Connect with us

ದಿನದ ಸುದ್ದಿ

ಹುಟ್ಟು ಹಬ್ಬ : ‘ವಂದೇ ಮಾತರಂ’ ಬಂಕಿಮ ಚಂದ್ರ ಚಟರ್ಜಿ

Published

on

1905 ರಲ್ಲಿ ಬ್ರಿಟಿಷ್ ಸರ್ಕಾರ ಬಂಗಾಳವನ್ನು ವಿಭಜಿಸುವ ಅತ್ಯಂತ ಕೆಟ್ಟ ನಿರ್ಧಾರಕ್ಕೆ ಕೈ ಹಾಕಿದಾಗ ದೇಶಾದ್ಯಂತ ಎಲ್ಲರನ್ನೂ ಒಂದುಗೂಡಿಸಿ ನಾವೆಲ್ಲರೂ ಒಂದೇ ತಾಯಿಯ ಮಕ್ಕಳು ಎಂದು ಜನರಲ್ಲಿ ಕಿಚ್ಚು ಹಚ್ಚಿದ್ದು ವಂದೇಮಾತರಂ ಗೀತೆ. ಇಂದಿಗೂ ಈ ವಂದೇ ಮಾತರಂ ಗೀತೆ ನಮ್ಮಲ್ಲಿ ದೇಶಭಕ್ತಿಯನ್ನು ಬಡಿದೆಬ್ಬಿಸುತ್ತಿದೆ. ಈ ಗೀತೆಯ ಕವಿ ಬಂಕಿಮ ಚಂದ್ರ ಚಟರ್ಜಿಯವರು. ಇಂದು ಅವರ ಜನ್ಮದಿನ ಬನ್ನಿ ಅಪ್ರತಿಮ ದೇಶಭಕ್ತ, ಸ್ವಾತಂತ್ರ ಹೋರಾಟಗಾರ, ಸಮಾಜ ಸುಧಾರಕ ಬಂಕಿಮ ಚಂದ್ರರರಿಗೆ ಜನ್ಮದಿನದ ಶುಭಾಶಯಗಳನ್ನು ಅರ್ಪಿಸೋಣ.

ನಮ್ಮ ಭಾರತೀಯರಿಗೆ ‘ವಂದೇ ಮಾತರಂ’ ಅಂತಹ ದೇಶಭಕ್ತಿಗೀತೆಗಳನ್ನು ನೀಡಿ, ಹತ್ತೊಂಬತ್ತನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ಭಾರತೀಯರಲ್ಲಿ ತಮ್ಮ ಮೊನಚು ಬರಹ, ಹಾಡುಗಳ ಮುಖಾಂತರ ಕಿಚ್ಚು ತುಂಬಿದವರು ಬಂಗಾಳಿ ಕವಿ, ಕಾದಂಬರಿಕಾರ, ಪತ್ರಕರ್ತ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ(1838-1894). ಬ್ರಿಟಿಷರು ಅವರನ್ನು ಚಟರ್ಜಿ ಅಂದು ಕರೆಯುತ್ತಿದ್ದರು.

ಬಂಕಿಮ ಚಂದ್ರ ಚಟ್ಟೋಪಾಧ್ಯಾಯರು ಜನಿಸಿದ ದಿಂದ ಜೂನ್ 27, 1838. ಜನಿಸಿದ ಸ್ಥಳ ನೈಹತಿಯಲ್ಲಿರುವ ಕಂಥಾಲಪಾರ ಎಂಬ ಹಳ್ಳಿ. 1857ರಲ್ಲಿ ಕಲ್ಕತ್ತಾ ವಿಶ್ವವಿದ್ಯಾಲಯದ ಮೊದಲ ಇಬ್ಬರು ಪದವೀಧರರ ಪೈಕಿ ಅವರು ಒಬ್ಬರಾಗಿದ್ದರು. 1869ರಲ್ಲಿ ಒಂದು ಕಾನೂನು ಪದವಿಯನ್ನೂ ಗಳಿಸಿದರು. ಮುಂದೆ ತಮ್ಮ ತಂದೆಯ ರೀತಿಯಲ್ಲಿಯೇ ಜೆಸ್ಸೋರ್‌‌‌ನ ಉಪ-ಜಿಲ್ಲಾಧಿಕಾರಿಯಾಗಿ ನೇಮಿಸಲ್ಪಟ್ಟರು; ಓರ್ವ ಉಪ-ನ್ಯಾಯಾಧಿಪತಿಯ ಹುದ್ದೆಗೇರಿದ ಚಟರ್ಜಿಯವರು 1891ರಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದರು. ಆಡಳಿತ ನಡೆಸುತ್ತಿದ್ದ ಬ್ರಿಟಿಷರೊಂದಿಗೆ ಘರ್ಷಣೆಗೆ ಇಳಿಯಲು ಕಾರಣವಾಗುವಂಥ ಘಟನೆಗಳು ಅವರು ತಮ್ಮ ಕಾರ್ಯಕ್ಷೇತ್ರದಲ್ಲಿದ್ದಾಗಿನ ವರ್ಷಗಳಲ್ಲಿ ದಟ್ಟವಾಗಿ ತುಂಬಿಕೊಂಡಿದ್ದವು.

ಭಾರತದ ಸಾಹಿತ್ಯಿಕ ಪುನರುದಯದಲ್ಲಿನ ಓರ್ವ ಪ್ರಮುಖ ವ್ಯಕ್ತಿಯಾಗಿ ಚಟರ್ಜಿಯವರನ್ನು ವ್ಯಾಪಕವಾಗಿ ಪರಿಗಣಿಸಲಾಗುತ್ತದೆ. ಕಾದಂಬರಿಗಳು, ಪ್ರಬಂಧಗಳು ಮತ್ತು ವ್ಯಾಖ್ಯಾನಗಳನ್ನು ಒಳಗೊಂಡಂತಿರುವ ಅವರ ಕೆಲವೊಂದು ಬರಹಗಳು ಸಾಂಪ್ರದಾಯಿಕವಾದ ಛಂದೋಬದ್ಧ ಪದ್ಯ-ಉದ್ದೇಶಿತ ಭಾರತೀಯ ಬರಹಗಳಿಗಿಂತ ವಿಭಿನ್ನವಾದ ಒಂದು ಹೊರಳುದಾರಿಯನ್ನು ತುಳಿದವು, ಮತ್ತು ಭಾರತದ ಉದ್ದಗಲಕ್ಕೂ ಇರುವ ಲೇಖಕರಿಗೆ ಸಂಬಂಧಿಸಿದಂತೆ ಒಂದು ಪ್ರೇರಣೆಯನ್ನು ಒದಗಿಸಿದವು.

ದುರ್ಗೇಶ್‌ನಂದಿನಿ, ಕಪಾಲಕುಂಡಲ, ಮೃಣಾಲಿನಿ, ವಿಷಬೃಕ್ಷ , ಇಂದಿರಾ, ಜುಗಲನ್‌ಗುರಿಯಾ, ರಾಧಾರಾಣಿ, ಚಂದ್ರಶೇಖರ್‌, ಕಮಲಾಕಾಂತೆರ್‌ ದಪ್ತರ್‌ , ರಜನಿ, ಕೃಷ್ಣಾಕಾಂತೆರ್‌ ಉಯಿಲ್, ರಾಜಸಿಂಹ, ಆನಂದಮಠ, ದೇವಿ ಚೌಧುರಾನ, ಕಮಲಾಕಾಂ, ಸೀತಾರಾಮ್, ಮೂಚಿರಾಮ್‌ ಗುರೆರ್‌ ಜೀವನ್‌ಚರಿತಾ ಮುಂತಾದವು ಬಂಕಿಮ ಚಂದ್ರರ ಕಾದಂಬರಿಗಳು.

ಬಂಕಿಮ ಚಂದ್ರ ಧಾರ್ಮಿಕ ವ್ಯಾಖ್ಯಾನಗಳಲ್ಲಿ ಕೃಷ್ಣ ಚರಿತ್ರ, ಧರ್ಮತತ್ವ, ದೇವತತ್ತ್ವ, ಶ್ರೀಮದ್ವಗವತ್‌ ಗೀತಾ , ಭಗವದ್‌ ಗೀತಾದ ಮೇಲಿನ ಒಂದು ವ್ಯಾಖ್ಯಾನ ಪ್ರಸಿದ್ಧವೆನಿಸಿವೆ. ಲಲಿತಾ ಓ ಮಾನಸ್ ಅವರ ಕವನಸಂಗ್ರಹ. ಲೋಕ್‌ ರಹಸ್ಯ, ಬಿಜ್ಞಾನ್‌ ರಹಸ್ಯ, ಬಿಚಿತ್ರ ಪ್ರಬಂಧ , ಸಮ್ಯಾ ಮುಂತಾದವು ಪ್ರಬಂಧಸಂಗ್ರಹಗಳು. ಬಂಕಿಮ ಚಂದ್ರ ಈ ಎಲ್ಲ ಕೃತಿಗಳೂ ಇಂಗ್ಲಿಷ್ ಭಾಷೆ ಸೇರಿದಂತೆ ಇತರ ಭಾಷೆಗಳಲ್ಲಿ ಮೂಡಿಬಂದಿವೆ.

‘ಆನಂದಮಠ’ ಕಾದಂಬರಿಯಲ್ಲಿ ಬರೆದ ‘ಓ ತಾಯಿ, ಭಾರತಿಯೇ, ನಿನಗೆ ನಮನ’ ಎಂದು ಸಾರುವ ‘ವಂದೇ ಮಾತರಂ’ ಭಾರತೀಯರಿಗೆ ಪವಿತ್ರಗೀತೆಯಂತಿದೆ. ಈ ಗೀತೆಗೆ ಸಂಗೀತ ಸಂಯೋಜಿಸಿದವರು ನಮಗೆ ರಾಷ್ಟ್ರಗೀತೆ ನೀಡಿರುವ ಕವಿ ರವೀಂದ್ರನಾಥ್ ಠಾಗೂರರು.

ವಂದೇಮಾತರಂ
ಸುಜಲಾಂ ಸುಫಲಾಂ ಮಲಯಜ ಶೀತಲಾಂ
ಸಸ್ಯ ಶಾಮಲಾಂ ಮಾತರಾಂ
ವಂದೇಮಾತರಂ

ಶುಬ್ರಜ್ಯೋತ್ಸ್ನಾ ಪುಲಕಿತ ಯಾಮೀನೀಂ
ಪುಲ್ಲಕುಸುಮಿತ ದ್ರುಮದಲ ಶೋಭಿನೀಂ
ಸುಹಾಸಿನೀಂ ಸುಮಧುರ ಭಾಷಿಣೀಂ
ಸುಖದಾಂ ವರದಾಂ ಮಾತರಂ !!

ಕೋಟಿ ಕೋಟಿ ಕಂಠ ಕಲಕಲನಿನಾದ ಕರಾಲೇ
ಕೋಟಿ ಕೋಟಿ ಭಜೈಧರ್ತಖರ ಕರವಾಲೇ
ಅಬಲಾ ಕೆನೊ ಮಾ ಎತೊ ಬಲೇ ಬಹುಬಲಧಾರೀಣಿಂ
ನಮಾಮಿ ತಾರಿಣೀಂ ಮಾತರಂ!!

ತುಮಿ ವಿದ್ಯ ತುಮಿ ಧರ್ಮ
ತುಮಿ ಹ್ರದಿ ತುಮಿ ಮರ್ಮ ತ್ವಂ ಹಿ ಪ್ರಾಣಾ:
ಶರೀರೇ, ಬಾಹುತೇ ತುಮಿ ಮಾ ಭಕ್ತಿ
ತೋಮಾರ ಇ ಪ್ರತಿಮಾ ಗಡಿ ಮಂದಿರೇ ಮಂದಿರೇ!!

ತ್ವಂ ಹಿ ದುರ್ಗಾ ದಶಪ್ರಹರಣ ಧಾರೀಣೀಂ
ಕಮಲಾ ಕಮಮಲದಲ ವಿಹಾರಿಣೀ ವಾಣೀವಿದ್ಯಾಯಿನಿ
ನಮಾಮಿ ತ್ಯಾಂ ನಮಾಮಿ ಕಮಲಾಂ ಅಮಲಾಂ
ಆತುಲಾಂ ಸುಜಲಾಂ ಸುಫಲಾಂ ಮಾತರಂ!!

ಶ್ಯಾಮಲಾಂ ಸರಲಾಂ ಸುಸ್ಮಿತಾಂ ಭೂಷಿತಾಂ ಧರಣೀಂ ಮಾತರಂ

ವ೦ದೇಮಾತರಂ ಸುಜಲಾಂ ಸುಫಲಾಂ ಮಲಯಜ ಶೀತಲಾಂ ಸಸ್ಯ ಶಾಮಲಾಂ ಮಾತರಾಂ

ಬಂಕಿಮ ಚಂದ್ರರು ಈ ಲೋಕದಿಂದ ಅಗಲಿದ ದಿನ ಏಪ್ರಿಲ್ 8, 1894. ಭಾರತಮಾತೆಯ ಈ ಸುಪುತ್ರ ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ಎಂಬ ಚೇತನಕ್ಕೆ ನಮ್ಮ ಗೌರವಪೂರ್ವಕ ನಮನ.

ರಘುನಾಥ್ ಕುಲಗಟ್ಟೆ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ16 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ16 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ16 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ16 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ17 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ18 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ18 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending