ಕ್ರೀಡೆ
HaPpY BiRtHdAy : ಓಟದ ರಾಣಿ ಪಿ. ಟಿ. ಉಷಾ ಅಂದ್ರೆ ಸುಮ್ನೇನಾ..!
![](https://suddidina.com/wp-content/uploads/2018/06/Pt-usha-suddidina.jpg)
27 ಜೂನ್ 1964 ರಲ್ಲಿ ಜನಿಸಿದ ಪಿ.ಟಿ.ಉಷಾ ಅವರು ಭಾರತದ ಓಟದ ರಾಣಿ ಎಂಬ ಬಿರುದಿಗೆ ಹೆಸರಾಗಿರುವ ನಮ್ಮ ಕಾಲದ ಮಹತ್ವದ, ಅಪರೂಪದ ಕ್ರೀಡಾ ಪಟು. ಭಾರತದ ಅಥ್ಲೆಟಿಕ್ಸ್ ಸಾಧನೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಣನೀಯವಾಗಿರುವಂತೆ ಕಾಪಾಡಿಕೊಳ್ಳುವುದರಲ್ಲಿ ಪಿ ಟಿ ಉಷಾ ಅವರು ನೀಡಿರುವ ಕೊಡುಗೆ ಮಹತ್ವಪೂರ್ಣವಾದದ್ದು.
1976ರಲ್ಲಿ ಕೆರಳ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಕ್ರೀಡಾ ಶಾಲೆಯೊಂದನ್ನು ತೆರೆಯಿತು. ಪಿ.ಟಿ ಉಷಾ ಆ ಶಾಲೆಯಿಂದ ಹೊರಹೊಮ್ಮಿದ ಪ್ರತಿಭೆ. 1979ರಲ್ಲಿ ನಡೆದ ನ್ಯಾಶನಲ್ ಸ್ಕೂಲ್ ಗೇಮ್ಸ್‘ನಲ್ಲಿ ಭಾಗವಹಿಸಿದ ಈಕೆಯ ಅಸಾಧಾರಣ ಪ್ರತಿಭೆಯನ್ನು ಅಥ್ಲೆಟಿಕ್ಸ್ ತಜ್ಞ ನಂಬಿಯಾರ್ ಅವರು ಗುರುತಿಸಿದರು. ನಂತರ ಉಷಾ ಅವರ ಕ್ರೀಡಾಜೀವನದುದ್ದಕ್ಕೂ ನಂಬಿಯಾರ್ ಅವರೇ ತರಬೇತುದಾರರಾಗಿದ್ದರು.
1980ರ ಮಾಸ್ಕೊ ಒಲಿಂಪಿಕ್ಸ್ ಪಿ ಟಿ ಉಷಾ ಅವರು ಭಾಗವಹಿಸಿದ ಪ್ರಥಮ ಅಂತರರಾಷ್ಟ್ರೀಯ ಸ್ಪರ್ಧೆ. 1982ರಲ್ಲಿ ನವದೆಹಲಿ ಏಷ್ಯಾಡ್ ನ 100ಮೀ ಮತ್ತು 200 ಮೀ.ಓಟದ ಸ್ಪರ್ಧೆಯಲ್ಲಿ ಪಿ ಟಿ ಉಷಾ ರಜತ ಪದಕ ಗೆದ್ದರು. ಒಂದು ವರ್ಷದ ಬಳಿಕ ಕುವೈತ್ ನಲ್ಲಿ ನಡೆದ ಏಷಿಯನ್ ಟ್ರ್ಯಾಕ್ ಅಂಡ್ ಫೀಲ್ಡ್ ಚಾಂಪಿಯನ್ ಶಿಪ್ ನಲ್ಲಿನ 400 ಮೀ.ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ನೂತನ ಏಷಿಯನ್ ದಾಖಲೆ ನಿರ್ಮಿಸಿದರು. 1983-89ರ ಅವಧಿಯಲ್ಲಿ ಏಷ್ಯಾ ಉಪಖಂಡದ ಟ್ರಾಕ್ ಅಂಡ್ ಫೀಲ್ಡ್ ನಲ್ಲಿ ಉಷಾ 13 ಚಿನ್ನದ ಪದಕಗಳನ್ನು ಗಳಿಸಿದರು. ಲಾಸ್ ಎಂಜೆಲಿಸ್ಸಿನಲ್ಲಿ 1984ರಲ್ಲಿ ನಡೆದ ಒಲಿಂಪಿಕ್ಸ್ ಸ್ಪರ್ಧೆಗಳಲ್ಲಿ 400 ಮೀಟರ್ಸ್ ಹರ್ಡಲ್ಸಿನ ಸೆಮಿಫೈನಲ್ಸ್‘ನಲ್ಲಿ ಅವರು ಮೊದಲಿಗರಾಗಿದ್ದಾಗಿಯೂ ಅಂತಿಮ ಸ್ಪರ್ಧೆಯಲ್ಲಿ ಪದಕ ಗೆಲ್ಲುವ ಅವಕಾಶವನ್ನು ಸ್ವಲ್ಪದರಲ್ಲಿ ಕಳೆದುಕೊಂಡರು. ಮಿಲ್ಖಾ ಸಿಂಗ್ ಅವರ 1960ರ ಸಾಧನೆ ಪ್ರಕರಣದಲ್ಲಾದಂತೆ ಉಷಾ ಅವರಿಗೆ ಸಹಾ ಕೂದಲೆಳೆಯ ಅಂತರದಲ್ಲಿ ಪದಕ ಗಳಿಕೆಯ ಅವಕಾಶ ತಪ್ಪಿಹೋಯಿತು. ಪದಕ ಬರಲಿಲ್ಲವಾದರೂ ಉಷಾ ಅವರು ಒಲಿಂಪಿಕ್ಸ್ ಕ್ರೀಡೆಗಳಲ್ಲಿ 400ಮೀ.ಹರ್ಡಲ್ಸಿನ ಫೈನಲ್ ತಲುಪಿದ ಪ್ರಥಮ ಭಾರತೀಯ ಮಹಿಳೆಯಾಗಿದ್ದಾರೆ. ಅವರ ಈ ಸಾಧನೆಯನ್ನು ಇಡೀ ವಿಶ್ವವೇ ಬೆಕ್ಕಸ ಬೆರಗಿನಿಂದ ಕೊಂಡಾಡಿತು.
ಪಿ.ಟಿ ಉಷಾ ಅವರು 1986ರಲ್ಲಿ ಸಿಯೊಲ್ನಲ್ಲಿ ನಡೆದ 10ನೆಯ ಏಷಿಯನ್ ಗೇಮ್ಸ್ ಟ್ರ್ಯಾಕ್ ಅಂಡ್ ಫೀಲ್ಡ್ ಸ್ಪರ್ಧೆಗಳಲ್ಲಿ 4 ಚಿನ್ನ 1 ರಜತ ಪದಕಗಳನ್ನು ಪಡೆದರು. ಜಕಾರ್ತಾದಲ್ಲಿ 1985ರಲ್ಲಿ ನಡೆದ 6ನೆಯ ಏಷಿಯನ್ ಟ್ರ್ಯಾಕ್ ಅಂಡ್ ಫೀಲ್ಡ್ ಚಾಂಪಿಯನ್ ಶಿಪ್ ನಲ್ಲಿ 5 ಚಿನ್ನದ ಪದಕ ಗಳಿಸಿದರು. ಅವರು ಅದೇ ಸ್ಪರ್ಧೆಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಏಕಾಂಗಿಯಾಗಿ ಆರು ಪದಕ ಗೆದ್ದ ಏಕೈಕ ಕ್ರೀಡಾಳು ಎನಿಸಿದ್ದಾರೆ.
ಪಿ. ಟಿ ಉಷಾ ಅಂತಾರಾಷ್ಟ್ರೀಯ ಮಟ್ಟದ ನೂರಕ್ಕೂ ಹೆಚ್ಚಿನ ಪದಕಗಳಿಗೆ ಭಾಜನರಾಗಿದ್ದಾರೆ. ರೈಲ್ವೆಯಲ್ಲಿ ಅಧಿಕಾರಿಯಾಗಿರುವ ಉಷಾ ಪದ್ಮಶ್ರೀ, ಅರ್ಜುನ ಪ್ರಶಸ್ತಿಗಳನ್ನು ಒಳಗೊಂಡಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇವೆಲ್ಲಕ್ಕೂ ಮಿಗಿಲಾಗಿ ಭಾರತದಲ್ಲಿ ಅಥ್ಲೆಟಿಕ್ಸ್ ವಿಚಾರ ಬಂದಾಗಲೆಲ್ಲಾ ನೆನಪಾಗುವ ಮಹತ್ವದ ಹೆಸರಾಗಿ ಭಾರತೀಯ ಮನೆ ಮನಗಳಲ್ಲಿ ಹಸುರಾಗಿ ಉಳಿದಿದ್ದಾರೆ. ಮುಂದೆ ಬಂದ ಹಲವಾರು ಕ್ರೀಡಾಳುಗಳಿಗೆ ನಿತ್ಯ ಪ್ರೇರಣೆಯಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
ಟಿ-20 ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ದೆಹಲಿಗೆ ಆಗಮನ ; ಸಂಜೆ ರೋಡ್ ಶೋ
![](https://suddidina.com/wp-content/uploads/2024/07/T20_cricket_team_suddidina.jpg)
ಸುದ್ದಿದಿನಡೆಸ್ಕ್:ಟಿ-20ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ಬೆಳಗ್ಗೆ ರಾಜಧಾನಿ ದೆಹಲಿಗೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಭಾರತದ ಆಟಗಾರರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಪಂದ್ಯಾವಳಿಯ ಫೈನಲ್ ಪಂದ್ಯ ನಡೆದ ಬಾರ್ಬಡೋಸ್ನಿಂದ ತಂಡವು ಹಿಂತಿರುಗಿತು.
ಬೆರಿಲ್ ಚಂಡಮಾರುತದಿಂದಾಗಿ ಭಾರತ ತಂಡದ ಆಗಮನ ವಿಳಂಬವಾಯಿತು. ರಾಷ್ಟ್ರದ ರಾಜಧಾನಿಯಲ್ಲಿ ಭಾರತೀಯ ತಂಡವನ್ನು ಸ್ವಾಗತಿಸಲು ಕ್ರಿಕೆಟ್ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ಮುಂಬೈಗೆ ತೆರಳುವ ಮುನ್ನ ಭಾರತ ತಂಡ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದೆ.
ಚಾಂಪಿಯನ್ ತಂಡ ಮುಂಬೈನಲ್ಲಿ ಇಂದು ಸಂಜೆ ತೆರೆದ ಬಸ್ನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ -ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ.
ಸಂಜೆ 5ರಿಂದ 7ರವರೆಗೆ ನಾರಿಮನ್ ಪಾಯಿಂಟ್ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಅದರ ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಲಿದ್ದು, ಅಲ್ಲಿ ಬಿಸಿಸಿಐ ಭಾರತ ತಂಡಕ್ಕೆ ಬಹುಮಾನ ಮೊತ್ತವನ್ನು ನೀಡಲಿದೆ. ಟಿ-20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ರೋಡ್ ಶೋಗೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
11 ವರ್ಷಗಳ ನಂತರ ಭಾರತ ತಂಡಕ್ಕೆ ಐಸಿಸಿ ಟಿ-20 ವಿಶ್ವಕಪ್ ಕಿರೀಟ ; ಗಣ್ಯರ ಮೆಚ್ಚುಗೆ
![](https://suddidina.com/wp-content/uploads/2024/06/T20_world_cup_cricket_suddidina.jpg)
ಸುದ್ದಿದಿನಡೆಸ್ಕ್:ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡ, 17 ವರ್ಷಗಳ ನಂತರ ಐಸಿಸಿ ಪುರುಷರ ಟಿ-20 ವಿಶ್ವಕಪ್ ಗೆದ್ದಸಾಧನೆ ಮಾಡಿದೆ.
ಭಾರತ ನೀಡಿದ 177 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತಗೊಂಡಿತು. ದಕ್ಷಿಣ ಆಫ್ರಿಕಾ ಪರ ಹೆನ್ರಿಚ್ ಕ್ಲಾಸೆನ್ 52 ರನ್ ಗಳಿಸಿದರೆ, ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 3, ಜಸ್ ಪ್ರಿತ್ ಬುಮ್ರಾ ಮತ್ತು ಅರ್ಷ್ ದೀಪ್ ಸಿಂಗ್ ತಲಾ 2 ವಿಕೆಟ್ ಪಡೆದರು.
ಟೂರ್ನಿಯಲ್ಲಿ ಅತ್ಯುತ್ತಮ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಸಹಜವಾಗಿಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಹಾಗೆಯೇ 8 ಪಂದ್ಯಗಳಿಂದ 15 ವಿಕೆಟ್ ಉರುಳಿಸಿದ ವೇಗಿ ಜಸ್ ಪ್ರಿತ್ ಬುಮ್ರಾ ಟೂರ್ನಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. 2007ರ ನಂತರ ಭಾರತ ಟಿ20 ವಿಶ್ವಕಪ್ ಗೆದ್ದರೆ, 2013ರ ಚಾಂಪಿಯನ್ಸ್ ಟ್ರೋಫಿ ಬಳಿಕ ಐಸಿಸಿ ಟ್ರೋಫಿ ತನ್ನದಾಗಿಸಿಕೊಂಡಿದೆ.
ಈ ಮಧ್ಯೆ, ಭಾರತ ತಂಡ 2ನೇ ಬಾರಿ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಕ್ರಿಕೆಟ್ ನ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಪ್ರಕಟಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ4 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!