ಬಹಿರಂಗ
ಹೊಡಿಬಡಿ ಗುಂಪು ನೆರೆದಲ್ಲೆಲ್ಲ ‘ಹಿಟ್ಲರನ ಜರ್ಮನಿಯೇ’
-ಮೂಲ : ರವೀಶ್ ಕುಮಾರ್
ಅನುವಾದ : ಹರ್ಷಕುಮಾರ್ ಕುಗ್ವೆ
- ಜರ್ಮನಿಯಲ್ಲಿ ಸಂದು ಹೋದ ಎಲ್ಲಾ ರಾತ್ರಿಗಳಲ್ಲಿ 1938ರ ನವೆಂಬರ್9 ಮತ್ತು 10ರ ನಡುವಿನ ರಾತ್ರಿ ಭಯಂಕರವಾಗಿತ್ತು. ’ಸ್ಪಟಿಕ ರಾತ್ರಿ’ ಅಥವಾ ‘ಗಾಜಿನ ಚೂರುಗಳ ರಾತ್ರಿ’ ಎಂದು ಅದನ್ನು ಕರೆಯಲಾಗುತ್ತದೆ. ಯಹೂದಿಗಳನ್ನು ದಮನಿಸುವ, ಅವರನ್ನು ಸಾಮೂಹಿಕ ಹತ್ಯೆಗೈಯುವ, ಅವರ ಆಸ್ತಿಪಾಸ್ತಿಗಳೆಲ್ಲವನ್ನೂ ದೋಚುವ, ಅವರನ್ನು ದೇಶದಿಂದಲೇ ಹೊರ ಓಡಿಸುವ ವ್ಯವಸ್ಥಿತವಾದ ಕಾರ್ಯಯೋಜನೆಯು ಪೂರ್ಣಪ್ರಮಾಣದಲ್ಲಿ ಚಾಲ್ತಿಗೆ ಬಂದ ರಾತ್ರಿ ಅದಾಗಿತ್ತು.
ಆ ರಾತ್ರಿ ಗೊಬೆಲ್ಸ್ ತನ್ನ ಡೈರಿಯಲ್ಲಿ ಹೀಗೆ ಬರೆದ. “ಹಳೆಯ ಪುರಸಭಾ ಭವನದಲ್ಲಿ ನಾನು ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದೆ. ಅಲ್ಲಿ ದೊಡ್ಡ ಜನಜಂಗುಳಿ ನೆರೆದಿತ್ತು. ಅವರಿಗೆಲ್ಲಾ ನಾನು ಹಿಟ್ಲರನ ಆಲೋಚನೆಗಳೇನು ಎಂಬುದನ್ನು ವಿವರಿಸಿದೆ. ಯಹೂದಿಗಳ ವಿರುದ್ಧ ಪ್ರತಿಭಟನೆಗಳು ಜಾರಿಯಲ್ಲಿರಬೇಕಲ್ಲದೇ ಪೊಲೀಸರು ಈ ಸಂದರ್ಭದಲ್ಲಿ ಸುಮ್ಮನಿರಬೇಕು; ಯಹೂದಿಗಳು ಜನರ ಆಕ್ರೋಶಕ್ಕೆ ತುತ್ತಾಗಲಿ ಎಂಬುದು ಅವರ ತೀರ್ಮಾನವಾಗಿದೆ.
ಪೊಲೀಸ್ ಮತ್ತು ಪಕ್ಷಕ್ಕೆ ನಾನು ತಕ್ಷಣದಲ್ಲಿ ಆದೇಶ ರವಾನಿಸಿದೆ. ಪಕ್ಷದ ಕಾರ್ಯಕ್ರಮದಲ್ಲಿ ಸ್ವಲ್ಪ ಹೊತ್ತು ಮಾತಾಡಿದೆ. ನನ್ನ ಮಾತಿಗೆ ಬಹಳ ಮೆಚ್ಚುಗೆಯ ಕರತಾಡನ ಬಂತು, ಕೂಡಲೇ ಫೋನ್ ಎತ್ತಿಕೊಂಡೆ. ’ಈಗ ಜನರು ಕೆಲಸಕ್ಕೆ ಹೊರಡಲಿ’ ಎಂದು ಸೂಚನೆ ಕೊಟ್ಟೆ” ಹೊಡಿಬಡಿ ಗುಂಪುಗಳಿಗೆ ಮುಕ್ತ ಅವಕಾಶ ನೀಡಲಾಯಿತು.
ಪೊಲೀಸ್ ಪಡೆಗೆ ಬದಿಗಿರಲು ಆದೇಶ ನೀಡಲಾಗಿತ್ತು ಮಾತ್ರವಲ್ಲ ಅದನ್ನು- ಹತ್ಯಾಕಾಂಡದ ನಿರ್ದೇಶಕ ಸಂಸ್ಥೆಯನ್ನಾಗಿ ಪರಿವರ್ತಿಸಿ ಯಹೂದಿಗಳ ಮಾಲೀಕತ್ವದ ಅಂಗಡಿಗಳಿಗೆ ಬೆಂಕಿ ಹಚ್ಚುವಾಗ ಮಾಲೀಕರನ್ನು ’ರಕ್ಷಣಾತ್ಮಕ ಬಂಧನ’ದಲ್ಲಿರಿಸಿ ಗುಂಪುಗಳು ತಮ್ಮ ದಾಳಿಯನ್ನು ಸರಾಗವಾಗಿ ನಡೆಸಲು ಅವಕಾಶ ಮಾಡಿಕೊಡಲಾಯಿತು.
’ಹೊತ್ತಿ ಉರಿಯುತ್ತಿರುವ ಯಹೂದಿಗಳ ಮನೆಗಳ ಬಗ್ಗೆ ಗಮನ ಹರಿಸಕೂಡದು, ಪಕ್ಕದ ಯಹೂದಿಯೇತರ ಮನೆಗಳ ಬೆಂಕಿಯನ್ನಷ್ಟೇ ಆರಿಸಬೇಕು’ಎಂದು ಅಗ್ನಿಶಾಮಕ ದಳಕ್ಕೆ ಆಜ್ಞೆ ನೀಡಲಾಗಿತ್ತು. ಹೀಗೆ ಮಾಡುವ ಮೂಲಕ ಆರ್ಯಮೂಲದ ಜನರ ಆಸ್ತಿಪಾಸ್ತಿಗಳನ್ನು ರಕ್ಷಿಸಬಹುದು ಎಂಬುದು ಅವರ ಲೆಕ್ಕಾಚಾರವಾಗಿತ್ತು.
ಎಲ್ಲವೂ ಹೇಗೆ ಏರ್ಪಾಡಾಗಿತ್ತು ಎಂದರೆ ಜನರೇ ಬಹಳ ಸಹಜವಾಗಿ ಸ್ವಯಂಪ್ರೇರಿತ ಆಕ್ರೋಶದಿಂದಲೇ ಕೃತ್ಯಗಳನ್ನು ನಡೆಸಿದಂತೆ ಕಾಣಬೇಕೆಂಬಷ್ಟರ ಮಟ್ಟಿಗೆ. ಈ ಪ್ರಕಾರ ಸರ್ಕಾರ ಅಥವಾ ಪೊಲೀಸ್ ಪಡೆಗಳ ಮೇಲೆ ಯಾವ ಆರೋಪವನ್ನೂ ಹೊರಿಸಲಾಗದಂತಹ ರೀತಿಯಲ್ಲಿ ದೋಂಬಿ ಹಿಂಸೆಗಳು ನಡೆದವು.
’ಜನರ ಸ್ವಪ್ರೇರಿತ ಆಕ್ರೋಶ’ದ ಹೆಸರಿನಲ್ಲಿ ನಡೆಸಿದ ಆ ಆಟ ಇತಿಹಾಸದ ಮುಖಕ್ಕೆ ರಕ್ತವನ್ನು ಬಳಿಯಿತು. ಆ ನೆತ್ತರ ಕಲೆಯನ್ನು ಇದುವರೆಗೂ ತೊಳೆಯಲು ಸಾಧ್ಯವಾಗಿಲ್ಲ. ಯೂರೋಪಿನಲ್ಲಿ ಆಧುನಿಕವಾದವು ಯೌವನಾವಸ್ಥೆಯಲ್ಲಿದ್ದ ಕಾಲಘಟ್ಟದಲ್ಲಿ ಪ್ರಜಾಪ್ರಭುತ್ವದ ಪರಿಕಲ್ಪನೆಯು ಸಂಭ್ರಮದಿಂದ ಆಚರಿಸಲ್ಪಡುತ್ತಿದ್ದ ಹೊತ್ತಿನಲ್ಲೇ ಇದೆಲ್ಲವೂ ನಡೆದಿತ್ತು.
ಆ ರಾತ್ರಿ ನೂರಾರು ಯಹೂದಿಗಳ ಹತ್ಯೆಯಾಯಿತು. ಮಹಿಳೆಯರು, ಮಕ್ಕಳು ತೀವ್ರವಾಗಿ ಗಾಯಗೊಂಡರು. ಹತ್ತಿರ ಹತ್ತಿರ ನೂರರಷ್ಟು ಪೂಜಾಸ್ಥಳಗಳನ್ನು ನಾಶ ಮಾಡಲಾಯಿತು. ನವೆಂಬರ್ 9ರ ರಾತ್ರಿ ಮ್ಯೂನಿಚ್ನಲ್ಲಿದ್ದ ಯಹೂದ್ಯರ ವಿಖ್ಯಾತ ಆರಾಧನಾ ಸ್ಥಳಕ್ಕೆ (ಸಿನಗಾಗ್) ನಾಜಿ ಸೇನೆ ಬೆಂಕಿ ಹಚ್ಚಿತು. “ಅದು ಟ್ರಾಫಿಕ್ ಸಮಸ್ಯೆ ತಂದೊಡ್ಡುತ್ತಿತ್ತು” ಎಂಬ ಕುಂಟುನೆಪ ಹೇಳಲಾಯ್ತು. ಬರ್ಲಿನ್ ಒಂದರಲ್ಲೇ ಇಂತಹ ಹದಿನೈದು ಪೂಜಾಮಂದಿರಗಳನ್ನು ಸುಟ್ಟು ನಾಶಪಡಿಸಲಾಯ್ತು. ಯಹೂದಿ ಗೋರಿಗಳ ಮೇಲೂ ದಾಳಿ ನಡೆಸಲಾಯಿತು.
ಲೆಕ್ಕವಿಲ್ಲದಷ್ಟು ಅಪಾರ್ಟ್ಮೆಂಟುಗಳು ಕಲ್ಲು ಮಣ್ಣಿನ ಅವಶೇಷಗಳಾಗಿಹೋದವು. ಸಾವಿರಾರು ಅಂಗಡಿ ಮುಗ್ಗಟ್ಟುಗಳು ಬೆಂಕಿಗಾಹುತಿಯಾದವು. ಜರ್ಮನಿಯ ದೊಡ್ಡ ನಗರಗಳಲ್ಲಿನ ಕಿರುರಸ್ತೆಗಳೆಲ್ಲಾ ಒಡೆದ ಗಾಜುಗಳಿಂದ ತುಂಬಿಹೋದವು. ಅಂಗಡಿಗಳ ಎದುರಿನ ಬೀದಿಗಳೂ ಹೀಗೇ ಆಗಿದ್ದವು. ಯಹೂದಿಗಳ ಸ್ಮೃತಿಗೆ ಸಂಬಂಧಿಸಿದ ಪ್ರತಿಯೊಂದನ್ನೂ ಕೆಡವಲಾಯ್ತು, ನಾಶಪಡಿಸಲಾಯ್ತು. ಇದಕ್ಕೆ ಅವರ ಖಾಸಗಿ ಭಾವಚಿತ್ರಗಳೂ ಹೊರತಾಗಿರಲಿಲ್ಲ.
ಹಲವಾರು ಪುರುಷರು, ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡರೆ ಎಷ್ಟೋ ಜನರು ಗಾಯಗೊಂಡು ನಂತರ ತೀರಿಕೊಂಡರು. ಪೊಲೀಸರು 30,000 ಯಹೂದಿಗಳನ್ನು ಗಡೀಪಾರು ಮಾಡಿದರು ಅಥವಾ ಯಾತನಾ ಶಿಬಿರಗಳಿಗೆ ದಬ್ಬಿದರು. ಅಲ್ಲಿ ಸಾಕಷ್ಟು ಜಾಗವಿರಲಿಲ್ಲವಾದ್ದರಿಂದ ಕೇವಲ ಪುರುಷರು ಮತ್ತು ಶ್ರೀಮಂತ ಯಹೂದಿಗಳನ್ನು ಮಾತ್ರ ಹೊರಗೆ ಸಾಗಿಸಲಾಯಿತು.
ಆ ರಾತ್ರಿ ತನ್ನ ಹೊಟೆಲ್ ಕೊಠಡಿಗೆ ಮರಳಿದ ಗೊಬೆಲ್ಸ್ಗೆ ಕಿಟಕಿಗಳು ಮುರಿದು ಬೀಳುವ ಸದ್ದು ಕೇಳುತ್ತಿತ್ತು. ಆಗವನು ತನ್ನ ದಿನಚರಿಯಲ್ಲಿ ಉದ್ಘರಿಸಿದ್ದು ಹೀಗೆ: “ಎಕ್ಸೆಲೆಂಟ್ ಕೆಲಸ! ಅದ್ಭುತ ಕೆಲಸ! ಒಬ್ಬ ಜರ್ಮನ್ ರಾಯಭಾರಿಯನ್ನು ಹತ್ಯೆ ಮಾಡುವುದು ಎಂದರೆ ಏನು ಎಂಬುದನ್ನು ಜರ್ಮನ್ ಜನರು ಯಾವತ್ತೂ ನೆನಪಿಟ್ಟುಕೊಂಡಿರುತ್ತಾರೆ” ಎಂದೂ ಅವನು ಅದರಲ್ಲಿ ಬರೆದ.
ಅಧಿಕಾರಿಗಳಿಂದ ಆದೇಶವಾಗದ ಎಷ್ಟೋ ಕೃತ್ಯಗಳು ಸಹ ಅಂದು ನಡೆದವು. ಆದರೆ ಅವುಗಳನ್ನು ನಡೆಸಿದ ಕುರಿತು ಯಾರೂ ಏನೂ ಹೇಳಿಕೊಳ್ಳಲೂ ಇಲ್ಲ. ಉಸಿರು ಕಟ್ಟಿಸುವ ಚಾದರದಂತೆ ಇಡೀ ನೆಲದಲ್ಲಿ ಸ್ಮಶಾನಮೌನ ಆವರಿಸಿತ್ತು. ಪತ್ರಿಕೆಗಳನ್ನು ತಮಗೆ ಬೇಕಾದಂತೆ ನಿರ್ವಹಿಸುವ ಮೂಲಕ ಇದನ್ನು ಸಾಧ್ಯವಾಗಿಸಲಾಗಿತ್ತು.
ಹಿಟ್ಲರ್ ಎಲ್ಲಿಯೇ ಹೋಗಲಿ ಅಲ್ಲಿ ಯಹೂದಿಗಳ ಮೇಲೆ ನಡೆಯುತ್ತಿರುವ ಹಿಂಸೆಯ ಕುರಿತು ಯಾವುದೇ ಪ್ರಶ್ನೆ ಕೇಳದಂತೆ ಒಪ್ಪಂದಕ್ಕೆ ಮಾಧ್ಯಮಗಳನ್ನು ಕಟ್ಟಿಹಾಕಲಾಗಿತ್ತು. ಜಗತ್ತಿನಲ್ಲಿ ಹಿಟ್ಲರನ ಇಮೇಜಿಗೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಅವನು ಮೌನವಹಿಸಿದ್ದ.
ಜರ್ಮನಿಯ ಹೊಡೆಬಡಿ ಗುಂಪುಗಳು ಹಿಟ್ಲರನನ್ನು ಎತ್ತಿ ಮೆರೆಸಿದವು. ಅವನ ಅಗತ್ಯಗಳಿಗೆ ತಕ್ಕಂತೆ ಆ ಗುಂಪುಗಳು ರೂಪುಗೊಂಡಿದ್ದವು.
ಈ ಗುಂಪುಗಳಿಂದ ಪ್ರೇರಿತಗೊಂಡ ಹಿಟ್ಲರ್ ಒಂದು ವಿಶೇಷ ಬಗೆಯ ಹೊಸ ಕಾನೂನು ಹೊರಡಿಸಿದ. – ತಾವು ಅನುಭವಿಸಿರುವ ಹಾನಿ, ನಷ್ಟಗಳಿಗೆ ಯಹೂದಿಗಳು ತಾವೇ ನಷ್ಟ ಭರ್ತಿ ಮಾಡಿಕೊಡಬೇಕು. ತಾವೇ ತಮ್ಮ ಅಂಗಡಿ ಮನೆಗಳಿಗೆ ಬೆಂಕಿ ಹಚ್ಚಿಕೊಂಡರೇನೋ ಎನ್ನುವಂತೆ ಈ ಕಾನೂನನ್ನು ಜಾರಿಗೊಳಿಸಿದ್ದ. ಹೊಡಿಬಡಿ ಗುಂಪುಗಳ ಸಾಮ್ರಾಜ್ಯದಲ್ಲಿ ಕೇಡಿನ ಪ್ರತಿಪಾದನೆಯೇ ಜನರ ಹೃದಯ ಮತ್ತು ಮನಸುಗಳನ್ನು ಆಳಲಾರಂಭಿಸುತ್ತವೆ.
(ರವೀಶ್ ಕುಮಾರ್ ಅವರ ಫ್ರೀ ವಾಯ್ಸ್ ಕೃತಿಯ ಅನುವಾದ “ಮಾತಿಗೆ ಏನು ಕಡಿಮೆ” ಪುಸ್ತಕದ ‘ಹೊಡಿಬಡಿ ಗುಂಪು ನೆರೆದಲ್ಲೆಲ್ಲ ಹಿಟ್ಲರನ ಜರ್ಮನಿಯೇ’ ಎಂಬ ಅಧ್ಯಾಯದಿಂದ ಆಯ್ದ ಭಾಗ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ4 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ4 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ4 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


