Connect with us

ಕ್ರೀಡೆ

HaPpY BiRtHdAy : ಓಟದ ರಾಣಿ ಪಿ. ಟಿ. ಉಷಾ ಅಂದ್ರೆ ಸುಮ್ನೇನಾ..!

Published

on

27 ಜೂನ್ 1964 ರಲ್ಲಿ ಜನಿಸಿದ ಪಿ.ಟಿ.ಉಷಾ ಅವರು ಭಾರತದ ಓಟದ ರಾಣಿ ಎಂಬ ಬಿರುದಿಗೆ ಹೆಸರಾಗಿರುವ ನಮ್ಮ ಕಾಲದ ಮಹತ್ವದ, ಅಪರೂಪದ ಕ್ರೀಡಾ ಪಟು. ಭಾರತದ ಅಥ್ಲೆಟಿಕ್ಸ್ ಸಾಧನೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಣನೀಯವಾಗಿರುವಂತೆ ಕಾಪಾಡಿಕೊಳ್ಳುವುದರಲ್ಲಿ ಪಿ ಟಿ ಉಷಾ ಅವರು ನೀಡಿರುವ ಕೊಡುಗೆ ಮಹತ್ವಪೂರ್ಣವಾದದ್ದು.

1976ರಲ್ಲಿ ಕೆರಳ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಕ್ರೀಡಾ ಶಾಲೆಯೊಂದನ್ನು ತೆರೆಯಿತು. ಪಿ.ಟಿ ಉಷಾ ಆ ಶಾಲೆಯಿಂದ ಹೊರಹೊಮ್ಮಿದ ಪ್ರತಿಭೆ. 1979ರಲ್ಲಿ ನಡೆದ ನ್ಯಾಶನಲ್ ಸ್ಕೂಲ್ ಗೇಮ್ಸ್‘ನಲ್ಲಿ ಭಾಗವಹಿಸಿದ ಈಕೆಯ ಅಸಾಧಾರಣ ಪ್ರತಿಭೆಯನ್ನು ಅಥ್ಲೆಟಿಕ್ಸ್ ತಜ್ಞ ನಂಬಿಯಾರ್ ಅವರು ಗುರುತಿಸಿದರು. ನಂತರ ಉಷಾ ಅವರ ಕ್ರೀಡಾಜೀವನದುದ್ದಕ್ಕೂ ನಂಬಿಯಾರ್ ಅವರೇ ತರಬೇತುದಾರರಾಗಿದ್ದರು.

1980ರ ಮಾಸ್ಕೊ ಒಲಿಂಪಿಕ್ಸ್ ಪಿ ಟಿ ಉಷಾ ಅವರು ಭಾಗವಹಿಸಿದ ಪ್ರಥಮ ಅಂತರರಾಷ್ಟ್ರೀಯ ಸ್ಪರ್ಧೆ. 1982ರಲ್ಲಿ ನವದೆಹಲಿ ಏಷ್ಯಾಡ್ ನ 100ಮೀ ಮತ್ತು 200 ಮೀ.ಓಟದ ಸ್ಪರ್ಧೆಯಲ್ಲಿ ಪಿ ಟಿ ಉಷಾ ರಜತ ಪದಕ ಗೆದ್ದರು. ಒಂದು ವರ್ಷದ ಬಳಿಕ ಕುವೈತ್ ನಲ್ಲಿ ನಡೆದ ಏಷಿಯನ್ ಟ್ರ್ಯಾಕ್ ಅಂಡ್ ಫೀಲ್ಡ್ ಚಾಂಪಿಯನ್ ಶಿಪ್ ನಲ್ಲಿನ 400 ಮೀ.ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ನೂತನ ಏಷಿಯನ್ ದಾಖಲೆ ನಿರ್ಮಿಸಿದರು. 1983-89ರ ಅವಧಿಯಲ್ಲಿ ಏಷ್ಯಾ ಉಪಖಂಡದ ಟ್ರಾಕ್ ಅಂಡ್ ಫೀಲ್ಡ್ ನಲ್ಲಿ ಉಷಾ 13 ಚಿನ್ನದ ಪದಕಗಳನ್ನು ಗಳಿಸಿದರು. ಲಾಸ್ ಎಂಜೆಲಿಸ್ಸಿನಲ್ಲಿ 1984ರಲ್ಲಿ ನಡೆದ ಒಲಿಂಪಿಕ್ಸ್ ಸ್ಪರ್ಧೆಗಳಲ್ಲಿ 400 ಮೀಟರ್ಸ್ ಹರ್ಡಲ್ಸಿನ ಸೆಮಿಫೈನಲ್ಸ್‘ನಲ್ಲಿ ಅವರು ಮೊದಲಿಗರಾಗಿದ್ದಾಗಿಯೂ ಅಂತಿಮ ಸ್ಪರ್ಧೆಯಲ್ಲಿ ಪದಕ ಗೆಲ್ಲುವ ಅವಕಾಶವನ್ನು ಸ್ವಲ್ಪದರಲ್ಲಿ ಕಳೆದುಕೊಂಡರು. ಮಿಲ್ಖಾ ಸಿಂಗ್ ಅವರ 1960ರ ಸಾಧನೆ ಪ್ರಕರಣದಲ್ಲಾದಂತೆ ಉಷಾ ಅವರಿಗೆ ಸಹಾ ಕೂದಲೆಳೆಯ ಅಂತರದಲ್ಲಿ ಪದಕ ಗಳಿಕೆಯ ಅವಕಾಶ ತಪ್ಪಿಹೋಯಿತು. ಪದಕ ಬರಲಿಲ್ಲವಾದರೂ ಉಷಾ ಅವರು ಒಲಿಂಪಿಕ್ಸ್ ಕ್ರೀಡೆಗಳಲ್ಲಿ 400ಮೀ.ಹರ್ಡಲ್ಸಿನ ಫೈನಲ್ ತಲುಪಿದ ಪ್ರಥಮ ಭಾರತೀಯ ಮಹಿಳೆಯಾಗಿದ್ದಾರೆ. ಅವರ ಈ ಸಾಧನೆಯನ್ನು ಇಡೀ ವಿಶ್ವವೇ ಬೆಕ್ಕಸ ಬೆರಗಿನಿಂದ ಕೊಂಡಾಡಿತು.

ಪಿ.ಟಿ ಉಷಾ ಅವರು 1986ರಲ್ಲಿ ಸಿಯೊಲ್ನಲ್ಲಿ ನಡೆದ 10ನೆಯ ಏಷಿಯನ್ ಗೇಮ್ಸ್ ಟ್ರ್ಯಾಕ್ ಅಂಡ್ ಫೀಲ್ಡ್ ಸ್ಪರ್ಧೆಗಳಲ್ಲಿ 4 ಚಿನ್ನ 1 ರಜತ ಪದಕಗಳನ್ನು ಪಡೆದರು. ಜಕಾರ್ತಾದಲ್ಲಿ 1985ರಲ್ಲಿ ನಡೆದ 6ನೆಯ ಏಷಿಯನ್ ಟ್ರ್ಯಾಕ್ ಅಂಡ್ ಫೀಲ್ಡ್ ಚಾಂಪಿಯನ್ ಶಿಪ್ ನಲ್ಲಿ 5 ಚಿನ್ನದ ಪದಕ ಗಳಿಸಿದರು. ಅವರು ಅದೇ ಸ್ಪರ್ಧೆಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಏಕಾಂಗಿಯಾಗಿ ಆರು ಪದಕ ಗೆದ್ದ ಏಕೈಕ ಕ್ರೀಡಾಳು ಎನಿಸಿದ್ದಾರೆ.

ಪಿ. ಟಿ ಉಷಾ ಅಂತಾರಾಷ್ಟ್ರೀಯ ಮಟ್ಟದ ನೂರಕ್ಕೂ ಹೆಚ್ಚಿನ ಪದಕಗಳಿಗೆ ಭಾಜನರಾಗಿದ್ದಾರೆ. ರೈಲ್ವೆಯಲ್ಲಿ ಅಧಿಕಾರಿಯಾಗಿರುವ ಉಷಾ ಪದ್ಮಶ್ರೀ, ಅರ್ಜುನ ಪ್ರಶಸ್ತಿಗಳನ್ನು ಒಳಗೊಂಡಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇವೆಲ್ಲಕ್ಕೂ ಮಿಗಿಲಾಗಿ ಭಾರತದಲ್ಲಿ ಅಥ್ಲೆಟಿಕ್ಸ್ ವಿಚಾರ ಬಂದಾಗಲೆಲ್ಲಾ ನೆನಪಾಗುವ ಮಹತ್ವದ ಹೆಸರಾಗಿ ಭಾರತೀಯ ಮನೆ ಮನಗಳಲ್ಲಿ ಹಸುರಾಗಿ ಉಳಿದಿದ್ದಾರೆ. ಮುಂದೆ ಬಂದ ಹಲವಾರು ಕ್ರೀಡಾಳುಗಳಿಗೆ ನಿತ್ಯ ಪ್ರೇರಣೆಯಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ

Published

on

ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್‌ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.

ನಿನ್ನೆ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್‌ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.

ಅಸಾಧಾರಣ ಬೌಲಿಂಗ್‌ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್‌ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.

ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ

17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್‌ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.

ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್‌ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್‌ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್‌ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.

ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಬೇಸಿಗೆ ವಾಲಿಬಾಲ್ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಟಿ ಸ್ಟಾರ್ ವಾಲಿಬಾಲ್ ಕ್ಲಬ್, ಫ್ರೆಂಡ್ಸ್ ಸ್ಪೋಟ್ಸ್ ಕ್ಲಬ್ ಹಾಗೂ ಗೋಲ್ಡನ್ ಈಗಲ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರವನ್ನು ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ 6.30 ರವರೆಗೆ ಆಯೋಜಿಸಲಾಗಿದೆ.

ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಎಂ.ಎಸ್. ಜಮಾ ಅಹಮ್ಮದ್-ಮೊ.ನಂ: 9141091590, ದರ್ಶನ್ ಮೊ.ನಂ: 8147842647 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending