Connect with us

ದಿನದ ಸುದ್ದಿ

ಹರಿಹರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ

Published

on

ಸುದ್ದಿದಿನ,ದಾವಣಗೆರೆ: ಮೇ 31 ರಂದು ನಡೆದ ಮತ ಎಣಿಕೆ ನಂತರ ಹರಿಹರ ನಗರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.

ಮ್ಯಾಜಿಕ್ ನಂಬರ್ 16 ಪಡೆಯುವಲ್ಲಿ ಯಾವ ಪಕ್ಷವೂ ಸಫಲವಾಗಿಲ್ಲ. 14 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆ.ಡಿ.ಎಸ್. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 10 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಭಾರತೀಯ ಜನತಾ ಪಕ್ಷ 5 ಸ್ಥಾನ ಪಡೆದರೆ ಈ ಮಧ್ಯೆ ಪಕ್ಷೇತರರಿಬ್ಬರು ಜಯಭೇರಿ ಬಾರಿಸಿದ್ದಾರೆ.

31 ವಾರ್ಡ್‌ಗಳಿಗೆ ಮೇ 29 ರಂದು ಮತದಾನ ನಡೆದಿದ್ದು, ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ, 11 ಗಂಟೆ ಸುಮಾರಿಗೆ ಪೂರ್ಣ ಚಿತ್ರಣ ಹೊರಬಂದಿತ್ತು. ಹರಿಹರ ನಗರಸಭೆಯ 1ನೇ ವಾರ್ಡ್ ಹರ್ಲಾಪುರದಿಂದ ಜನತದಾದಳ (ಜಾತ್ಯತೀತ) ಪಕ್ಷದ ಜಂಬಣ್ಣ 807 ಮತಗಳಿಂದ ಜಯ ಸಾಧಿಸಿದ್ದಾರೆ.

ಇವರ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಂ.ಮಂಜುನಾಥ, 2ನೇ ವಾರ್ಡ್ ಎ.ಕೆ ಕಾಲೋನಿಯಿಂದ ಜನತಾದಳ(ಜಾ) ಪಕ್ಷದ ಪಿ.ಎನ್ ವಿರುಪಾಕ್ಷ 533 ಮತಗಳನ್ನು ಪಡೆದು ಜಯಶಾಲಿಯಾಗಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಸ್.ಎಸ್. ಆನಂದಕುಮಾರ್, 3ನೇ ವಾರ್ಡ್ ಆಶ್ರಯ ಕಾಲೋನಿಯಿಂದ ಬಿಜೆಪಿ ಪಕ್ಷದ ಆಟೋ ಹನುಮಂತಪ್ಪ 364 ಮತಗಳಿಂದ ಜಯಶಾಲಿಯಾಗಿದ್ದು, ಇವರ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹನುಮಂತಪ್ಪ.

4ನೇ ವಾರ್ಡ್ ವಿಜಯನಗರ ಬಡಾವಣೆಯಿಂದ ಬಿಜೆಪಿ ಪಕ್ಷದ ಎನ್.ರಂಜಿನಿಕಾಂತ್ 616 ಮತ ಪಡೆಯುವುದರ ಮೂಲಕ ವಿಜಯಿಯಾಗಿದ್ದು, ಜನತಾದಳ(ಜಾ) ಪಕ್ಷದ ಸಮೀಪದ ಪ್ರತಿಸ್ಪರ್ಧಿ ಸದಾಶಿವ, 5ನೇ ವಾರ್ಡ್ ಕೆ.ಆರ್.ನಗರದಿಂದ 554 ಮತಗಳಿಂದ ಕಾಂಗ್ರೆಸ್ ಪಕ್ಷದಿಂದ ನಾಗರತ್ನಪ್ಪ ದೀಪ ಜಯಶೀಲರಾಗಿದ್ದು ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ವೈ ಇಂದಿರಾ ಮಂಜುನಾಥ 6ನೇ ವಾರ್ಡ್ ಮಹಾಲಿಂಗಪ್ಪ ಬಡಾವಣೆಯಿಂದ 426 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಸೈಯದ್ ಅಬ್ದುಲ್ ಅಲೀಂ ಜಯಶಾಲಿಯಾಗಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಕೀರ್ತಿ ಕುಮಾರ್ ಹೆಚ್.ಸಿ ಆಗಿದ್ದರು.

7ನೇ ವಾರ್ಡ್ ಗಾಂಧಿನಗರದಿಂದ ಪೆಕ್ಷೇತರ ಅಭ್ಯರ್ಥಿ ಇಬ್ರಾಹಿಂ 869 ಮತಗಳನ್ನು ಪಡೆಯುವ ಮೂಲಕ ಜಯ ಪಡೆದಿದ್ದಾರೆ. ಇವರ ಸಮೀಪದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಬಿ.ಕೆ.ಸೈಯದ್ ಬಾಷಾ. 8ನೇ ವಾರ್ಡ್ ತೆಗ್ಗಿನಕೇರಿಯಿಂದ ಬಿಜೆಪಿ ಯ ಕೆ.ಜಿ.ಸಿದ್ದೇಶ್ 1221 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಶೇಖರ ಗೌಡ ಆಗಿದ್ದರು.

9ನೇ ವಾರ್ಡ್ ಭರಂಪುರದಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ನಿಂಬಕ್ಕ ಚಂಬಾಪುರ 1148 ಮತಗಳನ್ನು ಪಡೆದು ಜಯ ಸಾಧಿಸಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಶ್ವಿನಿ ಗುತ್ಯಪ್ಪ ಆಗಿದ್ದರು. 10ನೇ ವಾರ್ಡ್ ಭಾರತ್ ಮಿಲ್ ಕಾಂಪೌಂಡ್‌ನಿಂದ ಜನತಾದಳ(ಜಾ) ಪಕ್ಷದಿಂದ ಎಂ.ಆರ್.ಮುಜಾಮಿಲ್ 626 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಫರ್ಧಿ ಬಿಜೆಪಿ ಮಾರುತಿ ಬಿ ಆಗಿದ್ದರು.

11 ನೇ ವಾರ್ಡ್ ಟಿಪ್ಪುನಗರದಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಸುಮಿತ್ರ ಕೆ.ಮರಿದೇವಪ್ಪ 943 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾ ದಳ ಪಕ್ಷದ ಹೆಚ್.ಮಂಜುಳ. 12 ನೇ ವಾರ್ಡ್ ಅಮರಾವತಿಯಿಂದ ಬಿಜೆಪಿ ಪಕ್ಷದಿಂದ ಬಿ.ಎಂ ವಿಜಯಕುಮಾರ್ 669 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಕೆ.ಹೆಚ್.ಯೋಗೇಶಪ್ಪ ಆಗಿದ್ದರು.

13ನೇ ವಾರ್ಡ್ ಜೈಭೀಮನಗರ ಜನತಾದಳ(ಜಾ) ಪಕ್ಷದ ಆರ್.ದಿನೇಶ್ ಬಾಬು 673 ಮತಗಳಿಂದ ಜಯಶಾಲಿಯಾಗಿದ್ದು ಕಾಂಗ್ರೆಸ್ ಪಕ್ಷದ ರಾಘವೇಂದ್ರ ಅಶೋಕ್ ಓಲೇಕಾರ್ ಇವರು ಸಮೀಪದ ಪ್ರತಿಸ್ಪಧಿಯಾಗಿದ್ದರು. 14 ನೇ ವಾರ್ಡ್ ಕಾಳಿದಾಸನಗರ ಕಾಂಗ್ರೆಸ್ ಪಕ್ಷದಿಂದ ಮೆಹಬೂಬ್ ಬಾಷಾ ಆರ್ 533 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದ್ ಏಜಾಜ್ ವಿರುದ್ದ ಜಯ ಸಾಧಿಸಿದ್ದಾರೆ.

15 ನೇ ವಾರ್ಡ್ ಬಹಾರ್ ಮಖಾನ್‌ನಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ರೇಷ್ಮಾ ಬಾನು 610 ಮತಗಳನ್ನು ಪಡೆಯವ ಮೂಲಕ ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲತಾಶ್ರೀ ವೀರಾಚಾರ ವಿರುದ್ದ ಜಯ ಗಳಿಸಿದ್ದಾರೆ. 16 ನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಫಕೀರಮ್ಮ 829 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಜನತಾ ದಳದ ಬಿ.ಐ ಮಮತಾ ಮುಂದೆ ಜಯ ಸಾಧಿಸಿದ್ದಾರೆ.

17ನೇ ವಾರ್ಡ್ ಹೊಸಪೇಟೆ ಬೀದಿಯಿಂದ ಜನತಾದಳ(ಜಾ)ದ ಲಕ್ಷ್ಮೀ ಮೋಹನ್ ದುರುಗೋಜಿ ಇವರು 741 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸುನಂದ ಪಕ್ಕೀರಸಾ ಭೂತೆ ರ ವಿರುದ್ದ ಜಯಗಳಿಸಿದ್ದಾರೆ. 18 ನೇ ವಾರ್ಡ್ ಇಮಾಂ ಮೊಹಲ್ಲಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಂಕರ್ ಖಟಾವ್‌ಕರ್ 825 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)ದ ಹೆಚ್.ಅಬ್ದುಲ್ ರೆಹಮಾನ್ ಖಾನ್ ರ ವಿರುದ್ದ ಜಯ ಸಾಧಿಸಿದ್ದಾರೆ.

19ನೇ ವಾರ್ಡ್ ಹಳ್ಳದಕೇರಿಯಿಂದ ಜನತಾದಳ(ಜಾ) ಪಕ್ಷದ ನೂರ್‌ಸಭಾ 834 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಪಕ್ಷದ ಆಶಾ ರವೀಂದ್ರ ವಿರುದ್ದ ಗೆಲುವು ಪಡೆದಿದ್ದಾರೆ. 20 ನೇ ವಾರ್ಡ್ ಕುಂಬಾರ ಓಣಿಯಿಂದ ಜನತಾದಳ(ಜಾ)(ಜಾ) ರತ್ನ ಡಿ.ಯು 779 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಬಿ ಸುಜಾತ ಇವರ ವಿರುದ್ದ ಜಯಶಾಲಿಯಾಗಿದ್ದಾರೆ.

21ನೇ ವಾರ್ಡ್ ಜೆಸಿಆರ್ ಬಡಾವಣೆ-1 ರಿಂದ ಬಿಜೆಪಿಯ ನೀತಾ ಇವರು 663 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಶಹಜಾದ್ ಎಸ್.ಕೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ. 22ನೇ ವಾರ್ಡ್ ಜೆಸಿಆರ್ ಬಡಾವಣೆ-2 ರಿಂದ ಜನತಾದಳ(ಜಾ)(ಜಾ)ದ ಜಮಾಲುದ್ದೀನ್ 660 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಹುಲಿಗೆಪ್ಪ ಸಿ ಎನ್ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

23ನೇ ವಾರ್ಡ್ ರಾಜಾರಾಂ ಕಾಲೋನಿಯಿಂದ ಕಾಂಗ್ರೆಸ್ ಪಕ್ಷದ ಎಂ.ಬಾಬುಲಾಲ್ 962 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)(ಜಾ)ದ ಹಾಜೀ ಅಲಿ ಖಾನ್ ವಿರುದ್ದ ಜಯ ಗಳಿಸಿದ್ದಾರೆ. 24 ವಾರ್ಡ್ ಬೆಂಕಿನಗರದಿಂದ ಕಾಂಗ್ರೆಸ್ ಪಕ್ಷದ ಶಾಹಿನಾ ಬಾನು 554 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದಾ ಅನಿಸಾ ಇವರು ವಿರುದ್ದ ಗೆಲುವು ಸಾಧಿಸಿದ್ದಾರೆ.
25 ನೇ ವಾರ್ಡ್ ಪ್ರಶಾಂತ್ ನಗರದಿಂದ ಜನತಾದಳ(ಜಾ)(ಜಾ)ದ ದಾದಾ ಖಲಂದರ್ ಇವರು 776 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸಂತೋಷ್‌ಕುಮಾರ್ ಎಂ ವಿರುದ್ದ ಗೆಲುವು ಸಾಧಿಸಿದ್ದಾರೆ. 26 ನೇ ವಾರ್ಡ್ ಜೆಸಿಆರ್ ಬಡಾವಣೆ -3 ರಿಂದ ಜನತಾದಳ(ಜಾ)(ಜಾ)ದ ವಾಮನಮೂರ್ತಿ ಎ ಇವರು 506 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಜೀಜ್ ಮೇಸ್ತ್ರಿಯವರನ್ನು ಸೋಲಿಸಿದ್ದಾರೆ.

27ನೇ ವಾರ್ಡ್ ಜೆಸಿಆರ್ ಬಡಾವಣೆ-4 ರಿಂದ ಜನತಾದಳ(ಜಾ)(ಜಾ)ದ ಉಷಾ ಮಂಜುನಾಥ್ 544 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರೋಹಿಣಿ ರಾಜು ಐರಣಿ ವಿರುದ್ದ ಜಯ ಗಳಿಸಿದ್ದಾರೆ. 28 ವಾರ್ಡ್ ಸುಣಗಾರ ಬೀದಿಯಿಂದ ಪಕ್ಷೇತರ ಅಭ್ಯರ್ಥಿ ಪಾರ್ವತಮ್ಮ ಐರಣಿ 582 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ನಾಗರತ್ನಮ್ಮರ ವಿರುದ್ದ ಗೆಲುವು ಸಾಧಿಸಿದ್ದಾರೆ.

29ನೇ ವಾರ್ಡ್ ಗಂಗಾನಗರದಿಂದ ಕಾಂಗ್ರೆಸ್ ಪಕ್ಷದ ಎಸ್.ಎಂ.ವಸಂತ್ 754 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೋಹನ್ ಹೆಚ್. ವಿರುದ್ದ ಜಯ ಗಳಿಸಿದ್ದಾರೆ. 30 ವಾರ್ಡ್ ವಿದ್ಯಾನಗರದಿಂದ ಬಿಜೆಪಿ ಪಕ್ಷದ ಮಹಿಳಾ ಅಭ್ಯರ್ಥಿ ಅಶ್ವಿನಿ ಕೃಷ್ಣ ಇವರು 530 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಗೀತಾ ವಿಶ್ವನಾಥ ಭೂತೆ ವಿರುದ್ದ ಗೆಲುವು ಸಾಧಿಸಿದ್ದಾರೆ. ಹಾಗೂ 31 ನೇ ವಾರ್ಡ್ ಇಂದಿರಾನಗರದಿಂದ ಜನತಾದಳ(ಜಾ)ಕವಿತಾ ಮಾರುತಿ ಬೇಡರ್ 807 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮಾಧವಿ ಉಮೇಶ್ ತುಂಬಿದಮನೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

ಅಂಚೆಮತಗಳು : 03 ಅಂಚೆ ಮತಗಳನ್ನು ಸ್ವೀಕರಿಸಲಾಗಿದ್ದು ಇವುಗಳಲ್ಲಿ 02 ಮಾತ್ರ ಕ್ರಮಬದ್ದವಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.

ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್‌ನ ‘ಯೂನಿವರ್ಸಿಟಿ ಆಫ್ ಸ್ಯಾಲ್‌ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.

ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್‌ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂತರಂಗ11 hours ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ1 day ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ2 days ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ4 days ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ1 week ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ1 week ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ1 week ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ1 week ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ2 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ2 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

Trending