖರ … “ಈ ಹರಯದ ನರಕೊಳಲಲಿ ಇವೆ ಸರಿಗಮ ಹೊಳ್ಳೆಗಳು… ಈ ಮದನನ ಕಿರುಬೆರಳಲಿ ನವಿರೇಳದೆ ಗುಳ್ಳೆಗಳು..” ಈ ಸಾಲು ಕೇವಲ ಕಮರ್ಶಿಯಲ್ ಮ್ಯೂಸಿಕಲ್ ಸಾಂಗ್ ಆಗಿ ನಮ್ಮ ಕಿವಿ ತಲುಪಿದಾಗ ಗುನುಗುವ ಸಾಲಾಗುತ್ತದೆ ಅಷ್ಟೆ. ಅರೆ ಹರಯದ ನರಕೊಳಲು ಅಂದ್ರೆ ಏನು… ಮದನನ ಕಿರುಬೆರಳು ಅಂದ್ರೆ.. ? ಸಾಮಾನಿಗೆ ಇಷ್ಟು ಸಭ್ಯಶೃಂಗಾರರೂಪ ಕೊಟ್ಟು ಹೇಳಿರೋದಾ ಅನಿಸಿದಾಗ.. ಶೃಂಗಾರ ಅಡಗಿರೋ ಸಾಲಾದರೂ ಜೋರಾಗಿ ಹೇಳೋಕೆ ಮನಸು ಹಿಂಜರಿಯುತ್ತದೆ.
ಸಾಹಿತ್ಯ ಅಷ್ಟಾಗಿ ಗಮನಿಸದ ವಯಸ್ಸಲ್ಲಿ… “ಮೈಯ್ಯಲ್ಲಿ ಏಳುತಿದೆ ಮನ್ಮಥನ ಅಂಬುಗಳು.. ಜುಮ್ ಜುಮ್ ಜುಮ್..” ಅನ್ನೋ ಸಾಲು ಸಂಕ್ರಾಂತಿ ಗೀತೆ ಎಂಬಂತೆ ಬಂದು ಹೋಗುತ್ತಿತ್ತು.
ಆದರೆ ಆನಂತರ ಸಾಹಿತ್ಯವಾಗಿ ಗಮನಿಸಿದಾಗ. ಆಹಾ ರೋಮಾಂಚನವನ್ನು.. ಮೈರೋಮ ನಿಮಿರುವುದನ್ನು ಮನ್ಮಥನ ಬಾಣಕ್ಕೆ ಹೋಲಿಸಿದ್ದಾರಲ್ಲ ಅನಿಸಿ ನಿಜಕ್ಕೂ ಜುಮ್ ಅನಿಸಿತ್ತು. ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಯೋಚಿಸಿದರೆ.. ಮೈಯಲ್ಲಿ ಏಳುತಿದೆ ಮನ್ಮಥನ ಅಂಬು ಅಂದ್ರೆ.. ಒನ್ಸಗೇನ್ ಸಾಮಾನಿರಬಹುದಾ ಅನಿಸದಿರದು.
ಸದಾಶಿವಂಗೆ ಅದೇ ಗ್ಯಾನ ಅಂದ್ಕೋಬೇಡಿ..
ನೆನಪಿರಲಿ ಚಿತ್ರದ ಅಜಂತಾ ಎಲ್ಲೋರಾ ಗೀತೆಯಲ್ಲಿ ಬರುವ… “ಮಂದವಾಗಿ ಬಳುಕೋವಂಥ ನಾರಿ ಇವಳ
ಅಂದ ನೋಡಿ ನಿಂತಾಗ..ಚಂದ ನೋಡಿ ನಿಂತಾಗ..
ಯಾರೊ ನೀನು ಎಂದು ಕೇಳುತಾವೆ..
ಇವಳ ಪೊಗರಿನ ಹೃದಯಪಾಲಕಿಯರು..
ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ…”
ಈ ಸಾಲುಗಳು ತನ್ನ ರಿದಮಿಕ್ ಮ್ಯೂಸಿಕ್ ಹಾಗೂ ಸುಲಲಿತವಾಗಿ ಲಘುಗುರು ಇಟ್ಟು ಬರೆದಂಥ ಪದಗಳ ಆಟದಿಂದ ಮಜವಾಗಿ ಹಾಡಿಸಿಕೊಂಡು ಬಿಡ್ತವೆ. ಆದರೆ ಯಾವತ್ತೋ ಆರಾಮಾಗಿ ಸಾಹಿತ್ಯ ಕೇಳ್ತಾ ಇದ್ದರೆ.. ಆಹಾ ..ಹಂಸಲೇಖರ ರಸಿಕಕಲ್ಪನೆಗಳಿಗೆ ಮಿತಿಯೇ ಇಲ್ಲವಾ ಅನಿಸಿಬಿಡುತ್ತದೆ.
ಯಾರೋ ನೀನು ಎಂದು ಕೇಳುತಾವೆ ಇವಳ “ಪೊಗರಿನ ಹೃದಯ ಪಾಲಕಿಯರು” ಎಂದು ಅವರು ರೆಫರ್ ಮಾಡ್ತಿರೋದು ಆ ಹೆಣ್ಣಿನ ಸ್ತನಗಳ ಬಗ್ಗೆ ಅಂತ ಅರ್ಥವಾದಾಗ ಮತ್ತೊಮ್ಮೆ ಈ ಸಾಂಗ್ ಕೊಡುವ ಅನುಭೂತಿಯೇ ವಿಭಿನ್ನ. “ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ” ಎಂದು ಮುಂದುವರಿಸಿ ಆ ಸಾಲಿಗೆ ಇನ್ನಷ್ಟು ರಸಿಕತೆ ತುಂಬುತ್ತಾರೆ ಹಂಸ್.
ಗಡಿಬಿಡಿಗಂಡ ಚಿತ್ರದ…. ಮುದ್ದಾಡೆಂದಿದೆ ಮಲ್ಲಿಗೆ ಹೂ ಗೀತೆಯಲ್ಲಿ……. ನಾಯಕಿ”ಎದೆಯ ಸೆರಗ ಮೋಡದಲ್ಲಿ ನೀನೇ ಚಂದ್ರನೀಗ….” ಅಂದರೆ…. ನಾಯಕ” ಹೃದಯ ಮೇರುಗಿರಿಗಳಲ್ಲಿ… ಕರಗಬಹುದೆ ಈಗ” ಅಂತಾನೆ. “ಮುಡಿಯಲಿ ಮಲ್ಲಿಗೆಯ ಮುಡಿದವಳ ಮೊದಲುಮುಡಿಯಬೇಕು.. ಮಡದಿಗೆ ಪ್ರತಿದಿನವೂ ಮೊದಲಿರುಳಿರಬೇಕು…” ಅಂತ ನಾಯಕಿ ತನ್ನನ್ನು ಮೊದಲು ರಮಿಸು ಅಂತ ಒತ್ತಾಯಿಸುತ್ತಿದ್ದರೆ………… ನಾಯಕ ..” ಮನಸಿನ ಮಧುವಿನ ಮಹಲೊಳಗೆ … ಮದನ ಮಣಿಯಬೇಕು… ಸುರತಿಯ ಪರಮಾನ್ನ ಹಿತಮಿತವಿರಬೇಕು” ಅಂತ ಆಕೆಯ ಮೇಲಿರೋ ಮೋಹದ ಜೊತೆಜೊತೆಗೆ ಪ್ರತಿದಿನ ಬೇಡ ಫ್ರೀಡಮ್ಮು ವೀಕ್ಲಿ ಒನ್ಸು ಜುಮ್ ಜುಮ್ಮು” ಅಂತ ದೂರ ಹೋಗೋ ಪ್ರಯತ್ನ ಕೂಡ ಮಾಡುತ್ತಾನೆ.
ಇದು ಕೂಡ ಹೆಣ್ಣು ತನ್ನ ಗಂಡನ್ನು ಸೆಕ್ಸಿಗಾಗಿ ಕರೆಯುವ ಗೀತೆಯೇ ಆದರೂ… ತನ್ನ ಕ್ಲಾಸಿಕಲ್ ಟ್ಯೂನ್ ನಿಂದ ಚೆಂದದ ಪದಜೋಡಣೆಯಿಂದ… ಈ ಹಾಡು ಕೊಂಚವೂ ಅಶ್ಲೀಲ ಅನಿಸೋದೇ ಇಲ್ಲ. ಅಶ್ಲೀಲ ಅನಿಸಿದರೂ ಓಕೆ ಎಂದು ಬರೆದಾಗ.. ರಾತ್ರಿ ಆಯ್ತು ಮಲಗೋಣ ಇಂದು ನಮ್ಮ ಸೋಭಾನ… ಅಥವಾ ಕಾಯಿ ಕಾಯಿ ನುಗ್ಗೇಕಾಯಿ ಮಹಿಮೆಗೆ ರಾತ್ರಿಯೆಲ್ಲ ನಿದ್ದೆಯಿಲ್ಲ ಕಣ್ಣಿಗೆ.. ನೆಲ್ಲಿಕಾಯಿ ಆಸೆಗೆ ಬಿಟ್ಟು ಬಂದೆ ಹಾಸಿಗೆ ಅಂತ ಸ್ವಲ್ಪ ನೇರವಾಗಿಬಿಡುತ್ತಾರೆ ಹಂಸಲೇಖ.
ಇವೆಲ್ಲ ಸಾಹಿತ್ಯವನ್ನು ಗಮನಿಸುವಾಗ ಅರ್ಥವಾಗುತ್ತಾ ಹೋಗುವ ಅಪಾರಾರ್ಥಗಳು. ತೂಗುಮಂಚದ “ಹಮ್ಮನುಸಿರಬಿಟ್ಟಳು ಎಂಬುದು ಅಮ್ಮನುಸಿರ ಬಿಟ್ಟಳು ಎಂದಾಗಿದ್ದು ಅದನ್ನು ಲಾಲಿಹಾಡೆಂದು ತಪ್ಪು ತಿಳಿದುದರ ಪರಿಣಾಮ ಎಂದು ಹಿಂದೊಮ್ಮೆ ಬರೆದಿದ್ದು ನಿಮಗೆ ನೆನಪಿರಬಹುದು.
ಇನ್ನು ಡಬಲ್ ಮೀನಿಂಗೇ ಹುಡುಕಬೇಕು ಅಂದರೆ ಪ್ರತಿ ಗೀತೆಯೂ ಬೇರೆಯೇ ಅರ್ಥ ಕೊಡಬಲ್ಲ ಕೆಪಾಸಿಟಿ ಹೊಂದಿರುತ್ತದೆ. ಅದು ನಾವು ಆ ಗೀತೆಯನ್ನು ಬಿಂಬಿಸೋಕೆ ಹೊರಟಿರುವ ರೀತಿಯ ಮೇಲೆ ಡಿಪೆಂಡು. ಎಂಥ ಸಭ್ಯಸಾಲನ್ನೂ.. ಕವಿಗೇ ಶಾಕ್ ಆಗುವ ಹಾಗೆ ಡಬಲ್ ಮೀನಿಂಗ್ ಆಗಿಸಬಹುದು. ಆ ಉದಾಹರಣೆ ಈ ಬರಹದಲ್ಲಿ ಬೇಡ. ಮುಂದೆಂದಾದರೂ ಬರೆಯೋಣ.
ಇದೆಲ್ಲ ಬರೆಯೋಕೆ ಹೊರಟಿದ್ದಕ್ಕೆ ಪ್ರೇರಣೆ ಅಣ್ಣಯ್ಯ ಚಿತ್ರದ ಒಂದು ಸಾಂಗ್. ಅಣ್ಣಯ್ಯ ಬಂದು ಹೋಗಿ ಇಪ್ಪತ್ತೈದು ವರ್ಷಕ್ಕೂ ಹೆಚ್ಚು ಟೈಮಾಯ್ತು. ರವಿಚಂದ್ರನ್ ಸಿನಿಮಾಗಳು ಸಾಫ್ಟ್ ಪೋರ್ನ್ ಸಿನಿಮಾಗಳಂತೆ ಭಾಸವಾಗುತ್ತಿದ್ದ ನಮ್ಮ ಏಜಿನ ದಿನಗಳವು. ರವಿಚಂದ್ರನ್ ಸಿನಿಮಾಗಳನ್ನು ನೋಡೋದು ಕಾಶೀನಾಥ್ ಸಿನಿಮಾ ನೋಡೋಷ್ಟೇ ಪಾಪ ಎಂಬಷ್ಟು ಮಡಿವಂತಿಕೆ ದಿನಗಳವು. ಆದರೆ ನಮ್ಮ ಪಾಲಿಗೆ ಆಗ ರವಿಮಾಮಾ ಲವ್ ರೊಮ್ಯಾನ್ಸ್ ಶೃಂಗಾರಗಳಿಗೆ ಗಾಡ್. ಆತ ಹೀರೋಯಿನ್ ಎದೆಯ ಮೇಲೆ ಮುಖವಿಟ್ಟು ಒರಗಿದರೆ ನಮಗೆ ರಸಸ್ಫೋಟ ಆಗುತ್ತಿತ್ತು. ಕುತ್ತಿಗೆಗೊಂದು ಮುತ್ತಿಟ್ಟು ತುದಿಬೆರಳುಗಳನ್ನು ಕತ್ತು ಮತ್ತು ಎದೆಯ ನಡುವೆ ಒಮ್ಮೆ ಆಡಿಸಿದ ಅಂದರೆ ಕೊಳಲು ಲಂಬಕೋನವಾಗುತ್ತಿತ್ತು.
ಆತ ಸೆರಗು ಸರಿಸಿ ಹೊಕ್ಕಳಿಗೊಮ್ಮೆ ಮುತ್ತಿಟ್ಟರೆ ಮುಗಿದೇಹೋಯ್ತು ಊರಸ್ನಾಯುಗಳು ಬಿಗಿಯಾಗಿ ಹೋಗುತ್ತಿದ್ದವು. ಅಂದು ಹಂಸಲೇಖ ಗೀತೆಗಳು ರವಿಚಂದ್ರನ್ ನ ಪಿಚ್ಚರೈಸೇಷನ್ನಲ್ಲಿ ಕಳೆದುಹೋಗಿಬಿಡುತ್ತಿದ್ದವು. ಅಥವಾ ಸಾಹಿತ್ಯ ಸಂಗೀತ ಎಲ್ಲದರಾಚೆಗೆ ನಮಗೆ ಆ ರೊಮ್ಯಾನ್ಸೇ ಹೆಚ್ಚು ಆಕರ್ಷಿಸಿಬಿಡುತ್ತಿತ್ತು. ಕ್ಯಾಸೆಟಲ್ಲಿ ಹಾಡುಗಳನ್ನು ಕೇಳಿ ಸಿನಿಮಾಗೆ ಹೋದಾಗ ಗೀತೆಗಳು ಆಡಿಯೋಗಿಂತ ವಿಡಿಯೋವಾಗಿ ತೃಪ್ತಿಕೊಟ್ಟು ಕಳಿಸುತ್ತಿದ್ದವು. ಆದರೆ ಆನಂತರ ಸಾಹಿತ್ಯ ಗಮನಿಸುವ ಮೆಚುರಿಟಿ, ಸಾಹಿತ್ಯದಲ್ಲಿರುವ ಇಮ್ಯಾಜಿನೇಷನ್ ಪವರ್ ಆಸ್ವಾಧಿಸುವ ಮನಸ್ಥಿತಿ ಎಲ್ಲ ಬಂದಾಗ.. ರವಿ ಚಂದ್ರನ್ ಹಂಸಲೇಖರ ಗೀತೆಗೆ ಹತ್ತು ಪರ್ಸೆಂಟಷ್ಟೂ ನ್ಯಾಯ ಸಲ್ಲಿಸಲು ಸಾಧ್ಯವಾಗಿಲ್ಲ ಅನಿಸಿಬಿಟ್ಟಿದೆ. ಹಾಗಂತ ಹಂಸಲೇಖರ ಸಾಹಿತ್ಯಕ್ಕೆ ನ್ಯಾಯ ಸಲ್ಲಿಸಲು ಸಾಧ್ಯವಿತ್ತಾ? ಖಂಡಿತ ಇಲ್ಲ. ಯಥಾವತ್ ನ್ಯಾಯ ಸಲ್ಲಿಸಲು ಹೋದದ್ದೇ ಆದರೆ ಆ ಸಾಂಗ್ ನ ಪಿಚ್ಚರೈಸೇಷನ್ ಕಾಮಸೂತ್ರವಾಗಿ ಹೋಗುವಷ್ಟು ಹಾಟ್ ಆಗಿಬಿಡುತ್ತಿತ್ತು.
ಆ ಗೀತೆಗಳು ಪಿಚ್ಚರೈಸ್ ಆಗದೆಯೇ ಇಮ್ಯಾಜಿನೇಷನ್ನಲ್ಲೇ ಉಳಿದುಬಿಟ್ಟಿದ್ದರೆ ಎಷ್ಟು ಚೆಂದವಿತ್ತು ಅನಿಸಿದ್ದೂ ಇದೆ. ಸತ್ಯ ಏನಂದರೆ ರವಿಚಂದ್ರನ್ ಸಲ್ಲಿಸಿದಷ್ಟು ನ್ಯಾಯವನ್ನು ಹಂಸಲೇಖರ ಗೀತೆಗೆ ಇನ್ಯಾರೂ ಸಲ್ಲಿಸಲು ಸಾಧ್ಯವಾಗಲಿಲ್ಲ. ರೊಮ್ಯಾಂಟಿಕ್ ಗೀತೆಗಳಲ್ಲಿ ಮಾತ್ರವಲ್ಲ… ಬೇರೆ ಗಂಭೀರ/ಸ್ಯಾಡ್/ಫಿಲಾಸಫಿಕಲ್/ಕ್ರಾಂತಿ ಯಾವ ಗೀತೆಗಳಿಗೂ ವಿಶ್ಯುಯಲಿ ನ್ಯಾಯ ಸಿಕ್ಕಿಲ್ಲ. ಇದು ಹಂಸಲೇಖ ಮಾತ್ರ ಅಲ್ಲ.. ಬಹುತೇಕ ಸಾಹಿತಿಗಳ ಮನಸಿನ ಮೂಲೆಯ ಅಸಮಾಧಾನ ಹಾಗೂ ನೋಡುಗರ ಅಸಂತೃಪ್ತಿ. ಮೊನ್ನೆ ನಾನು ಶೇರ್ ಮಾಡಿಕೊಂಡ ” ಸುಮ್ಮನೆ ಹೀಗೆ ನಿನ್ನನೇ …:” ಎಂಬ ಅಮರ್ ಚಿತ್ರದ ಗೀತೆಯಾದರೂ ಅಷ್ಟೆ. ಅಷ್ಟು ಗಾಢ ಸಾಲುಗಳ ಗೀತೆಗೆ ಅಂಬರೀಶ್ ಪುತ್ರನಿಂದ ಕಲ್ಲುಬಂಡೆಯಂಥ ಅಭಿನಯ. ಇಡೀ ಹಾಡನ್ನು ಲಾಂಗ್ ಶಾಟ್ ಗಳಲ್ಲಿ ತೆಗೆದು ಪ್ರಕೃತಿ ಸೌಂದರ್ಯ ತೋರಿಸಿ ಮುಗಿಸಿದ್ದಾರೆ ನಾಗಶೇಖರ್. ಸಾಹಿತ್ಯಕ್ಕೆ ಸಂಗೀತ ಸಲ್ಲಿಸುವಷ್ಟು ನ್ಯಾಯವನ್ನು ದೃಶ್ಯರೂಪ ಸಲ್ಲಿಸಲು ಸಾಧ್ಯವಿಲ್ಲ. ಬೆಟರ್ ನಾವು ಹಾಡುಗಳನ್ನು ನಮ್ಮ ಇಮ್ಯಾಜಿನೇಷನ್ ಗೆ ತಕ್ಕಂತೆ ಕಣ್ಮುಚ್ಚಿಕೊಂಡು ಮನಸ್ಸಿನೊಳಗೇ ಚಿತ್ರಿಸಿಕೊಂಡುಬಿಡುವುದು.
ಬ್ಯಾಕ್ ಟು ಅಣ್ಣಯ್ಯ ಚಿತ್ರದ ಆ ಸಾಂಗ್ : ಇಷ್ಟು ವರ್ಷದಲ್ಲಿ ಈ ಹಾಡನ್ನು ಕಮ್ಮಿ ಅಂದ್ರೂ ಒಂದು ಸಾವಿರ ಸಲ ಕೇಳಿರುತ್ತೇನೆ. ಹಿಟ್ ಆಲ್ಪಮ್ ಆಗಿರುವ ಅದರ ಕಡಿಮೆ ಪಾಪ್ಯುಲರ್ ಗೀತೆ ಅದು.
“ಅ ಹಾಗೆ ಪ್ರೇಮಿ ಓಹೋ.. ಒ ಹೋಗೆ ಪ್ರೇಮಿ ಆಹಾ…”
ಈ ಹಾಡಿನ ಚಿತ್ರಣ ನಿಮ್ಮನ್ನು ಸಾಹಿತ್ಯ ಗಮನಿಸದಷ್ಟು ಸೆಳೆದುಕೊಳ್ಳುತ್ತದೆ ಕಾರಣ. ರವಿಚಂದ್ರನ್ ಮಧುಬಾಲಾ ಕೆಮಿಸ್ಟ್ರಿ! ಆದರೆ ಅದ್ಯಾಕೋ ಗೀತೆ ತುಂಬ ಅಟ್ರಾಕ್ಟಿವ್ ಅನಿಸಿರಲಿಲ್ಲ. ಕಮಾನು ಡಾರ್ಲಿಂಗ್, ಅಣ್ಣಯ್ಯ ಅಣ್ಣಯ್ಯ ಬಾರೋ, ರಾಗಿ ಹೊಲದಾಗೆ ಖಾಲಿ ಗುಡಿಸಲು ಈ ಗೀತೆಗಳು ಕೊಟ್ಟ ಕಿಕ್ …. ಈ ಅ ಹಾಗೆ ಪ್ರೇಮಿ ಓಹೋ… ಒ ಹೋಗೆ ಪ್ರೇಮಿ ಆಹಾ ಗೀತೆ ನೀಡಿರಲಿಲ್ಲ.
ಹೌದು ನಾನು ಈ ಹಾಡನ್ನು ಕೇಳಿಸಿಕೊಳ್ತಾ ಇದ್ದದ್ದೇ ಹೀಗೆ. ಮೊನ್ನೆಯ ತನಕವೂ…ಆದರೆ ಮೊನ್ನೆ ಯಾಕೋ ಮತ್ತೊಮ್ಮೆ ಕೇಳಿಸಿಕೊಂಡಾಗ.. ಅರೆ ಇಪ್ಪತ್ತೈದು ವರ್ಷ ತಪ್ಪಾಗಿ ತಿಳಿದುಕೊಂಡು ತಪ್ಪಾಗೇ ಹಾಡಿಕೊಂಡೆನಲ್ಲ ಅಂತ ಮೈತುಂಬ ಗಿಲ್ಟು
ಆ ಸಾಂಗ್ ಇರೋದು ಹೀಗೆ…
”ಆಹಾ’ಗೆ ಪ್ರೇಮಿ “ಓಹೋ”
” ಓಹೋ”ಗೆ ಪ್ರೇಮಿ ” ಆಹಾ”
ನನ್ನ ಹಾಗೆ ಅದೆಷ್ಟು ಜನ ಯಾಮಾರಿದ್ದೀರೋ ಗೊತ್ತಿಲ್ಲ. ಅಥವಾ ನಾನೊಬ್ನೇ ಹೀಗೆ ತಪ್ಪಾಗಿ ಕೇಳಿಸಿಕೊಂಡವ್ನೋ ಗೊತ್ತಿಲ್ಲ
ಈ ಗೀತೆಯ ವಿಶೇಷ ಏನಂದ್ರೆ ಹಂಸಲೇಖ. ಆಹಾ ಮತ್ತು ಓಹೋ ಎಂಬ ಎರಡು ಪದಗಳನ್ನೇ ಪ್ರೇಮಿಗಳನ್ನಾಗಿಸಿದ್ದಾರೆ
ಆಹಾಗೆ ಓಹೋ ಪ್ರೇಮಿ… ಓಹೋಗೆ ಆಹಾ ಪ್ರೇಮಿ!
ಅದು ಇಬ್ಬರು ಪ್ರೇಮಿಗಳ ಹೆಸರು!
ಈಗ ಈ ಹಾಡೊಮ್ಮೆ ಕೇಳಿನೋಡಿ…
ಅದು ಸೌಂಡಾಗೋದೇ ಬೇರೆ ಥರ!
ಅದ್ಯಾಕೆ ಆಹಾ ಓಹೋ ಎಂಬ ಪದಗಳು ಇಲ್ಲಿ ಪಾತ್ರಗಳಾದವು ಅಂತ ಸಿನಿಮಾ ತೆರೆದು ನೋಡಿದೆ. ಈ ಹಾಡು ಆರಂಭವಾಗುವ ಮುನ್ನ ಅಣ್ಣಯ್ಯ ಯಾವುದೋ ಫೈಟಿಂಗಲ್ಲಿ ಒದೆ ತಿಂದು ಬೆನ್ನಿಗೆ ಕಾಶಿ ಕೈಲಿ ಬಿಸಿ ಮಸಾಜ್ ಮಾಡಿಸಿಕೊಳ್ತಾ ಇರ್ತಾನೆ. ಅವನ ಇಮ್ಯಾಜಿನೇಷನಲ್ಲಿ ನಾಯಕಿ ಬಂದು ಕಾಶಿಯ ಬದಲು ಮಸಾಜ್ ಮಾಡ್ತಿರೋ ಹಾಗೆ ಒಂದು ಟ್ವಿಸ್ಟು.. ಇಮ್ಯಾಜಿನೇಷನಲ್ಲೇ ಅವಳೊಂದಿಗೆ ಮಾತಾಡ್ತಾ.. ಆಕೆ ಬಿಸಿ ಶಾಖ ಕೊಟ್ಟಾಗ ಒಮ್ಮೆ ನಾಯಕ ಆಹಾ ಅಂತಾನೆ.. ಇನ್ನೊಮ್ಮೆ ಓಹೋ ಎಂದು ಬಿಗಿಯುಸಿರು ಬಿಡುತ್ತಾನೆ. ಆಗ ಹುಟ್ಟುವ ಹಾಡಿದು. ಡ್ರೀಮ್ ಸಾಂಗ್ ನಲ್ಲಿ ಟೆಕ್ಸ್ಟ್ ಕೂಡ ಬರುತ್ತದೆ ಆಹಾ ಓಹೋ ಅಂತ!
ಸ್ಕ್ರಿಪ್ಟ್ ಜೊತೆ ದೃಶ್ಯರಚನೆ ಜೊತೆ ಗೀತ ಸಾಹಿತಿ ಕನೆಕ್ಟ್ ಆದಾಗ ಇಂಥ ಅದ್ಭುತಗಳು, ಮಜಗಳು, ಕ್ರಿಯೇಟಿವ್ ಐಡಿಯಾಗಳು ಹುಟ್ಟುತ್ತವೆ. ಹಂಸಲೇಖ ಎಲ್ಲೋ ಕೂತು ಹಾಡುಬರೆದುಕೊಟ್ಟು ಸಂಗೀತ ಮಾಡಿಕೊಡ್ತಿರಲಿಲ್ಲ. ಸಿನಿಮಾದೊಂದಿಗೆ ಪ್ರೀ ಪ್ರೊಡಕ್ಷನ್ನಿಂದ ರೀರೆಕಾರ್ಡಿನ ತನಕ ಜರ್ನಿ ಮಾಡ್ತಿದ್ರು ಅನ್ನೋದಕ್ಕೆ ಇದೊಂದು ಸಾಕ್ಷಿ. ಅವರಿಬ್ಬರ ಕಾಂಬಿನೇಷನ್ ಯಾಕೆ ಆ ಪರಿ ಕ್ಲಿಕ್ ಆಗುತ್ತಿತ್ತು ಅನ್ನೋದಕ್ಕೂ ಇದೊಂದು ಪುರಾವೆ. ( ಬರಹ : ನವೀನ್ ಸಾಗರ್ ; ಫೇಸ್ ಬುಕ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ15 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ಅಂತರಂಗ35 minutes agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

