Connect with us

ದಿನದ ಸುದ್ದಿ

ಹರಿಹರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ

Published

on

ಸುದ್ದಿದಿನ,ದಾವಣಗೆರೆ: ಮೇ 31 ರಂದು ನಡೆದ ಮತ ಎಣಿಕೆ ನಂತರ ಹರಿಹರ ನಗರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.

ಮ್ಯಾಜಿಕ್ ನಂಬರ್ 16 ಪಡೆಯುವಲ್ಲಿ ಯಾವ ಪಕ್ಷವೂ ಸಫಲವಾಗಿಲ್ಲ. 14 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆ.ಡಿ.ಎಸ್. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 10 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಭಾರತೀಯ ಜನತಾ ಪಕ್ಷ 5 ಸ್ಥಾನ ಪಡೆದರೆ ಈ ಮಧ್ಯೆ ಪಕ್ಷೇತರರಿಬ್ಬರು ಜಯಭೇರಿ ಬಾರಿಸಿದ್ದಾರೆ.

31 ವಾರ್ಡ್‌ಗಳಿಗೆ ಮೇ 29 ರಂದು ಮತದಾನ ನಡೆದಿದ್ದು, ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ, 11 ಗಂಟೆ ಸುಮಾರಿಗೆ ಪೂರ್ಣ ಚಿತ್ರಣ ಹೊರಬಂದಿತ್ತು. ಹರಿಹರ ನಗರಸಭೆಯ 1ನೇ ವಾರ್ಡ್ ಹರ್ಲಾಪುರದಿಂದ ಜನತದಾದಳ (ಜಾತ್ಯತೀತ) ಪಕ್ಷದ ಜಂಬಣ್ಣ 807 ಮತಗಳಿಂದ ಜಯ ಸಾಧಿಸಿದ್ದಾರೆ.

ಇವರ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಂ.ಮಂಜುನಾಥ, 2ನೇ ವಾರ್ಡ್ ಎ.ಕೆ ಕಾಲೋನಿಯಿಂದ ಜನತಾದಳ(ಜಾ) ಪಕ್ಷದ ಪಿ.ಎನ್ ವಿರುಪಾಕ್ಷ 533 ಮತಗಳನ್ನು ಪಡೆದು ಜಯಶಾಲಿಯಾಗಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಸ್.ಎಸ್. ಆನಂದಕುಮಾರ್, 3ನೇ ವಾರ್ಡ್ ಆಶ್ರಯ ಕಾಲೋನಿಯಿಂದ ಬಿಜೆಪಿ ಪಕ್ಷದ ಆಟೋ ಹನುಮಂತಪ್ಪ 364 ಮತಗಳಿಂದ ಜಯಶಾಲಿಯಾಗಿದ್ದು, ಇವರ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹನುಮಂತಪ್ಪ.

4ನೇ ವಾರ್ಡ್ ವಿಜಯನಗರ ಬಡಾವಣೆಯಿಂದ ಬಿಜೆಪಿ ಪಕ್ಷದ ಎನ್.ರಂಜಿನಿಕಾಂತ್ 616 ಮತ ಪಡೆಯುವುದರ ಮೂಲಕ ವಿಜಯಿಯಾಗಿದ್ದು, ಜನತಾದಳ(ಜಾ) ಪಕ್ಷದ ಸಮೀಪದ ಪ್ರತಿಸ್ಪರ್ಧಿ ಸದಾಶಿವ, 5ನೇ ವಾರ್ಡ್ ಕೆ.ಆರ್.ನಗರದಿಂದ 554 ಮತಗಳಿಂದ ಕಾಂಗ್ರೆಸ್ ಪಕ್ಷದಿಂದ ನಾಗರತ್ನಪ್ಪ ದೀಪ ಜಯಶೀಲರಾಗಿದ್ದು ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ವೈ ಇಂದಿರಾ ಮಂಜುನಾಥ 6ನೇ ವಾರ್ಡ್ ಮಹಾಲಿಂಗಪ್ಪ ಬಡಾವಣೆಯಿಂದ 426 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಸೈಯದ್ ಅಬ್ದುಲ್ ಅಲೀಂ ಜಯಶಾಲಿಯಾಗಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಕೀರ್ತಿ ಕುಮಾರ್ ಹೆಚ್.ಸಿ ಆಗಿದ್ದರು.

7ನೇ ವಾರ್ಡ್ ಗಾಂಧಿನಗರದಿಂದ ಪೆಕ್ಷೇತರ ಅಭ್ಯರ್ಥಿ ಇಬ್ರಾಹಿಂ 869 ಮತಗಳನ್ನು ಪಡೆಯುವ ಮೂಲಕ ಜಯ ಪಡೆದಿದ್ದಾರೆ. ಇವರ ಸಮೀಪದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಬಿ.ಕೆ.ಸೈಯದ್ ಬಾಷಾ. 8ನೇ ವಾರ್ಡ್ ತೆಗ್ಗಿನಕೇರಿಯಿಂದ ಬಿಜೆಪಿ ಯ ಕೆ.ಜಿ.ಸಿದ್ದೇಶ್ 1221 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಶೇಖರ ಗೌಡ ಆಗಿದ್ದರು.

9ನೇ ವಾರ್ಡ್ ಭರಂಪುರದಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ನಿಂಬಕ್ಕ ಚಂಬಾಪುರ 1148 ಮತಗಳನ್ನು ಪಡೆದು ಜಯ ಸಾಧಿಸಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಶ್ವಿನಿ ಗುತ್ಯಪ್ಪ ಆಗಿದ್ದರು. 10ನೇ ವಾರ್ಡ್ ಭಾರತ್ ಮಿಲ್ ಕಾಂಪೌಂಡ್‌ನಿಂದ ಜನತಾದಳ(ಜಾ) ಪಕ್ಷದಿಂದ ಎಂ.ಆರ್.ಮುಜಾಮಿಲ್ 626 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಫರ್ಧಿ ಬಿಜೆಪಿ ಮಾರುತಿ ಬಿ ಆಗಿದ್ದರು.

11 ನೇ ವಾರ್ಡ್ ಟಿಪ್ಪುನಗರದಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಸುಮಿತ್ರ ಕೆ.ಮರಿದೇವಪ್ಪ 943 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾ ದಳ ಪಕ್ಷದ ಹೆಚ್.ಮಂಜುಳ. 12 ನೇ ವಾರ್ಡ್ ಅಮರಾವತಿಯಿಂದ ಬಿಜೆಪಿ ಪಕ್ಷದಿಂದ ಬಿ.ಎಂ ವಿಜಯಕುಮಾರ್ 669 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಕೆ.ಹೆಚ್.ಯೋಗೇಶಪ್ಪ ಆಗಿದ್ದರು.

13ನೇ ವಾರ್ಡ್ ಜೈಭೀಮನಗರ ಜನತಾದಳ(ಜಾ) ಪಕ್ಷದ ಆರ್.ದಿನೇಶ್ ಬಾಬು 673 ಮತಗಳಿಂದ ಜಯಶಾಲಿಯಾಗಿದ್ದು ಕಾಂಗ್ರೆಸ್ ಪಕ್ಷದ ರಾಘವೇಂದ್ರ ಅಶೋಕ್ ಓಲೇಕಾರ್ ಇವರು ಸಮೀಪದ ಪ್ರತಿಸ್ಪಧಿಯಾಗಿದ್ದರು. 14 ನೇ ವಾರ್ಡ್ ಕಾಳಿದಾಸನಗರ ಕಾಂಗ್ರೆಸ್ ಪಕ್ಷದಿಂದ ಮೆಹಬೂಬ್ ಬಾಷಾ ಆರ್ 533 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದ್ ಏಜಾಜ್ ವಿರುದ್ದ ಜಯ ಸಾಧಿಸಿದ್ದಾರೆ.

15 ನೇ ವಾರ್ಡ್ ಬಹಾರ್ ಮಖಾನ್‌ನಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ರೇಷ್ಮಾ ಬಾನು 610 ಮತಗಳನ್ನು ಪಡೆಯವ ಮೂಲಕ ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲತಾಶ್ರೀ ವೀರಾಚಾರ ವಿರುದ್ದ ಜಯ ಗಳಿಸಿದ್ದಾರೆ. 16 ನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಫಕೀರಮ್ಮ 829 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಜನತಾ ದಳದ ಬಿ.ಐ ಮಮತಾ ಮುಂದೆ ಜಯ ಸಾಧಿಸಿದ್ದಾರೆ.

17ನೇ ವಾರ್ಡ್ ಹೊಸಪೇಟೆ ಬೀದಿಯಿಂದ ಜನತಾದಳ(ಜಾ)ದ ಲಕ್ಷ್ಮೀ ಮೋಹನ್ ದುರುಗೋಜಿ ಇವರು 741 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸುನಂದ ಪಕ್ಕೀರಸಾ ಭೂತೆ ರ ವಿರುದ್ದ ಜಯಗಳಿಸಿದ್ದಾರೆ. 18 ನೇ ವಾರ್ಡ್ ಇಮಾಂ ಮೊಹಲ್ಲಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಂಕರ್ ಖಟಾವ್‌ಕರ್ 825 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)ದ ಹೆಚ್.ಅಬ್ದುಲ್ ರೆಹಮಾನ್ ಖಾನ್ ರ ವಿರುದ್ದ ಜಯ ಸಾಧಿಸಿದ್ದಾರೆ.

19ನೇ ವಾರ್ಡ್ ಹಳ್ಳದಕೇರಿಯಿಂದ ಜನತಾದಳ(ಜಾ) ಪಕ್ಷದ ನೂರ್‌ಸಭಾ 834 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಪಕ್ಷದ ಆಶಾ ರವೀಂದ್ರ ವಿರುದ್ದ ಗೆಲುವು ಪಡೆದಿದ್ದಾರೆ. 20 ನೇ ವಾರ್ಡ್ ಕುಂಬಾರ ಓಣಿಯಿಂದ ಜನತಾದಳ(ಜಾ)(ಜಾ) ರತ್ನ ಡಿ.ಯು 779 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಬಿ ಸುಜಾತ ಇವರ ವಿರುದ್ದ ಜಯಶಾಲಿಯಾಗಿದ್ದಾರೆ.

21ನೇ ವಾರ್ಡ್ ಜೆಸಿಆರ್ ಬಡಾವಣೆ-1 ರಿಂದ ಬಿಜೆಪಿಯ ನೀತಾ ಇವರು 663 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಶಹಜಾದ್ ಎಸ್.ಕೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ. 22ನೇ ವಾರ್ಡ್ ಜೆಸಿಆರ್ ಬಡಾವಣೆ-2 ರಿಂದ ಜನತಾದಳ(ಜಾ)(ಜಾ)ದ ಜಮಾಲುದ್ದೀನ್ 660 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಹುಲಿಗೆಪ್ಪ ಸಿ ಎನ್ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

23ನೇ ವಾರ್ಡ್ ರಾಜಾರಾಂ ಕಾಲೋನಿಯಿಂದ ಕಾಂಗ್ರೆಸ್ ಪಕ್ಷದ ಎಂ.ಬಾಬುಲಾಲ್ 962 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)(ಜಾ)ದ ಹಾಜೀ ಅಲಿ ಖಾನ್ ವಿರುದ್ದ ಜಯ ಗಳಿಸಿದ್ದಾರೆ. 24 ವಾರ್ಡ್ ಬೆಂಕಿನಗರದಿಂದ ಕಾಂಗ್ರೆಸ್ ಪಕ್ಷದ ಶಾಹಿನಾ ಬಾನು 554 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದಾ ಅನಿಸಾ ಇವರು ವಿರುದ್ದ ಗೆಲುವು ಸಾಧಿಸಿದ್ದಾರೆ.
25 ನೇ ವಾರ್ಡ್ ಪ್ರಶಾಂತ್ ನಗರದಿಂದ ಜನತಾದಳ(ಜಾ)(ಜಾ)ದ ದಾದಾ ಖಲಂದರ್ ಇವರು 776 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸಂತೋಷ್‌ಕುಮಾರ್ ಎಂ ವಿರುದ್ದ ಗೆಲುವು ಸಾಧಿಸಿದ್ದಾರೆ. 26 ನೇ ವಾರ್ಡ್ ಜೆಸಿಆರ್ ಬಡಾವಣೆ -3 ರಿಂದ ಜನತಾದಳ(ಜಾ)(ಜಾ)ದ ವಾಮನಮೂರ್ತಿ ಎ ಇವರು 506 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಜೀಜ್ ಮೇಸ್ತ್ರಿಯವರನ್ನು ಸೋಲಿಸಿದ್ದಾರೆ.

27ನೇ ವಾರ್ಡ್ ಜೆಸಿಆರ್ ಬಡಾವಣೆ-4 ರಿಂದ ಜನತಾದಳ(ಜಾ)(ಜಾ)ದ ಉಷಾ ಮಂಜುನಾಥ್ 544 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರೋಹಿಣಿ ರಾಜು ಐರಣಿ ವಿರುದ್ದ ಜಯ ಗಳಿಸಿದ್ದಾರೆ. 28 ವಾರ್ಡ್ ಸುಣಗಾರ ಬೀದಿಯಿಂದ ಪಕ್ಷೇತರ ಅಭ್ಯರ್ಥಿ ಪಾರ್ವತಮ್ಮ ಐರಣಿ 582 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ನಾಗರತ್ನಮ್ಮರ ವಿರುದ್ದ ಗೆಲುವು ಸಾಧಿಸಿದ್ದಾರೆ.

29ನೇ ವಾರ್ಡ್ ಗಂಗಾನಗರದಿಂದ ಕಾಂಗ್ರೆಸ್ ಪಕ್ಷದ ಎಸ್.ಎಂ.ವಸಂತ್ 754 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೋಹನ್ ಹೆಚ್. ವಿರುದ್ದ ಜಯ ಗಳಿಸಿದ್ದಾರೆ. 30 ವಾರ್ಡ್ ವಿದ್ಯಾನಗರದಿಂದ ಬಿಜೆಪಿ ಪಕ್ಷದ ಮಹಿಳಾ ಅಭ್ಯರ್ಥಿ ಅಶ್ವಿನಿ ಕೃಷ್ಣ ಇವರು 530 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಗೀತಾ ವಿಶ್ವನಾಥ ಭೂತೆ ವಿರುದ್ದ ಗೆಲುವು ಸಾಧಿಸಿದ್ದಾರೆ. ಹಾಗೂ 31 ನೇ ವಾರ್ಡ್ ಇಂದಿರಾನಗರದಿಂದ ಜನತಾದಳ(ಜಾ)ಕವಿತಾ ಮಾರುತಿ ಬೇಡರ್ 807 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮಾಧವಿ ಉಮೇಶ್ ತುಂಬಿದಮನೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

ಅಂಚೆಮತಗಳು : 03 ಅಂಚೆ ಮತಗಳನ್ನು ಸ್ವೀಕರಿಸಲಾಗಿದ್ದು ಇವುಗಳಲ್ಲಿ 02 ಮಾತ್ರ ಕ್ರಮಬದ್ದವಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ7 hours ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ1 day ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ2 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

ದಿನದ ಸುದ್ದಿ2 days ago

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ...

ದಿನದ ಸುದ್ದಿ3 days ago

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು...

ಅಂತರಂಗ3 days ago

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

~ಗೋವರ್ಧನ ನವಿಲೇಹಾಳು  ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ...

ದಿನದ ಸುದ್ದಿ6 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ6 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ7 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

Trending