ದಿನದ ಸುದ್ದಿ
ಹರಿಹರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ
ಸುದ್ದಿದಿನ,ದಾವಣಗೆರೆ: ಮೇ 31 ರಂದು ನಡೆದ ಮತ ಎಣಿಕೆ ನಂತರ ಹರಿಹರ ನಗರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.
ಮ್ಯಾಜಿಕ್ ನಂಬರ್ 16 ಪಡೆಯುವಲ್ಲಿ ಯಾವ ಪಕ್ಷವೂ ಸಫಲವಾಗಿಲ್ಲ. 14 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆ.ಡಿ.ಎಸ್. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 10 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಭಾರತೀಯ ಜನತಾ ಪಕ್ಷ 5 ಸ್ಥಾನ ಪಡೆದರೆ ಈ ಮಧ್ಯೆ ಪಕ್ಷೇತರರಿಬ್ಬರು ಜಯಭೇರಿ ಬಾರಿಸಿದ್ದಾರೆ.
31 ವಾರ್ಡ್ಗಳಿಗೆ ಮೇ 29 ರಂದು ಮತದಾನ ನಡೆದಿದ್ದು, ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ, 11 ಗಂಟೆ ಸುಮಾರಿಗೆ ಪೂರ್ಣ ಚಿತ್ರಣ ಹೊರಬಂದಿತ್ತು. ಹರಿಹರ ನಗರಸಭೆಯ 1ನೇ ವಾರ್ಡ್ ಹರ್ಲಾಪುರದಿಂದ ಜನತದಾದಳ (ಜಾತ್ಯತೀತ) ಪಕ್ಷದ ಜಂಬಣ್ಣ 807 ಮತಗಳಿಂದ ಜಯ ಸಾಧಿಸಿದ್ದಾರೆ.
ಇವರ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಂ.ಮಂಜುನಾಥ, 2ನೇ ವಾರ್ಡ್ ಎ.ಕೆ ಕಾಲೋನಿಯಿಂದ ಜನತಾದಳ(ಜಾ) ಪಕ್ಷದ ಪಿ.ಎನ್ ವಿರುಪಾಕ್ಷ 533 ಮತಗಳನ್ನು ಪಡೆದು ಜಯಶಾಲಿಯಾಗಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಸ್.ಎಸ್. ಆನಂದಕುಮಾರ್, 3ನೇ ವಾರ್ಡ್ ಆಶ್ರಯ ಕಾಲೋನಿಯಿಂದ ಬಿಜೆಪಿ ಪಕ್ಷದ ಆಟೋ ಹನುಮಂತಪ್ಪ 364 ಮತಗಳಿಂದ ಜಯಶಾಲಿಯಾಗಿದ್ದು, ಇವರ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹನುಮಂತಪ್ಪ.
4ನೇ ವಾರ್ಡ್ ವಿಜಯನಗರ ಬಡಾವಣೆಯಿಂದ ಬಿಜೆಪಿ ಪಕ್ಷದ ಎನ್.ರಂಜಿನಿಕಾಂತ್ 616 ಮತ ಪಡೆಯುವುದರ ಮೂಲಕ ವಿಜಯಿಯಾಗಿದ್ದು, ಜನತಾದಳ(ಜಾ) ಪಕ್ಷದ ಸಮೀಪದ ಪ್ರತಿಸ್ಪರ್ಧಿ ಸದಾಶಿವ, 5ನೇ ವಾರ್ಡ್ ಕೆ.ಆರ್.ನಗರದಿಂದ 554 ಮತಗಳಿಂದ ಕಾಂಗ್ರೆಸ್ ಪಕ್ಷದಿಂದ ನಾಗರತ್ನಪ್ಪ ದೀಪ ಜಯಶೀಲರಾಗಿದ್ದು ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ವೈ ಇಂದಿರಾ ಮಂಜುನಾಥ 6ನೇ ವಾರ್ಡ್ ಮಹಾಲಿಂಗಪ್ಪ ಬಡಾವಣೆಯಿಂದ 426 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಸೈಯದ್ ಅಬ್ದುಲ್ ಅಲೀಂ ಜಯಶಾಲಿಯಾಗಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಕೀರ್ತಿ ಕುಮಾರ್ ಹೆಚ್.ಸಿ ಆಗಿದ್ದರು.
7ನೇ ವಾರ್ಡ್ ಗಾಂಧಿನಗರದಿಂದ ಪೆಕ್ಷೇತರ ಅಭ್ಯರ್ಥಿ ಇಬ್ರಾಹಿಂ 869 ಮತಗಳನ್ನು ಪಡೆಯುವ ಮೂಲಕ ಜಯ ಪಡೆದಿದ್ದಾರೆ. ಇವರ ಸಮೀಪದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಬಿ.ಕೆ.ಸೈಯದ್ ಬಾಷಾ. 8ನೇ ವಾರ್ಡ್ ತೆಗ್ಗಿನಕೇರಿಯಿಂದ ಬಿಜೆಪಿ ಯ ಕೆ.ಜಿ.ಸಿದ್ದೇಶ್ 1221 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಶೇಖರ ಗೌಡ ಆಗಿದ್ದರು.
9ನೇ ವಾರ್ಡ್ ಭರಂಪುರದಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ನಿಂಬಕ್ಕ ಚಂಬಾಪುರ 1148 ಮತಗಳನ್ನು ಪಡೆದು ಜಯ ಸಾಧಿಸಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಶ್ವಿನಿ ಗುತ್ಯಪ್ಪ ಆಗಿದ್ದರು. 10ನೇ ವಾರ್ಡ್ ಭಾರತ್ ಮಿಲ್ ಕಾಂಪೌಂಡ್ನಿಂದ ಜನತಾದಳ(ಜಾ) ಪಕ್ಷದಿಂದ ಎಂ.ಆರ್.ಮುಜಾಮಿಲ್ 626 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಫರ್ಧಿ ಬಿಜೆಪಿ ಮಾರುತಿ ಬಿ ಆಗಿದ್ದರು.
11 ನೇ ವಾರ್ಡ್ ಟಿಪ್ಪುನಗರದಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಸುಮಿತ್ರ ಕೆ.ಮರಿದೇವಪ್ಪ 943 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾ ದಳ ಪಕ್ಷದ ಹೆಚ್.ಮಂಜುಳ. 12 ನೇ ವಾರ್ಡ್ ಅಮರಾವತಿಯಿಂದ ಬಿಜೆಪಿ ಪಕ್ಷದಿಂದ ಬಿ.ಎಂ ವಿಜಯಕುಮಾರ್ 669 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಕೆ.ಹೆಚ್.ಯೋಗೇಶಪ್ಪ ಆಗಿದ್ದರು.
13ನೇ ವಾರ್ಡ್ ಜೈಭೀಮನಗರ ಜನತಾದಳ(ಜಾ) ಪಕ್ಷದ ಆರ್.ದಿನೇಶ್ ಬಾಬು 673 ಮತಗಳಿಂದ ಜಯಶಾಲಿಯಾಗಿದ್ದು ಕಾಂಗ್ರೆಸ್ ಪಕ್ಷದ ರಾಘವೇಂದ್ರ ಅಶೋಕ್ ಓಲೇಕಾರ್ ಇವರು ಸಮೀಪದ ಪ್ರತಿಸ್ಪಧಿಯಾಗಿದ್ದರು. 14 ನೇ ವಾರ್ಡ್ ಕಾಳಿದಾಸನಗರ ಕಾಂಗ್ರೆಸ್ ಪಕ್ಷದಿಂದ ಮೆಹಬೂಬ್ ಬಾಷಾ ಆರ್ 533 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದ್ ಏಜಾಜ್ ವಿರುದ್ದ ಜಯ ಸಾಧಿಸಿದ್ದಾರೆ.
15 ನೇ ವಾರ್ಡ್ ಬಹಾರ್ ಮಖಾನ್ನಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ರೇಷ್ಮಾ ಬಾನು 610 ಮತಗಳನ್ನು ಪಡೆಯವ ಮೂಲಕ ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲತಾಶ್ರೀ ವೀರಾಚಾರ ವಿರುದ್ದ ಜಯ ಗಳಿಸಿದ್ದಾರೆ. 16 ನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಫಕೀರಮ್ಮ 829 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಜನತಾ ದಳದ ಬಿ.ಐ ಮಮತಾ ಮುಂದೆ ಜಯ ಸಾಧಿಸಿದ್ದಾರೆ.
17ನೇ ವಾರ್ಡ್ ಹೊಸಪೇಟೆ ಬೀದಿಯಿಂದ ಜನತಾದಳ(ಜಾ)ದ ಲಕ್ಷ್ಮೀ ಮೋಹನ್ ದುರುಗೋಜಿ ಇವರು 741 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ನ ಸುನಂದ ಪಕ್ಕೀರಸಾ ಭೂತೆ ರ ವಿರುದ್ದ ಜಯಗಳಿಸಿದ್ದಾರೆ. 18 ನೇ ವಾರ್ಡ್ ಇಮಾಂ ಮೊಹಲ್ಲಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಂಕರ್ ಖಟಾವ್ಕರ್ 825 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)ದ ಹೆಚ್.ಅಬ್ದುಲ್ ರೆಹಮಾನ್ ಖಾನ್ ರ ವಿರುದ್ದ ಜಯ ಸಾಧಿಸಿದ್ದಾರೆ.
19ನೇ ವಾರ್ಡ್ ಹಳ್ಳದಕೇರಿಯಿಂದ ಜನತಾದಳ(ಜಾ) ಪಕ್ಷದ ನೂರ್ಸಭಾ 834 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಪಕ್ಷದ ಆಶಾ ರವೀಂದ್ರ ವಿರುದ್ದ ಗೆಲುವು ಪಡೆದಿದ್ದಾರೆ. 20 ನೇ ವಾರ್ಡ್ ಕುಂಬಾರ ಓಣಿಯಿಂದ ಜನತಾದಳ(ಜಾ)(ಜಾ) ರತ್ನ ಡಿ.ಯು 779 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಬಿ ಸುಜಾತ ಇವರ ವಿರುದ್ದ ಜಯಶಾಲಿಯಾಗಿದ್ದಾರೆ.
21ನೇ ವಾರ್ಡ್ ಜೆಸಿಆರ್ ಬಡಾವಣೆ-1 ರಿಂದ ಬಿಜೆಪಿಯ ನೀತಾ ಇವರು 663 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಶಹಜಾದ್ ಎಸ್.ಕೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ. 22ನೇ ವಾರ್ಡ್ ಜೆಸಿಆರ್ ಬಡಾವಣೆ-2 ರಿಂದ ಜನತಾದಳ(ಜಾ)(ಜಾ)ದ ಜಮಾಲುದ್ದೀನ್ 660 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ಹುಲಿಗೆಪ್ಪ ಸಿ ಎನ್ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.
23ನೇ ವಾರ್ಡ್ ರಾಜಾರಾಂ ಕಾಲೋನಿಯಿಂದ ಕಾಂಗ್ರೆಸ್ ಪಕ್ಷದ ಎಂ.ಬಾಬುಲಾಲ್ 962 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)(ಜಾ)ದ ಹಾಜೀ ಅಲಿ ಖಾನ್ ವಿರುದ್ದ ಜಯ ಗಳಿಸಿದ್ದಾರೆ. 24 ವಾರ್ಡ್ ಬೆಂಕಿನಗರದಿಂದ ಕಾಂಗ್ರೆಸ್ ಪಕ್ಷದ ಶಾಹಿನಾ ಬಾನು 554 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದಾ ಅನಿಸಾ ಇವರು ವಿರುದ್ದ ಗೆಲುವು ಸಾಧಿಸಿದ್ದಾರೆ.
25 ನೇ ವಾರ್ಡ್ ಪ್ರಶಾಂತ್ ನಗರದಿಂದ ಜನತಾದಳ(ಜಾ)(ಜಾ)ದ ದಾದಾ ಖಲಂದರ್ ಇವರು 776 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸಂತೋಷ್ಕುಮಾರ್ ಎಂ ವಿರುದ್ದ ಗೆಲುವು ಸಾಧಿಸಿದ್ದಾರೆ. 26 ನೇ ವಾರ್ಡ್ ಜೆಸಿಆರ್ ಬಡಾವಣೆ -3 ರಿಂದ ಜನತಾದಳ(ಜಾ)(ಜಾ)ದ ವಾಮನಮೂರ್ತಿ ಎ ಇವರು 506 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಜೀಜ್ ಮೇಸ್ತ್ರಿಯವರನ್ನು ಸೋಲಿಸಿದ್ದಾರೆ.
27ನೇ ವಾರ್ಡ್ ಜೆಸಿಆರ್ ಬಡಾವಣೆ-4 ರಿಂದ ಜನತಾದಳ(ಜಾ)(ಜಾ)ದ ಉಷಾ ಮಂಜುನಾಥ್ 544 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರೋಹಿಣಿ ರಾಜು ಐರಣಿ ವಿರುದ್ದ ಜಯ ಗಳಿಸಿದ್ದಾರೆ. 28 ವಾರ್ಡ್ ಸುಣಗಾರ ಬೀದಿಯಿಂದ ಪಕ್ಷೇತರ ಅಭ್ಯರ್ಥಿ ಪಾರ್ವತಮ್ಮ ಐರಣಿ 582 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ನಾಗರತ್ನಮ್ಮರ ವಿರುದ್ದ ಗೆಲುವು ಸಾಧಿಸಿದ್ದಾರೆ.
29ನೇ ವಾರ್ಡ್ ಗಂಗಾನಗರದಿಂದ ಕಾಂಗ್ರೆಸ್ ಪಕ್ಷದ ಎಸ್.ಎಂ.ವಸಂತ್ 754 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೋಹನ್ ಹೆಚ್. ವಿರುದ್ದ ಜಯ ಗಳಿಸಿದ್ದಾರೆ. 30 ವಾರ್ಡ್ ವಿದ್ಯಾನಗರದಿಂದ ಬಿಜೆಪಿ ಪಕ್ಷದ ಮಹಿಳಾ ಅಭ್ಯರ್ಥಿ ಅಶ್ವಿನಿ ಕೃಷ್ಣ ಇವರು 530 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಗೀತಾ ವಿಶ್ವನಾಥ ಭೂತೆ ವಿರುದ್ದ ಗೆಲುವು ಸಾಧಿಸಿದ್ದಾರೆ. ಹಾಗೂ 31 ನೇ ವಾರ್ಡ್ ಇಂದಿರಾನಗರದಿಂದ ಜನತಾದಳ(ಜಾ)ಕವಿತಾ ಮಾರುತಿ ಬೇಡರ್ 807 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಮಾಧವಿ ಉಮೇಶ್ ತುಂಬಿದಮನೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.
ಅಂಚೆಮತಗಳು : 03 ಅಂಚೆ ಮತಗಳನ್ನು ಸ್ವೀಕರಿಸಲಾಗಿದ್ದು ಇವುಗಳಲ್ಲಿ 02 ಮಾತ್ರ ಕ್ರಮಬದ್ದವಾಗಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ6 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ57 minutes agoದಾವಣಗೆರೆ | ಇಂದು ಕರೆಂಟ್ ಇರಲ್ಲ

